Homeಫ್ಯಾಕ್ಟ್‌ಚೆಕ್FACT CHECK : 'ಭಾರತ್ ಮಾತಾ ಕಿ ಜೈ' ಎಂದ ವೃದ್ದನಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು...

FACT CHECK : ‘ಭಾರತ್ ಮಾತಾ ಕಿ ಜೈ’ ಎಂದ ವೃದ್ದನಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಹಿರಿಯ ವಯಸ್ಸಿನ ವ್ಯಕ್ತಿಯೊಬ್ಬರಿಗೆ ಯುವಕರ ಗುಂಪೊಂದು ಹಲ್ಲೆ ನಡೆಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವಿಡಿಯೋ ಹಂಚಿಕೊಂಡಿರುವ ಹಲವರು “ಮುಂಬೈನಲ್ಲಿ ‘ಭಾರತ್ ಮಾತಾಕಿ ಜೈ’ ಎಂದು ಘೋಷಣೆ ಕೂಗಿದ್ದಕ್ಕೆ ಮುಸ್ಲಿಮರು ವೃದ್ದನಿಗೆ ಥಳಿಸಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಜುಲೈ 29,2024ರಂದು ತನ್ನ ಎಕ್ಸ್‌ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದ ಅನು ಅನಿತಾ (@Ani_Sanatani) ಎಂಬ ಬಳಕೆದಾರರು “ಭಾರತ ಮಾತೆಗೆ ಜೈ ಎನ್ನಲಾಗದ ಪರಿಸ್ಥಿತಿ. ಘಟನೆ ಮುಂಬೈನ ಭಿಂಡಿ ಬಜಾರ್‌ನಲ್ಲಿ ನಡೆದಿದೆ. ಇದು ಭಾರತದಲ್ಲಿನ ಜಿಹಾದಿ ಮುಸಲ್ಮಾನರ ಪ್ರದೇಶಗಳಲ್ಲಿ ಭಾರತ್ ಮಾತಾಕಿ ಜೈ ಎನ್ನಲಾಗದ ಪರಿಸ್ಥಿತಿ. ಇದು ಇಸ್ಲಾಮಿಕ್ ದೇಶ ಅಲ್ಲ. ಇದು ಭಾರತ್ ಮಾತಾಕಿ ಜೈ! ಹೇಳಿದ ಭಾರತದ ಒಬ್ಬ ದೇಶ ಭಕ್ತ ಮುದುಕನ ಪರಿಸ್ಥಿತಿ” ಎಂದು ಬರೆದುಕೊಂಡಿದ್ದರು.

ಜುಲೈ 31ರಂದು ಅದೇ ಇದೇ ವಿಡಿಯೋವನ್ನು ತನ್ನ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದ ‘ಪ್ರಭಾಕರ್ ಭಟ್’ ಎಂಬವರು ” ಎಚ್ಚೆತ್ತುಕೊಳ್ಳಿ ಭಾರತೀಯರೇ.. ಒಬ್ಬ ರಾಷ್ಟ್ರೀಯವಾದಿ ವೃದ್ಧರು ಭಾರತ ಮಾತೆಗೆ ಜೈ ಎಂದಾಗ ಅವರನ್ನು ಹೊಡೆದು ಬಡಿದು ದೈಹಿಕ ಹಲ್ಲೆ ಮಾಡಿದ ಘಟನೆ ಮುಂಬೈನ ಭಿಂಡಿ ಬಜಾರ್‌ನಲ್ಲಿ ನಡೆದಿದೆ. ಮಹಾರಾಷ್ಟ್ರ ಪೋಲೀಸರು ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸ್ವಯಂ ಈ ಘಟನೆಯ ತನಿಖೆ ನಡೆಸಿ ಅಪರಾಧಿಗಳನ್ನು ಶಿಕ್ಷಿಸಬೇಕು” ಎಂದು ಬರೆಕೊಂಡಿದ್ದರು.

ಹಾಗಾದರೆ, ಸಾಮಾಜಿಕ ಜಾಲತಾಣ ಬಳಕೆದಾರರು ಮಾಡಿರುವ ಪ್ರತಿಪಾದನೆ ನಿಜಾನಾ? ಎಂದು ನೋಡೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಅದು ಮುಂಬೈನ ಭಿಂಡಿ ಬಜಾರ್‌ನ ವಿಡಿಯೋ ಅಲ್ಲ. ಅಕ್ಟೋಬರ್ 15, 2019ರಂದು ರಾಜಸ್ಥಾನದ ಬಿಲ್ವಾರ ಜಿಲ್ಲೆಯಲ್ಲಿ ನಡೆದ ಘಟನೆಯದ್ದು ಎಂದು ಗೊತ್ತಾಗಿದೆ. ‘ವೃದ್ದರೊಬ್ಬರು ಬೀದಿಯಲ್ಲಿ ಹೋಗುತ್ತಿದ್ದವರನ್ನು ನಿಂದಿಸಿದ್ದಕ್ಕೆ ಸ್ಥಳೀಯರು ಥಳಿಸಿರುವುದಾಗಿ’ ಮಾಧ್ಯಮಗಳು ವರದಿ ಮಾಡಿವೆ.

ಬಿಲ್ವಾರದ ಆಝಾದ್ ಚೌಕ್ ಪ್ರದೇಶದಲ್ಲಿ ಘಟನೆ ನಡೆದಿದೆ. ಸ್ಥಳೀಯ ವ್ಯಾಪಾರಿಗಳು ವೃದ್ದನಿಗೆ ಥಳಿಸಿದ್ದಾರೆ ಎಂದು ಬಿಲ್ವಾರ ಎಸ್ಪಿ ಹರ್ಷೇಂದ್ರ ಕುಮಾರ್ ಹೇಳಿರುವುದಾಗಿ 2023ರ ಅಕ್ಟೋಬರ್ 12ರಂದು ದಿ ಕ್ವಿಂಟ್ ವರದಿ ಮಾಡಿತ್ತು.

2019ರಲ್ಲಿ ಸುಳ್ಳು ಮಾಹಿತಿಯೊಂದಿಗೆ ವಿಡಿಯೋ ಹರಿದಾಡುತ್ತಿದ್ದಾಗ ಕ್ವಿಂಟ್ ಅದರ ಸತ್ಯಾಸತ್ಯತೆ ಪರಿಶೀಲಿಸಿತ್ತು. ಆ ವೇಳೆ ಎಸ್ಪಿ ಹರ್ಷೇಂದ್ರ ಕುಮಾರ್ ಜೊತೆ ಮಾತನಾಡಿತ್ತು. ಆಗ ಎಸ್ಪಿ ಕೊಟ್ಟ ಪ್ರತಿಕ್ರಿಯೆಯನ್ನೇ 2023ರ ವರದಿಯಲ್ಲೂ ಉಲ್ಲೇಖಿಸಿತ್ತು.

2019ರಲ್ಲಿ ಸುಳ್ಳು ಸಂದೇಶದೊಂದಿಗೆ ಇದೇ ವಿಡಿಯೋ ವೈರಲ್ ಆದಾಗ, 19 ಅಕ್ಟೋಬರ್ 2019ರಂದು ದೆಹಲಿಯ ಮಾಜಿ ಶಾಸಕ ಹಾಗೂ ಬಿಜೆಪಿ ರಾಷ್ಟ್ರೀಯ ಸಮಿತಿ ಕಾರ್ಯದರ್ಶಿ ಮಂಜಿಂದರ್ ಸಿಂಗ್ ಸಿರ್ಸಾ ಅವರು ಫೇಸ್‌ಬುಕ್‌ನಲ್ಲಿ ವಿಡಿಯೋ ಕುರಿತು ಬರೆದುಕೊಂಡಿದ್ದರು. ಅದರಲ್ಲಿ ಈ ಘಟನೆ ರಾಜಸ್ಥಾನದ ಆಝಾದ್ ಚೌಕ್‌ನಲ್ಲಿ ನಡೆದಿದೆ ಎಂದು ಅವರು ಉಲ್ಲೇಖಿಸಿದ್ದರು. 2019ರ ಸೆಪ್ಟೆಂಬರ್ 25ರಂದು ರಾಜಸ್ಥಾನದ ವಿಧಾನಸಭೆ ಚುನಾವಣೆಯ ಮತದಾನ ನಿಗದಿಯಾಗಿತ್ತು. ಅದಕ್ಕೂ ಮುನ್ನ ಅಕ್ಟೋಬರ್‌ನಲ್ಲಿ ಸುಳ್ಳು ಸಂದೇಶದೊಂದಿಗೆ ವಿಡಿಯೋ ವೈರಲ್ ಆಗಿತ್ತು.

ವೃದ್ದನಿಗೆ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೋಜ್ ಅಲಿಯಾಸ್ ಸಿಂಧಿ (39) ಹೇಮಂತ್ ನಥಾನಿ (45), ಭಗವಾನ್ ದಾಸ್ (37), ಮಜೂರ್ ಶೇಖ್ (31) ಇರ್ಫಾನ್ (34) ಎಂಬವರ ಮೇಲೆ 20 ಅಕ್ಟೋಬರ್ 2019ರಂದು ಎಫ್‌ಐಅರ್ ಕೂಡ ದಾಖಲಾಗಿತ್ತು.

ನಾವು ನಡೆಸಿದ ಪರಿಶೀಲನೆಯಲ್ಲಿ , ವೈರಲ್ ವಿಡಿಯೋದಲ್ಲಿರುವ ಘಟನೆ ರಾಜಸ್ಥಾನದ ಬಿಲ್ವಾರ ಜಿಲ್ಲೆಯ ಆಝಾದ್ ಚೌಕ್ ಪ್ರದೇಶದಲ್ಲಿ 2019ರ ಅಕ್ಟೋಬರ್ 15ರಂದು ನಡೆದದ್ದು ಎಂದು ಗೊತ್ತಾಗಿದೆ. ವೃದ್ದರೊಬ್ಬರು ಜನರೊಂದಿಗೆ ಅನುಚಿತವಾಗಿ ವರ್ತಿಸಿದ್ದಕ್ಕೆ ಸ್ಥಳೀಯ ವ್ಯಾಪಾರಿಗಳು ಥಳಿಸಿದ್ದಾರೆ. ಈ ಸಂಬಂಧ ಐವರನ್ನು ಪೊಲೀಸರು ಬಂಧಿಸಿದ್ದರು. ಈ ಘಟನೆಯ ವಿಡಿಯೋವನ್ನು ಮುಂಬೈನ ಭಿಂಡಿ ಬಜಾರ್‌ನಲ್ಲಿ ಭಾರತ್ ಮಾತಾಕಿ ಜೈ ಎಂದ ವೃದ್ದನಿಗೆ ಮುಸ್ಲಿಮರು ಥಳಿಸಿದ್ದಾರೆ ಎಂದು ಸುಳ್ಳು ಮತ್ತು ಕೋಮುದ್ವೇಷ ಪೂರಿತ ಸಂದೇಶದೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ : FACT CHECK : ಬಾಂಗ್ಲಾದಲ್ಲಿ ಹಿಂದೂ ಶಿಬಿರದ ಮೇಲೆ ಮುಸ್ಲಿಮರಿಂದ ಬಾಂಬ್ ದಾಳಿ ಎಂದು ಸುಳ್ಳು ಸುದ್ದಿ ಹಂಚಿಕೊಳ್ಳಲಾಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...