Homeಮುಖಪುಟಕೋಮುವಾದಿ ಸಂಹಿತೆ ಎಂಬ ಹೇಳಿಕೆ ಅಂಬೇಡ್ಕರ್‌ಗೆ ಮಾಡಿದ ಅವಮಾನ : ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್...

ಕೋಮುವಾದಿ ಸಂಹಿತೆ ಎಂಬ ಹೇಳಿಕೆ ಅಂಬೇಡ್ಕರ್‌ಗೆ ಮಾಡಿದ ಅವಮಾನ : ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಕಿಡಿ

- Advertisement -
- Advertisement -

“ದೇಶದಲ್ಲಿ ‘ಜಾತ್ಯತೀತ ನಾಗರಿಕ ಸಂಹಿತೆ’ ಜಾರಿಗೊಳಿಸುವ ಅಗತ್ಯವಿದೆ. ಈಗ ಇರುವ ನಾಗರಿಕ ಸಂಹಿತೆ ‘ಕೋಮುವಾದಿ ಮತ್ತು ತಾರತಮ್ಯ’ ಸ್ವರೂಪದಿಂದ ಕೂಡಿದೆ” ಎಂದು ಪ್ರಧಾನಿ ನರೇಂದ್ರ ಗುರುವಾರ ತನ್ನ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಹೇಳಿದ್ದಾರೆ. ಈ ಮೂಲಕ ‘ಸಮಾನ ನಾಗರಿಕ ಸಂಹಿತೆ’ ಜಾರಿಗೆ ಮುಂದಾಗಿರುವುದನ್ನು ಸಮರ್ಥಿಸಿಕೊಂಡಿದ್ದಾರೆ.

ಪ್ರಧಾನಿಯ ಈ ಹೇಳಿಕೆಗೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇದು ಸಂವಿಧಾನ ಶಿಲ್ಪಿ ಡಾ.ಬಿಆರ್‌ ಅಂಬೇಡ್ಕರ್ ಅವರಿಗೆ ಮಾಡಿರುವ ದೊಡ್ಡ ಅವಮಾನ ಎಂದಿದೆ.

ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ “ಜೈವಿಕವಲ್ಲದ ಪ್ರಧಾನಿಯ ಇತಿಹಾಸವನ್ನು ತಿರುಚುವ, ಕುಚೇಷ್ಟೆ ಮಾಡುವ ಹಾಗೂ ಕಳಂಕ ತರುವ ಸಾಮರ್ಥ್ಯಕ್ಕೆ ಗಡಿ ಎಂಬುವುದೇ ಇಲ್ಲ. ಅದು ಇಂದು ಕೆಂಪು ಕೋಟೆಯ ಮೇಲಿಂದ ಸಂಪೂರ್ಣವಾಗಿ ಅನಾವರಣಗೊಂಡಿದೆ. ನಾವು ಇಲ್ಲಿಯವರೆಗೆ ಕೋಮುವಾದಿ ನಾಗರಿಕ ಸಂಹಿತೆಯನ್ನು ಹೊಂದಿದ್ದೆವು ಎಂಬುವುದು ಅಂಬೇಡ್ಕರ್ ಅವರಿಗೆ ಮಾಡುವ ದೊಡ್ಡ ಅವಮಾನವಾಗಿದೆ. 1950ರ ಮಧ್ಯಭಾಗದಲ್ಲಿ ನೈಜವಾಗಿ ಹೊರ ಹೊಮ್ಮಿದ್ದ ಹಿಂದೂ ವೈಯಕ್ತಿಕ ಕಾನೂನುಗಳಲ್ಲಿ ಸುಧಾರಣೆ ತಂದ ಮಹಾನ್ ದಾರ್ಶನಿಕರವರು. ಈ ಸುಧಾರಣೆಗಳನ್ನು ಆರೆಸ್ಸೆಸ್ ಹಾಗೂ ಜನಸಂಘ ತೀವ್ರವಾಗಿ ವಿರೋಧಿಸಿದ್ದವು” ಎಂದು ಹೇಳಿದ್ದಾರೆ.

ಜೈರಮೇಶ್ ಆಗಸ್ಟ್ 31, 2018 ರ ಕೌಟುಂಬಿಕ ಕಾನೂನಿನ ಸುಧಾರಣೆಯ ಕುರಿತಾದ 21ನೇ ಕಾನೂನು ಆಯೋಗದ ಸಮಾಲೋಚನಾ ಪತ್ರವನ್ನು ಉಲ್ಲೇಖಿಸಿದ್ದು, ಆಯೋಗವು ಪೂರ್ಣಪ್ರಮಾಣದ ಸಮಾನ ನಾಗರಿಕ ಸಂಹಿತೆಯ ಜಾರಿಯ ವಿರುದ್ಧ ವಾದ ಮಂಡಿಸಿದೆ ಎಂಬುವುದರತ್ತ ಬೊಟ್ಟು ಮಾಡಿದ್ದಾರೆ.

“ಭಾರತೀಯ ಸಂಸ್ಕೃತಿಯ ವೈವಿಧ್ಯತೆಯನ್ನು ಆಚರಿಸಬಹುದು ಮತ್ತು ಆಚರಿಸಬೇಕು. ನಿರ್ದಿಷ್ಟ ಗುಂಪುಗಳು ಅಥವಾ ಸಮಾಜದ ದುರ್ಬಲ ವರ್ಗಗಳು ಈ ಪ್ರಕ್ರಿಯೆಯಲ್ಲಿ ಅನನುಕೂಲತೆಯನ್ನು ಹೊಂದಿರಬಾರದು. ಈ ಸಂಘರ್ಷದ ಪರಿಹಾರವು ಎಲ್ಲಾ ಭಿನ್ನಾಭಿಪ್ರಾಯಗಳ ನಿರ್ಮೂಲನೆ ಎಂದಲ್ಲ. ಆದ್ದರಿಂದ ಈ ಹಂತದಲ್ಲಿ ಅಗತ್ಯವೂ ಅಲ್ಲದ ಮತ್ತು ಅಪೇಕ್ಷಣೀಯವೂ ಅಲ್ಲದ ಏಕರೂಪದ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವ ಬದಲು ತಾರತಮ್ಯದಿಂದ ಕೂಡಿರುವ ಕಾನೂನುಗಳನ್ನು ಸರಿಪಡಿಸಬೇಕು. ಹೆಚ್ಚಿನ ದೇಶಗಳು ಭಿನ್ನಾಭಿಪ್ರಾಯಗಳನ್ನು ಗುರುತಿಸುವತ್ತ ಸಾಗುತ್ತಿವೆ. ವಿವಿದತೆಯು ತಾರತಮ್ಯವನ್ನು ಸೂಚಿಸುವುದಿಲ್ಲ, ಅದು ದೃಢವಾದ ಪ್ರಜಾಪ್ರಭುತ್ವವನ್ನು ಸೂಚಿಸುತ್ತದೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಏಕರೂಪ ನಾಗರಿಕ ಸಂಹಿತೆ 1989 ರಿಂದ ಬಿಜೆಪಿಯ ಲೋಕಸಭಾ ಚುನಾವಣಾ ಪ್ರಣಾಳಿಕೆಯ ಭಾಗವಾಗಿದೆ. ಈ ಬಾರಿ ಅದನ್ನೂ ಜಾರಿಗೊಳಿಸಲು ಬಿಜೆಪಿ ಮುಂದಾಗಿದೆ. ಆದರೆ, ಕೇಂದ್ರದಲ್ಲಿ ಬಿಜೆಪಿ ಬಹುಮತದ ಕೊರತೆಯಿದ್ದು, ಟಿಡಿಪಿ ಮತ್ತು ಜೆಡಿಯು ಬಲದಿಂದ ಎನ್‌ಡಿಎ ಸರ್ಕಾರ ಕಟ್ಟಿದೆ. ಹಾಗಾಗಿ, ಸಮಾನ ನಾಗರಿಕ ಸಂಹಿತೆ ಜಾರಿಗೊಳಿಸಲು ಸಾಧ್ಯವಾಗುತದಾ? ಎಂಬ ಪ್ರಶ್ನೆ ಎದ್ದಿದೆ.

ಇದನ್ನೂ ಓದಿ : ಸಿಎಎ ವಿರೋಧಿ ಪ್ರತಿಭಟನೆಗಳ ಕೇಂದ್ರಬಿಂದು ಅಸ್ಸಾಂನಲ್ಲಿ ಪೌರತ್ವ ಪಡೆದ ಮೊದಲನೇ ಅರ್ಜಿದಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...