Homeಫ್ಯಾಕ್ಟ್‌ಚೆಕ್FACT CHECK : ಮಾಲ್ಡೀವ್ಸ್ ತನ್ನ 28 ದ್ವೀಪಗಳನ್ನು ಭಾರತಕ್ಕೆ ಬಿಟ್ಟು ಕೊಟ್ಟಿರುವುದು ನಿಜಾನಾ?

FACT CHECK : ಮಾಲ್ಡೀವ್ಸ್ ತನ್ನ 28 ದ್ವೀಪಗಳನ್ನು ಭಾರತಕ್ಕೆ ಬಿಟ್ಟು ಕೊಟ್ಟಿರುವುದು ನಿಜಾನಾ?

- Advertisement -
- Advertisement -

ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಇತ್ತೀಚೆಗೆ ಮಾಲ್ಡೀವ್ಸ್‌ಗೆ ಮೂರು ದಿನಗಳ ಭೇಟಿಗೆ ತೆರಳಿದ್ದರು. ಭಾರತ ಮತ್ತು ಮಾಲ್ಡಿವ್ಸ್ ನಡುವೆ ರಾಜತಾಂತ್ರಿಕ ಮನಸ್ತಾಪ ಉಂಟಾದ ಬಳಿಕ ಜೈಶಂಕರ್ ಇದೇ ಮೊದಲ ಬಾರಿಯಾಗಿದೆ ಅಲ್ಲಿಗೆ ಭೇಟಿ ನೀಡಿರುವುದು.

ಮೊಹಮ್ಮದ್ ಮುಯಿಝು ಅವರು ಮಾಲ್ಡೀವ್ಸ್ ಅಧ್ಯಕ್ಷರಾದ ಬಳಿಕ, ಭಾರತದೊಂದಿಗಿನ ಸಂಬಂಧ ಬಹುತೇಕ ಕಡಿದುಕೊಂಡಿದ್ದರು. ಅವರು ಚೀನಾ ಪರ ನಿಲುವು ಹೊಂದಿದ್ದರಿಂದ ಮಾಲ್ಡೀವ್ಸ್‌ನಲ್ಲಿದ್ದ ಭಾರತೀಯ ಸೇನೆಯನ್ನೂ ವಾಪಸ್ ಕಳುಹಿಸಿದ್ದರು. ಇತ್ತೀಚೆಗೆ ಮುಯಿಝು ಮತ್ತು ಭಾರತದ ನಡುವಿನ ಸಂಬಂಧ ಮತ್ತೆ ತಳಹದಿಗೆ ಬಂದಿದೆ. ಈ ಬೆಳವಣಿಗೆಯ ಬಳಿಕ ಮೊದಲ ಬಾರಿ ಭಾರತದ ವಿದೇಶಾಂಗ ಸಚಿವ ಮಾಲ್ಡೀವ್ಸ್‌ಗೆ ತೆರಳಿದ್ದು ಮಹತ್ವವೆನಿಸಿದೆ.

ತನ್ನ ಮಾಲ್ಡೀವ್ಸ್‌ ಭೇಟಿಯ ವೇಳೆ ಸಚಿವ ಜೈಶಂಕರ್ ಅವರು ಎರಡು ರಾಷ್ಟ್ರಗಳ ನಡುವಿನ ರಾಜತಾಂತ್ರಿಕ ಸಂಬಂಧ ಉತ್ತಮಗೊಳಿಸುವ ನಿಟ್ಟಿನಲ್ಲಿ, ಅಲ್ಲಿನ ಅಧ್ಯಕ್ಷ ಮುಯಿಝು ಜೊತೆ ಮಾತುಕತೆ ನಡೆಸಿದ್ದಾರೆ. ದ್ವೀಪರಾಷ್ಟ್ರ ಮಾಲ್ಡೀವ್ಸ್‌ನ ಅಭಿವೃದ್ದಿಯಲ್ಲಿ ಭಾರತ ಕೈ ಜೋಡಿಸುವ ಯೋಜನೆಗಳಿಗೆ ಚಾಲನೆಯನ್ನೂ ನೀಡಿದ್ದಾರೆ.

ಜೈಶಂಕರ್ ಅವರು ಮಾಲ್ಡೀವ್ಸ್‌ಗೆ ಭೇಟಿ ನೀಡಿ ವಾಪಸ್ ಬಂದ ಬೆನ್ನಲ್ಲೇ, ಭಾರತದ ಅನೇಕ ಸಾಮಾಜಿಕ ಜಾಲತಾಣ ಬಳಕೆದಾರರು ” ಮಾಲ್ಡೀವ್ಸ್‌ ತನ್ನ 28 ದ್ವೀಪಗಳನ್ನು ಭಾರತಕ್ಕೆ ಬಿಟ್ಟು ಕೊಟ್ಟಿದೆ ಅಥವಾ ಭಾರತ ದ್ವೀಪಗಳನ್ನು ಖರೀದಿಸಿದೆ” ಎಂದು ಸುದ್ದಿ ಹಬ್ಬಿಸಿದ್ದಾರೆ.

ಎಡಪಂಥೀಯ ಸಾಮಾಜಿಕ ಮಾಧ್ಯಮ ಖಾತೆ ಪೋಸ್ಟ್‌ ಕಾರ್ಡ್ ಕನ್ನಡ “ಚೀನಾ ವಿರುದ್ದ ಮೋದಿ ಸರ್ಕಾರಕ್ಕೆ ರಾಜತಾಂತ್ರಿಕ ಗೆಲುವು. 28 ದ್ವೀಪಗಳನ್ನು ಭಾರತಕ್ಕೆ ಬಿಟ್ಟುಕೊಟ್ಟ ಮಾಲ್ಡೀವ್ಸ್” ಎಂದು ಪೋಸ್ಟರ್ ಹಂಚಿಕೊಂಡಿದೆ.

ರಾಮ್‌ ಜಿ ರಾವತ್ (@RaamJi_Rajawat) ಎಂಬ ಎಕ್ಸ್ ಬಳಕೆದಾರ “ಚೀನಾಗೆ ಚೆಕ್‌ಮೇಟ್..ಭಾರತವು ಮಾಲ್ಡೀವ್ಸ್‌ನಿಂದ 28 ದ್ವೀಪಗಳನ್ನು ಖರೀದಿಸಿದೆ. ಮಾಲ್ಡೀವ್ಸ್ ತನ್ನ 28 ದ್ವೀಪಗಳನ್ನು ಭಾರತಕ್ಕೆ ಹಸ್ತಾಂತರಿಸುತ್ತದೆ. ಅಧ್ಯಕ್ಷ ಮುಯಿಝು ಸ್ವತಃ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಲಕ್ಷದ್ವೀಪ ಕಡಲತೀರದಲ್ಲಿ 50 ಮೀಟರ್ ನಡಿಗೆಯ ಮ್ಯಾಜಿಕ್ ಮತ್ತು ಒಂದು ಟ್ವೀಟ್. ಉಳಿದ ಕೆಲಸವನ್ನು ವಿದೇಶಾಂಗ ವ್ಯವಹಾರಗಳ (ಎಂಇಎ) ತಂಡ ಮಾಡಿದೆ. ಮೌನವಾಗಿ ಕೆಲಸ ಮಾಡಿ ಮತ್ತು ನಿಮ್ಮ ಕೆಲಸ ಜೋರಾಗಿ ಸದ್ದು ಮಾಡಲು ಬಿಡಿ” ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಲಕ್ಷದ್ವೀಪ ಕಡಲ ತೀರದಲ್ಲಿ ಪ್ರಧಾನಿ ಮೋದಿ ನಡೆದಿದ್ದೇ ತಡ, ಮಾಲ್ಡೀವ್ಸ್ ತನ್ನ ದ್ವೀಪಗಳನ್ನೇ ಬಿಟ್ಟು ಕೊಟ್ಟಿದೆ ಎಂದು ಪ್ರಧಾನಿಗೆ ಕ್ರೆಡಿಟ್ ಕೊಟ್ಟಿದ್ದಾರೆ.

ಸಂದೀಪ್ ರಜಪೂತ್ ಎಂಬ ಫೇಸ್‌ಬುಕ್ ಬಳಕೆದಾರರೊಬ್ಬರು ಕೂಡ ಮೇಲಿನಂತೆಯೇ ಬರೆದುಕೊಂಡಿದ್ದಾರೆ.

ಹಾಗಾದರೆ, ಈ ಸುದ್ದಿ ನಿಜಾನಾ? ಎಂದು ಪರಿಶೀಲಿಸೋಣ

ಫ್ಯಾಕ್ಟ್‌ಚೆಕ್ : ಮಾಲ್ಡೀವ್ಸ್‌ ತನ್ನ 28 ದ್ವೀಪಗಳನ್ನು ಭಾರತಕ್ಕೆ ಬಿಟ್ಟು ಕೊಟ್ಟಿದೆ ಎಂಬ ಸಾಮಾಜಿಕ ಜಾಲತಾಣ ಬಳಕೆದಾರರ ಪೋಸ್ಟ್‌ಗಳ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಆ ಪೋಸ್ಟ್‌ಗಳು ತಪ್ಪು ಮಾಹಿತಿಯನ್ನು ಒಳಗೊಂಡಿರುವುದು ಗೊತ್ತಾಗಿದೆ.

ಮಾಲ್ಡೀವ್ಸ್‌ ತನ್ನ 28 ದ್ವೀಪಗಳನ್ನು ಭಾರತಕ್ಕೆ ಬಿಟ್ಟು ಕೊಟ್ಟಿರುವುದು ಕೇವಲ ಅಭಿವೃದ್ದಿ ಕಾರ್ಯಗಳಿಗೆ ಮಾತ್ರವಾಗಿದೆ. ಅಲ್ಲದೆ, ಶಾಶ್ವತವಾಗಿ ಭಾರತಕ್ಕೇ ಬಿಟ್ಟು ಕೊಟ್ಟಿಲ್ಲ. ದ್ವೀಪಗಳಲ್ಲಿ
ನೀರು, ನೈರ್ಮಲ್ಯ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಜವಾಬ್ದಾರಿಯನ್ನು ಭಾರತ ವಹಿಸಿಕೊಂಡಿದೆ. ಈ ಕುರಿತ ಯೋಜನೆಗೆ ಸಚಿವ ಜೈಶಂಕರ್ ಭೇಟಿಯ ವೇಳೆ ಚಾಲನೆ ನೀಡಲಾಗಿದೆ.

ಆಗಸ್ಟ್ 10, 2024 ರಂದು ಸುದ್ದಿ ಸಂಸ್ಥೆ ಪಿಟಿಐ ಉಲ್ಲೇಖಿಸಿ ಇಂಡಿಯಾ ಟುಡೇ ಈ ಕುರಿತು ವರದಿಯೊಂದನ್ನು ಪ್ರಕಟಿಸಿತ್ತು. ವರದಿಯಲ್ಲಿ “ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಮಾಲ್ಡೀವ್ಸ್‌ನ 28 ದ್ವೀಪಗಳಲ್ಲಿ ನೀರು ಮತ್ತು ನೈರ್ಮಲ್ಯ ಸೌಲಭ್ಯಗಳನ್ನು ಕಲ್ಪಿಸುವ ಸುಮಾರು 923 ಕೋಟಿ ರೂಪಾಯಿ (110 ಮಿಲಿಯನ್ ಡಾಲರ್ ) ಮೊತ್ತದ ಬೃಹತ್ ಯೋಜನೆಗೆ ಚಾಲನೆ ನೀಡಿದ್ದಾರೆ. ಈ ಯೋಜನೆ ಮಾಲ್ಡೀವ್ಸ್‌ನ ಶೇಖಡ 7ರಷ್ಟು ಜನಸಂಖ್ಯೆಯನ್ನು ಒಳಗೊಳ್ಳುತ್ತದೆ” ಎಂದು ಹೇಳಲಾಗಿದೆ.

ಸಚಿವ ಜೈಶಂಕರ್ ಅವರ ಮಾಲ್ಡೀವ್ಸ್ ಭೇಟಿಯ ಕುರಿತು ಭಾರತ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ವರದಿಯಲ್ಲೂ ಈ ವಿಚಾರವನ್ನು ಉಲ್ಲೇಖಿಸಲಾಗಿದೆ.

“ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರ ಕಚೇರಿಯಲ್ಲಿ ಮಾಲ್ಡೀವ್ಸ್‌ನ 28 ದ್ವೀಪಗಳಲ್ಲಿ ನೀರು ಮತ್ತು ನೈರ್ಮಲ್ಯ ಸೌಲಭ್ಯ ಕಲ್ಪಿಸುವ ಭಾರತದ ಲೈನ್ ಆಫ್ ಕ್ರೆಡಿಟ್ (ಎಲ್‌ಒಸಿ) ನೆರವಿನ ಯೋಜನೆಯನ್ನು ಭಾರತ ಮತ್ತು ಮಾಲ್ಡೀವ್ಸ್‌ ವಿದೇಶಾಂಗ ಸಚಿವರು ಉದ್ಘಾಟಿಸಿದರು” ಎಂದು ವರದಿಯಲ್ಲಿ ಹೇಳಲಾಗಿದೆ.

ಭಾರತದ ನೆರವಿನೊಂದಿಗೆ ಮಾಲ್ಡೀವ್ಸ್‌ನ 28 ದ್ವೀಪಗಳಲ್ಲಿ ನೀರು ಮತ್ತು ನೈರ್ಮಲ್ಯ ಸೌಭ್ಯಗಳನ್ನು ಕಲ್ಪಿಸುವ ಯೋಜನೆಯ ವರ್ಚುವಲ್ ಉದ್ಘಾಟನಾ ಸಮಾರಂಭವನ್ನು ಭಾರತೀಯ ವಿದೇಶಾಂಗ ಸಚಿವಾಲಯದ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಆಗಸ್ಟ್ 10, 2024 ರಂದು ನೇರ ಪ್ರಸಾರ ಮಾಡಲಾಗಿತ್ತು. ಕಾರ್ಯಕ್ರಮದ ಡಿಜಿಟಲ್ ಬ್ಯಾನರ್‌ನಲ್ಲಿ “ಎಕ್ಸಿಮ್ ಬ್ಯಾಂಕ್ ಆಫ್ ಇಂಡಿಯಾದ ಲೈನ್ ಆಫ್ ಕ್ರೆಡಿಟ್ ನೆರವಿನ ಮೂಲಕ ಮಾಲ್ಡೀವ್ಸ್‌ನ 28 ದ್ವೀಪಗಳಲ್ಲಿ ನೀರು ಮತ್ತು ನೈರ್ಮಲ್ಯ ಸೌಲಭ್ಯ ಕಲ್ಪಿಸುವ ಯೋಜನೆಯ ಅಧಿಕೃತ ಉದ್ಘಾಟನೆ” ಎಂದು ಬರೆದಿರುವುದನ್ನು ನೋಡಬಹುದು.

ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಅವರು ಆಗಸ್ಟ್ 12, 2024ರಂದು ತನ್ನ ಮಾಲ್ಡೀವ್ಸ್ ಭೇಟಿಯ ಕುರಿತು ಎಕ್ಸ್‌ನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲೂ ಈ ಬ್ಯಾನರ್ ಕಾಣಬಹುದು.

ಆಗಸ್ಟ್ 10, 2024ರಂದು ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಸಚಿವ ಜೈಶಂಕರ್ ಅವರ ಭೇಟಿಯ ಕುರಿತು ಎಕ್ಸ್‌ನಲ್ಲಿ ಹಾಕಿರುವ ಪೋಸ್ಟ್‌ನಲ್ಲೂ 28 ದ್ವೀಪಗಳಲ್ಲಿ ಭಾರತದ ನೆರವಿನ ಮೂಲ ಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದ ಬಗ್ಗೆ ಉಲ್ಲೇಖಿಸಿದ್ದಾರೆ.

ಒಟ್ಟಿನಲ್ಲಿ, ಮಾಲ್ಡೀವ್ಸ್‌ನ 28 ದ್ವೀಪಗಳಲ್ಲಿ ಭಾರತ ನೆರವಿನೊಂದಿಗೆ ನೀರು ಮತ್ತು ನೈರ್ಮಲ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಯೋಜನೆಗೆ ಚಾಲನೆ ನೀಡಿರುವುದನ್ನು, ಮಾಲ್ಡೀವ್ಸ್ ತನ್ನ 28 ದ್ವೀಪಗಳನ್ನು ಭಾರತಕ್ಕೆ ಬಿಟ್ಟು ಕೊಟ್ಟಿದೆ ಎಂದು ತಪ್ಪು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ : FACT CHECK : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿ ಖಂಡಿಸಿ ಬೃಹತ್ ರ್‍ಯಾಲಿ ನಡೆಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...