Homeಮುಖಪುಟರಾಹುಲ್‌ ಗಾಂಧಿಯ ಪೌರತ್ವ ವಿಚಾರ : ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ ಸುಬ್ರಮಣಿಯನ್‌ ಸ್ವಾಮಿ

ರಾಹುಲ್‌ ಗಾಂಧಿಯ ಪೌರತ್ವ ವಿಚಾರ : ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ ಸುಬ್ರಮಣಿಯನ್‌ ಸ್ವಾಮಿ

- Advertisement -
- Advertisement -

ರಾಹುಲ್ ಗಾಂಧಿಯವರ ಭಾರತೀಯ ಪೌರತ್ವವನ್ನು ರದ್ದುಗೊಳಿಸಲು ಕೋರಿರುವ ತಮ್ಮ ಮನವಿ ಕುರಿತು ನಿರ್ಧರಿಸಲು ಗೃಹ ಸಚಿವಾಲಯಕ್ಕೆ ನಿರ್ದೇಶನ ನೀಡುವಂತೆ ಕೋರಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ವಕೀಲ ಸತ್ಯ ಸಬರ್ವಾಲ್ ಮೂಲಕ ಸುಬ್ರಮಣಿಯನ್‌ ಸ್ವಾಮಿ ಅರ್ಜಿ ಸಲ್ಲಿಸಿದ್ದಾರೆ. ಅದು ಮುಂದಿನ ವಾರ ವಿಚಾರಣೆಗೆ ಬರುವ ಸಾಧ್ಯತೆಯಿದೆ.

ಆಗಸ್ಟ್ 2019ರಲ್ಲಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದ ಸುಬ್ರಮಣಿಯನ್‌ ಸ್ವಾಮಿ, “ರಾಹುಲ್ ಗಾಂಧಿ ಸ್ವಯಂ ಪ್ರೇರಿತರಾಗಿ ತಾನು ಬ್ರಿಟನ್ ಪ್ರಜೆ ಎಂದು ಬ್ರಿಟಿಷ್ ಸರ್ಕಾರಕ್ಕೆ ಹೇಳಿದ್ದಾರೆ. ಅಲ್ಲದೆ, ಅವರು ಅಲ್ಲಿನ ಪಾಸ್‌ಪೋರ್ಟ್‌ ಕೂಡ ಹೊಂದಿದ್ದಾರೆ. ಈ ಮೂಲಕ ಭಾರತೀಯ ಪೌರತ್ವ ನಿಯಮಗಳನ್ನು ಉಲ್ಲಂಘಿಸಿದ್ದಾರೆ” ಎಂದು ಆರೋಪಿಸಿದ್ದರು.

ರಾಹುಲ್ ಗಾಂಧಿ ಭಾರತದ ಸಂವಿಧಾನ ವಿಧಿ 9 ಮತ್ತು ಭಾರತೀಯ ಪೌರತ್ವ ಕಾಯ್ದೆ-1955 ಅನ್ನು ಉಲ್ಲಂಘಿಸಿದ್ದಾರೆ. ಇದರಿಂದ ಅವರು ಭಾರತೀಯ ಪೌರತ್ವ ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದರು.

ಭಾರತದ ಸಂವಿಧಾನದ 9ನೇ ವಿಧಿಯು ಯಾವುದೇ ವ್ಯಕ್ತಿಯು ಯಾವುದೇ ಇತರ ರಾಷ್ಟ್ರದ ಪೌರತ್ವವನ್ನು ಸ್ವಯಂ ಪ್ರೇರಣೆಯಿಂದ ಪಡೆದುಕೊಂಡರೆ, ಅವರನ್ನು ಭಾರತದ ಪ್ರಜೆ ಎಂದು ಪರಿಗಣಿಸಲಾಗುವುದಿಲ್ಲ ಎಂದು ಹೇಳುತ್ತದೆ.

ರಾಹುಲ್‌ ಗಾಂಧಿಯವರು ಬ್ರಿಟನ್‌ನಲ್ಲಿ 2003ರಲ್ಲಿ ನೊಂದಾಯಿಸಿರುವ ಬ್ಯಾಕ್‌ಆಪ್ಸ್‌ ಲಿಮಿಟೆಡ್ ಹೆಸರಿನ ಕಂಪನಿಯ ನಿರ್ದೇಶಕರು ಮತ್ತು ಕಾರ್ಯದರ್ಶಿಗಳಲ್ಲಿ ಒಬ್ಬರಾಗಿದ್ದಾರೆ ಎಂದು ಸುಬ್ರಮಣಿಯನ್‌ ಸ್ವಾಮಿ ತನ್ನ ಪತ್ರದಲ್ಲಿ ಹೇಳಿದ್ದರು. ಅಕ್ಟೋಬರ್ 10,2005 ಮತ್ತು ಅಕ್ಟೋಬರ್ 31,2006 ರಂದು ಸಲ್ಲಿಸಿದ ಕಂಪನಿಯ ವಾರ್ಷಿಕ ರಿಟರ್ನ್ಸ್‌ನಲ್ಲಿ ಗಾಂಧಿಯವರು ತಮ್ಮ ರಾಷ್ಟ್ರೀಯತೆಯನ್ನು ಬ್ರಿಟಿಷ್ ಎಂದು ಘೋಷಿಸಿದ್ದರು ಎಂದು ಆರೋಪಿಸಿದ್ದರು.

ಮುಂದುವರೆದು, ಫೆಬ್ರವರಿ 17, 2009 ರಂದು ದಾಖಲಿಸಿರುವ ಕಂಪನಿಯ ವಿಸರ್ಜನೆಯ ಅರ್ಜಿಯಲ್ಲಿ ರಾಹುಲ್‌ ಗಾಂಧಿಯವರ ರಾಷ್ಟ್ರೀಯತೆಯನ್ನು ಮತ್ತೆ ಬ್ರಿಟಿಷ್ ಎಂದೇ ಉಲ್ಲೇಖಿಸಲಾಗಿದೆ ಎಂದಿದ್ದ ಸ್ವಾಮಿ, ಇದು ಭಾರತದ ಸಂವಿಧಾನ ವಿಧಿ 9 ಮತ್ತು ಭಾರತೀಯ ಪೌರತ್ವ ಕಾಯ್ದೆ-1955 ಉಲ್ಲಂಘಿಸುತ್ತದೆ ಎಂದಿದ್ದರು.

ಸ್ವಾಮಿ ಅವರ ಪತ್ರದ ಹಿನ್ನೆಲೆ ಗೃಹ ಇಲಾಖೆ ಏಪ್ರಿಲ್ 29,2019 ರಂದು ರಾಹುಲ್‌ ಗಾಂಧಿಯವರಿಗೆ ಪತ್ರ ಬರೆದು ಹದಿನೈದು ದಿನಗಳೊಳಗೆ ಈ ವಿಷಯದಲ್ಲಿ “ವಾಸ್ತವ ಸ್ಥಿತಿಯನ್ನು ತಿಳಿಸುವಂತೆ” ಕೇಳಿಕೊಂಡಿತ್ತು.

ಕಳೆದ ಆಗಸ್ಟ್ 10ರಂದು ತನ್ನ ಹಳೆಯ ಪತ್ರವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಸ್ವಾಮಿ, “ರಾಹುಲ್ ಗಾಂಧಿ 2003ರಲ್ಲಿ ಬ್ರಿಟಿಷ್ ಪೌರತ್ವ ಪಡೆದು ವಿದೇಶಿ ಪ್ರಜೆಯಾಗಿರುವಾಗ ಮತ್ತು ಲಂಡನ್‌ನಲ್ಲಿ ಬ್ಯಾಕ್ ಓಪ್ಸ್ ಎಂಬ ಕಂಪನಿಯನ್ನು ಪ್ರಾರಂಭಿಸಿರುವಾಗ ಮೋದಿ ಮತ್ತು ಶಾ ಅವರನ್ನು ರಕ್ಷಿಸುತ್ತಿರುವುದು ಏಕೆ? ಅವರ ಭಾರತೀಯ ಪೌರತ್ವ ಅಮಾನ್ಯವಾಗಿದೆ. ಮೋದಿ ರಕ್ಷಣೆ ಮುಂದುವರಿಸಿದರೆ ನಾನು ಮೋದಿ ಮತ್ತು ಶಾ ವಿರುದ್ಧ ಕೇಸು ದಾಖಲಿಸಬೇಕಾಗುತ್ತದೆ” ಎಂದು ಬರೆದುಕೊಂಡಿದ್ದರು.

ಇವತ್ತು (ಆ.16) ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಸ್ವಾಮಿ “ನನ್ನ ಅಸೋಸಿಯೇಟ್ ಅಡ್ವೊಕೇಟ್ ಸತ್ಯ ಸಬರ್ವಾಲ್ ಅವರು ರಾಹುಲ್ ಗಾಂಧಿಯವರನ್ನು ವಿಚಾರಣೆಗೆ ಒಳಪಡಿಸಲು ಮತ್ತು ಅವರ ಭಾರತೀಯ ಪೌರತ್ವವನ್ನು ಏಕೆ ಕಿತ್ತುಕೊಳ್ಳಬಾರದು ಎಂಬ ಕಾರಣವನ್ನು ತೋರಿಸಲು ಗೃಹ ಸಚಿವಾಲಯದ ವಿಫಲತೆಯ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ರಾಹುಲ್ ಗಾಂಧಿಯವರು ಗೃಹ ಸಚಿವಾಲಯಕ್ಕೆ ಉತ್ತರಿಸಲು ನಿರಾಕರಿಸಿದ್ದಾರೆ, ಆದ್ದರಿಂದ ಪಿಐಎಲ್. ನಾನು ಅಸೋಸಿಯೇಟ್ಸ್ ವಿಶೇಷ್ ಕನೋರಿಯಾ ಅವರಿಗೆ ಧನ್ಯವಾದ ಹೇಳುತ್ತೇನೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ : ನಾಳೆ (ಆ.17) ದೇಶದಾದ್ಯಂತ ವೈದ್ಯರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...