Homeಕರ್ನಾಟಕಬಿಜೆಪಿಯವರ ಮಾತು ಕೇಳಿ 15 ಬಿಲ್‌ಗಳನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ : ಡಿ.ಕೆ ಶಿವಕುಮಾರ್

ಬಿಜೆಪಿಯವರ ಮಾತು ಕೇಳಿ 15 ಬಿಲ್‌ಗಳನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ : ಡಿ.ಕೆ ಶಿವಕುಮಾರ್

- Advertisement -
- Advertisement -

ಬಿಜೆಪಿಯವರ ಮಾತುಕೇಳಿ ರಾಜ್ಯಪಾಲರು 15 ಬಿ‌ಲ್‌ಗಳನ್ನು ವಾಪಸ್ ಕಳುಹಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆರೋಪಿಸಿದ್ದಾರೆ.

ಸದಾಶಿವನಗರದ ನಿವಾಸದ ಬಳಿ ಇಂದು (ಆ.23) ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ಬಿಜೆಪಿಯವರ ಮಾತನ್ನೇ ಕೇಳುವುದಾದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಗಳು ಏಕಿರಬೇಕು. ಏನಾದರು ಸ್ಪಷ್ಟನೆ ಕೇಳಿದರೆ ನೀಡೋಣ. ಅದನ್ನು ತಪ್ಪು ಎಂದು ಹೇಳಲಾಗುವುದಿಲ್ಲ. ರಾಜ್ಯಪಾಲರಿಗೆ ದೇವರು ಒಳ್ಳೆಯ ಬುದ್ಧಿ ಕೊಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ” ಎಂದರು.

ಸರ್ಕಾರ ಬೀಳಿಸುವ ಪ್ರಯತ್ನ ನಡೆಯುತ್ತಿದೆಯೇ? ಎಂದು ಕೇಳಿದಾಗ, “ಸರ್ಕಾರ ಬೀಳಿಸಲು ಯಾವ ಪ್ರಯತ್ನ ಮಾಡಿದರೂ ಏನು ಆಗುವುದಿಲ್ಲ. ನಾವೂ ಕೂಡ ಸುಮ್ಮನೆ ಕೂರುವುದಿಲ್ಲ. ನಾವು ನಮ್ಮ ಕೆಲಸ ಮಾಡುತ್ತೇವೆ” ಎಂದು ಹೇಳಿದರು.

ಜಿಂದಾಲ್‌ಗೆ ಭೂಮಿ ಮಾರಾಟ ಮಾಡಿದ್ದನ್ನು ಈ ಹಿಂದೆ ವಿರೋಧಿಸಿದ್ದ ಕಾಂಗ್ರೆಸ್ ಅದೇ ಜಿಂದಾ‌ಲ್‌ಗೆ ಭೂಮಿ ಮಾರಾಟ ಮಾಡಿದೆ ಎಂದು ಕೇಳಿದಾಗ, “ಉದ್ಯೋಗ ಸೃಷ್ಟಿಯಾಗಬೇಕು. ರಾಜ್ಯಕ್ಕೆ ಕೈಗಾರಿಕೆಗಳು ಬರಬೇಕು. ಕರ್ನಾಟಕದಲ್ಲಿ ಇರುವ ಕೈಗಾರಿಕಾ ಕಾನೂನಿಗೆ ತಕ್ಕಂತೆ ಅವರಿಗೆ ಭೂಮಿ ನೀಡಿದ್ದೇವೆ. ನಾವು ಅವರಿಗೆ ಹೊಸದಾಗಿ ಭೂಮಿ ಕೊಟ್ಟಿಲ್ಲ. ಈ ಹಿಂದೆ ಕೊಟ್ಟಿದ್ದನ್ನೇ ಪರಿಶೀಲಿಸಿ ಸೇಲ್ ಡೀಡ್ ಮಾಡಿಕೊಟ್ಟಿದ್ದೇವೆ. ಇತರೆಡೆ ಕೈಗಾರಿಕೆಗಳಿಗೆ ಅನುಕೂಲ ಮಾಡಿಕೊಟ್ಟಂತೆ ಇಲ್ಲಿಯೂ ಮಾಡಲಾಗಿದೆ. ಬಿಜೆಪಿಯವರು ಮಾಡಿದ್ದನ್ನು ನಾವು ಸರಿ ಮಾಡಿಕೊಟ್ಟಿದ್ದೇವೆ” ಎಂದು ತಿಳಿಸಿದರು.

ಸಚಿವ ಪರಮೇಶ್ವರ್ ಅವರು ಕೂಡ ದೆಹಲಿಗೆ ಭೇಟಿ ನೀಡುತ್ತಿರುವ ಬಗ್ಗೆ ಕೇಳಿದಾಗ, “ಬರುವವರನ್ನು ಬೇಡ ಎನ್ನಲು ಆಗುತ್ತದೆಯೇ? ಅವರದೇ ಇಲಾಖೆಯ ಕೆಲಸ, ಪಕ್ಷದ ಕೆಲಸ ಇರುತ್ತದೆ. ನಮಗೂ ಕೂಡ ಎರಡೂ ಕೆಲಸಗಳಿದ್ದು. ಎಲ್ಲರೂ ಒಟ್ಟಿಗೆ ಹೋಗುತ್ತಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿ : ನೀರಿನ ದರ ಶೇ.20-30ರಷ್ಟು ಏರಿಕೆ ಎಂದು ಘೋಷಿಸಿದ ಡಿಕೆ ಶಿವಕುಮಾರ್; ಬೆಂಗಳೂರು ನಿವಾಸಿಗಳ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...

Karnataka SIR : ಇಂದು ಕರಡು ಪಟ್ಟಿ ಪ್ರಕಟ; 43.80 ಲಕ್ಷ ಮತದಾರರಿಗೆ ದಾಖಲೆ ಕೇಳಿ ನೋಟಿಸ್

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಮನೆ ಮನೆ ಗಣತಿಯ (ಎನ್ಯುಮರೇಷನ್ ಫಾರಂ ಹಂತ) ಬಳಿಕ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಇಂದು (ಆ.24, ಸೋಮವಾರ) ಪ್ರಕಟಿಸಲಿದೆ....

ಅಮೆರಿಕದೊಂದಿಗಿನ ಯುದ್ಧಕ್ಕೆ ಇರಾನ್ 40 ವರ್ಷಗಳಿಂದ ಸಿದ್ಧವಾಗಿತ್ತು: ನಿವೃತ್ತ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್

"ತನ್ನ ಅತ್ಯುನ್ನತ ನಾಯಕತ್ವವನ್ನು ಕಳೆದುಕೊಳ್ಳುವಂತಹ ತುರ್ತು ಪರಿಸ್ಥಿತಿಗಳು ಸೇರಿದಂತೆ, ಅಮೆರಿಕದೊಂದಿಗಿನ ಸಂಭಾವ್ಯ ಯುದ್ಧಕ್ಕಾಗಿ ಇರಾನ್ ನಾಲ್ಕು ದಶಕಗಳಿಂದ ಸಿದ್ಧತೆ ನಡೆಸಿದೆ. ಹೀಗಾಗಿ ಎದುರಾಳಿಗಳಿಗೆ ಆ ದೇಶವನ್ನು ಸಂಪೂರ್ಣವಾಗಿ ನಾಶಪಡಿಸುವುದು ಕಷ್ಟಕರವಾಗಿದೆ" ಎಂದು ಭಾರತೀಯ...

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಆಗಸ್ಟ್ 24ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಿದ ಬಿಜೆಪಿ: ಉಲ್ಬಣಗೊಂಡ ರಾಜಕೀಯ ಸಂಘರ್ಷ

ಕರ್ನಾಟಕದ ರಾಜಕೀಯ ವಲಯದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವು ಭಾರಿ ಸಂಚಲನ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಮರ...

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, "ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ...

ಉತ್ತರ ಪ್ರದೇಶ| ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ತನ್ನದೇ ಅಂಗಡಿಯ ಸಿಹಿತಿಂಡಿ ತಿನ್ನಲು ನಿರಾಕರಿಸಿದ ಮಾಲೀಕ

ಆಹಾರ ಸುರಕ್ಷತಾ ದಾಳಿಯ ವೇಳೆ ಸಿಹಿ ತಿಂಡಿ ಅಂಗಡಿಯ ಮಾಲೀಕನೊಬ್ಬ ತನ್ನದೇ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಸಿಹಿತಿಂಡಿಯನ್ನು ತಿನ್ನಲು ನಿರಾಕರಿಸಿ ಸುದ್ದಿಯಾಗಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಕಲಬೆರಕೆ ಹಾಗೂ ನಕಲಿ ಸಿಹಿತಿಂಡಿಗಳನ್ನು ಮಾರಾಟ...

ದೇಶದ ಅಭಿವೃದ್ಧಿಗೆ ಕೌಶಲ್ಯದ ಕೊರತೆ ಸವಾಲು: 8.7 ಕೋಟಿ ಯುವಜನರು ಶಿಕ್ಷಣ, ಉದ್ಯೋಗದಿಂದ ವಂಚಿತರಾಗಿದ್ದಾರೆ ಎಂದ ನೀತಿ ಆಯೋಗ

ಭಾರತದ ಆರ್ಥಿಕ ಪ್ರಗತಿ ಹಾಗೂ ಭವಿಷ್ಯದ ಅಭಿವೃದ್ಧಿಯ ಹಾದಿಯಲ್ಲಿ ದೇಶದ ಯುವಶಕ್ತಿಯನ್ನು ಬಳಸಿಕೊಳ್ಳುವುದು ಅತ್ಯಂತ ನಿರ್ಣಾಯಕವಾಗಿದೆ. ಆದರೆ ಪ್ರಸ್ತುತ ದೇಶದಲ್ಲಿ ಕೋಟ್ಯಂತರ ಯುವಜನರು ಯಾವುದೇ ರೀತಿಯ ಶಿಕ್ಷಣ, ಉದ್ಯೋಗ ಅಥವಾ ಕೌಶಲ್ಯ ತರಬೇತಿಯಲ್ಲಿ...