Homeಮುಖಪುಟಯುಪಿ: ಚರ-ಸ್ಥಿರಾಸ್ತಿಗಳ ಘೋಷಣೆಗೆ ಆದೇಶ; ಸಂಬಳ ಕಳೆದುಕೊಳ್ಳುವ ಆತಂಕದಲ್ಲಿ ಸರ್ಕಾರಿ ನೌಕರರು

ಯುಪಿ: ಚರ-ಸ್ಥಿರಾಸ್ತಿಗಳ ಘೋಷಣೆಗೆ ಆದೇಶ; ಸಂಬಳ ಕಳೆದುಕೊಳ್ಳುವ ಆತಂಕದಲ್ಲಿ ಸರ್ಕಾರಿ ನೌಕರರು

- Advertisement -
- Advertisement -

ಉತ್ತರ ಪ್ರದೇಶದಲ್ಲಿ, ಯೋಗಿ ಆದಿತ್ಯನಾಥ್ ಸರ್ಕಾರದ ಆದೇಶವನ್ನು ಪಾಲಿಸದಿದ್ದರೆ 13 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳು ತಮ್ಮ ಸಂಬಳವನ್ನು ಕಳೆದುಕೊಳ್ಳುವ ಅಪಾಯವಿದೆ. ಸರ್ಕಾರಿ ನೌಕರರು ತಮ್ಮ ಚರ ಮತ್ತು ಸ್ಥಿರ ಆಸ್ತಿಗಳನ್ನು ಸರ್ಕಾರಿ ಪೋರ್ಟಲ್ ‘ಮಾನವ ಸಂಪದಾ’ನಲ್ಲಿ ಆಗಸ್ಟ್ 31 ರೊಳಗೆ ಘೋಷಿಸಲು ಕೇಳಲಾಗಿದೆ. ತಪ್ಪಿದ್ದಲ್ಲಿ, ನೌಕರರಿಗೆ ಈ ತಿಂಗಳ ಸಂಬಳವನ್ನು ನೀಡಲಾಗುವುದಿಲ್ಲ. ಪಾಲಿಸದಿರುವುದು ಬಡ್ತಿಗಳ ಮೇಲೂ ಪರಿಣಾಮ ಬೀರುತ್ತದೆ ಎಂದು ಇತ್ತೀಚಿನ ಆದೇಶದಲ್ಲಿ ತಿಳಿಸಲಾಗಿದೆ.

ಕಳೆದ ವರ್ಷ ಆಗಸ್ಟ್‌ನಲ್ಲಿ ನೀಡಲಾದ ಆದೇಶದ ಆರಂಭಿಕ ಗಡುವು ಡಿಸೆಂಬರ್ 31 ಆಗಿತ್ತು. ಅದರ ನಂತರ ಗಡುವನ್ನು ಜೂನ್ 30, ಮತ್ತು ನಂತರ ಜುಲೈ 31 ರವರೆಗೆ ಹಲವು ಬಾರಿ ವಿಸ್ತರಿಸಲಾಯಿತು. ಆದರೆ, ಕೇವಲ 26 ಪ್ರತಿಶತ ಅನುಸರಣೆಯೊಂದಿಗೆ ಮಾತ್ರ ಘೋಷಣೆ ಮಾಡಲಾಗಿದ್ದು, ಇದೀಗ ಗಡುವನ್ನು ಆಗಸ್ಟ್ 31ಕ್ಕೆ ಮುಂದೂಡಲಾಗಿದೆ.

ಸದ್ಯ ಉತ್ತರ ಪ್ರದೇಶದಲ್ಲಿ 17 ಲಕ್ಷ 88 ಸಾವಿರದ 429 ಸರ್ಕಾರಿ ನೌಕರರಿದ್ದಾರೆ. ಈ ಪೈಕಿ ಶೇ 26ರಷ್ಟು ನೌಕರರು ಮಾತ್ರ ತಮ್ಮ ಆಸ್ತಿ ವಿವರ ನೀಡಿದ್ದಾರೆ. ಅಂದರೆ, 13 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳು ಇನ್ನೂ ತಮ್ಮ ಆಸ್ತಿ ವಿವರಗಳನ್ನು ಬಹಿರಂಗಪಡಿಸಬೇಕಾಗಿದೆ.

ಈ ಹಿಂದೆ ಹಲವು ಬಾರಿ ಗಡುವನ್ನು ವಿಸ್ತರಿಸಲಾಗಿದ್ದರೂ, ವಿವರಗಳನ್ನು ಸಲ್ಲಿಸಲು ವಿಫಲರಾದವರಿಗೆ ಇತ್ತೀಚಿನ ನಿರ್ದೇಶನವು ಕೊನೆಯಾದಾಗಿದೆ. ಆಗಸ್ಟ್ 31 ರೊಳಗೆ ಆಸ್ತಿ ವಿವರಗಳನ್ನು ನೀಡುವವರಿಗೆ ಮಾತ್ರ ಆಗಸ್ಟ್ ತಿಂಗಳ ಪಾವತಿಯನ್ನು ನೀಡಲಾಗುವುದು ಮತ್ತು ಉಳಿದವರ ಸಂಬಳವನ್ನು ನಿಲ್ಲಿಸಲಾಗುವುದು ಎಂದು ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿ ಮನೋಜ್ ಕುಮಾರ್ ಸಿಂಗ್ ಸ್ಪಷ್ಟವಾಗಿ ಹೇಳಿದ್ದಾರೆ.

ರಾಜ್ಯ ಸರ್ಕಾರವು “ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸುತ್ತದೆ” ಎಂದು ಹೇಳುವ ಕ್ರಮವನ್ನು ಸಮರ್ಥಿಸಿದೆ.

“ಈ ಕ್ರಮವು ಸರ್ಕಾರದೊಳಗೆ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಾವು ಭ್ರಷ್ಟಾಚಾರದ ಬಗ್ಗೆ ಶೂನ್ಯ ಸಹಿಷ್ಣುತೆಯ ನೀತಿಯನ್ನು ಹೊಂದಿದ್ದೇವೆ” ಎಂದು ಸಚಿವ ಡ್ಯಾನಿಶ್ ಆಜಾದ್ ಅನ್ಸಾರಿ ಹೇಳಿದ್ದಾರೆ.

ಪ್ರತಿಪಕ್ಷವು ಈ ಕ್ರಮವನ್ನು ಟೀಕಿಸಿದೆ ಮತ್ತು ರಾಜ್ಯ ಸರ್ಕಾರವು ತನ್ನ ಆದೇಶವನ್ನು ಜಾರಿಗೆ ತರುವಲ್ಲಿ ವಿಫಲವಾಗಿದೆ ಎಂದು ಅನೇಕ ಗಡುವು ವಿಸ್ತರಣೆಗಳು ತೋರಿಸುತ್ತವೆ ಎಂದು ಹೇಳಿದರು.

“2017 ರಲ್ಲಿ ಅವರು ಇದನ್ನು ಏಕೆ ತರಲಿಲ್ಲ? ಈಗ ಯೋಗಿ ಆದಿತ್ಯನಾಥ್ ಸರ್ಕಾರವು ಹಿನ್ನಡೆಯಾಗಿದೆ, ಅದಕ್ಕಾಗಿಯೇ ಅವರು ಇದನ್ನು ಮಾಡುತ್ತಿದ್ದಾರೆ. ಅವರು ತಮ್ಮ ಎಲ್ಲ ನೌಕರರು ಭ್ರಷ್ಟರು ಎಂದು ಅವರು ಅರಿತುಕೊಂಡಿದ್ದಾರೆ. ಇದು ಫಾಲೋ ಅಪ್ ಆಗಿದೆ, ಇದನ್ನು ಜಾರಿಗೆ ತರಲು ಅವರಿಗೆ ಸಾಧ್ಯವಾಗಲಿಲ್ಲ” ಎಂದು ಸಮಾಜವಾದಿ ಪಕ್ಷದ ವಕ್ತಾರ ಅಶುತೋಷ್ ವರ್ಮಾ ಹೇಳಿದ್ದಾರೆ.

ಎಲ್ಲ ವರ್ಗದ ಅಧಿಕಾರಿಗಳು ಮತ್ತು ನೌಕರರು ಚರ ಮತ್ತು ಸ್ಥಿರ ಆಸ್ತಿಗಳ ವಿವರಗಳನ್ನು ಬಹಿರಂಗಪಡಿಸುವುದು ಕಡ್ಡಾಯವಾಗಿದೆ.

ಸಿಬ್ಬಂದಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಂ ದೇವರಾಜ್ ಅವರು ಮುಖ್ಯ ಕಾರ್ಯದರ್ಶಿ ಹೊರಡಿಸಿದ ಆದೇಶವನ್ನು ಎಲ್ಲ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಹಾಗೂ ಇಲಾಖಾ ಮುಖ್ಯಸ್ಥರು ಮತ್ತು ಕಚೇರಿ ಮುಖ್ಯಸ್ಥರಿಗೆ ಕಳುಹಿಸಿದ್ದಾರೆ. ಆದೇಶದ ಪ್ರಕಾರ, ಈ ವಿವರಗಳನ್ನು ನೀಡಲು ವಿಫಲರಾದ ನೌಕರರನ್ನು ಬಡ್ತಿಗೆ ಪರಿಗಣಿಸಲಾಗುವುದಿಲ್ಲ.

ಇದನ್ನೂ ಓದಿ; ಅನಿಲ್ ಅಂಬಾನಿ ಸೇರಿದಂತೆ 24 ಜನರನ್ನು ‘ಸೆಕ್ಯುರಿಟೀಸ್ ಮಾರುಕಟ್ಟೆ’ಯಿಂದ ನಿಷೇಧಿಸಿದ ಸೆಬಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...