Homeಮುಖಪುಟತಮಿಳುನಾಡು : ಮೀಸಲಾತಿ ವಿರುದ್ಧ 1,400 ಪತ್ರಗಳನ್ನು ಕಳುಹಿಸಿದ ಸರ್ಕಾರಿ ಕಾಲೇಜು!

ತಮಿಳುನಾಡು : ಮೀಸಲಾತಿ ವಿರುದ್ಧ 1,400 ಪತ್ರಗಳನ್ನು ಕಳುಹಿಸಿದ ಸರ್ಕಾರಿ ಕಾಲೇಜು!

- Advertisement -
- Advertisement -

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ಹಿಂಸಾಚಾರ ತಡೆಗಟ್ಟಲು ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಮಾರ್ಗಸೂಚಿಗಳನ್ನು ರೂಪಿಸಲು ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಕೆ ಚಂದ್ರು ನೇತೃತ್ವದ ಏಕ ಸದಸ್ಯ ಸಮಿತಿಯನ್ನು ತಮಿಳುನಾಡು ಸರ್ಕಾರ ರಚಿಸಿತ್ತು. ಈ ಸಮಿತಿ ಕಳೆದ ಜೂನ್ ತಿಂಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ.

ವರದಿಗೆ ಸಂಬಂಧಿಸಿದ ಗಮನಾರ್ಹ ಅಂಶವೊಂದು ಹೊರಬಿದ್ದಿದ್ದು, ಸಮಿತಿಯು ಸ್ವೀಕರಿಸಿದ 2,741 ಪ್ರತಿಕ್ರಿಯೆಗಳಲ್ಲಿ 1,400 ಪ್ರತಿಕ್ರಿಯೆಗಳು ಒಂದೇ ರೀತಿಯದ್ದಾಗಿತ್ತು. ಅವುಗಳು ಜಾತಿ ಆಧಾರಿತ ಮೀಸಲಾತಿಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿವೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ತಿರುನಲ್ವೇಲಿಯ ಕಾಲೇಜೊಂದರಿಂದ ಬಂದಿರುವ ಈ ಪ್ರತಿಕ್ರಿಯೆಗಳಿಂದ ನ್ಯಾಯಮೂರ್ತಿ ಚಂದ್ರು ಸಮಿತಿಯು ದಿಗ್ಭ್ರಮೆಗೊಂಡಿದೆ. ಇದು “ತಮಿಳುನಾಡಿನ ಸಾಮಾಜಿಕ ನ್ಯಾಯದ ಇತಿಹಾಸದ ಅಜ್ಞಾನ ಮತ್ತು ಸಂಪೂರ್ಣ ತಿಳುವಳಿಕೆಯ ಕೊರತೆ” ಎಂದು ವಿಷಾದಿಸಿದೆ. ಹಲವಾರು ಇತರ ಪ್ರತಿಕ್ರಿಯೆಗಳು ಸಹ ನಿರಾಶಾದಾಯಕವಾಗಿದ್ದವು. ಅವುಗಳನ್ನು ಚಾಟ್‌ ಜಿಪಿಟಿ – ಎಐ ಬೋಟ್‌ನ ಸಹಾಯದಿಂದ ಬರೆಯಲಾಗಿದೆ ಎಂದು ವರದಿ ತಿಳಿಸಿದೆ.

2023ರ ಆಗಸ್ಟ್‌ನಲ್ಲಿ ತಮಿಳುನಾಡಿನ ನಂಗುನೇರಿಯಲ್ಲಿಆರು ಮಂದಿ ಅಪ್ರಾಪ್ತರ ಗುಂಪೊಂದು ಮಾರಕಾಸ್ತ್ರಗಳೊಂದಿಗೆ ಇಬ್ಬರು ದಲಿತ ಮಕ್ಕಳ ಮನೆಗೆ ನುಗ್ಗಿ ಅವರ ಮೇಲೆ ಹಲ್ಲೆ ನಡೆಸಿದ ನಂತರ ಸಮಿತಿ ರಚಿಸಲಾಗಿತ್ತು.

ಚಿನ್ನದೊರೈ ಎಂಬ ದಲಿತ ಬಾಲಕ ಕಲಿಕೆಯಲ್ಲಿ ಮುಂದಿದ್ದಾನೆ ಎಂದು ಆತನ ಮೇಲೆ ಹಲ್ಲೆ ನಡೆಸಲಾಗಿತ್ತು. ದಾಳಿಯ ವೇಳೆ ಚಿನ್ನದೊರೈ ಸಹಾಯಕ್ಕೆ ಹೋದ ಸಹೋದರನಿಗೆ ಗಾಯಗಳಾಗಿತ್ತು.

ಚಂದ್ರು ಸಮಿತಿ ತನ್ನ 600 ಪುಟಗಳ ವರದಿಯನ್ನು ಜೂನ್ 18, 2024 ರಂದು ತಮಿಳುನಾಡು ಸರ್ಕಾರಕ್ಕೆ ಸಲ್ಲಿಸಿದೆ. ತಮ್ಮ ವರದಿಯಲ್ಲಿ, ನ್ಯಾಯಮೂರ್ತಿ ಚಂದ್ರು ಅವರು ಆಗಸ್ಟ್ 9, 2023 ರಂದು ದಲಿತ ಮಕ್ಕಳ ಮೇಲಿನ ದಾಳಿಯ ದಿನವನ್ನು “ತಮಿಳುನಾಡು ಶಾಲಾ ಶಿಕ್ಷಣದ ಇತಿಹಾಸದಲ್ಲಿ ಕರಾಳ ದಿನ” ಎಂದು ಖಂಡಿಸಿದ್ದಾರೆ.

ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ತಾರತಮ್ಯವನ್ನು ಪರಿಹರಿಸಲು ಕ್ರಮಗಳನ್ನು ಶಿಫಾರಸು ಮಾಡುವ ಜವಾಬ್ದಾರಿ ಹೊತ್ತಿದ್ದ ಚಂದ್ರು ಅವರು, ಜಾತಿ ಭಿನ್ನತೆಗಳು ವ್ಯಾಪಕವಾಗಿವೆ ಎಂದು ಕಂಡುಕೊಂಡಿದ್ದಾರೆ. ಇದು “ಶೈಕ್ಷಣಿಕ ವ್ಯವಸ್ಥೆಯ ಮಿತಿಗಳನ್ನು ಮೀರಿ ಸಮಾಜವನ್ನು ತೀವ್ರವಾಗಿ ವ್ಯಾಪಿಸುತ್ತಿದೆ. ಹಾಗಾಗಿ, ಶಾಲೆಗಳಲ್ಲಿ ಈ ಸಮಸ್ಯೆಯನ್ನು ಪರಿಹರಿಸಿದರೆ ಸಾಲುವುದಿಲ್ಲ. ಶಾಶ್ವತ ಪರಿಹಾರ ಬೇಕು ಮತ್ತು ಜಾತಿರಹಿತ ಸಮಾಜವನ್ನು ಸಾಧಿಸಲು ಸಮಗ್ರ ವಿಧಾನ ಬೇಕು ಎಂದು ವರದಿಯಲ್ಲಿ ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.

ಚಂದ್ರು ಸಮಿತಿಗೆ 2,741 ಪ್ರತಿಕ್ರಿಯೆಗಳು ಸರ್ಕಾರಿ ಇಲಾಖೆಗಳು, ವಿಶ್ವವಿದ್ಯಾಲಯಗಳು, ಕಾಲೇಜುಗಳು, ಶಾಲೆಗಳು, ಎನ್‌ಜಿಒಗಳು ಮತ್ತು ಇತರ ವ್ಯಕ್ತಿಗಳಿಂದ ಬಂದಿವೆ. ಇದರಲ್ಲಿ ಶಿಕ್ಷಣ ತಜ್ಞರು, ವಿದ್ಯಾರ್ಥಿಗಳು, ಸಾಮಾಜಿಕ ಕಾರ್ಯಕರ್ತರು ಮತ್ತು ಪತ್ರಕರ್ತರು ಸೇರಿದ್ದಾರೆ. ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಸಂಘಟನೆಗಳು ಮತ್ತು ದೊಡ್ಡ ರಾಜಕೀಯ ಪಕ್ಷಗಳ ಹೊರತಾಗಿ ತಿರುನೆಲ್ವೇಲಿಯ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಿಂದ ಗಮನಾರ್ಹ ಮತ್ತು ಗಂಭೀರವಾದ ಪ್ರತಿಕ್ರಿಯೆಗಳು ಬಂದಿವೆ ಎಂದು ವರದಿ ಹೇಳಿದೆ.

ಈ ಕಾಲೇಜಿನಿಂದ ಬಂದಿರುವ 1,300ಕ್ಕೂ ಹೆಚ್ಚು ಪ್ರತಿಕ್ರಿಯೆಗಳು ಮೀಸಲಾತಿಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿವೆ. ವಿದ್ಯಾರ್ಥಿಗಳಿಂದ ಇಂತಹ ಅಭಿಯಾನ ನಡೆಸಿದ್ದಕ್ಕಾಗಿ ವರದಿಯು ಪ್ರಾಂಶುಪಾಲರನ್ನು ಟೀಕಿಸಿದೆ. ಏಕೆಂದರೆ, 1,340 ಪ್ರತಿಕ್ರಿಯೆಗಳನ್ನು ಒಂದೇ ರೀತಿಯ ಪೋಸ್ಟ್ ಕಾರ್ಡ್‌ಗಳಲ್ಲಿ ಕಳುಹಿಸಲಾಗಿತ್ತು. ಅವುಗಳು ಮೀಸಲಾತಿಯನ್ನು ಅಂತ್ಯಗೊಳಿಸಿ ಎಂಬ ಒಂದೇ ರೀತಿಯ ಸಂದೇಶಗಳನ್ನು ಒಳಗೊಂಡಿತ್ತು. ಗಮನಾರ್ಹವಾಗಿ, ಪೋಸ್ಟ್‌ ಕಾರ್ಡ್‌ಗಳಲ್ಲಿ”ಜಾತಿ ಆಧಾರಿತ ಯಾವುದೇ ಶೈಕ್ಷಣಿಕ, ಉದ್ಯೋಗ/ಸವಲತ್ತುಗಳನ್ನು ಯಾರಿಗೂ ನೀಡಬಾರದು. ಆರ್ಥಿಕ ಪ್ರೋತ್ಸಾಹ ನೀಡಬಹುದು” ಎಂಬ ಒಂದೇ ರೀತಿಯ ಸಾಲುಗಳಿದ್ದವು ಎಂದು ನ್ಯೂಸ್ ಮಿನಿಟ್ ತಿಳಿಸಿದೆ.

ವಿದ್ಯಾರ್ಥಿಗಳು ಅಭಿಪ್ರಾಯ ವ್ಯಕ್ತಿಪಡಿಸಲು ಪ್ರೋತ್ಸಾಹಿಸುವುದು ಉತ್ತೇಜನಕಾರಿಯಾದರೂ, ಈ ರೀತಿಯ ಅಭಿಪ್ರಾಯ ವ್ಯಕ್ತಪಡಿಸಲು ಒತ್ತಾಯಿಸುವುದು ಸರಿಯಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ಕೋರಿ ನಾವು ಕಳುಹಿಸಿರುವ ನೋಟಿಸ್‌ಗೆ ವೈಯಕ್ತಿವಾಗಿ ಪ್ರತಿಕ್ರಿಯಿಸಲು ಕಾಲೇಜಿನ ಪ್ರಾಂಶುಪಾಲರು ವಿಫಲರಾಗಿದ್ದಾರೆ. ಪ್ರಾಂಶುಪಾಲರು ತಮ್ಮದೇ ಅಭಿಪ್ರಾಯ ಹೊಂದಿರಬಹುದು. ಆದರೆ, ಅದನ್ನು ವಿದ್ಯಾರ್ಥಿಗಳ ಮೇಲೆ ಹೇರುವುದು ಸರಿಯಲ್ಲ. ವಿದ್ಯಾರ್ಥಿಗಳು ಸ್ವತಂತ್ರವಾಗಿ ಅಭಿಪ್ರಾಯ ತಿಳಿಸಬೇಕಿತ್ತು. ಮೀಸಲಾತಿ ರದ್ದತಿಯ ಕೂಗು ನ್ಯಾಯಸಮ್ಮತವಲ್ಲ ಎಂದು ಕಂಡುಬಂದಿದೆ. ಹಾಗಾಗಿ, ಆ ಸಲಹೆಯನ್ನು ತಿರಸ್ಕರಿಸಲಾಗಿದೆ ಎಂದು ನ್ಯಾಯಮೂರ್ತಿ ಚಂದ್ರು ವರದಿಯಲ್ಲಿ ಹೇಳಿದ್ದಾರೆ ಎಂದು ನ್ಯೂಸ್‌ ಮಿನಿಟ್ ವಿವರಿಸಿದೆ.

ನ್ಯಾಯಮೂರ್ತಿ ಚಂದ್ರು ವರದಿಯಲ್ಲಿ ಮಾಡಿರುವ ಪ್ರಮುಖ ಶಿಫಾರಸುಗಳ ವಿವರಣೆ ಕೆಳಗಿದೆ. ಓದಲು ಲಿಂಕ್ ಒತ್ತಿ

ತಮಿಳುನಾಡು| ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಕ್ರಮ: ಸರ್ಕಾರಕ್ಕೆ ವರದಿ ಒಪ್ಪಿಸಿದ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...