Homeಮುಖಪುಟಬೇರೆ ಕೋಣೆಯಲ್ಲಿ ಕೊಂದು ನಂತರ ಆಕೆಯ ಶವವನ್ನು ಸೆಮಿನಾರ್ ಹಾಲ್‌ಗೆ ತರಲಾಗಿದೆ: ಶಂಕೆ ವ್ಯಕ್ತಪಡಿಸಿದ ಮೃತ...

ಬೇರೆ ಕೋಣೆಯಲ್ಲಿ ಕೊಂದು ನಂತರ ಆಕೆಯ ಶವವನ್ನು ಸೆಮಿನಾರ್ ಹಾಲ್‌ಗೆ ತರಲಾಗಿದೆ: ಶಂಕೆ ವ್ಯಕ್ತಪಡಿಸಿದ ಮೃತ ವೈದ್ಯೆ ತಂದೆ

- Advertisement -
- Advertisement -

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅತ್ಯಾಚಾರ-ಹತ್ಯೆಗೀಡಾದ ಟ್ರೈನಿ ವೈದ್ಯೆಯ ತಂದೆಯು ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, “ತನ್ನ ಮಗಳನ್ನು ಬೇರೆ ಯಾವುದೋ ಕೋಣೆಯಲ್ಲಿ ಕೊಂದ ನಂತರ ಆಕೆಯ ಶವವನ್ನು ಸೆಮಿನಾರ್ ಹಾಲ್‌ಗೆ ತರಲಾಗಿದೆ” ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

ಆಸ್ಪತ್ರೆಯ ತುರ್ತು ಕಟ್ಟಡದಲ್ಲಿರುವ ಎದೆಗೂಡಿನ ವಿಭಾಗದ ಮೂರನೇ ಮಹಡಿಯ ಸೆಮಿನಾರ್ ಹಾಲ್ ನವೀಕರಣದ ನೆಪದಲ್ಲಿ ಪ್ರಮುಖ ಸಾಕ್ಷ್ಯಗಳನ್ನು ನಾಶಪಡಿಸಲಾಗಿದೆ ಎಂಬ ಆರೋಪದ ನಡುವೆ ಅವರ ಈ ಹೇಳಿಕೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಂತ್ರಸ್ತೆಯ ತಂದೆ, “ನಾವು ಪೊಲೀಸರಿಂದ ಲೋಪವನ್ನು ಕಂಡು ಸಿಬಿಐಗೆ ತಿಳಿಸಿದ್ದೇವೆ. ಈಗ ಆಕೆಯನ್ನು ಸೆಮಿನಾರ್ ಹಾಲ್‌ನಲ್ಲಿ ಕೊಲೆ ಮಾಡಲಾಗಿದೆಯೇ ಎಂದು ನಮಗೆ ಅನುಮಾನವಿದೆ. ಅವಳನ್ನು ಬೇರೆಡೆ ಕೊಲ್ಲಲಾಗಿದೆ” ಎಂದು ಹೇಳಿದರು.

ಆಗಸ್ಟ್ 9 ರಂದು ದೇಹದ ಮೇಲೆ ಅನೇಕ ಗಾಯಗಳೊಂದಿಗೆ ಅರೆಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾದ 31 ವರ್ಷದ ವೈದ್ಯೆಯ ತಂದೆ, ಸಿಬಿಐ ತನಿಖೆಯಲ್ಲಿ ನನಗೆ ನಂಬಿಕೆಯಿದೆ ಮತ್ತು ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದರು.

ಆಸ್ಪತ್ರೆ ಇಲಾಖೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೋರುತ್ತೇನೆ, ತನಿಖಾ ತಂಡದ ಮೇಲೆ ನಮಗೆ ನಂಬಿಕೆ ಇದೆ. ನನ್ನ ಒಬ್ಬ ಹೆಣ್ಣು ಮಗಳು ಕಳೆದು ಹೋಗಿದ್ದಾಳೆ. ಆದರೆ, ನನ್ನ ಸಾವಿರಾರು ಕೋಟಿ ಗಂಡು-ಹೆಣ್ಣು ಮಕ್ಕಳು ಬೀದಿಗಿಳಿದಿದ್ದಾರೆ ಎಂದು ನಾನು ಭಾವಿಸುತ್ತೇನೆ. ಬಾಂಗಾಳದಿಂದ ಇಡೀ ಜಗತ್ತಿಗೆ ಈ ಬಗ್ಗೆ ಚಳುವಳಿ ನಡೆಯುತ್ತಿದೆ, ನಮಗೆ ನ್ಯಾಯ ಬೇಕು” ಎಂದು ಸಂತ್ರಸ್ತೆಯ ತಂದೆ ಆಗ್ರಹಿಸಿದರು.

ಶುಕ್ರವಾರ, ಕಲ್ಕತ್ತಾ ಹೈಕೋರ್ಟ್ ಕೂಡ ಅಪರಾಧದ ಸ್ಥಳದ ಬಳಿ ನವೀಕರಣ ಕಾರ್ಯದ “ತುರ್ತು” ಬಗ್ಗೆ ಬಂಗಾಳ ಸರ್ಕಾರವನ್ನು ಪ್ರಶ್ನಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ರಾಜ್ಯ ಸರ್ಕಾರ, “ಆರೋಪ ಸರಿಯಲ್ಲ, ವೈದ್ಯರಿಗೆ ವಿಶ್ರಾಂತಿ ಕೊಠಡಿ ನಿರ್ಮಿಸಲು ನವೀಕರಣ ಮಾಡಲಾಗುತ್ತಿದೆ” ಎಂದು ನ್ಯಾಯಾಲಯಕ್ಕೆ ತಿಳಿಸಿದೆ.

ಬುಧವಾರ ರಾತ್ರಿ ಹಿಂಸಾತ್ಮಕ ಜನಸಮೂಹವು ಆಸ್ಪತ್ರೆ ಆವರಣಕ್ಕೆ ನುಗ್ಗಿ ಮುಖ್ಯ ಕಟ್ಟಡದ ತುರ್ತು ಚಿಕಿತ್ಸಾ ವಿಭಾಗ, ಮೊದಲ ಮಹಡಿಯಲ್ಲಿನ ವಾರ್ಡ್ ಮತ್ತು ಎರಡನೇ ಮಹಡಿಯಲ್ಲಿ ಇಎನ್‌ಟಿ ವಿಭಾಗವನ್ನು ಧ್ವಂಸಗೊಳಿಸಿದ ನಂತರ ಅಪರಾಧದ ಸ್ಥಳವನ್ನು ನಾಶಪಡಿಸುವ ಪ್ರಯತ್ನ ನಡೆದಿದೆ ಎಂಬ ಆರೋಪಗಳಿಗೆ ಪುಷ್ಠಿ ಸಿಕ್ಕಿತು

ಆಸ್ಪತ್ರೆಯ ಹಲವಾರು ಇಂಟರ್ನ್‌ಗಳು ಮತ್ತು ವೈದ್ಯರು ಅಪರಾಧದಲ್ಲಿ ಭಾಗಿಯಾಗಿರಬಹುದು ಎಂದು ವೈದ್ಯರ ಪೋಷಕರು ಸಿಬಿಐಗೆ ತಿಳಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

“ತಮ್ಮ ಮಗಳ ಕೊಲೆಯ ಹಿಂದೆ ಅನೇಕ ವ್ಯಕ್ತಿಗಳ ಕೈವಾಡವಿದೆ ಎಂದು ಅವರು ಶಂಕಿಸಿದ್ದಾರೆ ಎಂದು ಪೋಷಕರು ನಮಗೆ ತಿಳಿಸಿದ್ದಾರೆ. ಅವರು ಆಸ್ಪತ್ರೆಯಲ್ಲಿ ಅವಳೊಂದಿಗೆ ಕೆಲಸ ಮಾಡಿದ ಕೆಲವು ಇಂಟರ್ನ್‌ಗಳು ಮತ್ತು ವೈದ್ಯರ ಹೆಸರನ್ನು ನೀಡಿದ್ದಾರೆ” ಎಂದು ಸಿಬಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ; ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: 5 ಪ್ರಮುಖ ಬೇಡಿಕೆಗಳನ್ನಿಟ್ಟು ರಾಷ್ಟ್ರವ್ಯಾಪಿ ಮುಷ್ಕರ ಆರಂಭಿಸಿದ ವೈದ್ಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...