Homeಕರ್ನಾಟಕಮಾಸಿಕ ₹6 ಲಕ್ಷ ಜೀವನಾಂಶ ಕೋರಿದ ಮಹಿಳೆ : 'ದುಡಿದು ಸಂಪಾದಿಸಿ' ಎಂದ ಹೈಕೋರ್ಟ್

ಮಾಸಿಕ ₹6 ಲಕ್ಷ ಜೀವನಾಂಶ ಕೋರಿದ ಮಹಿಳೆ : ‘ದುಡಿದು ಸಂಪಾದಿಸಿ’ ಎಂದ ಹೈಕೋರ್ಟ್

- Advertisement -
- Advertisement -

ತನ್ನನ್ನು ತೊರೆದಿರುವ ಪತಿಯಿಂದ ಮಾಸಿಕ 6 ಲಕ್ಷ ರೂಪಾಯಿಗೂ ಅಧಿಕ ಜೀವನಾಂಶ ಕೋರಿದ ಮಹಿಳೆಯ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್, “ಇಷ್ಟೊಂದು ಹಣವನ್ನು ಪ್ರತಿ ತಿಂಗಳೂ ಖರ್ಚು ಮಾಡುವ ಬಯಕೆಯಿದ್ದರೆ ನೀವೆ ದುಡಿಯಿರಿ”ಎಂದು ಕಿಡಿಕಾರಿದೆ.

ಕೌಟುಂಬಿಕ ನ್ಯಾಯಾಲಯ ನಿಗದಿಪಡಿಸಿರುವ ಜೀವನಾಂಶ ಹೆಚ್ಚಳ ಮಾಡುವಂತೆ ಕೋರಿ ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಲಲಿತಾ ಕನ್ನೆಘಂಟಿ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಮಹಿಳೆ ಪರ ವಾದ ಮಂಡಿಸಿದ ವಕೀಲ ಆಕರ್ಷ ಸುಧಾಕರ ಕಾನಡೆ, “ಮಹಿಳೆಗೆ ಪೌಷ್ಠಿಕಾಂಶಯುಕ್ತ ಆಹಾರ ಬೇಕಿದೆ. ಪತಿ ಅವರನ್ನು ತೊರೆದ ಬಳಿಕ ಅವರು ಹೊರಗಡೆ ಊಟ ಮಾಡುವಂತಾಗಿದೆ. ಊಟದ ಖರ್ಚೇ ಪ್ರತಿ ತಿಂಗಳಿಗೆ 40 ಸಾವಿರದಷ್ಟಿದೆ. ಅವರನ್ನು ತೊರೆದಿರುವ ಪತಿ ಪ್ರತಿ ದಿನ ಬ್ರಾಂಡೆಡ್ ಬಟ್ಟೆಗಳನ್ನೇ ಧರಿಸುತ್ತಾರೆ. ಅವರ ಒಂದು ಶರ್ಟ್‌ ಬೆಲೆಯೇ ರೂ. 10 ಸಾವಿರದಷ್ಟಿರುತ್ತದೆ. ಇವರು ಮಾತ್ರ ಹಳೆಯ ಬಟ್ಟೆ ಧರಿಸಬೇಕಿದೆ. ಇವರ ಬಟ್ಟೆ, ಸೌಂದರ್ಯ ವರ್ಧಕ, ಔಷಧಿ ವೆಚ್ಚ ಮತ್ತು ಇತರ ವಸ್ತುಗಳ ಖರೀದಿ ಸೇರಿ ಪ್ರತಿ ತಿಂಗಳು ಒಟ್ಟು 60 ಸಾವಿರ ರೂ. ಬೇಕಿದೆ” ಎಂದಿದ್ದಾರೆ.

ಇದನ್ನು ಆಲಿಸಿದ ನ್ಯಾ. ಕನ್ನೆಘಂಟಿ ಅವರು “ದಾವೆದಾರರು ಚೌಕಾಸಿ ನಡೆಸಲು ನ್ಯಾಯಾಲಯ ಮಾರುಕಟ್ಟೆಯಲ್ಲ. ನಿಮ್ಮ ಕಕ್ಷಿದಾರರಿಗೆ ಅರ್ಥವಾಗುತ್ತಿಲ್ಲ. ನೀವು ಅರ್ಥ ಮಾಡಿಕೊಂಡು ಆಕೆಗೆ ಸಲಹೆ ನೀಡಬೇಕು. ಆಕೆಯ ವಾಸ್ತವಿಕ ಖರ್ಚುವೆಚ್ಚಗಳನ್ನು ನ್ಯಾಯಾಲಯಕ್ಕೆ ತಿಳಿಸಬೇಕು. ನ್ಯಾಯಯುತವಾಗಿ ನಡೆದುಕೊಳ್ಳಲು ನಿಮಗೆ ಕೊನೆಯ ಅವಕಾಶ ನೀಡಲಾಗುತ್ತಿದೆ” ಎಂದು ಮಹಿಳೆಯರ ಪರ ವಕೀಲರಿಗೆ ಹೇಳಿದ್ದಾರೆ.

ಮುಂದುವರಿದು, “ಅರ್ಜಿದಾರೆಯು ಆಕೆಯ ಮಗುವಿನ ಖರ್ಚಿಗೆ ವೆಚ್ಚವಾಗುವುದನ್ನು ಏನೂ ಹೇಳಿಲ್ಲ. ತನ್ನ ವೈಯಕ್ತಿಕ ಖರ್ಚಿಗೆ ಮಾಸಿಕ 6,16,300 ರೂ. ಬೇಕು ಎಂದು ಹೇಳಿದ್ದಾರೆ. ಪತಿ ಎಷ್ಟು ಸಂಪಾದನೆ ಮಾಡುತ್ತಿದ್ದಾರೆ ಎಂಬುವುದನ್ನು ಆಧರಿಸಿ ಪತ್ನಿಗೆ ಜೀವನಾಂಶ ನೀಡಲಾಗದು? ಪತಿ ಮಾಸಿಕ 10 ಕೋಟಿ ರೂ. ಸಂಪಾದಿಸಬಹುದು, ಹಾಗೆಂದ ಮಾತ್ರಕ್ಕೆ ನ್ಯಾಯಾಲಯ ಆಕೆಗೆ 5 ಕೋಟಿ ರೂ. ಕೊಡಲು ಆದೇಶಿಸಲಾಗುತ್ತದೆಯೇ? ಒಬ್ಬ ಮಹಿಳೆ ತನಗಾಗಿ ತಿಂಗಳಿಗೆ ಇಷ್ಟು ಖರ್ಚು ಮಾಡುತ್ತಾರೆಯೇ? ಹಾಗಾದರೆ ಅವರು ಸಂಪಾದಿಸಲಿ” ಎಂದು ಖಾರವಾಗಿ ನುಡಿದಿದ್ದಾರೆ.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಮಹಿಳೆ ಪರ ವಕೀಲ, ಜೀವನಾಂಶ ಕೋರಿಕೆಯು ಮಹಿಳೆಯ ವಾಸ್ತವಿಕ ಖರ್ಚು ವೆಚ್ಚವಲ್ಲ, ಅದು ನಿರೀಕ್ಷಾತ್ಮಕ ವೆಚ್ಚವಾಗಿದೆ ಎಂದಿದ್ದಾರೆ.

ಆಗ ಪೀಠವು, ನಿರೀಕ್ಷಾತ್ಮಕ ವೆಚ್ಚಗಳನ್ನು ಆಧರಿಸಿ ಜೀವನಾಂಶ ಕೋರಲು ಕಾನೂನಿನಲ್ಲಿ ಅವಕಾಶವಿಲ್ಲ. ಮಹಿಳೆ ತನ್ನ ಮಾಸಿಕ ಖರ್ಚು ವೆಚ್ಚ ಎಂದು ವೈಯಕ್ತಿಕ ಖರ್ಚಿನ ವಿವರ ನೀಡಿದ್ದಾರೆ. ಇದರಲ್ಲಿ ಮಕ್ಕಳು ಮತ್ತು ಇತರೆ ಹೊಣೆಗಾರಿಕೆ ವಿಚಾರ ಪ್ರಸ್ತಾಪಿಸಿಲ್ಲ. ವಾಸ್ತವಿಕ ವೆಚ್ಚಗಳನ್ನು ಒಳಗೊಂಡ ಅಫಿಡವಿಟ್‌ ಸಲ್ಲಿಸಲು ಆಕೆಗೆ ಕೊನೆಯ ಅವಕಾಶ ಕಲ್ಪಿಸಲಾಗಿದೆ” ಎಂದು ಹೇಳಿದ್ದಾರೆ. ಮಹಿಳೆಯ ಪತಿ ಪರ ವಕೀಲ ಆದಿನಾಥ ನಾರದೆ ಹಾಜರಿದ್ದರು.

ಇದನ್ನೂ ಓದಿ : ಬಾಕಿ ಪ್ರಕರಣಗಳ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಸಲಹೆ : ಸಚಿವ ಸಂಪುಟ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....