Homeಮುಖಪುಟಕೋಲ್ಕತ್ತಾ ಮೃತ ವೈದ್ಯೆ ಫೋಟೋ ಶೇರ್ ಮಾಡಿ ಮಮತಾಗೆ ಬೆದರಿಕೆ; ಒಬ್ಬನ ಬಂಧನ

ಕೋಲ್ಕತ್ತಾ ಮೃತ ವೈದ್ಯೆ ಫೋಟೋ ಶೇರ್ ಮಾಡಿ ಮಮತಾಗೆ ಬೆದರಿಕೆ; ಒಬ್ಬನ ಬಂಧನ

- Advertisement -
- Advertisement -

ಆರ್‌ಜಿ ಕರ್ ವೈದ್ಯಕೀಯ ಕಾಲೇಜು-ಆಸ್ಪತ್ರೆಯಲ್ಲಿ ಅತ್ಯಾಚಾರ ಮತ್ತು ಹತ್ಯೆಗೀಡಾದ ವೈದ್ಯರ ಗುರುತನ್ನು ಸಾಮಾಜಿಕ ಮಾಧ್ಯಮದಲ್ಲಿ ಬಹಿರಂಗಪಡಿಸಿದ ಆರೋಪದ ಮೇಲೆ ಕೋಲ್ಕತ್ತಾದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಈತನೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ತಲತಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಆತನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. “ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಮಾಹಿತಿ ಪೋಸ್ಟ್ ಮಾಡುವವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ” ಎಂದು ಟಿಎಂಸಿ ನಾಯಕ ಕುನಾಲ್ ಘೋಷ್ ಹೇಳಿದ್ದಾರೆ.

“ಇನ್‌ಸ್ಟಾಗ್ರಾಮ್ ಬಳಕೆದಾರ ಹೆಸರು ‘ಕೀರ್ತಿಸೋಶಿಯಲ್’ ಹೊಂದಿರುವ ವ್ಯಕ್ತಿ ಇತ್ತೀಚೆಗೆ ಆರ್‌ಜಿ ಕರ್ ಎಂಸಿಎಚ್‌ನಲ್ಲಿ ನಡೆದ ಘಟನೆಗೆ ಸಂಬಂಧಿಸಿದ ಮೂರು ಕಥೆಗಳನ್ನು ಅಪ್‌ಲೋಡ್ ಮಾಡಿದ್ದು, ಬಲಿಪಶುವಿನ ಚಿತ್ರ ಮತ್ತು ಗುರುತನ್ನು ಬಹಿರಂಗಪಡಿಸಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅದೇ ಸಮಯದಲ್ಲಿ, ಆರೋಪಿಯು ಸಿಎಂ ವಿರುದ್ಧ ಆಕ್ಷೇಪಾರ್ಹ ಕಾಮೆಂಟ್‌ಗಳು ಮತ್ತು ಜೀವ ಬೆದರಿಕೆಗಳನ್ನು ಒಳಗೊಂಡಿರುವ ಎರಡು ಪೋಸ್ಟ್‌ ಹಂಚಿಕೊಂಡಿದ್ದಾರೆ. ಅವು ಸ್ವಭಾವತಃ ತುಂಬಾ ಪ್ರಚೋದನಕಾರಿ ಮತ್ತು ಸಾಮಾಜಿಕ ಅಶಾಂತಿಯನ್ನು ಸೃಷ್ಟಿಸಿರಬಹುದು ಮತ್ತು ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸಬಹುದು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಸತತ 4 ನೇ ದಿನವೂ ಮುಂದುವರಿದ ಮಾಜಿ ಪ್ರಾಂಶುಪಾಲರ ವಿಚಾರಣೆ

ಮಹಿಳಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಸತತ ನಾಲ್ಕನೇ ದಿನ ಸೋಮವಾರ ಕಾರ್ ಮೆಡಿಕಲ್ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಘೋಷ್ ಅವರು ಸೋಮವಾರ ಬೆಳಗ್ಗೆ ಸಿಜಿಒ ಕಾಂಪ್ಲೆಕ್ಸ್‌ನಲ್ಲಿರುವ ಸಿಬಿಐನ ನಗರ ಕಚೇರಿಯನ್ನು ತಲುಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವೈದ್ಯರ ಸಾವಿನ ಸುದ್ದಿ ತಿಳಿದ ನಂತರ ಅವರು ಯಾರನ್ನು ಸಂಪರ್ಕಿಸಿದರು ಮತ್ತು ಸುಮಾರು ಮೂರು ಗಂಟೆಗಳ ಕಾಲ ಪೋಷಕರನ್ನು ಏಕೆ ಕಾಯುವಂತೆ ಮಾಡಿದರು ಎಂದು ಘೋಷ್ ಅವರನ್ನು ಕೇಳಲಾಯಿತು.

ಘಟನೆಯ ನಂತರ ಆಸ್ಪತ್ರೆಯ ಸೆಮಿನಾರ್ ಹಾಲ್ ಬಳಿಯ ಕೊಠಡಿಗಳ ನವೀಕರಣಕ್ಕೆ ಆದೇಶಿಸಿದವರು ಯಾರು ಎಂದು ಸಹ ಮಾಜಿ ಪ್ರಾಂಶುಪಾಲರನ್ನು ಪ್ರಶ್ನಿಸಲಾಯಿತು.

ಶುಕ್ರವಾರದಿಂದ ಕಳೆದ ಮೂರು ದಿನಗಳಲ್ಲಿ ಸಿಬಿಐ ಅಧಿಕಾರಿಗಳು ಘೋಷ್ ಅವರನ್ನು ಹಲವು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಕೇಂದ್ರ ತನಿಖಾ ಸಂಸ್ಥೆಯ ಅಧಿಕಾರಿಗಳು ಅವರ ಮೊಬೈಲ್ ಫೋನ್ ಕಾಲ್ ಲಿಸ್ಟ್ ವಿವರಗಳು ಹಾಗೂ ಅವರ ವಾಟ್ಸಾಪ್ ಚಾಟ್ ಪಟ್ಟಿಯನ್ನು ಸಹ ಪರಿಶೀಲಿಸುತ್ತಿದ್ದಾರೆ.

ಆರ್ಥೋಪೆಡಿಕ್ ವೈದ್ಯರಾಗಿದ್ದ ಘೋಷ್ ಅವರು ಆಗಸ್ಟ್ 9 ರಂದು ಮಹಿಳೆಯ ಶವ ಪತ್ತೆಯಾದ ಎರಡು ದಿನಗಳ ನಂತರ ಆರ್ ಜಿ ಕರ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಅವರು ದಾಳಿಯ ಭಯವನ್ನು ವ್ಯಕ್ತಪಡಿಸಿದ್ದರು, ಕಲ್ಕತ್ತಾ ಹೈಕೋರ್ಟ್‌ನಿಂದ ರಕ್ಷಣೆ ಪಡೆಯಲು ಅವರ ವಕೀಲರನ್ನು ಸಂಪರ್ಕಿಸಿದ್ದು, ಏಕ ಪೀಠದ ಮೊರೆ ಹೋಗುವಂತೆ ಕೋರ್ಟ್ ಸೂಚಿಸಿದೆ.

ಆಗಸ್ಟ್ 9 ರಂದು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಕೊಠಡಿಯಲ್ಲಿ ಸ್ನಾತಕೋತ್ತರ ತರಬೇತಿ ವೈದ್ಯರ ಶವ ಪತ್ತೆಯಾಗಿತ್ತು. ಈ ಸಂಬಂಧ ಪೊಲೀಸರು ಮರುದಿನ ನಾಗರಿಕ ಸ್ವಯಂಸೇವಕನನ್ನು ಬಂಧಿಸಿದರು.

ಇದನ್ನೂ ಓದಿ; ಚಂಪೈ ಸೊರೇನ್ ಬಿಜೆಪಿ ಸೇರುವ ಸಾಧ್ಯತೆ; ಜಾರ್ಖಂಡ್ ರಾಜಕೀಯದ ಮೇಲೆ ಬೀರುವ ಪರಿಣಾಮವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...