Homeಮುಖಪುಟರಾಹುಲ್‌ ಗಾಂಧಿಯ ಪೌರತ್ವ ವಿಚಾರ : ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ ಸುಬ್ರಮಣಿಯನ್‌ ಸ್ವಾಮಿ

ರಾಹುಲ್‌ ಗಾಂಧಿಯ ಪೌರತ್ವ ವಿಚಾರ : ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ ಸುಬ್ರಮಣಿಯನ್‌ ಸ್ವಾಮಿ

- Advertisement -
- Advertisement -

ರಾಹುಲ್ ಗಾಂಧಿಯವರ ಭಾರತೀಯ ಪೌರತ್ವವನ್ನು ರದ್ದುಗೊಳಿಸಲು ಕೋರಿರುವ ತಮ್ಮ ಮನವಿ ಕುರಿತು ನಿರ್ಧರಿಸಲು ಗೃಹ ಸಚಿವಾಲಯಕ್ಕೆ ನಿರ್ದೇಶನ ನೀಡುವಂತೆ ಕೋರಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ವಕೀಲ ಸತ್ಯ ಸಬರ್ವಾಲ್ ಮೂಲಕ ಸುಬ್ರಮಣಿಯನ್‌ ಸ್ವಾಮಿ ಅರ್ಜಿ ಸಲ್ಲಿಸಿದ್ದಾರೆ. ಅದು ಮುಂದಿನ ವಾರ ವಿಚಾರಣೆಗೆ ಬರುವ ಸಾಧ್ಯತೆಯಿದೆ.

ಆಗಸ್ಟ್ 2019ರಲ್ಲಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದ ಸುಬ್ರಮಣಿಯನ್‌ ಸ್ವಾಮಿ, “ರಾಹುಲ್ ಗಾಂಧಿ ಸ್ವಯಂ ಪ್ರೇರಿತರಾಗಿ ತಾನು ಬ್ರಿಟನ್ ಪ್ರಜೆ ಎಂದು ಬ್ರಿಟಿಷ್ ಸರ್ಕಾರಕ್ಕೆ ಹೇಳಿದ್ದಾರೆ. ಅಲ್ಲದೆ, ಅವರು ಅಲ್ಲಿನ ಪಾಸ್‌ಪೋರ್ಟ್‌ ಕೂಡ ಹೊಂದಿದ್ದಾರೆ. ಈ ಮೂಲಕ ಭಾರತೀಯ ಪೌರತ್ವ ನಿಯಮಗಳನ್ನು ಉಲ್ಲಂಘಿಸಿದ್ದಾರೆ” ಎಂದು ಆರೋಪಿಸಿದ್ದರು.

ರಾಹುಲ್ ಗಾಂಧಿ ಭಾರತದ ಸಂವಿಧಾನ ವಿಧಿ 9 ಮತ್ತು ಭಾರತೀಯ ಪೌರತ್ವ ಕಾಯ್ದೆ-1955 ಅನ್ನು ಉಲ್ಲಂಘಿಸಿದ್ದಾರೆ. ಇದರಿಂದ ಅವರು ಭಾರತೀಯ ಪೌರತ್ವ ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದರು.

ಭಾರತದ ಸಂವಿಧಾನದ 9ನೇ ವಿಧಿಯು ಯಾವುದೇ ವ್ಯಕ್ತಿಯು ಯಾವುದೇ ಇತರ ರಾಷ್ಟ್ರದ ಪೌರತ್ವವನ್ನು ಸ್ವಯಂ ಪ್ರೇರಣೆಯಿಂದ ಪಡೆದುಕೊಂಡರೆ, ಅವರನ್ನು ಭಾರತದ ಪ್ರಜೆ ಎಂದು ಪರಿಗಣಿಸಲಾಗುವುದಿಲ್ಲ ಎಂದು ಹೇಳುತ್ತದೆ.

ರಾಹುಲ್‌ ಗಾಂಧಿಯವರು ಬ್ರಿಟನ್‌ನಲ್ಲಿ 2003ರಲ್ಲಿ ನೊಂದಾಯಿಸಿರುವ ಬ್ಯಾಕ್‌ಆಪ್ಸ್‌ ಲಿಮಿಟೆಡ್ ಹೆಸರಿನ ಕಂಪನಿಯ ನಿರ್ದೇಶಕರು ಮತ್ತು ಕಾರ್ಯದರ್ಶಿಗಳಲ್ಲಿ ಒಬ್ಬರಾಗಿದ್ದಾರೆ ಎಂದು ಸುಬ್ರಮಣಿಯನ್‌ ಸ್ವಾಮಿ ತನ್ನ ಪತ್ರದಲ್ಲಿ ಹೇಳಿದ್ದರು. ಅಕ್ಟೋಬರ್ 10,2005 ಮತ್ತು ಅಕ್ಟೋಬರ್ 31,2006 ರಂದು ಸಲ್ಲಿಸಿದ ಕಂಪನಿಯ ವಾರ್ಷಿಕ ರಿಟರ್ನ್ಸ್‌ನಲ್ಲಿ ಗಾಂಧಿಯವರು ತಮ್ಮ ರಾಷ್ಟ್ರೀಯತೆಯನ್ನು ಬ್ರಿಟಿಷ್ ಎಂದು ಘೋಷಿಸಿದ್ದರು ಎಂದು ಆರೋಪಿಸಿದ್ದರು.

ಮುಂದುವರೆದು, ಫೆಬ್ರವರಿ 17, 2009 ರಂದು ದಾಖಲಿಸಿರುವ ಕಂಪನಿಯ ವಿಸರ್ಜನೆಯ ಅರ್ಜಿಯಲ್ಲಿ ರಾಹುಲ್‌ ಗಾಂಧಿಯವರ ರಾಷ್ಟ್ರೀಯತೆಯನ್ನು ಮತ್ತೆ ಬ್ರಿಟಿಷ್ ಎಂದೇ ಉಲ್ಲೇಖಿಸಲಾಗಿದೆ ಎಂದಿದ್ದ ಸ್ವಾಮಿ, ಇದು ಭಾರತದ ಸಂವಿಧಾನ ವಿಧಿ 9 ಮತ್ತು ಭಾರತೀಯ ಪೌರತ್ವ ಕಾಯ್ದೆ-1955 ಉಲ್ಲಂಘಿಸುತ್ತದೆ ಎಂದಿದ್ದರು.

ಸ್ವಾಮಿ ಅವರ ಪತ್ರದ ಹಿನ್ನೆಲೆ ಗೃಹ ಇಲಾಖೆ ಏಪ್ರಿಲ್ 29,2019 ರಂದು ರಾಹುಲ್‌ ಗಾಂಧಿಯವರಿಗೆ ಪತ್ರ ಬರೆದು ಹದಿನೈದು ದಿನಗಳೊಳಗೆ ಈ ವಿಷಯದಲ್ಲಿ “ವಾಸ್ತವ ಸ್ಥಿತಿಯನ್ನು ತಿಳಿಸುವಂತೆ” ಕೇಳಿಕೊಂಡಿತ್ತು.

ಕಳೆದ ಆಗಸ್ಟ್ 10ರಂದು ತನ್ನ ಹಳೆಯ ಪತ್ರವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಸ್ವಾಮಿ, “ರಾಹುಲ್ ಗಾಂಧಿ 2003ರಲ್ಲಿ ಬ್ರಿಟಿಷ್ ಪೌರತ್ವ ಪಡೆದು ವಿದೇಶಿ ಪ್ರಜೆಯಾಗಿರುವಾಗ ಮತ್ತು ಲಂಡನ್‌ನಲ್ಲಿ ಬ್ಯಾಕ್ ಓಪ್ಸ್ ಎಂಬ ಕಂಪನಿಯನ್ನು ಪ್ರಾರಂಭಿಸಿರುವಾಗ ಮೋದಿ ಮತ್ತು ಶಾ ಅವರನ್ನು ರಕ್ಷಿಸುತ್ತಿರುವುದು ಏಕೆ? ಅವರ ಭಾರತೀಯ ಪೌರತ್ವ ಅಮಾನ್ಯವಾಗಿದೆ. ಮೋದಿ ರಕ್ಷಣೆ ಮುಂದುವರಿಸಿದರೆ ನಾನು ಮೋದಿ ಮತ್ತು ಶಾ ವಿರುದ್ಧ ಕೇಸು ದಾಖಲಿಸಬೇಕಾಗುತ್ತದೆ” ಎಂದು ಬರೆದುಕೊಂಡಿದ್ದರು.

ಇವತ್ತು (ಆ.16) ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಸ್ವಾಮಿ “ನನ್ನ ಅಸೋಸಿಯೇಟ್ ಅಡ್ವೊಕೇಟ್ ಸತ್ಯ ಸಬರ್ವಾಲ್ ಅವರು ರಾಹುಲ್ ಗಾಂಧಿಯವರನ್ನು ವಿಚಾರಣೆಗೆ ಒಳಪಡಿಸಲು ಮತ್ತು ಅವರ ಭಾರತೀಯ ಪೌರತ್ವವನ್ನು ಏಕೆ ಕಿತ್ತುಕೊಳ್ಳಬಾರದು ಎಂಬ ಕಾರಣವನ್ನು ತೋರಿಸಲು ಗೃಹ ಸಚಿವಾಲಯದ ವಿಫಲತೆಯ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ರಾಹುಲ್ ಗಾಂಧಿಯವರು ಗೃಹ ಸಚಿವಾಲಯಕ್ಕೆ ಉತ್ತರಿಸಲು ನಿರಾಕರಿಸಿದ್ದಾರೆ, ಆದ್ದರಿಂದ ಪಿಐಎಲ್. ನಾನು ಅಸೋಸಿಯೇಟ್ಸ್ ವಿಶೇಷ್ ಕನೋರಿಯಾ ಅವರಿಗೆ ಧನ್ಯವಾದ ಹೇಳುತ್ತೇನೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ : ನಾಳೆ (ಆ.17) ದೇಶದಾದ್ಯಂತ ವೈದ್ಯರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...