Homeಮುಖಪುಟಮಧ್ಯಪ್ರದೇಶ: ದಲಿತ ಸಮುದಾಯದ ಮಹಿಳಾ ಸರಪಂಚ್‌ಗೆ ಗ್ರಾಮಸಭೆಯಲ್ಲಿ ಕುರ್ಚಿ ನಿರಾಕರಣೆ

ಮಧ್ಯಪ್ರದೇಶ: ದಲಿತ ಸಮುದಾಯದ ಮಹಿಳಾ ಸರಪಂಚ್‌ಗೆ ಗ್ರಾಮಸಭೆಯಲ್ಲಿ ಕುರ್ಚಿ ನಿರಾಕರಣೆ

- Advertisement -
- Advertisement -

ದೇಶದಲ್ಲಿ ಈಗಲೂ ಚಾಲ್ತಿಯಲ್ಲಿರುವ ಜಾತಿ ತಾರತಮ್ಯದ ಘಟನೆಯೊಂದು ಬೆಳಕಿಗೆ ಬಂದಿದ್ದು, ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಅಕೌನಾ ಗ್ರಾಮ ಪಂಚಾಯತ್‌ನ ಠಾಕೂರ್ ಬಹುಸಂಖ್ಯಾತ ಪ್ರದೇಶದಲ್ಲಿ ಮೊದಲ ದಲಿತ ಮಹಿಳಾ ಸರಪಂಚರನ್ನು ನಿರಂತರವಾಗಿ ಅವಮಾನಿಸಲಾಗುತ್ತಿದೆ ಎಂದು ವರದಿಯಾಗಿದೆ.

ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ಆಕೆಯನ್ನು ರಾಷ್ಟ್ರಧ್ವಜಾರೋಹಣ ಮಾಡದಂತೆ ತಡೆದಾಗ ಈ ವಿಷಯ ಸ್ವಲ್ಪ ತಡವಾಗಿಯಾದರೂ ಬೆಳಕಿಗೆ ಬಂದಿದೆ.

ದಲಿತ ಸಮುದಾಯಕ್ಕೆ ಸೇರಿದ ಮಹಿಳಾ ಸರಪಂಚ್ ಶ್ರದ್ಧಾ ಸಿಂಗ್ ಅವರು ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರಿಗೆ ಪತ್ರ ಬರೆದಿದ್ದು, “ಸ್ವಾತಂತ್ರ್ಯ ದಿನಾಚರಣೆಯಂದು ಗ್ರಾಮ ಪಂಚಾಯಿತಿಯಲ್ಲಿ ಧ್ವಜಾರೋಹಣ ಸಮಾರಂಭವನ್ನು ನಿಗದಿಪಡಿಸಲಾಗಿದೆ. ರಾಜ್ಯ ಸರ್ಕಾರದ ಆದೇಶದ ಪ್ರಕಾರ ಧ್ವಜಾರೋಹಣವನ್ನು ಸರಪಂಚರು ನೆರವೇರಿಸಬೇಕಿತ್ತು. ಆದೇಶದ ಬಗ್ಗೆ ಪಂಚಾಯತ್ ಕಾರ್ಯದರ್ಶಿ ವಿಜಯ್ ಪ್ರತಾಪ್ ಸಿಂಗ್ ಅವರಿಗೆ ಮಾಹಿತಿ ನೀಡಲಾಗಿತ್ತು. ಆದರೆ, ಅವರು ಪಂಚಾಯತ್ ಆವರಣಕ್ಕೆ ಬರುವಷ್ಟರಲ್ಲಿ ಉಪ ಸರಪಂಚ್ ಧರ್ಮೇಂದ್ರ ಸಿಂಗ್ ಅವರು ಧ್ವಜಾರೋಹಣ ಮಾಡಿದ್ದರು” ಎಂದು ಹೇಳಿದ್ದಾರೆ.

ಈ ಘಟನೆಯು ಕೇವಲ ಮಹಿಳೆ ಎಂಬ ಕಾರಣಕ್ಕಾಗಿ ಅಲ್ಲ. ಆದರೆ, ಉದ್ದೇಶಪೂರ್ವಕವಾಗಿದೆ. ಏಕೆಂದರೆ, ತಾನು ದಲಿತ ಸಮುದಾಯಕ್ಕೆ ಸೇರಿದವಳು. ಇದು ನನ್ನ ವಿರುದ್ಧದ ಪಿತೂರಿ ಮತ್ತು ಅವಮಾನಕ್ಕೆ ಸ್ಪಷ್ಟ ಉದಾಹರಣೆ ಎಂದು ಸರ್ಪಂಚ್ ಶ್ರದ್ಧಾ ಸಿಂಗ್ ಪತ್ರದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಹಿಂದಿಯ ‘ದಿ ಮೂಕ್ನಾಯಕ್’ ಮಾಧ್ಯಮ ಸಂಸ್ಥೆ ಪ್ರತಿನಿಯೊಂದಿಗೆ ಮಾತನಾಡಿರುವ 28 ವರ್ಷದ ಸರಪಂಚ ಶ್ರದ್ಧಾ ಸಿಂಗ್, “ಆಗಸ್ಟ್ 17 ರಂದು ಗ್ರಾಮ ಸಭೆಯ ಸಮಯದಲ್ಲಿ ಮತ್ತೆ ಅವಮಾನಕ್ಕೊಳಗಾಗಿದ್ದೇನೆ” ಎಂದು ಹೇಳಿದ್ದಾರೆ. “ಸಭೆಯಲ್ಲಿ ನಾನು ಅವರ ಬಳಿ ಕುರ್ಚಿ ಕೇಳಿದಾಗ, ಉಪ ಸರಪಂಚ್ ಮತ್ತು ಕಾರ್ಯದರ್ಶಿ ಇಬ್ಬರೂ ಅದನ್ನು ನಿರಾಕರಿಸಿದರು. ‘ನಿಮಗೆ ಕುರ್ಚಿ ಬೇಕಾದರೆ, ಅದನ್ನು ಮನೆಯಿಂದ ತನ್ನಿ; ಇಲ್ಲದಿದ್ದರೆ, ನೆಲದ ಮೇಲೆ ಕುಳಿತುಕೊಳ್ಳಿ ಅಥವಾ ನಿಂತುಕೊಳ್ಳಿ ಎಂದರು” ಎಂದು ವಿವರಿಸಿದ್ದಾರೆ.

ತನ್ನನ್ನು ಹೀಗೆ ನಡೆಸಿಕೊಳ್ಳುತ್ತಿರುವುದು ಇದೇ ಮೊದಲಲ್ಲ ಎಂದು ಶ್ರದ್ಧಾ ತಿಳಿಸಿದ್ದಾರೆ. ದಲಿತ ಮಹಿಳೆಯಾಗಿ ನಾನು ಯಾವಾಗಲೂ ಅವಮಾನ ಮತ್ತು ತಾರತಮ್ಯವನ್ನು ಎದುರಿಸುತ್ತಿದ್ದೇನೆ ಎಂದು ಹೇಳಿದ್ದಾರೆ. ಆಕೆ ಹಳ್ಳಿಯಲ್ಲಿ ಯಾವುದೇ ಕೆಲಸವನ್ನು ಮಾಡಲು ಪ್ರಯತ್ನಿಸಿದಾಗ, ದಾರಿಯಲ್ಲಿ ಉದ್ದೇಶಪೂರ್ವಕವಾಗಿ ಅಡೆತಡೆಗಳನ್ನು ಹಾಕಲಾಗುತ್ತದೆ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಶ್ರದ್ಧಾ ಅವರು ಜುಲೈ 2022 ರಲ್ಲಿ ಈ ಗ್ರಾಮದ ಸರಪಂಚ್ ಆಗಿ ಆಯ್ಕೆಯಾದರು. ಗ್ರಾಮದಲ್ಲಿ ಸರಿಸುಮಾರು 1,600 ಮತದಾರರಿದ್ದಾರೆ. ಅವರಲ್ಲಿ ಶೇ.50 ರಷ್ಟು ಜನ ಠಾಕೂರ್ ಸಮುದಾಯದವರು; ಉಳಿದವರು ದಲಿತ, ಆದಿವಾಸಿ ಮತ್ತು ಒಬಿಸಿ ಸಮುದಾಯಗಳಿಗೆ ಸೇರಿದವರು. ಅವರು ಚುನಾವಣೆಯಲ್ಲಿ 58 ಮತಗಳ ಕಡಿಮೆ ಅಂತರದಿಂದ ಗೆದ್ದರು. ಆಕೆಯ ಗೆಲುವಿನಿಂದ ಕುಪಿತಗೊಂಡಿರುವ ಪ್ರಬಲ ಜಾತಿ ಜನರು ಗಲಾಟೆ ಸೃಷ್ಟಿಸಲು ಮತ್ತು ಇತರರನ್ನು ಪ್ರಚೋದಿಸಲು ಪ್ರಯತ್ನಿಸಿದ್ದಾರೆ ಎಂದು ಶ್ರದ್ಧಾ ಹೇಳಿದರು. ಆದಾಗ್ಯೂ, ಎಸ್‌ಡಿಎಂ ಮತ್ತು ಡಿಎಂ ಮಧ್ಯಸ್ಥಿಕೆಯ ನಂತರ ಈ ವಿವಾದ ಬೂದಿ ಮುಚ್ಚಿದ ಕೆಂಡಂದಂತಿದೆ.

“ಅವರು ನಡೆಸುತ್ತಿರುವ ವರ್ತನೆಯಿಂದ ತುಂಬಾ ನೋವಾಗಿದೆ. ಆದರೆ, ನಾನು ಬಿಟ್ಟುಕೊಡಲ್ಲ. ಈ ತಾರತಮ್ಯ ಮತ್ತು ಅನ್ಯಾಯದ ವಿರುದ್ಧ ಧ್ವನಿ ಎತ್ತುವುದನ್ನು ಮುಂದುವರಿಸುತ್ತೇನೆ. ನನ್ನ ಪಂಚಾಯತ್‌ನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಲು ಹೋರಾಡುತ್ತೇನೆ” ಎಂದು ಸರಪಂಚೆ ಶ್ರದ್ಧಾ ಪ್ರತಿಜ್ಞೆ ಮಾಡಿದರು.

ಜಿಲ್ಲಾಧಿಕಾರಿ, ಮಧ್ಯಪ್ರದೇಶದ ಸರಪಂಚ ಸಂಘ ಮತ್ತು ಪಂಚಾಯತ್ ರಾಜ್ ಕೌನ್ಸಿಲ್‌ಗೂ ಶ್ರದ್ಧಾ ದೂರು ಸಲ್ಲಿಸಿದ್ದಾರೆ. ಸೆಪ್ಟೆಂಬರ್ 5 ರಂದು ಭೋಪಾಲ್‌ನಲ್ಲಿ ಸಭೆಯನ್ನು ನಿಗದಿಪಡಿಸಲಾಗಿದೆ. ಅಲ್ಲಿ ಈ ವಿಷಯದ ಬಗ್ಗೆ ಚರ್ಚಿಸಲಾಗುವುದು ಎಂದು ಅವರು ಹೇಳಿದರು. ಅವರು ಶಿಸ್ತು ಕ್ರಮ ಮತ್ತು ಜಾತಿ ಆಧಾರಿತ ತಾರತಮ್ಯದಲ್ಲಿ ತೊಡಗಿರುವ ಅಧಿಕಾರಿಗಳನ್ನು ವಜಾಗೊಳಿಸುವಂತೆ ಒತ್ತಾಯಿಸುತ್ತಾರೆ.

ಈ ವಿಚಾರದಲ್ಲಿ ರಾಜ್ಯ ಸರ್ಕಾರ, ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರು ಯಾವ ಕ್ರಮಗಳನ್ನು ಕೈಗೊಳ್ಳುತ್ತಾರೆ ಮತ್ತು ದಲಿತ ಮಹಿಳಾ ಸರಪಂಚ್ ಅವರಿಗೆ ಸರಿಯಾದ ಗೌರವ ಮತ್ತು ನ್ಯಾಯ ಸಿಗುತ್ತದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಭೀಮ್ ಆರ್ಮಿ – ಭಾರತ್ ಏಕತಾ ಮಿಷನ್‌ನ ವಕೀಲ ವಿಜಯಕುಮಾರ್ ಆಜಾದ್, ಸಂಘಟನೆಯಿಂದ ಈ ಘಟನೆಗೆ ಸಂಬಂಧಿಸಿದಂತೆ ಎಲ್ಲ ಜಿಲ್ಲೆಗಳಲ್ಲಿ ಪ್ರತಿಭಟನೆ ಮತ್ತು ಮನವಿ ಪತ್ರಗಳನ್ನು ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ; ಗಾಜಾದಲ್ಲಿ ಪತ್ರಕರ್ತರ ಹತ್ಯೆ: ಇಸ್ರೇಲ್‌ ಜೊತೆಗಿನ ಸಹಕಾರ ಒಪ್ಪಂದ ಅಮಾನತಿಗೆ ಮಾಧ್ಯಮ ಹಕ್ಕುಗಳ ಸಂಘಟನೆಗಳಿಂದ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...