Homeಮುಖಪುಟಧರ್ಮದ ಕಾರಣಕ್ಕೆ ಮುಸ್ಲಿಂ ಡೆಲಿವರಿ ಬಾಯ್‌ಗೆ ಹಲ್ಲೆ : ಆರೋಪ

ಧರ್ಮದ ಕಾರಣಕ್ಕೆ ಮುಸ್ಲಿಂ ಡೆಲಿವರಿ ಬಾಯ್‌ಗೆ ಹಲ್ಲೆ : ಆರೋಪ

- Advertisement -
- Advertisement -

ಮುಸ್ಲಿಂ ಎಂಬ ಕಾರಣಕ್ಕೆ ಝೊಮ್ಯಾಟೋ ಡೆಲಿವರಿ ಬಾಯ್‌ಗೆ ನಾಲ್ವರು ಥಳಿಸಿರುವ ಆರೋಪ ಉತ್ತರ ಪ್ರದೇಶದ ಲಕ್ನೋದಿಂದ ಕೇಳಿ ಬಂದಿದೆ.

ಅಸ್ಲಂ ಹಲ್ಲೆಗೊಳಗಾದ ಯುವಕ. ಈತ ರಾತ್ರಿ ಹೊತ್ತು ಆಹಾರ ತಲುಪಿಸುವ ಕೆಲಸ ಮಾಡುತ್ತಿದ್ದ. ಆಗಸ್ಟ್ 20ರಂದು ರಾತ್ರಿ ಬಂದ ಆರ್ಡರ್ ಅನುಸರಿಸಿ ಆಹಾರ ಕೊಂಡೊಯ್ದಾಗ ನಾಲ್ವರು ವ್ಯಕ್ತಿಗಳು ಅಸ್ಲಂ ಮೇಲೆ ಹಲ್ಲೆ ನಡೆಸಿ, ಮೈಮೇಲೆ ಮದ್ಯ ಸುರಿದು, ಧರ್ಮ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಹಲ್ಲೆಗೊಳಗಾದ ರಾತ್ರಿ ಅಸ್ಲಂಗೆ ಎರಡು ಆರ್ಡರ್ ಬಂದಿತ್ತು. ಈ ಪೈಕಿ ಒಂದು ಲಕ್ನೋದ ಗೋಮತಿ ನಗರದ ವಿನೀತ್ ಖಂಡ್ ಪ್ರದೇಶದಿಂದಾಗಿತ್ತು. ಆಹಾರ ಹೊತ್ತು ಮನೆ ಬಳಿ ತಲುಪಿದ ಅಸ್ಲಂ, ಆರ್ಡರ್ ಮಾಡಿದವರಿಗೆ ಕರೆ ಮಾಡಿದ್ದ. ಈ ವೇಳೆ ಆ ಕಡೆಯಿಂದ ಮಾತನಾಡಿದ ವ್ಯಕ್ತಿ ಮನೆಯ ಮೇಲಂತಸ್ತಿಗೆ ಬಂದು ಕೊಟ್ಟು ಹೋಗುವಂತೆ ಸೂಚಿಸಿದ್ದಾರೆ. ಇನ್ನೊಂದು ಆರ್ಡರ್ ತಲುಪಿಸಲು ಇದ್ದ ಕಾರಣ, ನೀವೆ ಕೆಳಗೆ ಬಂದು ತೆಗೆದುಕೊಂಡು ಹೋಗಿ ಎಂದು ಅಸ್ಲಂ ಹೇಳಿದ್ದಾನೆ. ಈ ವೇಳೆ ಆ ಕಡೆಯವರು, ನಾವು ಊಟ ಮಾಡುತಿದ್ದೇವೆ. ನೀನೆ ತಂದು ಕೊಟ್ಟು ಹೋಗು ಎಂದಿದ್ದಾರೆ. ಕೊನೆಗೆ ಅಸ್ಲಂ ಆಹಾರ ಹಿಡಿದು ಮನೆಯ ಮೇಲಂತಸ್ತಿಗೆ ತೆರಳಿದ್ದಾನೆ. ಈ ವೇಳೆ ಅಲ್ಲಿ ನಾಲ್ವರು ಮದ್ಯಪಾನ ಮಾಡುತಿದ್ದರು ಎಂದು ದಿ ವೈರ್ ವರದಿ ಮಾಡಿದೆ.

ಅಸ್ಲಂ ಅನ್ನು ನೋಡಿದ ಓರ್ವ ಆರಂಭದಲ್ಲಿ ಮೇಲೆ ಬರಲು ಏಕೆ ನಿರಾಕರಿಸಿದೆ? ಎಂದು ನಿಂದಿಸಿದ್ದಾನೆ. ಈ ವೇಳೆ ಮತ್ತೋರ್ವ ಅಸ್ಲಂನ ಕಾಲರ್ ಹಿಡಿದು ಮನೆಯೊಳಗೆ ಎಳೆದೊಯ್ದು ಥಳಿಸಿದ್ದಾನೆ. ನಿನ್ನ ಹೆಸರು ಹೇಳು ಎಂದಿದ್ದಾನೆ. ಅಸ್ಲಂ ಹೆಸರು ಹೇಳಿದಾಗ ಮುಸ್ಲಿಂ ಎಂದು ಗೊತ್ತಾಗಿ ಮತ್ತಷ್ಟು ಹಲ್ಲೆ ನಡೆಸಿದ್ದಾರೆ ಎಂದು ಲಿಖಿತ ದೂರಿನಲ್ಲಿ ಅಸ್ಲಂ ಹೇಳಿದ್ದಾಗಿ ದಿ ವೈರ್ ತಿಳಿಸಿದೆ.

“ಆರೋಪಿಗಳು ಹೆಲ್ಮೆಟ್‌ನಿಂದ ನನಗೆ ಥಳಿಸಿದ್ದಾರೆ. ನನ್ನ ಮೇಲೆ ಮದ್ಯ ಸುರಿದಿದ್ದಾರೆ. ಕುದಿಯುವ ನೀರು ಎರಚುವುದಾಗಿ ಬೆದರಿಸಿದ್ದಾರೆ. ಅಷ್ಟೇ ಅಲ್ಲದೆ, ನನ್ನನ್ನು ಸುಮಾರು ಒಂದೂವರೆ ಗಂಟೆಯ ಕಾಲ ಕೊಠಡಿಯಲ್ಲಿ ಕೂಡಿಹಾಕಿದ್ದದರು. ಇದರಿಂದ ಇತರ ಆರ್ಡರ್‌ಗಳನ್ನು ತಲುಪಿಸಲು ಆಗಲಿಲ್ಲ” ಎಂದು ಅಸ್ಲಂ ಆರೋಪಿಸಿದ್ದಾಗಿ ತಿಳಿದು ಬಂದಿದೆ.

ಹಲ್ಲೆ ನಡೆಸಿದ ಬಳಿಕ ಅಸ್ಲಂನನ್ನು ಬಿಟ್ಟ ಆರೋಪಿಗಳು, ತಾನೇ ಆಹಾರಕ್ಕೆ ಹೆಚ್ಚು ಶುಲ್ಕ ವಿಧಿಸಿದೆ. ಗ್ರಾಹಕರೊಂದಿಗೆ ಅನುಚಿತವಾಗಿ ವರ್ತಿಸಿದೆ ಮತ್ತು ಅವರು ಹಲ್ಲೆ ನಡೆಸಿದ ವಿಷಯ ಎಲ್ಲೂ ಹೇಳುವುದಿಲ್ಲ ಎಂದು ಆರೋಪಿಗಳು ಅಸ್ಲಂನಿಂದ ಸಹಿ ಹಾಕಿಸಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಪ್ರಕರಣ ಸಂಬಂಧ ನಾಲ್ವರು ಆರೋಪಿಗಳ ಪೈಕಿ ಓರ್ವನನ್ನು ಬಂಧಿಸಿರುವ ಪೊಲೀಸರು, ಉಳಿದ ಮೂವರಿಗಾಗಿ ಹುಡುಕಾಡುತಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಆರ್‌ಎಸ್‌ಎಸ್‌ ಚಟುವಟಿಕೆಗಳಲ್ಲಿ ಭಾಗವಹಿಸುವ ಸರ್ಕಾರಿ ನೌಕರರ ಮೇಲಿನ ನಿಷೇಧ ತೆಗೆದುಹಾಕಿದ ರಾಜಸ್ಥಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...