Homeಮುಖಪುಟಕೋಲ್ಕತ್ತಾ ಪ್ರಕರಣದ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ ನರ್ಸ್ ಮೇಲೆ ಅತ್ಯಾಚಾರ, ಕೊಲೆ

ಕೋಲ್ಕತ್ತಾ ಪ್ರಕರಣದ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ ನರ್ಸ್ ಮೇಲೆ ಅತ್ಯಾಚಾರ, ಕೊಲೆ

- Advertisement -
- Advertisement -

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿ ವೈದ್ಯೆಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ದೇಶದಾದ್ಯಂತ ಆಕ್ರೋಶಕ್ಕೆ ಕಾರಣವಾಗಿರುವ ನಡುವೆ, ನರ್ಸ್ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆಯೊಂದು ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.

ಉತ್ತರ ಪ್ರದೇಶದ ಬಿಲಾಸ್‌ಪುರದ ಕಾಶಿಪುರ ರಸ್ತೆಯ ಬಾಡಿಗೆ ಮನೆಯಲ್ಲಿ ವಾಸವಿದ್ದ ನರ್ಸ್, ಪಕ್ಕದ ರಾಜ್ಯ ಉತ್ತರಾಖಂಡದ ಉಧಮ್ ನಗರ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು.

ಜುಲೈ 30ರ ಸಂಜೆ ಆಸ್ಪತ್ರೆಯಿಂದ ಹೊರಬಂದ ನರ್ಸ್, ಉತ್ತಾರಾಖಂಡದ ರುದ್ರಪುರದ ಇಂದ್ರ ಚೌಕ್‌ನಿಂದ ಇ-ರಿಕ್ಷಾ ಹತ್ತಿ ಮನೆ ಕಡೆ ಹೊರಟ್ಟಿದ್ದರು. ಈ ದೃಶ್ಯ ಅಲ್ಲಿನ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ಆದರೆ, ಆಕೆ ಮನೆ ತಲುಪಿರಲಿಲ್ಲ.

ಮರುದಿನ ನರ್ಸ್ ಸಹೋದರಿ ತನ್ನ ಅಕ್ಕ ಕಾಣೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದರು. ಇದಾಗಿ 8 ದಿನಗಳ ಬಳಿಕ, ಆಗಸ್ಟ್ 8ರಂದು ಉತ್ತರ ಪ್ರದೇಶ ಪೊಲೀಸರು ದಿಬ್ದಿಬಾ ಗ್ರಾಮದ ಆಕೆಯ ಮನೆಯಿಂದ ಸುಮಾರು 1.5 ಕಿಮೀ ದೂರದಲ್ಲಿರುವ ಖಾಲಿ ಜಾಗದಲ್ಲಿ ಶವ ಪತ್ತೆ ಹಚ್ಚಿದ್ದಾರೆ.

ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ, ಹಂತಕನ ಪತ್ತೆಗೆ ತಂಡ ರಚಿಸಿದ್ದರು. ಮೃತ ಮಹಿಳೆಯ ಕಳವಾದ ಮೊಬೈಲ್ ಫೋನ್ ಅನ್ನು ಪೊಲೀಸರು ಟ್ರೇಸ್ ಮಾಡಿದಾಗ ಅದು ಧರ್ಮೇಂದ್ರ ಕುಮಾರ್ ಎಂಬಾತನ ಬಳಿ ಇರುವುದು ಗೊತ್ತಾಗಿದೆ. ಇದರಿಂದ ಅತ್ಯಾಚಾರ ಮತ್ತು ಕೊಲೆ ಆರೋಪಿ ಧರ್ಮೇಂದ್ರ ಎಂಬುವುದು ಪೊಲೀಸರಿಗೆ ಖಚಿತವಾಗಿದೆ.

ಪೊಲೀಸರು ಆರೋಪಿ ಧರ್ಮೇಂದ್ರ ಕುಮಾರ್ ಅನ್ನು ರಾಜಸ್ಥಾನದಲ್ಲಿ ಬಂಧಿಸಿದ್ದಾರೆ. ಆತ
ಉತ್ತರ ಪ್ರದೇಶದ ಬರೇಲಿಯ ದಿನಗೂಲಿ ಕಾರ್ಮಿಕ ಎಂದು ತಿಳಿದು ಬಂದಿದೆ.

ಪೊಲೀಸರ ಪ್ರಕಾರ, ಜುಲೈ 30ರಂದು ಆಸ್ಪತ್ರೆಯಲ್ಲಿ ಕೆಲಸ ಮುಗಿಸಿದ ನರ್ಸ್ ಒಂಟಿಯಾಗಿ ಮನೆಗೆ ಮರಳುತಿದ್ದರು. ಈ ವೇಳೆ ಧರ್ಮೇಂದ್ರ ಕುಮಾರ್ ಆಕೆಯನ್ನು ಅಡ್ಡಗಟ್ಟಿ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ.

ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಉಧಮ್‌ ನಗರ ಎಎಸ್‌ಪಿ ಮಂಜುನಾಥ್ ಟಿಸಿ “ನರ್ಸ್ ಕಾಣೆಯಾಗಿರುವ ಬಗ್ಗೆ ದೂರು ದಾಖಲಾಗಿತ್ತು. ಅದರಂತೆ ತನಿಖೆ ನಡೆಸಿದಾಗ, ದಾಳಿ ನಡೆಯುವುದಕ್ಕೂ ಮುನ್ನವೇ ಆಕೆ ತಮ್ಮ ಗ್ರಾಮಕ್ಕೆ ತೆರಳಿದ್ದಾರೆ ಎಂಬುವುದು ತಿಳಿದು ಬಂದಿತ್ತು. ನಂತರ ಆಗಸ್ಟ್ 8ರಂದು ಆಕೆಯ ಗ್ರಾಮದ ಸಮೀಪ ಪೊದೆಯಲ್ಲಿ ಶವ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.

ಬಂಧಿತ ಆರೋಪಿಯು ಮಾದಕ ವ್ಯಸನಿಯಾಗಿದ್ದು, ಆತನಿಗೆ ನರ್ಸ್ ಪರಿಚಯವಿರಲಿಲ್ಲ. ಆಕೆ ಹೋಗುತ್ತಿರುವುದನ್ನು ನೋಡಿ ತಡೆದಿದ್ದ. ಆತನಿಂದ ತಪ್ಪಿಸಿಕೊಳ್ಳಲು ನರ್ಸ್ ಪ್ರಯತ್ನಪಟ್ಟರೂ ಆಗಿಲ್ಲ. ಆರೋಪಿ ಅತ್ಯಾಚಾರವೆಸಗಿ, ಕತ್ತು ಹಿಸುಕಿ ಕೊಲೆ ಮಾಡಿದ್ದ. ಕೃತ್ಯದ ಬಳಿಕ ಆಕೆಯ ಮೊಬೈಲ್, 3 ಸಾವಿರ ರೂಪಾಯಿ ದುಡ್ಡು ಮತ್ತಿತರ ವಸ್ತುಗಳನ್ನು ದೋಚಿ ಪರಿಯಾಗಿದ್ದಾನೆ ಎಂದು ಎಎಸ್‌ಪಿ ಹೇಳಿದ್ದಾರೆ.

ಇದನ್ನೂ ಓದಿ : ಕೋಮುವಾದಿ ಸಂಹಿತೆ ಎಂಬ ಹೇಳಿಕೆ ಅಂಬೇಡ್ಕರ್‌ಗೆ ಮಾಡಿದ ಅವಮಾನ : ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...