Homeಸಿನಿಮಾಕ್ರೀಡೆಕೆಎಸ್‍ಸಿಎಗೆ ಕಳಂಕ ತಂದ ಕೆಪಿಎಲ್ ಮೋಸದಾಟ...

ಕೆಎಸ್‍ಸಿಎಗೆ ಕಳಂಕ ತಂದ ಕೆಪಿಎಲ್ ಮೋಸದಾಟ…

ಯಾರದೋ ಹಣದಾಹಕ್ಕೆ ಬಲಿಯಾಗಿ ಅತಿ ಕಡಿಮೆ ಅವಧಿಯಲ್ಲಿ ಶ್ರೀಮಂತರಾಗಬಹುದೆಂಬ ಭ್ರಮೆಯಲ್ಲಿ ಇಂತಹ ಮೋಸದಾಟದ ಬಲೆಗೆ ಬೀಳುತ್ತಿರುವುದು ಕ್ರಿಕೆಟ್ ಜಗತ್ತಿನ ಕಳಂಕವಾಗಿದೆ...

- Advertisement -
- Advertisement -

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಆಡಳಿತ ಸಮಿತಿಯ ಚುನಾವಣೆಯಲ್ಲಿ, 1983ರ ಭಾರತದ ವಿಶ್ವಕಪ್ ವಿಜೇತ ತಂಡದ ನಾಡಿನ ಹೆಮ್ಮೆಯ ಆಟಗಾರ ನೇತೃತ್ವದ ಬಳಗ ಪ್ರಚಂಡ ಬಹುಮತದಿಂದ ಆಯ್ಕೆಯಾಗಿರುವುದು ಸಂತೋಷದಾಯಕ ವಿಚಾರವಾಗಿದೆ.

ರೋಜರ್ ಬಿನ್ನಿ

ಮೋಸದಾಟ ಎಲ್ಲಾ ಹಂತದ ಕ್ರಿಕೆಟ್‍ನಲ್ಲೂ ಸದ್ದು ಮಾಡುತ್ತಿರುವ ಸಂದರ್ಭದಲ್ಲಿ ಸ್ವಚ್ಛ, ಪಾರದರ್ಶಕ, ಭ್ರಷ್ಟಾಚಾರ ರಹಿತವಾದ ಆಡಳಿತದ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ರೋಜರ್ ಬಿನ್ನಿ ನೇತೃತ್ವದ ತಂಡದಲ್ಲಿ ನಿಷ್ಕಳಂಕ ವೃತ್ತಿಪರ ಮಾಜಿ ಆಟಗಾರರು ಹಾಗೂ ಶಾವೀರ್ ತಾರಾಪೂರ್‌ರಂತಹ ಅಂತರ ರಾಷ್ಟ್ರೀಯ ಅಂಪೈರ್ ಇರುವುದು ಪಾರದರ್ಶಕ ಆಡಳಿತದ ದೃಷ್ಟಿಯಿಂದ ಸಮಾಧಾನಕರವಾದ ವಿಷಯವಾಗಿದೆ.

ಹಾಗೆಯೇ ಕೆಎಸ್‍ಸಿಎಯಿಂದ ಬಿಸಿಸಿಐ ಪ್ರತಿನಿಧಿಯಾಗಿ ಬ್ರಿಜೇಶ್ ಪಟೇಲ್ ಅವರನ್ನು ನಾಮನಿರ್ದೇಶನ ಮಾಡಲು ನಿರ್ಧರಿಸಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಏಕೆಂದರೆ ಭಾರತದ ಖ್ಯಾತನಾಮ ಆಟರಾರರಾಗಿದ್ದ ಜಾವಗಲ್ ಶ್ರೀನಾಥ್, ಅನಿಲ್ ಕುಂಬ್ಳೆ ಅಂತಹವರು ಕೆಎಸ್‍ಸಿಎ ಯ ಪದಾಧಿಕಾರಿಗಳಾಗಿ ಅಧಿಕಾರದ ಚುಕ್ಕಾಣಿ ಹಿಡಿದಾಗ ಬುಡಮಟ್ಟದಿಂದ ಬದಲಾವಣೆಗಳನ್ನು ಮಾಡುವ ದೃಢ ಸಂಕಲ್ಪವನ್ನು ಮಾಡಿ ಯಾವುದೇ ಲಾಭಿಗೆ ಮಣಿಯದೇ ಅತ್ಯಂತ ನಿಷ್ಠೆಯಿಂದ ಅದರಲ್ಲಿ ಸಫಲತೆಯನ್ನು ಕಂಡರು.

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯನ್ನು ಕೇವಲ ಬೆಂಗಳೂರಿಗೆ ಮಾತ್ರ ಸೀಮಿತಗೊಳಿಸದೇ ಬಹುಪಾಲು ಜಿಲ್ಲಾ ಕೇಂದ್ರಗಳಲ್ಲಿ ಉತ್ಕೃಷ್ಟ ಮಟ್ಟದ ಕ್ರಿಡಾಂಗಣಗಳನ್ನು ನಿರ್ಮಿಸಿ ವಲಯವಾರು ಕ್ರಿಕೆಟ್ ಪಂದ್ಯಾವಳಿಗಳಿಗೆ ಹೆಚ್ಚಿನ ಒತ್ತು ಕೊಟ್ಟು ಅಲ್ಲಿಯ ಪ್ರತಿಭೆಗಳಿಗೆ ಅವಕಾಶ ಮಾಡಿಕೊಟ್ಟು ಗ್ರಾಮೀಣ ಭಾಗದ ಆಟಗಾರರ ಆಶಾಕಿರಣವಾದರು. ಹಾಗೆಯೇ ಕೆಎಸ್‍ಸಿಎ ಲೀಗ್ ಪಂದ್ಯಾವಳಿಗಳ ಆಯೋಜನೆಯಲ್ಲಿಯೂ ಅನೇಕ ಬದಲಾವಣೆ ತರುವುದರ ಮೂಲಕ ಕೆಎಸ್‍ಸಿಎ ಆಡಳಿತದ ಆಧಾರ ಸ್ಥಂಭಗಳಾದರು. ಇಂತಹ ಪಾರದರ್ಶಕ, ವೃತ್ತಿಪರ ಆಡಳಿತದ ಅವಶ್ಯಕತೆಯಿರುವುದರಿಂದ, ಹಾಗೂ ಮೋಸದಾಟದಂತಹ ಪಿಡುಗನ್ನು ಹಬ್ಬಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗಿರುವುದಿಂದ ಶುದ್ಧ ಹಸ್ತದ ಅನಿವಾರ್ಯತೆ ಕೆಎಸ್‍ಸಿಎಗೆ ಇದೆ.

‘ಕ್ರಿಕೆಟ್ ಜಂಟಲ್ ಮ್ಯಾನ್ಸ್ ಗೇಮ್’ ಎಂದು ಕರೆಯುತ್ತಾರೆ. ಆದರೆ ಕ್ರಿಕೆಟ್ ಮತ್ತು ಮೋಸದಾಟಕ್ಕೆ ಅವಿನಾಭಾವ ಸಂಬಂಧವಿದೆಯೇನೋ ಎನ್ನುವಷ್ಟರಮಟ್ಟಿಗೆ ಅದು ಒಂದಕ್ಕೊಂದು ಬೆರೆತುಹೋಗಿದೆ. ಕ್ರಿಕೆಟ್‍ನ ಎಲ್ಲಾ ಮಟ್ಟದ ಪಂದ್ಯಾವಳಿಗಳು ಇದಕ್ಕೆ ಹೊರತಲ್ಲ. ಮೊದಮೊದಲು ಅಂತರರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಸೌತ್ ಆಫ್ರಿಕಾ ತಂಡದ ಆಗಿನ ನಾಯಕ ಹ್ಯಾನ್ಸಿ ಕ್ರೋನಿಯೆ ಪ್ರಕರಣದ ಮೂಲಕ ಇದರ ವಾಸನೆ ಬಡಿದ ಮೇಲೆ ಜಗಜ್ಜಾಹಿರಾಯಿತು. ಇಡೀ ಕ್ರಿಕೆಟ್ ಜಗತ್ತು ಮೂಕವಿಸ್ಮಿತವಾಗಿ ಕ್ರಿಕೆಟ್ ಆಟಗಾರರನ್ನು ಖಳನಾಯಕರಂತೆ ಕಾಣಲು ಪ್ರಾರಂಭಿಸಿತು. ಕ್ರಿಕೆಟ್ ಪ್ರಿಯರು ಹುಚ್ಚರಂತೆ ಟಿವಿ ಮುಂದೆ ಕುಳಿತುಕೊಳ್ಳುತ್ತಿದ್ದವರು ಕ್ರಿಕೆಟ್ ಬಗ್ಗೆ ತಾತ್ಸಾರ ಮನೋಭಾವನೆ ತಾಳಲು ಪ್ರಾರಂಭಿಸಿದರು. ಇನ್ನೇನೂ ಮೋಸದಾಟ ಮರೆತು ಕ್ರಿಕೆಟನ್ನು ಆಸ್ವಾದಿಸಬೇಕು ಎಂದುಕೊಳ್ಳುತ್ತಿದ್ದ ಹಾಗೆಯೇ ಪದೇಪದೇ ಇಂತಹ ಪ್ರಕರಣಗಳು ಆಗಾಗ್ಗೆ ಕೇಳಿಬರುತ್ತಲೇ ಇದ್ದವು. ಅವು ಕೇವಲ ಅಂತರರಾಷ್ಟ್ರೀಯ ಮಟ್ಟಕ್ಕೆ ಮಾತ್ರ ಸೀಮಿತಕೊಳ್ಳದೇ ಐಪಿಎಲ್ ( ಇಂಡಿಯನ್ ಪ್ರೀಮಿಯರ್ ಲೀಗ್) ನಂತಹ ರಾಷ್ಟ್ರೀಯ ಮಟ್ಟದ ಪಂದ್ಯಾವಳಿಗಳಲ್ಲೂ ಈ ಪೆಡಂಭೂತ ಕಾಡಲು ಶುರು ಮಾಡಿತು. ಆದರೂ ಐಪಿಎಲ್ ಎಡಬಿಡದೇ ಸಾಗಿಕೊಂಡು ಬಂದಿದೆ. ಅದರ ಉದ್ದೇಶ ಪ್ರತಿಭಾನ್ವಿತ ಆಟಗಾರರಿಗೆ ಅವಕಾಶ ಕೊಡುವುದೇ ಆಗಿದ್ದರೂ ಹಣದಾಹ ಮೂಲೋದ್ದೇಶಕ್ಕೆ ಧಕ್ಕೆ ಬರುವ ಹಾಗೆ ಮಾಡುತ್ತಿದೆ.

ರಾಷ್ಟ್ರೀಯ, ಅಂತರ ರಾಷ್ಟ್ರೀಯ ಮಟ್ಟದಲ್ಲಿ ಐಪಿಎಲ್, ಆಟಗಾರರಿಗೆ ರಾಷ್ಟ್ರ ಮಟ್ಟದಲ್ಲಿ ಹೆಸರು ತಂದುಕೊಟ್ಟರೆ, ಅದೇ ಮಾದರಿಯಲ್ಲಿ ಕರ್ನಾಟಕದಲ್ಲಿ ಪ್ರಾರಂಭವಾದ ಕೆಪಿಎಲ್ (ಕರ್ನಾಟಕ ಪ್ರೀಮಿಯರ್ ಲೀಗ್) ರಾಷ್ಟ್ರ, ರಾಜ್ಯಮಟ್ಟದಲ್ಲಿ ಹೆಸರು ತಂದುಕೊಡುವ ಪಂದ್ಯಾವಳಿಯಾಗಿದೆ. ಸಾಮಾನ್ಯವಾಗಿ ಕೆಎಸ್‌ಸಿಎ ಮೊದಲ ಡಿವಿಶನ್‍ನಲ್ಲಿ ಆಡುವ ಆಟಗಾರರು ಮತ್ತು ಕೆಲವೇ ಕೆಲವು ಎರಡನೇ ಡಿವಿಶನ್ ಲ್ರಿಕೆಟ್ ಲೀಗ್ ಆಡುವ ಆಟಗಾರರು ಸ್ಥಾನಗಳನ್ನು ಪಡೆದುಕೊಳ್ಳುತ್ತಾರೆ. ಇದು ಅವರಿಗೆ ಕ್ರಿಕೆಟ್ ಜಗತ್ತಿನಲ್ಲಿ ಬೆಳೆಯಲು ಕೆಎಸ್‍ಸಿಎ ಒದಗಿಸಿರುವ ಸುವರ್ಣಾವಕಾಶವಾಗಿದೆ. ಅನೇಕ ಕನಸುಗಳನ್ನು ಹೊತ್ತು ಬರುವ ಅದೆಷ್ಟೋ ಆಟಗಾರರ ಭವಿಷ್ಯಕ್ಕೆ ಇದು ದಾರಿದೀಪವಾಗಿದೆ. ಅಷ್ಟೇ ಅಲ್ಲದೇ ಎಲ್ಲಾ ಆಟಗಾರರು ಟಿವಿ ಪರದೆ ಮೇಲೆ ಕಾಣಿಸಿಕೊಳ್ಳಬೇಕು ಎಂಬ ಹಂಬಲಕ್ಕೆ ಆಸರೆಯಾಗಿ ಇದು ನೇರ ಪ್ರಸಾರವನ್ನು ಕೂಡ ಕಾಣುತ್ತದೆ. ಹಾಗೂ ಒಂದಷ್ಟು ಹಣವನ್ನು ತಂದುಕೊಡುತ್ತದೆ. ಈ ಕಾರಣಕ್ಕಾಗಿಯೇ ಅನೇಕ ಯುವ ಆಟಗಾರರ ಗಮನ ಕೆಪಿಎಲ್ ಸೆಳೆಯಲು ಕಾರಣವಾಗಿದೆ.

ಹೀಗೆ ಕನಸು ಕಂಡು ಬರುವ ಆಟಗಾರರು ಅವಕಾಶಗಳನ್ನು ಪಡೆದುಕೊಂಡು ಯಾರದೋ ಹಣದಾಹಕ್ಕೆ ಬಲಿಯಾಗಿ ಅತಿ ಕಡಿಮೆ ಅವಧಿಯಲ್ಲಿ ಶ್ರೀಮಂತರಾಗಬಹುದೆಂಬ ಭ್ರಮೆಯಲ್ಲಿ ಇಂತಹ ಮೋಸದಾಟದ ಬಲೆಗೆ ಬೀಳುತ್ತಿರುವುದು ಕ್ರಿಕೆಟ್ ಜಗತ್ತಿನ ಕಳಂಕವಾಗಿದೆ. 2019-20ನೇ ಸಾಲಿನ ಕೆಪಿಎಲ್ ಕ್ರಿಕೆಟ್ ಟೂರ್ನಿ ಬಹಳ ಸಾಂಗವಾಗಿ ನೆರವೇರಿತು ಎಂದು ಕೆಎಸ್‍ಸಿಎ ನಿಟ್ಟುಸಿರು ಬಿಡುತ್ತಿರಬೇಕಾದರೆಯೇ ಮೋಸದಾಟದ ಸುದ್ದಿ ಹೊರಬಂದಿದೆ.

ಕ್ರಿಕೆಟ್ ಮೋಸದಾಟದಲ್ಲಿ ಬೆಳಗಾವಿ ಪ್ಯಾಂಥರ್ಸ್ ತಂಡದ ಮಾಲೀಕ ಅಲಿ ಅಶ್ಫಾಕ್ ಮತ್ತು ಡ್ರಮ್ಮರ್ ಭವೇಶ್ ಬಾಫ್ನಾ ಇದರಲ್ಲಿ ಭಾಗಿಯಾಗಿದ್ದಾರೆಂಬ ಸ್ಪೋಟಕ ಮಾಹಿತಿ ಪೋಲಿಸ್ ತನಿಖೆಯಿಂದ ಗೊತ್ತಾಗಿ ಅವರನ್ನು ಬಂಧಿಸಲಾಗಿದೆ. ಅವರನ್ನು ತೀವ್ರವಾದ ವಿಚಾರಣೆಗೆ ಒಳಪಡಿಸಲಾಗಿ ಆರೋಪಿಗಳು ರಾಷ್ಟ್ರೀಯ, ಅಂತರರಾಷ್ಟ್ರೀಯ ಮಟ್ಟದಲ್ಲಿ ಬುಕ್ಕಿಗಳ ಸಂಪರ್ಕ ಹೊಂದಿದ್ದಾರೆ ಎಂಬ ವಿಚಾರ ಮಾಧ್ಯಮಗಳಲ್ಲಿ ಬಿತ್ತರಗೊಂಡಿದೆ. ಇದು ಕೇವಲ ಇಲ್ಲಿ ಮಾತ್ರವಿದೆಯೆಂದು ಅರ್ಥವಲ್ಲ. ಇಂತಹ ಅನೇಕ ಮಂದಿ ಮೋಸದಾಟದಲ್ಲಿ ಭಾಗಿಯಾಗಿರುವ ವ್ಯಕ್ತಿಗಳು ನ್ಯಾಯಯುತವಾದ ತನಿಖೆ ನಡೆಸಿದರೆ ಸಿಕ್ಕಿಬೀಳುತ್ತಾರೆ.

ಮಧ್ಯದಲ್ಲಿರುವವರು ಅಲಿ ಅಶ್ಫಾಕ್

ಕೆಎಸ್‌ಸಿಎ ಇದರ ಆಳ, ಅಗಲ, ಮತ್ತು ಇದರ ಮೂಲವನ್ನು ಅದರ ಪ್ರಗತಿಗೆ ಹುಡುಕಲೇ ಬೇಕಾಗಿದೆ. ಇಲ್ಲದಿದ್ದರೆ ಅದು ಪಡೆದುಕೊಂಡಿರುವ ಹೆಸರನ್ನು ಮಣ್ಣು ಪಾಲು ಮಾಡಿಕೊಳ್ಳುವುದರಲ್ಲಿ ಯಾವುದೇ ಸಂಶಯವಿಲ್ಲ. ನಾನು 1993ರಿಂದ ಒಬ್ಬ ಕ್ರಿಕೆಟ್ ಕ್ಲಬ್‍ನ ಕೆಎಸ್‍ಸಿಎ ಲೀಗ್ ಪಂದ್ಯಾವಳಿಗಳ ಆಟಗಾರನಾಗಿ ಕ್ರಿಕೆಟನ್ನು ತುಂಬ ಹತ್ತಿರದಿಂದ ಬಲ್ಲವನಾಗಿ ಕ್ರಿಕೆಟ್ ಅತ್ಯಂತ ಪ್ರೀತಿಯಿಂದ, ನಿಷ್ಠೆಯಿಂದ ಹೇಗೆ ಆಡಬಹುದು ಎಂಬುದನ್ನು ಬಲ್ಲೆ. ಯಾವುದೇ ಹಣದಾಹಕ್ಕೆ ಬಲಿಯಾಗದೇ ಆಟಕ್ಕೆ ಗೌರವ ಕೊಟ್ಟು ನಿಷ್ಠೆಯಿಂದ ಆಡಿದರೆ ಅದು ನಮ್ಮನ್ನು ಕಾಪಾಡುತ್ತದೆ. ಯುವ ಆಟಗಾರರು ಇತ್ತ ಕಡೆ ಗಮನಹರಿಸಿ, ತಾತ್ಕಾಲಿಕವಾದ ಇಷ್ಟಗಳನ್ನು ಪೂರೈಸುವ ಆಮಿಷಗಳಿಗೆ ಬಲಿಯಾಗದೇ ಭವಿಷ್ಯವನ್ನು ರೂಪಿಸುವ ಆಟದ ಕಡೆ ಮನಸ್ಸನ್ನು ನೆಡಬೇಕಾಗುತ್ತದೆ. ಹಾಗೆಯೇ ಅಧಿಕಾರದ ಚುಕ್ಕಾಣಿ ಹಿಡಿಯುವವರು ಕೆಎಸ್‌ಸಿಎ ಗೆ ಇರುವ ಮಾನ್ಯತೆ ಮತ್ತು ಗೌರವವನ್ನು ಕಾಪಾಡುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆಯನ್ನು ಇಡಬೇಕಾಗುತ್ತದೆ ಆಗ ಮಾತ್ರ ಕ್ರಿಕೆಟ್ ಪ್ರೀಮಿಗಳು ಕ್ರಿಕೆಟ್ ಆಟಗಾರರ ಬಗ್ಗೆ ಅಭಿಮಾನ ಮತ್ತು ವಿಶ್ವಾಸವನ್ನು ಬೆಳೆಸಿಕೊಳ್ಳುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...