Homeಕರ್ನಾಟಕರಾಜ್ಯಪಾಲರ ವಿರುದ್ದ ಹಲವೆಡೆ ಪ್ರತಿಭಟನೆ : ಮಂಗಳೂರಿನಲ್ಲಿ ಬಸ್‌ಗೆ ಕಲ್ಲು ತೂರಾಟ

ರಾಜ್ಯಪಾಲರ ವಿರುದ್ದ ಹಲವೆಡೆ ಪ್ರತಿಭಟನೆ : ಮಂಗಳೂರಿನಲ್ಲಿ ಬಸ್‌ಗೆ ಕಲ್ಲು ತೂರಾಟ

- Advertisement -
- Advertisement -

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್‌ ಗೆಹ್ಲೋಟ್ ಅವರ ಕ್ರಮ ಖಂಡಿಸಿ ರಾಜ್ಯದ ವಿವಿದೆಡೆ ಪ್ರತಿಭಟನೆ ನಡೆಸಲಾಗುತ್ತಿದೆ.

ಸಿಎಂ ವಿರುದ್ದ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವುದರ ಹಿಂದೆ ಬಿಜೆಪಿ-ಜೆಡಿಎಸ್‌ ಕೈವಾಡ ಇದೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು ಭಾನುವಾರ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಅವರ ಶಿಕಾರಿಪುರದ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು.

ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಸಿದ ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆ ಕೂಗುತ್ತಾ ಯಡಿಯೂರಪ್ಪ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಈ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದಿದ್ದರು.

ಇಂದು (ಆ.19) ಮಂಗಳೂರು ನಗರದಲ್ಲಿ ಖಾಸಗಿ ಬಸ್‌ ಮೇಲೆ ಕಲ್ಲೂ ತೂರಾಟ ನಡೆಸಲಾಗಿದೆ ಎಂದು ವರದಿಯಾಗಿದೆ. ನಗರದ ಸ್ಟೇಟ್ ಬ್ಯಾಂಕ್‌ನಿಂದ ಜೋಕಟ್ಟೆಗೆ ತೆರಳುವ ಮೌಲಾ ‘2’ಸಿಟಿ ಬಸ್‌ಗೆ ಲಾಲ್‌ಬಾಗ್‌ನಲ್ಲಿ ಕಲ್ಲು ತೂರಲಾಗಿದೆ ಎಂದು ತಿಳಿದು ಬಂದಿದೆ.

ಮತ್ತೊಂದೆಡೆ ನಗರದ ಲಾಲ್‌ಬಾಗ್‌ನ ಪಾಲಿಕೆ ಕಚೇರಿ ಎದುರು ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ರಸ್ತೆ ತಡೆದು, ಟೈರ್ ಸುಟ್ಟು ಪ್ರತಿಭಟಿಸಿದ್ದಾರೆ. ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.

ಕಲಬುರಗಿಯಲ್ಲಿ ಕಾಂಗ್ರೆಸ್‌ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದೆ.

ನಗರದ ಕಾಂಗ್ರೆಸ್ ಕಚೇರಿಯಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆಯಲ್ಲಿ ಕಲಬುರಗಿ ಉತ್ತರ ಕ್ಷೇತ್ರದ ಶಾಸಕಿ ಕನೀಝ್ ಫಾತಿಮಾ, ಶಾಸಕ ಅಲ್ಲಮಪ್ರಭು ಪಾಟೀಲ್, ವಿಧಾನಪರಿಷತ್ ಸದಸ್ಯ ಜಗದೇವ್ ಕಾಳಗಿ, ಕಲಬುರಗಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಹಜರ್ ಆಲಂ ಖಾನ್, ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

ಸಿಎಂ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರಿನಲ್ಲಿ ರಾಜ್ಯಪಾಲರ ವಿರುದ್ದ ಬೃಹತ್ ಪ್ರತಿಭಟನೆ ನಡೆಸಲಾಗಿದೆ.

ನಗರದ ಗಾಂಧಿ ವೃತ್ತ ಸಮೀಪ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್‌.ಸಿ ಮಹದೇವಪ್ಪ ಮಾತನಾಡಿದರು. ಶಾಸಕರಾದ ತನ್ವೀರ್ ಸೇಠ್, ಕೆ. ಹರೀಶ್ ಗೌಡ, ರವಿಶಂಕರ್, ದರ್ಶನ್ ಧ್ರುವನಾರಾಯಣ, ಅನಿಲ್ ಚಿಕ್ಕಮಾದು, ವಿಧಾನಪರಿಷತ್ ಸದಸ್ಯ ಡಿ. ತಿಮ್ಮಯ್ಯ, ಮಾಜಿ ಸಚಿವೆ ಉಮಾಶ್ರೀ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಸೇರಿದಂತೆ ಹಲವು ಪ್ರಮುಖರು ಹಾಜರಿದ್ದರು.

ಶಿವಮೊಗ್ಗದಲ್ಲಿ ಜಿಲ್ಲಾ ಕಾಂಗ್ರೆಸ್ ಘಟಕದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದೆ. ನಗರದ ಶಿವಪ್ಪ ನಾಯಕ ವೃತ್ತದಿಂದ ಆರಂಭಗೊಂಡ ಮೆರವಣಿಗೆಯಲ್ಲಿ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ, ವಿಧಾನಪರಿಷತ್ ಸದಸ್ಯ ಬಲ್ಕಿಷ್ ಬಾನು, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್‌. ಪ್ರಸನ್ನ ಕುಮಾರ್, ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್‌.ಎಂ ಮಂಜುನಾಥ್ ಗೌಡ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಇದನ್ನೂ ಓದಿ : ಮುಡಾ ಪ್ರಕರಣ | ಸಿಎಂ ಅರ್ಜಿಗಳನ್ನು ವಿಚಾರಣೆ ನಡೆಸದಂತೆ ಸೂಚಿಸಲು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...