Homeಮುಖಪುಟ#MeToo ಪ್ರಕರಣ : 5 ವರ್ಷವಾಯಿತು, ನ್ಯಾಯ ಸಿಗುವುದು ಯಾವಾಗ? ನಟಿ ತನುಶ್ರೀ ದತ್ತಾ

#MeToo ಪ್ರಕರಣ : 5 ವರ್ಷವಾಯಿತು, ನ್ಯಾಯ ಸಿಗುವುದು ಯಾವಾಗ? ನಟಿ ತನುಶ್ರೀ ದತ್ತಾ

- Advertisement -
- Advertisement -

ಅಧಿಕಾರದಲ್ಲಿರುವವರು ಎಲ್ಲಿಯವರೆಗೆ ಅಪರಾಧಿಗಳನ್ನು ರಕ್ಷಿಸುತ್ತಾರೋ, ಅಲ್ಲಿಯವರೆಗೆ ಯಾವುದೇ ಚಳವಳಿ ಅಥವಾ ವರದಿಯಿಂದ ಬದಲಾವಣೆ ತರಲು ಸಾಧ್ಯವಿಲ್ಲ ಎಂದು ನಟಿ ತನುಶ್ರೀ ದತ್ತಾ ಹೇಳಿದ್ದಾರೆ.

ಮಲಯಾಳಂ ಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಆಘಾತಕಾರಿ ಕಿರುಕುಳ ಮತ್ತು ಲೈಂಗಿಕ ಶೋಷಣೆಯನ್ನು ಬಹಿರಂಗಪಡಿಸಿದ ನ್ಯಾಯಮೂರ್ತಿ ಹೇಮಾ ಸಮಿತಿ ವರದಿ ಕುರಿತು ಅವರು ಪ್ರತಿಕ್ರಿಯಿಸಿದ್ದಾರೆ.

ತನುಶ್ರೀ ದತ್ತಾ 2018ರಲ್ಲಿ ನಟ ನಾನಾ ಪಾಟೇಕರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಬಳಿಕ ಅದು ‘ಮೀಟೂ’ ಅಭಿಯಾನಕ್ಕೆ ನಾಂದಿಯಾಗಿತ್ತು. ಆದರೆ, ನಾನಾ ಪಾಟೇಕರ್ ತನುಶ್ರೀ ಅವರ ಆರೋಪಗಳನ್ನು ನಿರಾಕರಿಸಿದ್ದರು.

‘ಈಗಲೂ ನ್ಯಾಯಕ್ಕಾಗಿ ಕಾಯುತ್ತಿರುವೆ’ ಎಂದಿರುವ ತನುಶ್ರೀ ದತ್ತಾ, ಸಿನಿಮಾ ರಂಗದಲ್ಲಿ ತಾವೆದುರಿಸಿದ ದೌರ್ಜನ್ಯಗಳ ಬಗ್ಗೆ ನ್ಯಾ. ಹೇಮಾ ಸಮಿತಿಗೆ ಮಾಹಿತಿ ನೀಡಿರುವ ಮಹಿಳಾ ಕಲಾವಿದರನ್ನು ಬೆಂಬಲಿಸಿದ್ದಾರೆ.

ಹೇಮಾ ಸಮಿತಿಯ ವರದಿಯ ಕುರಿತು ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿರುವ ತನುಶ್ರೀ ದತ್ತಾ”ಇದು ‘ಮೀಟೂ’ ಪ್ರಕರಣಗಳಂತೆಯೇ ಕಾಣುತ್ತಿದೆ. ಸಮಾಜದೆದುರು ಸಂಭಾವಿತರಂತೆ ಕಾಣಿಸಿಕೊಳ್ಳುವ ಅವರು (ಆರೋಪಿಗಳು), ತಮ್ಮ ವ್ಯಕ್ತಿತ್ವಕ್ಕೆ ಧಕ್ಕೆಯಾಗುವುದನ್ನು ಸಹಿಸುವುದಿಲ್ಲ. ಇಂತಹ ವರದಿಗಳಿಂದ ಏನೂ ಆಗುವುದಿಲ್ಲ. ಏಕೆಂದರೆ, ಮಹಿಳೆಯರ ಮೇಲಿನ ದಾಳಿ ಮತ್ತು ದೌರ್ಜನ್ಯಗಳು ಈಗಲೂ ಮುಂದುವರೆದಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನೀವು ಮಿಸ್‌ ಇಂಡಿಯಾ ಅಥವಾ ನಟಿ, ಇಲ್ಲವೇ ವಿದ್ಯಾವಂತೆ-ಏನೇ ಆಗಿದ್ದರೂ, ಈ ದೇಶದಲ್ಲಿ ಅದು ಮುಖ್ಯವಾಗುವುದಿಲ್ಲ. ಅಧಿಕಾರದಲ್ಲಿರುವವರು ಎಲ್ಲಿಯವರೆಗೆ ಕ್ರಿಮಿನಲ್‌ಗಳನ್ನು ರಕ್ಷಿಸುಸುತ್ತಾರೋ, ಅಲ್ಲಿಯವರೆಗೆ ಯಾವ ಚಳವಳಿ ಅಥವಾ ಯಾರೊಬ್ಬರ ವಿಚಾರಗಳು ಏನೂ ಮಾಡಲಾಗದು. ಈಗ ಈ ಸಮಿತಿ ವರದಿ. ಆಗ ವಿಶಾಖ ಸಮಿತಿ (ಮಹಿಳೆಯರ ಕುಂದು ಕೊರತೆ ಸಮಿತಿ). ಅಷ್ಟೇ ಅಲ್ಲ, ಸಾಕಷ್ಟು ಸಮಿತಿಗಳನ್ನು ರಚಿಸಲಾಗಿದೆ. ಬಹಳಷ್ಟು ವರದಿಗಳು ಬಂದಿವೆ. ಆದರೆ, ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಭ್ರಷ್ಟಾಚಾರ ತುಂಬಿರುವಾಗ ಹಾಗೂ ಅಕ್ರಮವಾಗಿ ಸಂಪಾದಿಸಿದ ಹಣದಲ್ಲಿ ವ್ಯವಸ್ಥೆಯನ್ನು ಕೊಂಡೊಕೊಳ್ಳುತ್ತಿರುವಾಗ ಅಂತಹ ವ್ಯವಸ್ಥೆಯನ್ನು ಪಾಲಿಸುವುದಾದರೂ ಹೇಗೆ? ಎಂದು ಪ್ರಶ್ನಿಸಿದ್ದಾರೆ.

1997ರಲ್ಲಿ ಸುಪ್ರೀಂ ಕೋರ್ಟ್ ರೂಪಿಸಿದ ವಿಶಾಖ ಮಾರ್ಗಸೂಚಿಗಳು, ಖಾಸಗಿ ಅಥವಾ ಸಾರ್ವಜನಿಕ ಸಂಸ್ಥೆಗಳಲ್ಲಿ ಲೈಂಗಿಕ ಕಿರುಕುಳದ ದೂರುಗಳ ಪರಿಹಾರಕ್ಕಾಗಿ ಕಾರ್ಯವಿಧಾನವನ್ನು ಸ್ಥಾಪಿಸುವುದನ್ನು ಕಡ್ಡಾಯಗೊಳಿಸಿದೆ.

2009ರ “ಹಾರ್ನ್ ‘ಓಕೆ’ ಪ್ಲೀಸ್” ಚಿತ್ರದ ಸೆಟ್‌ನಲ್ಲಿ ತನ್ನ ನೃತ್ಯದ ಹೆಜ್ಜೆಗಳನ್ನು ತೋರಿಸುವ ನೆಪದಲ್ಲಿ ನಾನಾ ಪಾಟೇಕರ್ ತನ್ನನ್ನು ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು 2018 ರಲ್ಲಿ ದತ್ತಾ ಆರೋಪಿಸಿದ್ದರು.

ಅವರು ಪಾಟೇಕರ್, ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯ, ನಿರ್ದೇಶಕ ರಾಕೇಶ್ ಸಾರಂಗ್ ಮತ್ತು ಚಿತ್ರದ ನಿರ್ಮಾಪಕರ ವಿರುದ್ಧ ದೂರು ದಾಖಲಿಸಿದ್ದರು.

ದತ್ತಾ ಅವರ ಪ್ರಕಾರ, ಅವರು 14 ಸಾಕ್ಷಿಗಳ ಹೆಸರುಗಳನ್ನು ಕೊಟ್ಟಿದ್ದರು. ಆದರೆ, ಪೊಲೀಸರು ಅವರಲ್ಲಿ ಯಾರೊಬ್ಬರಿಂದಲೂ ಹೇಳಿಕೆಗಳನ್ನು ಪಡೆದುಕೊಂಡಿಲ್ಲ. ಬದಲಾಗಿ ಬಿ ರಿಪೋರ್ಟ್ ಹಾಕಲು ಪ್ರಯತ್ನಿಸಿದ್ದರು. ಅಂದರೆ, ಆರೋಪಿಯ ವಿರುದ್ಧ ಆರೋಪ ಅಥವಾ ವಿಚಾರಣೆಗೆ ಪೊಲೀಸರ ಬಳಿ ಸಾಕಷ್ಟು ಪುರಾವೆಗಳಿಲ್ಲ ಎಂದರ್ಥ. ಇದರ ವಿರುದ್ಧ ಹೋರಾಡುವುದಾಗಿ ದತ್ತಾ ಹೇಳಿದ್ದಾರೆ.

‘ತಮಗೆ ಸಾರ್ವಜನಿಕರಿಂದ ಬೆದರಿಕೆ ಕರೆಗಳು ಬರುತ್ತಿರುವುದಾಗಿ ಹಾಗೂ ಹೇಳಿಕೆಗಳನ್ನು ದಾಖಲಿಸಿಕೊಳ್ಳಲು ಪೊಲೀಸರು ತಮ್ಮನ್ನು ಸಂಪರ್ಕಿಸಿಲ್ಲ ಎಂಬುದಾಗಿ ನಾನು ಉಲ್ಲೇಖಿಸಿರುವ ಸಾಕ್ಷಿದಾರರು ನನಗೆ ಹೇಳಿದ್ದಾರೆ. ಒಬ್ಬ ಸಾಕ್ಷಿದಾರ ಊರನ್ನೇ ತೊರೆದಿದ್ದಾರೆ. ಮತ್ತೊಬ್ಬ ಮಧ್ಯಪ್ರಾಚ್ಯಕ್ಕೆ ಓಡಿಹೋಗಿದ್ದಾರೆ. ಸಾಕ್ಷಿಯಾಗಿದ್ದ ಮತ್ತೊಬ್ಬ ಮಹಿಳೆ ಭಯದಿಂದ ಮುಂದೆ ಬರುತ್ತಿಲ್ಲ. ಪ್ರತಿಭಟನಾ ಅರ್ಜಿ ದಾಖಲಿಸಿದ ನಂತರ, ಅದೂ ಐದು ವರ್ಷಗಳ ಬಳಿಕ ನ್ಯಾಯಾಲಯ ವಿಚಾರಣೆಗೆ ದಿನಾಂಕ ನಿಗದಿಪಡಿಸಿದೆ. ನನಗೆ ನ್ಯಾಯ ಸಿಗುವುದು ಯಾವಾಗ?’ ಎಂದು ದತ್ತಾ ಪ್ರಶ್ನಿಸಿದ್ದಾರೆ.

ಕಳೆದ ಮೂರು ವರ್ಷಗಳಿಂದ ಎಲ್ಲಿಗೆ ಹೋದರೂ, ಅಪರಿಚಿತ ವ್ಯಕ್ತಿಗಳ ಗುಂಪು ನನ್ನನ್ನು ಹಿಂಬಾಲಿಸುತ್ತಿದೆ ಎಂದು ದತ್ತಾ ಆತಂಕ ವ್ಯಕ್ತಪಡಿಸಿದ್ದಾರೆ.

‘2022ರಲ್ಲಿ ಉಜ್ಜಯಿನಿಯಲ್ಲಿ ಅಪಘಾತಕ್ಕೊಳಗಾದೆ. ನಾನು ಪ್ರಯಾಣಿಸುತ್ತಿದ್ದ ಆಟೋರಿಕ್ಷಾದ ಬ್ರೇಕ್‌ ಅನ್ನು ಯಾರೋ ತುಂಡರಿಸಿದ್ದರು. ಕಾಕತಾಳೀಯವೆಂದು ನಿರ್ಲಕ್ಷಿಸಲು, ಆ ರೀತಿ ಆದದ್ದು ಒಮ್ಮೆಯಷ್ಟೇ ಅಲ್ಲ’ ಎಂದು ಹೇಳಿದ್ದಾರೆ.

ನಾನು ದೈಹಿಕ ಮತ್ತು ಮಾನಸಿಕ ಕಿರುಕುಳಕ್ಕೆ ಒಳಗಾಗಿದ್ದೇನೆ. ನಾನೂ ಒಬ್ಬರ ಮಗಳು. ನನಗೆ ಈ ದೇಶದಲ್ಲಿ ಬದುಕುವ ಮತ್ತು ಸುರಕ್ಷಿತವಾಗಿರುವ ಹಕ್ಕಿಲ್ಲವೇ? ಎಂದು ತನುಶ್ರೀ ದತ್ತಾ ಕೇಳಿದ್ದಾರೆ.

ಇದನ್ನೂ ಓದಿ : ಕಲರ್‌ಫುಲ್ ಜಗತ್ತಿನ ಕರಾಳತೆ ತೆರೆದಿಟ್ಟ ‘ಜಸ್ಟೀಸ್ ಹೇಮಾ ಸಮಿತಿ’ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶಿಗರು ಎಂಬ ಆರೋಪ : ಬಂಗಾಳದ ನಾಲ್ವರು ಮುಸ್ಲಿಂ ವ್ಯಾಪಾರಿಗಳಿಗೆ ಒಡಿಶಾ ತೊರೆಯಲು 72 ಗಂಟೆಗಳ ಗಡುವು

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ನಾಲ್ವರು ಮುಸ್ಲಿಂ ವ್ಯಾಪಾರಿಗಳನ್ನು ಬಾಂಗ್ಲಾದೇಶಿಯರು ಮತ್ತು ರೋಹಿಂಗ್ಯಾ ವಲಸಿಗರು ಎಂದು ಆರೋಪಿಸಿ ಒಡಿಶಾದ ನಯಾಗಢವನ್ನು ತೊರೆಯಲು 72 ಗಂಟೆಗಳ ಗಡುವು ನೀಡಲಾಗಿದೆ ಎಂದು ದಿ ಟೆಲಿಗ್ರಾಫ್ ಮಂಗಳವಾರ...

‘ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ, ಒಗ್ಗಟ್ಟಿನಿಂದ ಇದ್ದೇವೆ: ನಾನು, ಡಿ.ಕೆ. ಶಿವಕುಮಾರ್ ಸಹೋದರರಿದ್ದಂತೆ’: ಸಿಎಂ ಸಿದ್ದರಾಮಯ್ಯ

‘ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರಿದ್ದಂತೆ, ಒಂದೇ ಪಕ್ಷದಲ್ಲಿದ್ದು, ಒಂದೇ ಸಿದ್ಧಾಂತ ನಂಬಿಕೊಂಡಿದ್ದೇವೆ, 2028ರ ಚುನಾವಣೆಯಲ್ಲಿಯೂ ಒಟ್ಟಿಗೆ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 2, ಮಂಗಳವಾರ ಉಪಮುಖ್ಯಮಂತ್ರಿ...

ಪೋಕ್ಸೊ ಪ್ರಕರಣ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಚಾರಣೆಗೆ ತಡೆಯಾಜ್ಞೆ ನೀಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಪೋಕ್ಸೊ ಪ್ರಕರಣದ ಮೊದಲ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ ಎಫ್‌ಟಿಎಸ್‌ ವಿಶೇಷ ಸೆಷನ್ಸ್‌ ನ್ಯಾಯಾಲಯ ಹೊರಡಿಸಿದ್ದ ಸಮನ್ಸ್‌ ಹಾಗೂ ವಿಚಾರಣಾ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್‌...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಗಾಂಧಿ ಕುಟುಂಬದ ವಿರುದ್ಧ ಹೊಸ ಎಫ್‌ಐಆರ್‌ ದಾಖಲಿಸಿದ ಇಡಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಹೊಸ ಎಫ್‌ಐಆರ್‌ ದಾಖಲಿಸಿದೆ. ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು,...

‘ಸಂಚಾರ ಸಾಥಿ’ ಆ್ಯಪ್‌ ಕಡ್ಡಾಯ: ಬಿಜೆಪಿ ದೇಶವನ್ನು ಸರ್ವಾಧಿಕಾರ ರಾಷ್ಟ್ರವನ್ನಾಗಿ ಪರಿವರ್ತಿಸುತ್ತಿದೆ ಎಂದ ಪ್ರಿಯಾಂಕಾ ಗಾಂಧಿ 

ಮೊಬೈಲ್ ಫೋನ್ ತಯಾರಕರು ಹೊಸ ಹ್ಯಾಂಡ್‌ಸೆಟ್‌ಗಳಲ್ಲಿ ಸಂಚಾರ್ ಸಾಥಿ ಅಪ್ಲಿಕೇಶನ್ ಅನ್ನು ಮೊದಲೇ ಸ್ಥಾಪಿಸುವಂತೆ ಟೆಲಿಕಾಂ ಇಲಾಖೆ ಕೇಳಿಕೊಂಡಿದ್ದು, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮಂಗಳವಾರ ಇದನ್ನು "ಗೂಢಚಾರಿ ಅಪ್ಲಿಕೇಶನ್" ಎಂದು ಕರೆದಿದ್ದಾರೆ....

ಎಸ್‌ಐಆರ್ ಚರ್ಚೆಗೆ ಬಿಗಿಪಟ್ಟು ಹಿಡಿದ ಪ್ರತಿಪಕ್ಷಗಳು, ಉಭಯ ಸದನಗಳಲ್ಲಿ ಕೋಲಾಹಲ ; ಕಲಾಪ ಮುಂದೂಡಿಕೆ

ಸಂಸತ್ತಿನ ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಇಂದೂ (ಡಿ.2) ಕೂಡ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಚರ್ಚೆಗೆ ಪಟ್ಟು ಹಿಡಿದು ಪ್ರತಿಪಕ್ಷಗಳು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪ್ರತಿಭಟನೆ ತೀವ್ರಗೊಳಿಸಿದೆ....

ಆಂಧ್ರಪ್ರದೇಶ| ‘ನೀವು ಕೊಳಕು ಜಾತಿಗೆ ಸೇರಿದವರು..’ ಎಂದು ದಲಿತ ವಿದ್ಯಾರ್ಥಿಗಳನ್ನು ನಿಂದಿಸಿದ ಇಂಗ್ಲಿಷ್ ಶಿಕ್ಷಕ

ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯಿಂದ ಆಘಾತಕಾರಿ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಯಂಡಪಲ್ಲಿ ಪ್ರೌಢಶಾಲೆಯ ಇಂಗ್ಲಿಷ್ ಶಿಕ್ಷಕರು ದಲಿತ ಸಮುದಾಯದ ವಿದ್ಯಾರ್ಥಿಗಳ ವಿರುದ್ಧ ಜಾತಿ ನಿಂದನೆ ಮತ್ತು ಅವಹೇಳನಕಾರಿ ಭಾಷೆಯನ್ನು ಬಳಸಿದ್ದಾರೆ ಎಂದು...

ಎಲ್ಲಾ ಮೊಬೈಲ್ ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಆ್ಯಪ್ ಕಡ್ಡಾಯಗೊಳಿಸಿದ ಕೇಂದ್ರ : ಗೌಪ್ಯತೆ ಕಳೆದುಕೊಳ್ಳುವ ಆತಂಕ

ಸ್ಮಾರ್ಟ್‌ಫೋನ್ ತಯಾರಕರು ಎಲ್ಲಾ ಹೊಸ ಮೊಬೈಲ್‌ ಫೋನ್‌ಗಳಲ್ಲಿ ಸರ್ಕಾರಿ ಸ್ವಾಮ್ಯದ ಸೈಬರ್ ಭದ್ರತಾ ಅಪ್ಲಿಕೇಶನ್ 'ಸಂಚಾರ್ ಸಾಥಿ'ಯನ್ನು ಮೊದಲೇ ಇನ್‌ಸ್ಟಾಲ್‌ (Pre-install) ಮಾಡಬೇಕು ಮತ್ತು ಬಳಕೆದಾರರು ಅದನ್ನು ಡಿಲಿಟ್ ಮಾಡದಂತೆ ನೋಡಿಕೊಳ್ಳಬೇಕು ಎಂದು...

ಗಡಿಪಾರು ಮಾಡಲಾಗಿರುವ ತುಂಬು ಗರ್ಭಿಣಿ ಬಂಗಾಳಿ ಮಹಿಳೆ ಬಾಂಗ್ಲಾ ಜೈಲಿನಿಂದ ಬಿಡುಗಡೆ

ಅಕ್ರಮ ವಲಸಿಗರು ಎಂದು ಭಾರತೀಯ ಅಧಿಕಾರಿಗಳು ಬಲವಂತವಾಗಿ ಗಡಿಯಾಚೆಗೆ ತಳ್ಳಿರುವ ತುಂಬು ಗರ್ಭಿಣಿ ಬಂಗಾಳಿ ಮಹಿಳೆ ಬಾಂಗ್ಲಾದೇಶದ ಜೈಲಿನಿಂದ ಸೋಮವಾರ (ಡಿಸೆಂಬರ್ 1) ಸಂಜೆ ಬಿಡುಗಡೆಯಾಗಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ...

‘ಕೊಲ್ಲುವಂತೆ ಪೊಲೀಸರೇ ನನ್ನ ಸಹೋದರನಿಗೆ ಪ್ರಚೋದಿಸಿದರು..’; ಪ್ರೇಮಿಯ ಶವವನ್ನು ‘ಮದುವೆ’ಯಾದ ಯುವತಿಯ ಗಂಭೀರ ಆರೋಪ

ಮರ್ಯಾದೆಗೇಡು ಹತ್ಯೆ ಬಳಿಕ ತನ್ನ ಪ್ರೇಮಿಯ ಶವವನ್ನು 'ಮದುವೆ'ಯಾದ ಮಹಾರಾಷ್ಟ್ರದ ಯುವತಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ನನ್ನ ಗೆಳೆಯನನ್ನು ಇಬ್ಬರು ಪೊಲೀಸರು ನಿಂದಿಸಿದ ಬಳಿಕ ನನ್ನ ಸಹೋದರ ಕೊಂದಿದ್ದಾನೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ...