Homeಫ್ಯಾಕ್ಟ್‌ಚೆಕ್FACT CHECK : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿ ಖಂಡಿಸಿ ಬೃಹತ್ ರ್‍ಯಾಲಿ ನಡೆಸಲಾಗಿದೆ ಎಂಬುವುದು...

FACT CHECK : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿ ಖಂಡಿಸಿ ಬೃಹತ್ ರ್‍ಯಾಲಿ ನಡೆಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ತಮ್ಮ ಮೇಲಿನ ದಾಳಿ ವಿರೋಧಿಸಿ ಬಾಂಗ್ಲಾದೇಶದ ಹಿಂದೂಗಳು ಬೀದಿಗಿಳಿದಿದ್ದಾರೆ ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

ವಿಡಿಯೋದಲ್ಲಿ ಕೇಸರಿ ಬಣ್ಣದ ಟೀ ಶರ್ಟ್‌ ತೊಟ್ಟು ಸಾವಿರಾರು ಜನರು ಮೆರವಣಿಗೆ ನಡೆಸುತ್ತಿರುವುದನ್ನು ಕಾಣಬಹುದು. ಅಲ್ಲದೆ, ಮೆರವಣಿಗೆಯ ಮುಂಬದಿಯಲ್ಲಿ ವಾಹನವೊಂದು ಇದ್ದು, ಅದರಲ್ಲಿರುವ ವ್ಯಕ್ತಿ ಬಾಂಗ್ಲಾದೇಶದ ಧ್ವಜ ಹಿಡಿದಿರುವುದನ್ನು ನೋಡಬಹುದು.

ಅಗಸ್ತ್ಯ ಟೈಮ್ಸ್‌ ಎಂಬ ಫೇಸ್‌ಬುಕ್ ಖಾತೆಯಲ್ಲಿ ಆಗಸ್ಟ್ 11,2024ರಂದು ಈ ವಿಡಿಯೋ ಹಂಚಿಕೊಂಡು “#ಢಾಕಾದ ಬೀದಿಗಳಲ್ಲಿ ಕೇಸರಿ ಪ್ರವಾಹ. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿಯನ್ನು ವಿರೋಧಿಸಿ ಬಾಂಗ್ಲಾದೇಶದ ಹಿಂದೂಗಳು ಬೀದಿಗಿಳಿದಿದ್ದಾರೆ” ಎಂದು ಬರೆದುಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ವಿಡಿಯೋ ಸ್ಕ್ರೀನ್ ಶಾಟ್ ಹಾಕಿ ಸರ್ಚ್ ಮಾಡಿದಾಗ ಬಾಂಗ್ಲಾದೇಶದ ಸಂಸದ ‘ಫಾಹಿಮ್ ಗುಲಂದಝ್ ಬಾಬೆಲ್‘ ಅವರ ಫೇಸ್‌ಬುಕ್ ಖಾತೆಯಲ್ಲಿ ಸೆಪ್ಟೆಂಬರ್ 1, 2023ರಂದು ವಿಡಿಯೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ.

ವಿಡಿಯೋ ಜೊತೆಗೆ ” ಬಾಂಗ್ಲಾದೇಶದ ಛಾತ್ರಾ ಲೀಗ್‌ನ ಗಫರ್‌ಗಾಂವ್ ಉಪ ಜಿಲ್ಲೆ ಮತ್ತು ಮುನ್ಸಿಪಲ್ ಘಟಕಗಳು ಜಂಟಿಯಾಗಿ ರಾಷ್ಟ್ರಪಿತ ಬಂಗಬಂಧು ಶೇಖ್ ಮಜೀಬುರಹ್ಮಾನ್ ಮತ್ತು ಬಂಗಮಾತಾ ಶೇಖ್ ಫಝೀಲತ್ತುನಿಶಾ ಮುಜೀಬ್ ಸ್ಮರಣಾರ್ಥ ರ್‍ಯಾಲಿ ಆಯೋಜಿಸಿತ್ತು ಎಂದು ಬರೆದುಕೊಂಡಿದ್ದರು.

ಪೋಸ್ಟ್ ಹಾಕಿರುವ ಫಾಹಿಮ್ ಗುಲಂದಝ್ ಬಾಬೆಲ್ ಅವರು ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್ ಪಕ್ಷದ ಸಂಸದರಾಗಿದ್ದರು. ಬಾಂಗ್ಲಾದೇಶ ಛಾತ್ರಾ ಲೀಗ್ ಅವಾಮಿ ಲೀಗ್ ಪಕ್ಷದ ವಿದ್ಯಾರ್ಥಿ ಘಟಕವಾಗಿದೆ.

ಬಾಂಗ್ಲಾದೇಶದ ರಾಷ್ಟ್ರಪಿತ ಶೇಖ್ ಮಜೀಬುರಹ್ಮಾನ್ ಅವರು 4 ಜನವರಿ 1948ರಲ್ಲಿ ಛಾತ್ರಾ ಲೀಗ್ ಅನ್ನು ಸ್ಥಾಪಿಸಿದರು. 26 ಮಾರ್ಚ್ 1971ರಲ್ಲಿ ಬಾಂಗ್ಲಾದೇಶ ಸ್ವಾತಂತ್ರ್ಯ ಹೊಂದುವವರೆಗೆ ಛಾತ್ರಾ ಲೀಗ್‌ನ ಹೆಸರು ‘ಈಸ್ಟ್ ಪಾಕಿಸ್ತಾನ್ ಸ್ಟೂಡೆಂಟ್ ಲೀಗ್’ ಎಂದಿತ್ತು. ಪ್ರಸ್ತುತ ಬಾಂಗ್ಲಾದೇಶ ಛಾತ್ರಾ ಲೀಗ್ ಎಂದಿದೆ.

ಒಟ್ಟಿನಲ್ಲಿ ಬಾಂಗ್ಲಾದೇಶದಲ್ಲಿ ಛಾತ್ರಾ ಲೀಗ್ ಕಾರ್ಯಕರ್ತರು ರಾಷ್ಟ್ರಪಿತ ಶೇಖ್ ಮಜೀಬುರಹ್ಮಾನ್ ಮತ್ತು ಅವರ ಪತ್ನಿಯ ಸ್ಮರಣಾರ್ಥ ಕೇಸರಿ ಟೀ ಶರ್ಟ್‌ ಧರಿಸಿ ನಡೆಸಿದ ರ್‍ಯಾಲಿಯ ವಿಡಿಯೋವನ್ನು ಬಾಂಗ್ಲಾದಲ್ಲಿ ಹಿಂದೂಗಳು ಬೀದಿಗಿಳಿದಿದ್ದಾರೆ ಎಂದು ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ : FACT CHECK : ‘ಭಾರತ್ ಮಾತಾ ಕಿ ಜೈ’ ಎಂದ ವೃದ್ದನಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...