Homeಕರ್ನಾಟಕರಾಜ್ಯಪಾಲರು ಸಂವಿಧಾನ ವಿರೋಧಿ ಕೆಲಸದಲ್ಲಿ ತೊಡಗಿದ್ದಾರೆ : ಎದ್ದೇಳು ಕರ್ನಾಟಕ ಕಿಡಿ

ರಾಜ್ಯಪಾಲರು ಸಂವಿಧಾನ ವಿರೋಧಿ ಕೆಲಸದಲ್ಲಿ ತೊಡಗಿದ್ದಾರೆ : ಎದ್ದೇಳು ಕರ್ನಾಟಕ ಕಿಡಿ

- Advertisement -
- Advertisement -

ರಾಜ್ಯಪಾಲರು ಪ್ರಜಾಪ್ರಭುತ್ವದ ಆಶಯವನ್ನು ಭಗ್ನಗೊಳಿಸಿ ಸಂವಿಧಾನ ವಿರೋಧಿಗಳಂತೆ ನಡೆದುಕೊಂಡಿರುವುದು ಖಂಡನೀಯ ಎಂದು ಎದ್ದೇಳು ಕರ್ನಾಟಕ ಸಂಘಟನೆ ಕಿಡಿಕಾರಿದೆ.

ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಇಂದು (ಆ.22) ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಸಂಘಟನೆಯ ಪ್ರಮುಖರು,”ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳ ರಾಜ್ಯ ವಿರೋಧಿ ಹಾಗೂ ಜನ ವಿರೋಧಿ ನಡೆ ಖಂಡನೀಯ. ಕಾಂಗ್ರೆಸ್‌ ಪಕ್ಷ ತನ್ನ ಮಂಪರಿನಿಂದ ಹೊರಬರಬೇಕು. ದೇಶ ಒಡೆಯುವ ಶಕ್ತಿಗಳ ವಿರುದ್ದ ಕಠಿಣ ಕ್ರಮಗಳಿಗೆ ಮುಂದಾಗಬೇಕು. ಜನಪರ ಆಡಳಿತ ನೀಡುವ ಮೂಲಕ ಅವರ ಸಂಚುಗಳನ್ನು ವಿಫಲಗೊಳಿಸಬೇಕು” ಎಂದರು.

ನ್ಯಾಯಾಲಯವು ರಾಜ್ಯಪಾಲರ ಕೀಳುಮಟ್ಟದ ರಾಜಕೀಯ ನಡೆಯನ್ನು ತಿರಸ್ಕರಿಸುವ ಮೂಲಕ ದೇಶದ ಸಂವಿಧಾನಿಕ ಮೌಲ್ಯಗಳ ಘನತೆಯನ್ನು ಕಾಪಾಡಬೇಕು. ರಾಜ್ಯ ಸರ್ಕಾರ ಜನಪರ ದಿಕ್ಕಿನಲ್ಲಿ ಸಾಗುವಂತೆ ನೋಡಿಕೊಳ್ಳುವುದು ವಿರೋಧ ಪಕ್ಷಗಳ ಜವಾಬ್ದಾರಿ. ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಕಳೆದ 15 ತಿಂಗಳಲ್ಲಿ ಜನರ ಬದುಕಿನ ಒಂದೇ ಒಂದು ಸಮಸ್ಯೆಯನ್ನು ಕೈಗೆತ್ತಿಕೊಂಡು ವಿಧಾನಸಭೆಯಲ್ಲಿ ಗಟ್ಟಿ ದನಿ ಎತ್ತಿಲ್ಲ ಅಥವಾ ಬೀದಿಗಿಳಿದು ಹೋರಾಟ ನಡೆಸಿಲ್ಲ. ಅದು ಮಾಡುತ್ತಿರುವ ಏಕೈಕ ಕೆಲಸವೆಂದರೆ ಜನರು ಆಯ್ಕೆ ಮಾಡಿರುವ ಸಂವಿಧಾನಿಕ ಸರ್ಕಾರವನ್ನು ಬುಡಮೇಲು ಮಾಡಲು ಯತ್ನಿಸುವುದು. ಇದು ರಾಜ್ಯದ್ರೋಹಿ ಹಾಗೂ ಜನ ವಿರೋಧಿ ಕೆಲಸವಾಗಿದೆ ಎಂದು ಆರೋಪಿಸಿದರು.

ಭ್ರಷ್ಟ ಹಾಗೂ ದುಷ್ಟ ಶಕ್ತಿಗಳಿಗೆ ಆಶ್ರಯತಾಣವಾಗಿರುವ ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಮಾತನಾಡುವುದು ಹಾಸ್ಯಾಸ್ಪದ ವಿಚಾರವಾಗಿದೆ. ಸಿಬಿಐ, ಇಡಿ, ಐಟಿಗಳಂತಹ ಸಂವಿಧಾನಿಕ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ತಳ್ಳುವುದು, ಆಪರೇಷನ್‌ ಕಮಲ ಮಾಡಿ ಜನರು ಆಯ್ಕೆ ಮಾಡಿದ ಸರ್ಕಾರಗಳನ್ನು ಕೆಡವುದು ಅದರ ಹವ್ಯಾಸವಾಗಿಬಿಟ್ಟಿದೆ. ಇಲ್ಲಿ ಈ ಬಾರಿ ರಾಜ್ಯಪಾಲರನ್ನು ಬಳಸಿಕೊಂಡು ಜನರು ಆರಿಸಿದ ಸರ್ಕಾರವನ್ನು ಕೆಡವುವ ಪ್ರಯತ್ನದಲ್ಲಿ ತೊಡಗಿದೆ ಎಂದು ಹೇಳಿದರು.

ಅವಕಾಶವಾದವನ್ನು ಅರೆದು ಕುಡಿದಿರುವ ಜೆಡಿಎಸ್‌ ಆತ್ಮವಂಚನೆ ಮಾಡಿಕೊಳ್ಳುತ್ತಾ ಬಿಜೆಪಿಯ ದುಷ್ಟ ರಾಜಕಾರಣಕ್ಕೆ ವೇದಿಕೆಯನ್ನು ಒದಗಿಸುತ್ತಿದೆ. ಈ ಎರಡು ಪಕ್ಷಗಳ ಕಪಟ ರಾಜಕಾರಣವನ್ನು ನಾವು ತೀವ್ರ ರೀತಿಯಲ್ಲಿ ಖಂಡಿಸುತ್ತೇವೆ. ಈ ನಡತೆಯನ್ನು ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಈ ಕೂಡಲೇ ತಿದ್ದಿಕೊಳ್ಳದಿದ್ದಲ್ಲಿ ರಾಜ್ಯದ ಜನತೆಯಿಂದ ಇನ್ನೂ ತೀವ್ರ ಸ್ವರೂಪದ ಆಕ್ರೋಶವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ನಾವು ಕಾಂಗ್ರೆಸ್‌ ಪಕ್ಷದ ಆಡಳಿತದಿಂದ ಸಂತುಷ್ಟರಾಗಿದ್ದೇವೆ ಎಂದಲ್ಲ. 2023ರ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿಯನ್ನು ತಿರಸ್ಕರಿಸಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವಂತೆ ಮಾಡುವುದರಲ್ಲಿ ನಾಗರಿಕ ಸಂಘಟನೆಗಳ ದೊಡ್ಡ ಪಾತ್ರವಿದೆ. ನಮ್ಮೆಲ್ಲರ ನಿರೀಕ್ಷೆಗೆ ತಕ್ಕಂತೆ ಕಾಂಗ್ರೆಸ್‌ ಆಡಳಿತ ನೀಡುತ್ತಿಲ್ಲ ಎಂಬ ಪ್ರಜ್ಞೆ ನಮಗಿದೆ. ಸೂಕ್ತ ಸಂದರ್ಭದಲ್ಲಿ ನಾವದನ್ನು ಮುಂದಿಡುತ್ತೇವೆ ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್‌ ಪಕ್ಷದ ಗಮನಕ್ಕೆ ಒಂದು ಮುಖ್ಯ ವಿಚಾರ ತರಲೇಬೇಕಿದೆ. ಬಿಜೆಪಿ ಮತ್ತು ಸಂಘಪರಿವಾರದ ಶಕ್ತಿಗಳ ಬಗೆಗಿನ ನಿಮ್ಮ ಮೃದು ಧೋರಣೆಯನ್ನು ಈಗಲಾದರೂ ಕೈಬಿಡಿ. ನಿಮ್ಮ ಪಕ್ಷದ ಹಲವು ಸ್ತರಗಳಲ್ಲಿ ಬಲಪಂಥೀಯ ಶಕ್ತಿಗಳ ಜೊತೆ ಮುಂದುವರೆಸಿಕೊಂಡು ಬರುತ್ತಿರುವ ಒಳ ಸಂಬಂಧಗಳನ್ನು, ಒಳ ಒಪ್ಪಂದಗಳನ್ನು ಈಗಲಾದರೂ ತುಂಡರಿಸಿಕೊಳ್ಳಿ. ಸಂವಿಧಾನಿಕ ಆಶಯಗಳ ಜೊತೆ ದೃಢವಾಗಿ ನಿಲ್ಲಿ. ದೇಶ ಒಡೆಯುವ ಶಕ್ತಿಗಳ ಮೇಲೆ ಕಠಿಣ ಕ್ರಮಗಳಿಗೆ ಮುಂದಾಗಿ. ನಿಜವಾಗಿಯೂ ನೀವು ಬಿಜೆಪಿಗಿಂತ ಭಿನ್ನ ಎಂಬುವುದನ್ನು ಸಾಬೀತುಪಡಿಸುವಂತಹ ಜನಪರ ನಡತೆಗಳ ಮೂಲಕ ಆ ಶಕ್ತಿಗಳಿಗೆ ಈ ರಾಜ್ಯದಲ್ಲಿ ಜಾಗವಿಲ್ಲದಂತೆ ಮಾಡಿ ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಗೌರಿ ಲಂಕೇಶ್ ಹತ್ಯೆ ಪ್ರಕರಣ : ಆರೋಪಿ ಮೋಹನ್ ನಾಯಕ್ ಜಾಮೀನು ರದ್ದುಗೊಳಿಸಲು ಸುಪ್ರೀಂ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...