Homeಮುಖಪುಟವಿದ್ಯಾವಂತರೇ ಹೆಚ್ಚೆಚ್ಚು ಜಾತಿವಾದಿಗಳಾಗುತ್ತಿರುವುದು ದುರಂತ: ಸಿಎಂ ಸಿದ್ದರಾಮಯ್ಯ

ವಿದ್ಯಾವಂತರೇ ಹೆಚ್ಚೆಚ್ಚು ಜಾತಿವಾದಿಗಳಾಗುತ್ತಿರುವುದು ದುರಂತ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

“ಧರ್ಮ-ಜಾತಿಯ ಹೆಸರಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ. ಜಾತಿ ವ್ಯವಸ್ಥೆ ಕಾರಣದಿಂದ ಬಹು ಜನರು ಶಿಕ್ಷಣದಿಂದ ವಂಚಿತರಾದರು; ಈ ಕಾರಣಕ್ಕೆ ಅಸಮಾನತೆ ಹೆಚ್ಚಾಯ್ತು. ವಿದ್ಯಾವಂತರೇ ಹೆಚ್ಚೆಚ್ಚು ಜಾತಿವಾದಿಗಳಾಗುತ್ತಿರುವುದು ದುರಂತ. ಜಾತಿ ಅಸಮಾನತೆಯ ಪೋಷಕರೇ ಮಹಾತ್ಮಗಾಂಧಿಯವರನ್ನು ಕೊಂದರು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಗಾಂಧಿ ಸ್ಮಾರಕ ನಿಧಿಯ 75ನೇ ವರ್ಷದ ಸಂಸ್ಮರಣೆಗಾಗಿ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ “21ನೇ ಶತಮಾನಕ್ಕೆ ಮಹಾತ್ಮ ಗಾಂಧೀಜಿ” ಅಂತಾರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಗಾಂಧೀಜಿಯವರ ವಿಚಾರಗಳು, ಸಮಾಜಕ್ಕೆ ನೀಡಿದ ಮಾರ್ಗದರ್ಶನಗಳು 20ನೇ ಶತಮಾನಕ್ಕೆ ಮಾತ್ರ ಸೀಮಿತವಾಗಿಲ್ಲ. ಈಗಿನ ಕಾಲಕ್ಕೂ ಪ್ರಸ್ತುತವಾಗಿವೆ.‌ ಗಾಂಧೀಜಿಯವರು ಶಾಂತಿ, ಸತ್ಯ, ನ್ಯಾಯ ಮತ್ತು ಬ್ರಾತೃತ್ವವನ್ನು ಬದುಕಿನುದ್ದಕ್ಕೂ ಆಚರಿಸಿಕೊಂಡು ಬಂದಿದ್ದಾರೆ. ಇಡೀ ವಿಶ್ವವೇ ಪರಸ್ಪರ ಪ್ರೀತಿಸುವ ಗುಣವನ್ನು ರೂಢಿಸಿಕೊಂಡರೆ ಇಡೀ ಸಮಾಜ ನೆಮ್ಮದಿಯಿಂದ ಇರಬಹುದು” ಎಂದರು.

“ಮನುಷ್ಯ ತನ್ನ ನೆಮ್ಮದಿಗಾಗಿ ಬೇರೆ ಗ್ರಹಗಳನ್ನು ಹುಡುಕಿಕೊಂಡು ಹೋಗುವಂತಾಗಬಾರದು ಎನ್ನುವ ಸ್ಟೀಫನ್ ಹಾಕಿಂಗ್ ಅವರ ಮಾತು ನೂರಕ್ಕೆ ನೂರರಷ್ಟು ಸತ್ಯ. ಮನುಷ್ಯ-ಮನುಷ್ಯರ ನಡುವೆ ಸಹಿಷ್ಣುತೆ, ಸೌಹಾರ್ದತೆ ರೂಢಿಸಿಕೊಳ್ಳದಿದ್ದರೆ ಜಗತ್ತು ಸರ್ವನಾಶವಾಗುತ್ತದೆ. ಕೋಮು ಭಾವನೆ ಹೀಗೇ ಬೆಳೆದರೆ ಕುವೆಂಪು ಅವರ ವಿಶ್ವ ಮಾನವ ಆಶಯ ಈಡೇರುವುದು ಕಷ್ಟವಾಗುತ್ತದೆ” ಎಂದು ಅವರು ಹೇಳಿದರು.

“ಪ್ರಕೃತಿ ನಮ್ಮ ಅಗತ್ಯಗಳನ್ನು ಈಡೇರಿಸುತ್ತದೆಯೇ ಹೊರತು, ದುರಾಸೆಗಳನ್ನು ಅದು ಪೂರೈಸುವುದಿಲ್ಲ ಎನ್ನುವುದು ಗಾಂಧಿಯವರ ನಂಬಿಕೆಯಾಗಿತ್ತು. ಕೇರಳದ ವಯನಾಡ್ ಮತ್ತು ರಾಜ್ಯದ ನಾನಾ ಕಡೆ ನಡೆಯುತ್ತಿರುವ ಪರಿಸರ ಅವಘಡಗಳಿಗೆ ಮನುಷ್ಯನ ದುರಾಸೆಗಳೇ ಕಾರಣವಾಗಿದೆ” ಎಂದರು.

“ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದರೆ ಅವರ ಕಾಲ್ಗುಣದಿಂದ ರಾಜ್ಯಕ್ಕೆ ಬರಗಾಲ ಬರುತ್ತದೆ ಎಂದು ಸಾರ್ವಜನಿಕ ವ್ಯಕ್ತಿಗಳೇ ಮೌಡ್ಯ ಬಿತ್ತುವ ಕುಟಿಲ ಪ್ರಯತ್ನ ಮಾಡಿದ್ದರು. ಆದರೆ, ಈಗ ಸಿಕ್ಕಾಪಟ್ಟೆ ಮಳೆ ಬರುತ್ತಿದೆ. ಬಹಳ ಮಂದಿ ಶಿಕ್ಷಿತರೇ ಕಂದಾಚಾರ, ಕರ್ಮ ಸಿದ್ಧಾಂತ, ಮೌಡ್ಯವನ್ನು ಆಚರಿಸುತ್ತಾರೆ. ಇದಕ್ಕೆ ಸರಿಯಾದ ವೈಜ್ಞಾನಿಕ ಶಿಕ್ಷಣದ ಕೊರತೆಯೇ ಕಾರಣ. 850 ವರ್ಷಗಳ ಹಿಂದೆಯೇ ಬಸವಾದಿ ಶರಣರು ಕರ್ಮ ಸಿದ್ಧಾಂತವನ್ನು ಸಾರಾಸಗಟಾಗಿ ತಿರಸ್ಕರಿಸಿದ್ದರು. ಆದರೆ, ಈಗಿನ ಕೆಲವು ಶಿಕ್ಷಿತರೇ ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟಿದ್ದಾರೆ” ಎಂದರು ಸಿಎಂ ಬೇಸರ ವ್ಯಕ್ತಪಡಿಸಿದರು.

“ನೆಹರೂ ಅವರು ವೈಜ್ಞಾನಿಕ ಮತ್ತು ವೈಚಾರಿಕ ಮಾರ್ಗದಲ್ಲಿ ಸಮಾಜವನ್ನು ಸನ್ನದ್ದಗೊಳಿಸಿ ದೇಶವನ್ನು ಮುನ್ನಡೆಸುತ್ತಿದ್ದರು. ಸರ್ವರನ್ನೂ ಒಳಗೊಳ್ಳುವ ಮತ್ತು ಅಹಿಂಸೆ ಗಾಂಧಿಯವರ ಮಾರ್ಗವಾಗಿತ್ತು. ಇದನ್ನು ಯುವಜನರಿಗೆ ತಲುಪಿಸುವ ಕೆಲಸ ಆಗಬೇಕಿದೆ” ಎಂದರು.

“ದೇಶದ ಶೇ.85 ರಷ್ಟು ಆಸ್ತಿ ಶೇ.1 ಶ್ರೀಮಂತರ ಕೈಗೆ ಸೇರುತ್ತಿದೆ. ಇದು ಅಪಾಯಕಾರಿ. ಈ ಆರ್ಥಿಕ ಅಸಮಾನತೆ ಹೋಗಲಾಡಿಸಲು ಗಾಂಧಿಯವರು ವಿಚಾರಗಳಲ್ಲಿ ಮಾರ್ಗಗಳಿವೆ. ಮಹಾತ್ಮಗಾಂಧಿಯವರು‌ ಅಧ್ಯಕ್ಷತೆ ವಹಿಸಿದ್ದ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನದ ಶತಮಾನೋತ್ಸವವನ್ನು ಹೆಚ್ಚು ಅರ್ಥಪೂರ್ಣವಾಗಿ ಆಚರಿಸುತ್ತೇವೆ.
ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸನ್ನು ಈಡೇರಿಸಬೇಕಾಗಿದೆ.‌ ಗಾಂಧಿಯವರ ಆಶಯದಂತೆ ರಾತ್ರಿ 12 ಗಂಟೆಗೂ ನಮ್ಮ ಹೆಣ್ಣು ಮಕ್ಕಳು ನಿರ್ಭಯದಿಂದ ಓಡಾಡುವಂತಾಗಬೇಕಿದೆ” ಎಂದು ಹೇಳಿದರು.

ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷರಾದ ರಾಮಚಂದ್ರ ರಾಹಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕಾನೂನು ಸಚಿವರಾದ ಎಚ್.ಕೆ.ಪಾಟೀಲ್, ಕಾರ್ಯಾಧ್ಯಕ್ಷರಾದ ವಿಶುಕುಮಾರ್, ನವದೆಹಲಿ ಸ್ಮಾರಕ ನಿಧಿ ಅಧ್ಯಕ್ಷರಾದ ಸಂಜೋಯ್ ಸಿಂಗ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಇದನ್ನೂ ಓದಿ; ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: ತಂದೆ-ಮಗನ ವಿರುದ್ಧ 2,144 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ ಎಸ್‌ಐಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...