Homeಅಂತರಾಷ್ಟ್ರೀಯಗಾಜಾದ ದೇರ್ ಅಲ್-ಬಾಲಾಹ್‌ನಲ್ಲಿ ಇಸ್ರೇಲ್‌ ವೈಮಾನಿಕ ದಾಳಿ; 4 ದಿನದ ಅವಳಿ ಮಕ್ಕಳು-ತಾಯಿ ಬಲಿ

ಗಾಜಾದ ದೇರ್ ಅಲ್-ಬಾಲಾಹ್‌ನಲ್ಲಿ ಇಸ್ರೇಲ್‌ ವೈಮಾನಿಕ ದಾಳಿ; 4 ದಿನದ ಅವಳಿ ಮಕ್ಕಳು-ತಾಯಿ ಬಲಿ

- Advertisement -
- Advertisement -

ನಾಲ್ಕು ದಿನಗಳ ಹಿಂದೆ ಜನಿಸಿದ ತನ್ನ ನವಜಾತ ಅವಳಿಗಳ ಜನನವನ್ನು ನೋಂದಾಯಿಸಲು ಅಬು ಅಲ್-ಕುಮ್ಸನ್ ಮಂಗಳವಾರ ಸೆಂಟ್ರಲ್ ಗಾಜಾದ ದೇರ್ ಅಲ್-ಬಾಲಾಹ್‌ನಲ್ಲಿರುವ ತನ್ನ ಮನೆಯಿಂದ ಹೊರಟಿದ್ದರು. ಅವರಿಗೆ ಅಸ್ಸರ್ ಎಂಬ ಗಂಡು ಮತ್ತು ಐಸೆಲ್ ಎಂಬ ಹೆಣ್ಣು ಮಗು ಜನಿಸಿದ್ದವು.

ಅವರು ಮನೆ ಬಿಟ್ಟ ಗಂಟೆಗಳ ನಂತರ, ತನ್ನ ನೆರೆಹೊರೆಯವರಿಂದ ಕರೆ ಸ್ವೀಕರಿಸಿದ್ದು, ಅವರ ಕುಟುಂಬವು ಆಶ್ರಯ ಪಡೆದ ಮನೆ ಮೇಲೆ ವೈಮಾನಿಕ ದಾಳಿ ನಡೆದಿದೆ ಎಂಬ ವಿಷಯ ತಿಳಿದು ಆಘಾತಗೊಂಡಿದ್ದಾರೆ.

ಅವರ ಪತ್ನಿ ಜೌಮಾನ ಅರಾಫಾ, ಆಕೆಯ ತಾಯಿ ಮತ್ತು ನವಜಾತ ಅವಳಿ ಮಕ್ಕಳು ಇಸ್ರೇಲಿ ವೈಮಾನಿಕ ದಾಳಿಯಿಂದ ಸಾವನ್ನಪ್ಪಿದ್ದಾರೆ. “ಏನಾಯಿತು ಎಂದು ನನಗೆ ತಿಳಿದಿಲ್ಲ, ನನ್ನ ಮನೆಗೆ ಶೆಲ್ ದಾಳಿಯಾಗಿದೆ ಎಂದು ಮಾತ್ರ ನನಗೆ ಹೇಳಲಾಗಿದೆ” ಎಂದು ಅಲ್-ಕುಮ್ಸನ್ ಹೇಳಿದ್ದಾರೆ.

ಅರಾಫಾ ಎಂಬ ವೈದ್ಯ ತನ್ನ ನವಜಾತ ಶಿಶುಗಳ ಆಗಮನವನ್ನು ಆಗಸ್ಟ್ 10 ರಂದು ಸಾಮಾಜಿಕ ಮಾಧ್ಯಮದ ಮೂಲಕ ಘೋಷಿಸಿ, ತನ್ನ ಪೋಸ್ಟ್‌ನಲ್ಲಿ “ಪವಾಡ” ಎಂದು ಕರೆದಿದ್ದಾಳೆ. ಮಾಧ್ಯಮಗಳ ಪ್ರಕಾರ, ಯುದ್ಧ ಪ್ರಾರಂಭವಾಗುವ ತಿಂಗಳುಗಳ ಮೊದಲು ದಂಪತಿಗಳು ಕಳೆದ ಬೇಸಿಗೆಯಲ್ಲಿ ವಿವಾಹವಾಗಿದ್ದರು.

ಯುದ್ಧದ ಆರಂಭಿಕ ವಾರಗಳಲ್ಲಿ ಗಾಜಾ ನಗರವನ್ನು ಸ್ಥಳಾಂತರಿಸಲು ಇಸ್ರೇಲ್‌ನ ಆದೇಶಗಳನ್ನು ಅನುಸರಿಸಿದ ಸಾವಿರಾರು ಪ್ಯಾಲೆಸ್ಟೀನಿಯಾದವರಲ್ಲಿ ಅಲ್-ಕುಮ್ಸಾನ್ ಕೂಡ ಸೇರಿದ್ದಾನೆ. ಗಾಜಾ ಪಟ್ಟಿಯಾದ್ಯಂತ ಇಸ್ರೇಲ್‌ನ ಬಾಂಬ್ ದಾಳಿಯಿಂದ ತನ್ನ ಗರ್ಭಿಣಿ ಹೆಂಡತಿಯನ್ನು ರಕ್ಷಿಸುವ ಹತಾಶ ಪ್ರಯತ್ನದಲ್ಲಿ ಅವನು ತನ್ನ ಕುಟುಂಬವನ್ನು ಉತ್ತರ ಗಾಜಾದಿಂದ ದೇರ್ ಅಲ್-ಬಾಲಾಹ್‌ನಲ್ಲಿರುವ ಅಪಾರ್ಟ್ಮೆಂಟ್‌ಗೆ ಸ್ಥಳಾಂತರಿಸಿದ್ದನು.

ಮಂಗಳವಾರ, ಅಲ್-ಕುಮ್ಸನ್ ತನ್ನ ಮಕ್ಕಳ ಜನನ ಪ್ರಮಾಣಪತ್ರಗಳನ್ನು ಸ್ವೀಕರಿಸಲು ಸ್ಥಳೀಯ ಸರ್ಕಾರಿ ಕಚೇರಿಗೆ ಹೋದರು. ನಂತರ, ಅವರು ತಮ್ಮ ಕುಟುಂಬದ ದುರಂತ ಸಾವಿನ ತಿಳಿದುಕೊಳ್ಳಲು ಮಾತ್ರ ಸಾಧ್ಯವಾಯಿತು.

ನಂತರ ಅವರು ತಮ್ಮ ಕುಟುಂಬಸ್ಥರ ದೇಹ ಸ್ವೀಕರಿಸಲು ಸೆಂಟ್ರಲ್ ಗಾಜಾದ ಅಲ್ ಅಕ್ಸಾ ಹುತಾತ್ಮರ ಆಸ್ಪತ್ರೆಗೆ ಬಂದರು, ಅಲ್ಲಿ ಅವರು ತಮ್ಮ ಕುಟುಂಬವನ್ನು ಕೊನೆಯ ಬಾರಿಗೆ ನೋಡುವ ಹಂಬಲದಿಂದ ಅಳುತ್ತಿದ್ದರು.

“ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ. ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ. ನನಗೆ ಅವರನ್ನು ನೋಡಲು ಅವಕಾಶ ಮಾಡಿಕೊಡಿ… ಅವಳು ಈಗಷ್ಟೇ ಜನ್ಮ ನೀಡಿದಳು. ದಯವಿಟ್ಟು ನನಗೆ ಅವಳನ್ನು ನೋಡಲು ಅವಕಾಶ ಮಾಡಿಕೊಡಿ” ಎಂದು ಅವರು ಬೇಡಿಕೊಳ್ಳುತ್ತಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.

ಅಲ್-ಕುಮ್ಸನ್ ಮತ್ತು ಅವರ ಕುಟುಂಬವು ಅಂತಿಮ ಪ್ರಾರ್ಥನೆ ಸಲ್ಲಿಸಿದ ನಂತರ ನವಜಾತ ಶಿಶುಗಳನ್ನು ಅವರ ತಾಯಿಯ ಜೊತೆಗೆ ಸಮಾಧಿ ಮಾಡಲಾಯಿತು.

ಅಲ್ ಜಜೀರಾ ಜೊತೆ ಮಾತನಾಡುತ್ತಾ, ದಿಗ್ಭ್ರಮೆಗೊಂಡ ಅಲ್-ಕುಮ್ಸನ್, ತನ್ನ ಮಕ್ಕಳ ಜನ್ಮವನ್ನು ಆಚರಿಸಲು ಎಂದಿಗೂ ಅವಕಾಶವನ್ನು ಹೊಂದಿಲ್ಲ ಎಂದು ನೋವು ತೋಡಿಕೊಂಡಿದ್ದಾರೆ.

“ನಾನು ನನ್ನ ಮಕ್ಕಳ ಜನನ ಪ್ರಮಾಣಪತ್ರವನ್ನು ಪಡೆಯಲು ಹೋಗಿದ್ದೆ, ನನ್ನ ಹೆಂಡತಿ ದಿನಗಳ ಹಿಂದೆ ಜನ್ಮ ನೀಡಿದ್ದಳು, ಅವರ ಜನ್ಮವನ್ನು ಆಚರಿಸಲು ನನಗೆ ಅವಕಾಶವಿರಲಿಲ್ಲ, ಅವಳಿಗೆ ಸಿ-ಸೆಕ್ಷನ್ ಹೆರಿಗೆಯಾಗಿತ್ತು. ದಾಳಿ ಸಂದರ್ಭದಲ್ಲಿ ಆಕೆ ತುಂಬಾ ಸುಸ್ತಾಗಿದ್ದಳು, ಅವಳು ಮನೆಯಿಂದ ಹೊರಬರಲು ಸಾಧ್ಯವಾಗಲಿಲ್ಲ” ಎಂದು ಅವರು ಅಲ್ ಜಜೀರಾಗೆ ತಿಳಿಸಿದರು.

ಇಸ್ರೇಲ್‌ನ ನಿರಂತರ ಬಾಂಬ್ ದಾಳಿಯ ಕಾರ್ಯಾಚರಣೆಯಿಂದಾಗಿ ಸಾವಿರಾರು ಪೋಷಕರು ತಮ್ಮ ಮಕ್ಕಳನ್ನು ಕಳೆದುಕೊಂಡಿದ್ದಾರೆ ಮತ್ತು ಅನೇಕರು ತಮ್ಮ ಹೆಂಡತಿಯರನ್ನು ಕಳೆದುಕೊಂಡಿದ್ದಾರೆ, ಇದೀಗ ಯುದ್ಧದ 11 ನೇ ತಿಂಗಳಿನಲ್ಲಿದೆ.

ಮಂಗಳವಾರದ ಗಾಜಾ ಆರೋಗ್ಯ ಸಚಿವಾಲಯದ ಇತ್ತೀಚಿನ ನವೀಕರಿಸಿದ ವರದಿಯ ಪ್ರಕಾರ, ಯುದ್ಧದಲ್ಲಿ ಕನಿಷ್ಠ 39,929 ಜನರು ಸಾವನ್ನಪ್ಪಿದ್ದಾರೆ, ಸತ್ತವರಲ್ಲಿ ಗಮನಾರ್ಹ ಭಾಗವು ಮಹಿಳೆಯರು ಮತ್ತು ಮಕ್ಕಳೆ ಇದ್ದಾರೆ.

ಆರೋಗ್ಯ ಸಚಿವಾಲಯದ ಪ್ರಕಾರ, ಅಕ್ಟೋಬರ್ 7, 2023 ರಂದು ಯುದ್ಧ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೆ 115 ಶಿಶುಗಳು ಕೊಲ್ಲಲ್ಪಟ್ಟಿವೆ. ಇಸ್ರೇಲ್‌ನ ಕ್ರೂರ ಆಕ್ರಮಣವು ಸಾವಿರಾರು ಅನಾಥರನ್ನು ಬಿಟ್ಟಿದೆ. ಗಾಜಾದಲ್ಲಿ ಸುಮಾರು 17,000 ಮಕ್ಕಳು ತಮ್ಮ ಪೋಷಕರ ಜೊತೆಯಲ್ಲಿಲ್ಲ ಎಂದು ಯುಎನ್ ಫೆಬ್ರವರಿಯಲ್ಲಿ ಅಂದಾಜಿಸಿದೆ.

ಇದನ್ನೂ ಓದಿ; ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಪ್ರಧಾನಿ ಮೋದಿಯಿಂದ 100ಕ್ಕೂ ಹೆಚ್ಚು ‘ಇಸ್ಲಾಮೋಫೋಬಿಕ್’ ಹೇಳಿಕೆ: ಹ್ಯೂಮನ್ ರೈಟ್ಸ್ ವಾಚ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...