Homeಎಕಾನಮಿಆರ್‌ಸಿಇಪಿ ಬಿಜೆಪಿ ಸರ್ಕಾರದ ರೈತ ವಿರೋಧಿ ಒಪ್ಪಂದ, ರೈತರಿಗೆ ಮರಣಶಾಸನ: ಸಿದ್ದರಾಮಯ್ಯ

ಆರ್‌ಸಿಇಪಿ ಬಿಜೆಪಿ ಸರ್ಕಾರದ ರೈತ ವಿರೋಧಿ ಒಪ್ಪಂದ, ರೈತರಿಗೆ ಮರಣಶಾಸನ: ಸಿದ್ದರಾಮಯ್ಯ

- Advertisement -
- Advertisement -

ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರ್‌ಸಿಇಪಿ ಒಪ್ಪಂದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಫೇಸ್‌ಬುಕ್‌ನಲ್ಲಿ ಆರ್‌ಸಿಇಪಿ ಬಗ್ಗೆ ಬರೆದು ಪೋಸ್ಟ್‌ ಮಾಡಿ, ಆರ್‌ಸಿಇಪಿ ಬೇಡ ಎಂದು ಹೇಳಿದ್ದಾರೆ.

ನವೆಂಬರ್‌ ೪ರಂದು ೧೬ ದೇಶಗಳ ನಡುವಿನ ಸಮಗ್ರ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲು ದಿನಾಂಕ ನಿಗದಿಪಡಿಸಲಾಗಿದೆ. ೧೦ ಆಗ್ನೇಯ ಏಷ್ಯಾ ದೇಶಗಳು ಹಾಗೂ ಚೀನಾ, ಜಪಾನ್, ಕೋರಿಯಾ, ನ್ಯೂಜಿಲ್ಯಾಂಡ್, ಭಾರತ, ಆಸ್ಟ್ರೇಲಿಯಾ ಸೇರಿದಂತೆ ೧೬ ರಾಷ್ಟ್ರಗಳು ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್‌ಸಿಇಪಿ )ದ ಅಡಿಯಲ್ಲಿ ಮುಕ್ತ ವ್ಯಾಪಾರ ಒಪ್ಪಂದ (ಎಫ್‌ಟಿಎ) ಇದಾಗಿದೆ. ಆರ್‌ಸಿಇಪಿಗೆ ಈಗಾಗಲೇ ವಿರೋಧ ವ್ಯಕ್ತವಾಗುತ್ತಿದೆ. ಭಾರತ ಹಲವು ಷರತ್ತುಗಳನ್ನು ಇರಿಸಿದ್ದು, ಈ ಬಗ್ಗೆ ಚರ್ಚೆ ನಡೆಯುತ್ತಿದೆ.

ಇದನ್ನೂ ಓದಿ: ಭಾರತದ ಆರ್‌ಸಿಇಪಿ ಸಂದಿಗ್ಧತೆ: ದಾರಿ ಇದೆಯೇ?

ವಿಪಕ್ಷಗಳು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮುಕ್ತ ವ್ಯಾಪಾರ ಒಪ್ಪಂದ ವಿರೋಧಿಸಲು ಕರೆ ನೀಡಿದ್ದಾರೆ. ದೇಶದ ನಾನಾ ಕಡೆಗಳಲ್ಲಿ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಬದುಕಿಗೆ ಮಾರಕವಾಗುವ ಒಪ್ಪಂದವನ್ನು ಕೇಂದ್ರ ಸರ್ಕಾರ ಕೈಬಿಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ವಿರೋಧಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಆರ್‌ಸಿಇಪಿಯನ್ನು ವಿರೋಧಿಸಿದ್ದಾರೆ. ರೈತರ ಹಿತಾಸಕ್ತಿ ಕಾಯದ ಆರ್‌ಸಿಇಪಿ ಬೇಕಾ..? ಎಲ್ಲಿದೆ ನ್ಯಾಯ ಎಂದು ಪ್ರಶ್ನಿಸಿದ್ದಾರೆ.
”ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (RCEP)ದಡಿಯಲ್ಲಿ ನಡೆಲಿರುವ ಮುಕ್ತ ವ್ಯಾಪಾರ ಒಪ್ಪಂದ (FTA) ದೇಶದ ಕೃಷಿ ಕ್ಷೇತ್ರಕ್ಕೆ ಮಾರಕವಾಗಲಿದೆ, ನರೇಂದ್ರ ಮೋದಿ ಸರ್ಕಾರದ ಈ ಪ್ರಯತ್ನ ರೈತರ ಪಾಲಿನ ಮರಣಶಾಸನ. ಸುಮಾರು 10 ಕೋಟಿ ರೈತರ ಬದುಕು ಹೈನುಗಾರಿಕೆಯನ್ನು ಅವಲಂಬಿಸಿದೆ. ಕರ್ನಾಟಕದಲ್ಲಿಯೇ ಸುಮಾರು 86 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ನ್ಯೂಜಿಲ್ಯಾಂಡ್, ಅಸ್ಟ್ರೇಲಿಯಾದಂತಹ ದೇಶಗಳಿಂದ ಅಗ್ಗದ ದರದ ಹಾಲು ಆಮದಿಗೆ ಅವಕಾಶ ನೀಡುವ RCEP ನಮ್ಮ ರೈತರನ್ನು ಬೀದಿ ಪಾಲು ಮಾಡಲಿದೆ.
ನಾನು ಮುಖ್ಯಮಂತ್ರಿಯಾಗಿದ್ದಾಗ ಹೈನುಗಾರಿಕೆಯನ್ನು ಉತ್ತೇಜಿಸಲು ‘ಕ್ಷೀರಧಾರೆ’ ಮತ್ತು ಶಾಲಾ ಮಕ್ಕಳನ್ನು ಆರೋಗ್ಯವಂತರನ್ನಾಗಿ ಮಾಡಲು ‘ಕ್ಷೀರಭಾಗ್ಯ’ ಯೋಜನೆಗಳನ್ನು ಜಾರಿಗೆ ತಂದಿದ್ದೆ. ಮೋದಿಯವರ ಸರ್ಕಾರ ರೈತರು ಮತ್ತು ಶಾಲಾ ಮಕ್ಕಳ ಬದುಕು ಕಸಿಯಲು ಹೊರಟಿದೆ.
ಯುಪಿಎ ಸರ್ಕಾರ RCEP ಮಾತುಕತೆಯಲ್ಲಿ ಭಾಗಿಯಾಗಿದ್ದು ನಿಜ. ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ದೇಶದ ರೈತರ ಹಿತ ಕಾಪಾಡಲು ಕೆಲವು ಬದಲಾವಣೆಗಳನ್ನು ಬಯಸಿದ್ದರು. ಆದರೆ ಮೋದಿಯವರು ಅವರು ಇಡೀ ದೇಶವನ್ನು ಕತ್ತಲಲ್ಲಿಟ್ಟು ಈ ಒಪ್ಪಂದಕ್ಕೆ ಸಹಿ ಹಾಕಲು ಹೊರಟಿದ್ದಾರೆ. ಎಲ್ಲಿದೆ ಪಾರದರ್ಶಕತೆ? ನಮ್ಮ ಪಕ್ಷದ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿಯವರು FTA ವಿರೋಧಿಸಲು ಕರೆ ನೀಡಿರುವುದನ್ನು ಸ್ವಾಗತಿಸುತ್ತೇನೆ. ನಮ್ಮ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನೂ ಬಿಜೆಪಿ ಸರ್ಕಾರದ ರೈತ ವಿರೋಧಿ ಒಪ್ಪಂದದ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. #IOpposeRCEP #NoRCEP #RCEPಬೇಡ ಎಂದು ಪೋಸ್ಟ್‌ ಮಾಡಿದ್ದಾರೆ.
ಅಂದ ಹಾಗೇ ಕೇಂದ್ರ ಸರಕಾರ, ಆರ್‌ಸಿಇಪಿ ಒಪ್ಪಂದದ ಮೂಲಕ ದೇಶದ ಕೃಷಿ ವಲಯವನ್ನು ತೆರಿಗೆ ಮುಕ್ತ ವ್ಯಾಪಾರ ವಲಯಕ್ಕೆ ಸೇರಿಸಲು ಮುಂದಾಗಿದೆ. ಇದು ದೇಶದ ಕೃಷಿ ವಲಯಕ್ಕೆ ಕಂಟಕಪ್ರಾಯವಾಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ರೈತರ ಪಾಲಿಗೆ ಇದು ಮರಣಶಾಸನವಾಗಲಿದೆ ಎಂದು ಹಲವು ಕಡೆ ಅನ್ನದಾತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೇ ಆರ್‌ಸಿಇಪಿ ಒಪ್ಪಂದ ದೇಶಕ್ಕೆ ಮಾರಕವಾಗಲಿದೆ ಎಂಬುದು ಆರ್ಥಿಕ ತಜ್ಞರ ಮಾತು. ಹೀಗಿರುವಾಗ ಆರ್‌ಸಿಇಪಿ ಒಪ್ಪಂದಕ್ಕೆ ಮುಂದಾಗಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕ್ರಮಕ್ಕೆ ಖಂಡನೆ, ಆಕ್ರೊಶ ವ್ಯಕ್ತವಾಗುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....