Homeಮುಖಪುಟಅಂಡಾಣು, ವೀರ್ಯ ದಾನಿಗೆ ಮಗುವಿನ ಮೇಲೆ ಕಾನೂನಾತ್ಮಕ ಹಕ್ಕಿಲ್ಲ : ಬಾಂಬೆ ಹೈಕೋರ್ಟ್

ಅಂಡಾಣು, ವೀರ್ಯ ದಾನಿಗೆ ಮಗುವಿನ ಮೇಲೆ ಕಾನೂನಾತ್ಮಕ ಹಕ್ಕಿಲ್ಲ : ಬಾಂಬೆ ಹೈಕೋರ್ಟ್

- Advertisement -
- Advertisement -

ವೀರ್ಯ ಅಥವಾ ಅಂಡಾಣು ದಾನ ಮಾಡಿದವರು, ಆ ದಾನದಿಂದ ಜನಿಸಿದ ಮಗುವಿನ ಮೇಲೆ ಕಾನೂನುಬದ್ಧ ಅಧಿಕಾರ ಹೊಂದಿರುವುದಿಲ್ಲ. ಆ ಮಗುವಿನ ಜೈವಿಕ ಪಾಲಕರು ತಾವು ಎಂದು ಹೇಳುವಂತೆಯೂ ಇಲ್ಲ ಎಂದು ಬಾಂಬೆ ಹೈಕೋರ್ಟ್ ಮಂಗಳವಾರ ಹೇಳಿದೆ.

ಬಾಡಿಗೆ ತಾಯ್ತನದ ಮೂಲಕ ಜನಿಸಿದ ತನ್ನ ಇಬ್ಬರು ಪುತ್ರಿಯರಿಂದ ತನ್ನನ್ನು ದೂರವಿರಿಸಲಾಗಿದೆ. ತನ್ನ ಪತಿ ಹಾಗೂ ಅಂಡಾಣು ದಾನಿಯಾದ ತನ್ನ ಕಿರಿಯ ಸೋದರಿಯ ಜೊತೆ ಮಕ್ಕಳು ವಾಸಿಸುತ್ತಿದ್ದಾರೆಂದು ದೂರಿ ಮಹಿಳೆಯೊಬ್ಬರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮಿಲಿಂದ್ ಜಾಧವ್ ಅವರ ಏಕಸದಸ್ಯ ಪೀಠ ಈ ತೀರ್ಪು ನೀಡಿದೆ.

ಸ್ವಾಭಾವಿಕವಾಗಿ ಗರ್ಭಿಣಿಯಾಗಲು ಸಾಧ್ಯವಾಗದ ತನ್ನ ಅಕ್ಕನಿಗೆ ಸ್ವಯಂಪ್ರೇರಿತವಾಗಿ ಅಂಡಾಣು (ಮೊಟ್ಟೆ) ದಾನ ಮಾಡಿದ್ದ ತಂಗಿ, ಬಳಿಕ ಅಕ್ಕನ ಅವಳಿ ಹೆಣ್ಣು ಮಕ್ಕಳಿಗೆ ತಾನೇ ಜೈವಿಕ ತಾಯಿ ಎಂದು ವಾದಿಸಿದ್ದರು.

ಆದರೆ, ನ್ಯಾಯಾಲಯ ಈ ವಾದವನ್ನು ಪುರಸ್ಕರಿಸಲು ನಿರಾಕರಿಸಿದೆ. ಅರ್ಜಿದಾರ ಮಹಿಳೆಯ ತಂಗಿ ಅಂಡಾಣು ದಾನಿಯಾಗಿದ್ದರೂ, ಅವಳಿ ಮಕ್ಕಳ ಮೇಲೆ ಆಕೆಗೆ ಯಾವುದೇ ಕಾನೂನಾತ್ಮಕ ಹಕ್ಕಿರುವುದಿಲ್ಲವೆಂದು ಹೇಳಿದೆ. ಅಲ್ಲದೆ ತನ್ನ ಐದು ವರ್ಷ ವಯಸ್ಸಿನ ಅವಳಿ ಪುತ್ರಿಯರನ್ನು ಸಂದರ್ಶಿಸುವುದಕ್ಕೆ ಅರ್ಜಿದಾರ ಮಹಿಳೆಗೆ ಅನುಮತಿ ನೀಡಿದೆ.

ಅರ್ಜಿದಾರ ಮಹಿಳೆಯ ತಂಗಿ ಅಂಡಾಣು ದಾನಕ್ಕೆ ಸ್ವಇಚ್ಚೆಯಿಂದ ಮುಂದೆ ಬಂದಿದ್ದರು. 2018ರಲ್ಲಿ ಗರ್ಭ ಧರಿಸಿದ ಬಾಡಿಗೆ ತಾಯಿಯೊಬ್ಬರು 2019ರಲ್ಲಿ ಮಕ್ಕಳಿಗೆ ಜನ್ಮ ನೀಡಿದ್ದರು. ಈ ನಡುವೆ 2019ರಲ್ಲಿ ನಡೆದ ಅಪಘಾತವೊಂದರಲ್ಲಿ ಅಂಡಾಣು ದಾನ ಮಾಡಿದ್ದ ತಂಗಿಯ ಪತಿ ಹಾಗೂ ಮಗಳು ಮೃತಪಟ್ಟಿದ್ದರು. ಅರ್ಜಿದಾರ ಮಹಿಳೆ ಹಾಗೂ ಆಕೆಯ ಪತಿ ನಡುವೆ ಮನಸ್ತಾಪ ಉಂಟಾಗಿ ಪತಿಯು 2021ರ ಮಾರ್ಚ್‌ನಲ್ಲಿ ಪತ್ನಿಗೆ ಮಾಹಿತಿ ನೀಡದೆ, ಮಕ್ಕಳೊಂದಿಗೆ ಇನ್ನೊಂದು ಫ್ಲ್ಯಾಟ್‌ನಲ್ಲಿ ವಾಸಿಸಲು ಪ್ರಾರಂಭಿಸಿದ್ದರು.

ಬಳಿಕ ಆತ, ಅಪಘಾತದಿಂದ ಗಂಡ, ಮಗಳನ್ನು ಕಳೆದುಕೊಂಡಿದ್ದ ಪತ್ನಿಯ ತಂಗಿ ಜೊತೆ ವಾಸಿಸಲು ಪ್ರಾರಂಭಿಸಿದ್ದ. ಮಕ್ಕಳೂ ಅವರ ಜೊತೆಗಿದ್ದರು. ಇದರಿಂದ ಅರ್ಜಿದಾರ ಮಹಿಳೆ ಒಬ್ಬಂಟಿಯಾಗಿದ್ದರು. ಹಾಗಾಗಿ, ತಂಗಿ ಮತ್ತು ತನ್ನ ಪತಿ ಜೊತೆ ಇರುವ ತನ್ನ ಮಕ್ಕಳ ಭೇಟಿಗೆ ಅವಕಾಶ ನೀಡುವಂತೆ ಮಹಿಳೆ ಸ್ಥಳೀಯ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ, ನ್ಯಾಯಾಲಯ ಆಕೆಯ ಮನವಿ ಪುರಸ್ಕರಿಸದ ಹಿನ್ನೆಲೆ, ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ : ಆರ್‌ಎಸ್‌ಎಸ್‌ ನಾಯಕರ ಪುಸ್ತಕಗಳ ಮೂಲಕ ವಿದ್ಯಾರ್ಥಿಗಳಿಗೆ ಭಾರತೀಯ ಜ್ಞಾನ ಬೋಧಿಸುವಂತೆ ಕಾಲೇಜುಗಳಿಗೆ ಸೂಚಿಸಿದ ಮಧ್ಯಪ್ರದೇಶ ಸರ್ಕಾರ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...