Homeಮುಖಪುಟ#MeToo ಪ್ರಕರಣ : 5 ವರ್ಷವಾಯಿತು, ನ್ಯಾಯ ಸಿಗುವುದು ಯಾವಾಗ? ನಟಿ ತನುಶ್ರೀ ದತ್ತಾ

#MeToo ಪ್ರಕರಣ : 5 ವರ್ಷವಾಯಿತು, ನ್ಯಾಯ ಸಿಗುವುದು ಯಾವಾಗ? ನಟಿ ತನುಶ್ರೀ ದತ್ತಾ

- Advertisement -
- Advertisement -

ಅಧಿಕಾರದಲ್ಲಿರುವವರು ಎಲ್ಲಿಯವರೆಗೆ ಅಪರಾಧಿಗಳನ್ನು ರಕ್ಷಿಸುತ್ತಾರೋ, ಅಲ್ಲಿಯವರೆಗೆ ಯಾವುದೇ ಚಳವಳಿ ಅಥವಾ ವರದಿಯಿಂದ ಬದಲಾವಣೆ ತರಲು ಸಾಧ್ಯವಿಲ್ಲ ಎಂದು ನಟಿ ತನುಶ್ರೀ ದತ್ತಾ ಹೇಳಿದ್ದಾರೆ.

ಮಲಯಾಳಂ ಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಆಘಾತಕಾರಿ ಕಿರುಕುಳ ಮತ್ತು ಲೈಂಗಿಕ ಶೋಷಣೆಯನ್ನು ಬಹಿರಂಗಪಡಿಸಿದ ನ್ಯಾಯಮೂರ್ತಿ ಹೇಮಾ ಸಮಿತಿ ವರದಿ ಕುರಿತು ಅವರು ಪ್ರತಿಕ್ರಿಯಿಸಿದ್ದಾರೆ.

ತನುಶ್ರೀ ದತ್ತಾ 2018ರಲ್ಲಿ ನಟ ನಾನಾ ಪಾಟೇಕರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಬಳಿಕ ಅದು ‘ಮೀಟೂ’ ಅಭಿಯಾನಕ್ಕೆ ನಾಂದಿಯಾಗಿತ್ತು. ಆದರೆ, ನಾನಾ ಪಾಟೇಕರ್ ತನುಶ್ರೀ ಅವರ ಆರೋಪಗಳನ್ನು ನಿರಾಕರಿಸಿದ್ದರು.

‘ಈಗಲೂ ನ್ಯಾಯಕ್ಕಾಗಿ ಕಾಯುತ್ತಿರುವೆ’ ಎಂದಿರುವ ತನುಶ್ರೀ ದತ್ತಾ, ಸಿನಿಮಾ ರಂಗದಲ್ಲಿ ತಾವೆದುರಿಸಿದ ದೌರ್ಜನ್ಯಗಳ ಬಗ್ಗೆ ನ್ಯಾ. ಹೇಮಾ ಸಮಿತಿಗೆ ಮಾಹಿತಿ ನೀಡಿರುವ ಮಹಿಳಾ ಕಲಾವಿದರನ್ನು ಬೆಂಬಲಿಸಿದ್ದಾರೆ.

ಹೇಮಾ ಸಮಿತಿಯ ವರದಿಯ ಕುರಿತು ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿರುವ ತನುಶ್ರೀ ದತ್ತಾ”ಇದು ‘ಮೀಟೂ’ ಪ್ರಕರಣಗಳಂತೆಯೇ ಕಾಣುತ್ತಿದೆ. ಸಮಾಜದೆದುರು ಸಂಭಾವಿತರಂತೆ ಕಾಣಿಸಿಕೊಳ್ಳುವ ಅವರು (ಆರೋಪಿಗಳು), ತಮ್ಮ ವ್ಯಕ್ತಿತ್ವಕ್ಕೆ ಧಕ್ಕೆಯಾಗುವುದನ್ನು ಸಹಿಸುವುದಿಲ್ಲ. ಇಂತಹ ವರದಿಗಳಿಂದ ಏನೂ ಆಗುವುದಿಲ್ಲ. ಏಕೆಂದರೆ, ಮಹಿಳೆಯರ ಮೇಲಿನ ದಾಳಿ ಮತ್ತು ದೌರ್ಜನ್ಯಗಳು ಈಗಲೂ ಮುಂದುವರೆದಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನೀವು ಮಿಸ್‌ ಇಂಡಿಯಾ ಅಥವಾ ನಟಿ, ಇಲ್ಲವೇ ವಿದ್ಯಾವಂತೆ-ಏನೇ ಆಗಿದ್ದರೂ, ಈ ದೇಶದಲ್ಲಿ ಅದು ಮುಖ್ಯವಾಗುವುದಿಲ್ಲ. ಅಧಿಕಾರದಲ್ಲಿರುವವರು ಎಲ್ಲಿಯವರೆಗೆ ಕ್ರಿಮಿನಲ್‌ಗಳನ್ನು ರಕ್ಷಿಸುಸುತ್ತಾರೋ, ಅಲ್ಲಿಯವರೆಗೆ ಯಾವ ಚಳವಳಿ ಅಥವಾ ಯಾರೊಬ್ಬರ ವಿಚಾರಗಳು ಏನೂ ಮಾಡಲಾಗದು. ಈಗ ಈ ಸಮಿತಿ ವರದಿ. ಆಗ ವಿಶಾಖ ಸಮಿತಿ (ಮಹಿಳೆಯರ ಕುಂದು ಕೊರತೆ ಸಮಿತಿ). ಅಷ್ಟೇ ಅಲ್ಲ, ಸಾಕಷ್ಟು ಸಮಿತಿಗಳನ್ನು ರಚಿಸಲಾಗಿದೆ. ಬಹಳಷ್ಟು ವರದಿಗಳು ಬಂದಿವೆ. ಆದರೆ, ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಭ್ರಷ್ಟಾಚಾರ ತುಂಬಿರುವಾಗ ಹಾಗೂ ಅಕ್ರಮವಾಗಿ ಸಂಪಾದಿಸಿದ ಹಣದಲ್ಲಿ ವ್ಯವಸ್ಥೆಯನ್ನು ಕೊಂಡೊಕೊಳ್ಳುತ್ತಿರುವಾಗ ಅಂತಹ ವ್ಯವಸ್ಥೆಯನ್ನು ಪಾಲಿಸುವುದಾದರೂ ಹೇಗೆ? ಎಂದು ಪ್ರಶ್ನಿಸಿದ್ದಾರೆ.

1997ರಲ್ಲಿ ಸುಪ್ರೀಂ ಕೋರ್ಟ್ ರೂಪಿಸಿದ ವಿಶಾಖ ಮಾರ್ಗಸೂಚಿಗಳು, ಖಾಸಗಿ ಅಥವಾ ಸಾರ್ವಜನಿಕ ಸಂಸ್ಥೆಗಳಲ್ಲಿ ಲೈಂಗಿಕ ಕಿರುಕುಳದ ದೂರುಗಳ ಪರಿಹಾರಕ್ಕಾಗಿ ಕಾರ್ಯವಿಧಾನವನ್ನು ಸ್ಥಾಪಿಸುವುದನ್ನು ಕಡ್ಡಾಯಗೊಳಿಸಿದೆ.

2009ರ “ಹಾರ್ನ್ ‘ಓಕೆ’ ಪ್ಲೀಸ್” ಚಿತ್ರದ ಸೆಟ್‌ನಲ್ಲಿ ತನ್ನ ನೃತ್ಯದ ಹೆಜ್ಜೆಗಳನ್ನು ತೋರಿಸುವ ನೆಪದಲ್ಲಿ ನಾನಾ ಪಾಟೇಕರ್ ತನ್ನನ್ನು ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು 2018 ರಲ್ಲಿ ದತ್ತಾ ಆರೋಪಿಸಿದ್ದರು.

ಅವರು ಪಾಟೇಕರ್, ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯ, ನಿರ್ದೇಶಕ ರಾಕೇಶ್ ಸಾರಂಗ್ ಮತ್ತು ಚಿತ್ರದ ನಿರ್ಮಾಪಕರ ವಿರುದ್ಧ ದೂರು ದಾಖಲಿಸಿದ್ದರು.

ದತ್ತಾ ಅವರ ಪ್ರಕಾರ, ಅವರು 14 ಸಾಕ್ಷಿಗಳ ಹೆಸರುಗಳನ್ನು ಕೊಟ್ಟಿದ್ದರು. ಆದರೆ, ಪೊಲೀಸರು ಅವರಲ್ಲಿ ಯಾರೊಬ್ಬರಿಂದಲೂ ಹೇಳಿಕೆಗಳನ್ನು ಪಡೆದುಕೊಂಡಿಲ್ಲ. ಬದಲಾಗಿ ಬಿ ರಿಪೋರ್ಟ್ ಹಾಕಲು ಪ್ರಯತ್ನಿಸಿದ್ದರು. ಅಂದರೆ, ಆರೋಪಿಯ ವಿರುದ್ಧ ಆರೋಪ ಅಥವಾ ವಿಚಾರಣೆಗೆ ಪೊಲೀಸರ ಬಳಿ ಸಾಕಷ್ಟು ಪುರಾವೆಗಳಿಲ್ಲ ಎಂದರ್ಥ. ಇದರ ವಿರುದ್ಧ ಹೋರಾಡುವುದಾಗಿ ದತ್ತಾ ಹೇಳಿದ್ದಾರೆ.

‘ತಮಗೆ ಸಾರ್ವಜನಿಕರಿಂದ ಬೆದರಿಕೆ ಕರೆಗಳು ಬರುತ್ತಿರುವುದಾಗಿ ಹಾಗೂ ಹೇಳಿಕೆಗಳನ್ನು ದಾಖಲಿಸಿಕೊಳ್ಳಲು ಪೊಲೀಸರು ತಮ್ಮನ್ನು ಸಂಪರ್ಕಿಸಿಲ್ಲ ಎಂಬುದಾಗಿ ನಾನು ಉಲ್ಲೇಖಿಸಿರುವ ಸಾಕ್ಷಿದಾರರು ನನಗೆ ಹೇಳಿದ್ದಾರೆ. ಒಬ್ಬ ಸಾಕ್ಷಿದಾರ ಊರನ್ನೇ ತೊರೆದಿದ್ದಾರೆ. ಮತ್ತೊಬ್ಬ ಮಧ್ಯಪ್ರಾಚ್ಯಕ್ಕೆ ಓಡಿಹೋಗಿದ್ದಾರೆ. ಸಾಕ್ಷಿಯಾಗಿದ್ದ ಮತ್ತೊಬ್ಬ ಮಹಿಳೆ ಭಯದಿಂದ ಮುಂದೆ ಬರುತ್ತಿಲ್ಲ. ಪ್ರತಿಭಟನಾ ಅರ್ಜಿ ದಾಖಲಿಸಿದ ನಂತರ, ಅದೂ ಐದು ವರ್ಷಗಳ ಬಳಿಕ ನ್ಯಾಯಾಲಯ ವಿಚಾರಣೆಗೆ ದಿನಾಂಕ ನಿಗದಿಪಡಿಸಿದೆ. ನನಗೆ ನ್ಯಾಯ ಸಿಗುವುದು ಯಾವಾಗ?’ ಎಂದು ದತ್ತಾ ಪ್ರಶ್ನಿಸಿದ್ದಾರೆ.

ಕಳೆದ ಮೂರು ವರ್ಷಗಳಿಂದ ಎಲ್ಲಿಗೆ ಹೋದರೂ, ಅಪರಿಚಿತ ವ್ಯಕ್ತಿಗಳ ಗುಂಪು ನನ್ನನ್ನು ಹಿಂಬಾಲಿಸುತ್ತಿದೆ ಎಂದು ದತ್ತಾ ಆತಂಕ ವ್ಯಕ್ತಪಡಿಸಿದ್ದಾರೆ.

‘2022ರಲ್ಲಿ ಉಜ್ಜಯಿನಿಯಲ್ಲಿ ಅಪಘಾತಕ್ಕೊಳಗಾದೆ. ನಾನು ಪ್ರಯಾಣಿಸುತ್ತಿದ್ದ ಆಟೋರಿಕ್ಷಾದ ಬ್ರೇಕ್‌ ಅನ್ನು ಯಾರೋ ತುಂಡರಿಸಿದ್ದರು. ಕಾಕತಾಳೀಯವೆಂದು ನಿರ್ಲಕ್ಷಿಸಲು, ಆ ರೀತಿ ಆದದ್ದು ಒಮ್ಮೆಯಷ್ಟೇ ಅಲ್ಲ’ ಎಂದು ಹೇಳಿದ್ದಾರೆ.

ನಾನು ದೈಹಿಕ ಮತ್ತು ಮಾನಸಿಕ ಕಿರುಕುಳಕ್ಕೆ ಒಳಗಾಗಿದ್ದೇನೆ. ನಾನೂ ಒಬ್ಬರ ಮಗಳು. ನನಗೆ ಈ ದೇಶದಲ್ಲಿ ಬದುಕುವ ಮತ್ತು ಸುರಕ್ಷಿತವಾಗಿರುವ ಹಕ್ಕಿಲ್ಲವೇ? ಎಂದು ತನುಶ್ರೀ ದತ್ತಾ ಕೇಳಿದ್ದಾರೆ.

ಇದನ್ನೂ ಓದಿ : ಕಲರ್‌ಫುಲ್ ಜಗತ್ತಿನ ಕರಾಳತೆ ತೆರೆದಿಟ್ಟ ‘ಜಸ್ಟೀಸ್ ಹೇಮಾ ಸಮಿತಿ’ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ| ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ನಕಲಿ ಗೋರಕ್ಷಕರು; ಐವರ ಬಂಧನ

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಬುಧವಾರ (ಜ.14) ನಕಲಿ ಗೋರಕ್ಷಕರು 35 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಜಾನುವಾರುಗಳನ್ನು ಹೊತ್ತ ವ್ಯಾನ್ ನಿಲ್ಲಿಸಿ ಪ್ರಾಣಿಗಳ ಸಾಗಣೆ ಆರೋಪದ ಮೇಲೆ ಹಲ್ಲೆ ನಡೆಸಿ ಕೊಂದಿದ್ದಾರೆ. ಜಿಲ್ಲಾ ಆಸ್ಪತ್ರೆಗೆ...

ರಾಜಸ್ಥಾನ: ಬಿಜೆಪಿ ಅತಿ ಕಡಿಮೆ ಅಂತರದಿಂದ ಗೆದ್ದ ಸ್ಥಾನದಲ್ಲಿ ಮುಸ್ಲಿಂ ಮತಗಳನ್ನು ಅಳಿಸುವಂತೆ ಒತ್ತಡ: ಆತ್ಮಹತ್ಯೆ ಬೆದರಿಕೆ ಹಾಕಿದ ಬಿಎಲ್ಒ

ಜೈಪುರದ ಹವಾ ಮಹಲ್ ವಿಧಾನಸಭಾ ಕ್ಷೇತ್ರದ ಬೂತ್ ಮಟ್ಟದ ಅಧಿಕಾರಿಯೊಬ್ಬರು ( ಬಿಎಲ್‌ಒ ) ನೂರಾರು ಮತದಾರರನ್ನು, ಅವರಲ್ಲಿ ಹೆಚ್ಚಿನವರು ಮುಸ್ಲಿಮರನ್ನು ಮತದಾರರ ಪಟ್ಟಿಯಿಂದ ಅಳಿಸಲು ಒತ್ತಡ ಹೇರಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಈ...

ಇಡಿ ಕಚೇರಿ ಮೇಲೆ ರಾಜ್ಯ ಪೊಲೀಸರಿಂದ ಪೂರ್ವಯೋಜಿತ ದಾಳಿ: ಜಾರ್ಖಂಡ್ ಹೈಕೋರ್ಟ್

ಜನವರಿ 16 ರಂದು ಜಾರಿ ನಿರ್ದೇಶನಾಲಯ (ಇಡಿ) ಕಚೇರಿಯ ಮೇಲೆ ಇತ್ತೀಚೆಗೆ ನಡೆದ ಪೊಲೀಸ್ ದಾಳಿಯು ಪ್ರಾಥಮಿಕವಾಗಿ ಪೂರ್ವಯೋಜಿತ ಎಂದು ಕಾಣುತ್ತಿದೆ ಎಂದು ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ಹೇಳಿದೆ. ಇಡಿ ಸಲ್ಲಿಸಿದ ರಿಟ್ ಅರ್ಜಿಯನ್ನು...

ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕರ್ನಾಟಕದ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಆರೋಪಿ ಗೆಲುವು

ಕರ್ನಾಟಕದ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಪ್ರಮುಖ ಆರೋಪಿ ಶ್ರೀಕಾಂತ್ ಪಂಗಾರ್ಕರ್, ಮಹಾರಾಷ್ಟ್ರದ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದಾರೆ. ಪಂಗಾರ್ಕರ್ ವಾರ್ಡ್ 13 ರಿಂದ ಕಣದಲ್ಲಿದ್ದರು. ಅವರ...

ಮಧ್ಯಪ್ರದೇಶ: ಆರುತಿಂಗಳ ಮಗುವಿಗೆ ಎದೆಹಾಲುಣಿಸುತ್ತಿದ್ದ ಪತ್ನಿಯನ್ನು ಹೊಡೆದುಕೊಂದ ಪತಿ, ಉಸಿರುಗಟ್ಟಿ ಮಗುವೂ ಸಾವು

ಖಾರ್ಗೋನ್: ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಬೇಡ್ಯಾ ಪೊಲೀಸ್ ಠಾಣೆ ಪ್ರದೇಶದ ಬಕಾವಾ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೇಲೆ ಅನುಮಾನ ವ್ಯಕ್ತಪಡಿಸಿ ಆಕೆಯನ್ನು ಹೊಡೆದು ಕೊಂದ ಆಘಾತಕಾರಿ ಘಟನೆ ನಡೆದಿದೆ.  ಹಲ್ಲೆಯ ಸಮಯದಲ್ಲಿ ದಂಪತಿಯ...

ಒಡಿಶಾ: ಬಾಲಸೋರ್‌ನಲ್ಲಿ ಗೋರಕ್ಷಕರಿಂದ 35 ವರ್ಷದ ಮುಸ್ಲಿಂ ವ್ಯಕ್ತಿಯೊಬ್ಬನ ಹತ್ಯೆ, ಐವರು ಬಂಧನ

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಬುಧವಾರ 35 ವರ್ಷದ ಮುಸ್ಲಿಂ ವ್ಯಕ್ತಿಯೊಬ್ಬ ಪ್ರಯಾಣಿಸುತ್ತಿದ್ದ ವ್ಯಾನ್‌ನಲ್ಲಿ ದನಗಳನ್ನು ಸಾಗಿಸುವುದನ್ನು ವಿರೋಧಿಸಿದ ಜನರ ಗುಂಪೊಂದು ಆತನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಆತನನ್ನು ಹೊಡೆದು ಸಾಯಿಸಲಾಗಿದೆ...

ವೆನೆಜುವೆಲಾ: ತೈಲ ಉದ್ಯಮ ವಿದೇಶಿ ಹೂಡಿಕೆಗೆ ತೆರೆಯಲು, ಅಮೆರಿಕದೊಂದಿಗಿನ ಸಂಬಂಧ ಹೆಚ್ಚಿಸಲು ಕರೆ ನೀಡಿದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್

ಕ್ಯಾರಕಾಸ್: ವೆನೆಜುವೆಲಾದ ಕಚ್ಚಾ ತೈಲ ಮಾರಾಟದ ನಿಯಂತ್ರಣವನ್ನು ವಶಪಡಿಸಿಕೊಳ್ಳುವುದಾಗಿ ಅಮೆರಿಕಾ ಅಧ್ಯಕ್ಷ ಟ್ರಂಪ್ ಪ್ರತಿಜ್ಞೆ ಮಾಡಿದ ನಂತರ, ವೆನೆಜುವೆಲಾದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಗುರುವಾರ ತಮ್ಮ ಮೊದಲ ಒಕ್ಕೂಟದ ಸಂದೇಶವನ್ನು ಬಳಸಿಕೊಂಡು...

ನ್ಯಾ. ಯಶವಂತ್ ವರ್ಮಾಗೆ ಹಿನ್ನಡೆ; ಭ್ರಷ್ಟಾಚಾರ ಆರೋಪ ತನಿಖೆಗೆ ಸಂಸದೀಯ ಸಮಿತಿ ರಚನೆ ವಿರುದ್ಧದ ಅರ್ಜಿ ತಿರಸ್ಕರಿಸಿದ ಸುಪ್ರೀಂ 

ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪಗಳ ತನಿಖೆಗಾಗಿ ನ್ಯಾಯಾಧೀಶರ (ವಿಚಾರಣಾ) ಕಾಯ್ದೆಯಡಿ ಮೂವರು ಸದಸ್ಯರ ಸಮಿತಿಯನ್ನು ರಚಿಸುವ ಲೋಕಸಭಾ ಸ್ಪೀಕರ್ ಅವರ ನಿರ್ಧಾರವನ್ನು ರದ್ದುಗೊಳಿಸುವಂತೆ ಕೋರಿ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ...

1962ರ ಯುದ್ಧದಲ್ಲಿ ಸೈನ್ಯಕ್ಕೆ 600 ಕೆಜಿ ಚಿನ್ನ ದಾನ ಮಾಡಿದ್ದ ದರ್ಭಂಗಾದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ ನಿಧನ

ದರ್ಭಾಂಗ ರಾಜಮನೆತನದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ 2025 ಜನವರಿ 12 ರಂದು ನಿಧನರಾಗಿದ್ದಾರೆ.  ಅನಾರೋಗ್ಯದಿಂದ ಬಳಲುತ್ತಿದ್ದ ಮಹಾರಾಣಿ ಕಾಮಸುಂದರಿ ಅವರು, ಬಿಹಾರದ ದರ್ಭಾಂಗದಲ್ಲಿರುವ ತಮ್ಮ ಐತಿಹಾಸಿಕ ನಿವಾಸ 'ಕಲ್ಯಾಣಿ'ಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದೊಂದಿಗೆ...

ವಿಧಾನಸಭೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

2027 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸೇರಿದಂತೆ ದೇಶಾದ್ಯಂತ ಎಲ್ಲಾ ಚುನಾವಣೆಗಳಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ. ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)...