Homeದಲಿತ್ ಫೈಲ್ಸ್ಮೇಲಾಧಿಕಾರಿಗಳು, ಪತ್ರಕರ್ತನಿಂದ ಕಿರುಕುಳ ಆರೋಪ : ದಲಿತ ಪೊಲೀಸ್ ಕಾನ್‌ಸ್ಟೇಬಲ್ ಆತ್ಮಹತ್ಯೆ

ಮೇಲಾಧಿಕಾರಿಗಳು, ಪತ್ರಕರ್ತನಿಂದ ಕಿರುಕುಳ ಆರೋಪ : ದಲಿತ ಪೊಲೀಸ್ ಕಾನ್‌ಸ್ಟೇಬಲ್ ಆತ್ಮಹತ್ಯೆ

- Advertisement -
- Advertisement -

ರಾಜಸ್ಥಾನದ ಜೈಪುರದ ಬಾನ್‌ಕ್ರೋಟಾ ಪೊಲೀಸ್ ಠಾಣಾ ವ್ಯಾಪ್ತಿಯ ಹೊರಠಾಣೆಯೊಂದರಲ್ಲಿ ದಲಿತ ಸಮುದಾಯದ ಹೆಡ್‌ಕಾನ್‌ಸ್ಟೇಬಲ್ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೆಡ್‌ಕಾನ್‌ಸ್ಟೇಬಲ್ ಬಾಬುಲಾಲ್ ಬೈರ್ವಾ ಆತ್ಮಹತ್ಯೆ ಮಾಡಿಕೊಂಡವರು. ಮೂವರು ಪೊಲೀಸ್ ಅಧಿಕಾರಿಗಳು ಮತ್ತು ಓರ್ವ ಪತ್ರಕರ್ತ ತನ್ನ ಸಾವಿಗೆ ಕಾರಣ ಎಂದು ಬೈರ್ವಾ ಡೆತ್‌ನೋಟ್‌ನಲ್ಲಿ ಬರೆದಿರುವುದಾಗಿ ವರದಿಯಾಗಿದೆ.

ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈರ್ವಾ ಹಾಗೂ ಇತರ ಪೊಲೀಸ್ ಅಧಿಕಾರಿಗಳು ಕಳೆದ ವರ್ಷ ಅಮಾನತುಗೊಂಡಿದ್ದರು. ಅವಾಗಿನಿಂದ ಮೇಲಾಧಿಕಾರಿಗಳು ಹಾಗೂ ಓರ್ವ ಪತ್ರಕರ್ತನಿಂದ ತಾನು ಕಿರುಕುಳಕ್ಕೊಳಗಾಗಿರುವುದಾಗಿ ಬೈರ್ವಾ 6 ಪುಟಗಳ ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ ಎಂದು ತಿಳಿದು ಬಂದಿದೆ.

ಬೈರ್ವಾ ಅತ್ಮಹತ್ಯೆಗೆ ಸಂಬಂಧಿಸಿದಂತೆ ಅವರ ಪುತ್ರ ತನುಜ್ ಬಾನ್‌ಕ್ರೋಟಾ ಪೊಲೀಸ್ ಠಾಣೆಗೆ ನೀಡಿದ ದೂರು ಆಧರಿಸಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

“ಕಳೆದ ಒಂದು ವರ್ಷದಿಂದ ನನ್ನ ತಂದೆಗೆ ಎಸಿಪಿ ಅನಿಲ್ ಶರ್ಮಾ, ಹೆಚ್ಚುವರಿ ಎಸ್‌ಪಿ ಜಗದೀಶ್ ವ್ಯಾಸ್, ಸಬ್‌ ಇನ್‌ಸ್ಪೆಕ್ಟರ್ ಅಶುತೋಷ್ ಸಿಂಗ್ ಹಾಗೂ ಪತ್ರಕರ್ತ ಕಮಲ್ ದೇಗ್ಡಾ ಅವರು ಕಿರುಕುಳ ನೀಡುತ್ತಿದ್ದರು. ಇದರಿಂದಾಗಿ ತಂದೆಯವರು ತೀವ್ರವಾಗಿ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು. ಈ ಬಗ್ಗೆ ನಮ್ಮೊಂದಿಗೆ ಹಾಗೂ ಪರಿಚಯಸ್ಥರೊಂದಿಗೆ ಹೇಳಿಕೊಂಡಿದ್ದರು” ಎಂದು ತನುಜ್ ತನ್ನ ದೂರಿನಲ್ಲಿ ಹೇಳಿದ್ದಾರೆ.

ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಅವರನ್ನು ಉದ್ದೇಶಿಸಿ ಬೈರ್ವಾ ಅವರು ಪತ್ರ ಬರೆದಿದ್ದಾರೆ. ಪತ್ರಕರ್ತ ಕಮಲ್ ದೇಗ್ಡಾ ತನ್ನನ್ನು ಕೆಳ ಜಾತಿಯವನೆಂದು ನಿಂದಿಸುತ್ತಿದ್ದುದಾಗಿ ಬೈರ್ವಾ ಪತ್ರದಲ್ಲಿ ಬರೆದಿದ್ದಾರೆ. ನಮಗೆ ನ್ಯಾಯ ಸಿಗಬೇಕಾಗಿದೆ ಹಾಗೂ ಪೊಲೀಸ್ ಅಧಿಕಾರಿಗಳು ಸೇರಿದಂತೆ ಎಲ್ಲಾ ಆರೋಪಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

ಬೈರ್ವಾ ಅವರ ಸಾವು ಖಂಡಿಸಿ, ನ್ಯಾಯಕ್ಕಾಗಿ ಆಗ್ರಹಿಸಿ ಜೈಪುರದ ಎಸ್‌ಎಂಎಸ್ ಆಸ್ಪತ್ರೆಯ ಶವಾಗಾರದ ಬಳಿ ದಲಿತ ಹಕ್ಕುಗಳ ಕಾರ್ಯಕರ್ತರು ಮತ್ತು ಕುಟುಂಬ ಸದಸ್ಯರು ಪ್ರತಿಭಟನೆ ನಡೆಸಿದ್ದು, ನ್ಯಾಯ ಸಿಗುವವರೆಗೆ ಅಂತ್ಯಸಂಸ್ಕಾರ ಮಾಡಲು ನಿರಾಕರಿಸಿದ್ದಾರೆ.

ಪ್ರಕರಣ ಸಂಬಂಧ ಆಗಸ್ಟ್ 23ರಂದು ಆರೋಪಿ ಪೊಲೀಸ್ ಅಧಿಕಾರಿಗಳಾದ ವ್ಯಾಸ್, ಶರ್ಮಾ ಅಶುತೋಷ್ ಸಿಂಗ್ ಹಾಗೂ ಪತ್ರಕರ್ತ ಕಮಲ್ ದೇಗ್ಡಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಅವರ ವಿರುದ್ದ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳಡಿ ಹಾಗೂ ಎಸ್‌ಸಿ, ಎಸ್‌ಟಿ (ದೌರ್ಜನ್ಯಗಳ ತಡೆ) ಕಾಯ್ದೆಯಡಿ ಪ್ರಕರಣ ಹೂಡಲಾಗಿದೆ.

ಬೈರ್ವಾ ಅವರ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಕಾಂಗ್ರೆಸ್ ಶಾಸಕ ಹಾಗೂ ರಾಜಸ್ಥಾನ ವಿಧಾನಸಭೆಯ ವಿಪಕ್ಷ ನಾಯಕ ಟಿಕಾರಾಮ್ ಜುಲ್ಲಿ ಆಗ್ರಹಿಸಿದ್ದಾರೆ.

ಲೋಕಸಭಾ ಸಂಸದ ಹಾಗೂ ಭೀಮ್ ಆರ್ಮಿಯ ಮುಖ್ಯಸ್ಥ ಚಂದ್ರಶೇಖರ್ ಆಝಾದ್ ಅವರು ಕೂಡ ಆರೋಪಿ ಪೊಲೀಸರ ವಿರುದ್ದ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಧರ್ಮದ ಕಾರಣಕ್ಕೆ ಮುಸ್ಲಿಂ ಡೆಲಿವರಿ ಬಾಯ್‌ಗೆ ಹಲ್ಲೆ : ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...