Homeಮುಖಪುಟ'ನಾಚಿಕೆಗೇಡಿನ ರೈತ ವಿರೋಧಿ, ಘೋರ ಅವಮಾನ..'; ಕಂಗನಾ ರಣಾವತ್ ಹೇಳಿಕೆಗೆ ರಾಹುಲ್ ಆಕ್ರೊಶ

‘ನಾಚಿಕೆಗೇಡಿನ ರೈತ ವಿರೋಧಿ, ಘೋರ ಅವಮಾನ..’; ಕಂಗನಾ ರಣಾವತ್ ಹೇಳಿಕೆಗೆ ರಾಹುಲ್ ಆಕ್ರೊಶ

- Advertisement -
- Advertisement -

ಮಂಡಿ ಸಂಸದೆ ಕಂಗನಾ ರಣಾವತ್ ಅವರು ರೈತರ ಆಂದೋಲನದ ಕುರಿತು ನೀಡಿರುವ ವಿವಾದಾತ್ಮಕ ಹೇಳಿಕೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ವಾಗ್ದಾಳಿ ನಡೆಸಿದ್ದು, “ನಾಚಿಕೆಗೇಡಿನ ರೈತ ವಿರೋಧಿ ಹೇಳಿಕೆಗಳು, ಪಶ್ಚಿಮ ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಮತ್ತು ಇಡೀ ರೈತರಿಗೆ ಮಾಡಿದ ಘೋರ ಅವಮಾನ” ಎಂದು ಹೇಳಿದ್ದಾರೆ.

ಅವರ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಟೀಕಿಸಿದ್ದಾರೆ. ಈ ನಾಚಿಕೆಗೇಡಿನ ಮತ್ತು ಅತ್ಯಂತ ಖಂಡನೀಯ ರೈತ ವಿರೋಧಿ ಸಿದ್ಧಾಂತವು ಮೋದಿ ಸರ್ಕಾರದ ಡಿಎನ್‌ಎ ಆಗಿದೆ ಎಂದು ಖರ್ಗೆ ಹೇಳಿದರು. “ರಣಾವತ್ ಅವರ ಹೇಳಿಕೆಯನ್ನು ಬಿಜೆಪಿ ಒಪ್ಪದಿದ್ದರೆ ಅವರನ್ನು ಪಕ್ಷದಿಂದ ಹೊರಹಾಕಬೇಕು” ಎಂದು ಕಾಂಗ್ರೆಸ್ ಹೇಳಿದೆ.

ಹಿಂದಿ ದೈನಿಕದೊಂದಿಗೆ ತಮ್ಮ ಸಂದರ್ಶನದ ಕ್ಲಿಪ್ ಅನ್ನು ಪೋಸ್ಟ್ ಮಾಡಿರುವ ಮಂಡಿ ಸಂಸದೆ, “ಸರ್ಕಾರವು ಬಲವಾದ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಭಾರತದಲ್ಲಿ ಬಾಂಗ್ಲಾದೇಶದಂತಹ ಪರಿಸ್ಥಿತಿ ಸ್ಫೋಟಗೊಳ್ಳಬಹುದು” ಎಂದು ಅದರಲ್ಲಿ ಅವರು ಸಲಹೆ ನೀಡಿದರು. ಈಗ ರದ್ದಾದ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಯ ಸಮಯದಲ್ಲಿ ದೇಹಗಳು ನೇತಾಡುತ್ತಿವೆ ಮತ್ತು ಅತ್ಯಾಚಾರಗಳು ನಡೆಯುತ್ತಿವೆ ಎಂದು ಅವರು ಆರೋಪಿಸಿದರು. ರೈತರ ಪ್ರತಿಭಟನೆಯ ಹಿಂದೆ “ಪಿತೂರಿ” ಯಲ್ಲಿ ಚೀನಾ ಮತ್ತು ಯುಎಸ್ ಭಾಗಿಯಾಗಿದೆ ಎಂದು ನಟಿ-ರಾಜಕಾರಣಿ ಆರೋಪಿಸಿದ್ದಾರೆ.

“ರೈತರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿರುವ ಮೋದಿ ಸರ್ಕಾರದ ಪ್ರಚಾರ ಯಂತ್ರ ನಿರಂತರವಾಗಿ ರೈತರನ್ನು ಅವಮಾನಿಸುತ್ತಿದೆ” ಎಂದು ರಾಹುಲ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“378 ದಿನಗಳ ಮ್ಯಾರಥಾನ್ ಹೋರಾಟದಲ್ಲಿ ತಮ್ಮದೇ ಆದ 700 ಜನರನ್ನು ಬಲಿಕೊಟ್ಟ ರೈತರನ್ನು ಬಿಜೆಪಿ ಸಂಸದರು ಅತ್ಯಾಚಾರಿಗಳು ಮತ್ತು ವಿದೇಶಿ ಶಕ್ತಿಗಳ ಪ್ರತಿನಿಧಿಗಳು ಎಂದು ಕರೆಯುವುದು ಪಕ್ಷದ ರೈತ ವಿರೋಧಿ ನೀತಿ ಮತ್ತು ಉದ್ದೇಶಗಳಿಗೆ ಮತ್ತೊಂದು ಪುರಾವೆಯಾಗಿದೆ” ಎಂದು ಅವರು ಹೇಳಿದರು.

“ಈ ನಾಚಿಕೆಗೇಡಿನ ರೈತ ವಿರೋಧಿ ಹೇಳಿಕೆಗಳು ಪಶ್ಚಿಮ ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಮತ್ತು ಇಡೀ ದೇಶದ ರೈತರಿಗೆ ಘೋರ ಅವಮಾನವಾಗಿದೆ, ಇದನ್ನು ಯಾವುದೇ ಸಂದರ್ಭದಲ್ಲೂ ಒಪ್ಪಿಕೊಳ್ಳಲಾಗುವುದಿಲ್ಲ. ರೈತ ಚಳವಳಿ ಹಿಂಪಡೆಯುವ ಸಂದರ್ಭದಲ್ಲಿ ರಚಿಸಲಾಗಿದ್ದ ಸರ್ಕಾರ ಸಮಿತಿಯು ಇನ್ನೂ ಶೈತ್ಯಾಗಾರದಲ್ಲಿದೆ, ಎಂಎಸ್‌ಪಿ ಕುರಿತು ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಲು ಇಲ್ಲಿಯವರೆಗೆ ಸಾಧ್ಯವಾಗಿಲ್ಲ, ಹುತಾತ್ಮ ರೈತರ ಕುಟುಂಬಗಳಿಗೆ ಯಾವುದೇ ಪರಿಹಾರ ನೀಡಿಲ್ಲ. ಅದಕ್ಕಿಂತ ಹೆಚ್ಚಾಗಿ ಅವರ ಚಾರಿತ್ರ್ಯಹತ್ಯೆ ನಿರಂತರವಾಗಿ ನಡೆಯುತ್ತಿದೆ” ಎಂದರು.

“ಅನ್ನದಾತರನ್ನು ಅಗೌರವಿಸುವ ಮೂಲಕ ಮತ್ತು ಅವರ ಘನತೆಯ ಮೇಲೆ ದಾಳಿ ಮಾಡುವ ಮೂಲಕ ಮೋದಿ ಸರ್ಕಾರ ರೈತರಿಗೆ ಮಾಡಿದ ದ್ರೋಹವನ್ನು ಮರೆಮಾಡಲು ಸಾಧ್ಯವಿಲ್ಲ. ನರೇಂದ್ರ ಮೋದಿ ಮತ್ತು ಬಿಜೆಪಿ ಎಷ್ಟೇ ಪಿತೂರಿ ನಡೆಸಿದರೂ ಪರವಾಗಿಲ್ಲ. ಇಂಡಿಯಾ ರೈತರಿಗೆ ಎಂಎಸ್‌ಪಿಯ ಕಾನೂನುಬದ್ಧ ಗ್ಯಾರಂಟಿ ಸಿಗುವಂತೆ ಮಾಡುತ್ತದೆ” ಎಂದು ಅವರು ಹೇಳಿದರು.

ಈ ವಿಚಾರವಾಗಿ ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಸಂಸತ್ತಿನಲ್ಲಿ ರೈತರನ್ನು ಆಂದೋಲನಜೀವಿ ಮತ್ತು ಪರ್ಜೀವಿ (ಪರಾವಲಂಬಿಗಳು) ಎಂದು ಕರೆದು ಅವಮಾನಿಸಿರುವ ಪ್ರಧಾನಿ ಮೋದಿ ಅವರು ಸಂಸತ್ತಿನಲ್ಲಿ ಹುತಾತ್ಮರಾದ ರೈತರಿಗಾಗಿ ಎರಡು ನಿಮಿಷ ಮೌನ ಆಚರಿಸಲು ನಿರಾಕರಿಸಿದರು ಎಂದು ಆರೋಪಿಸಿದರು.

“ಮೋದಿ ಜಿ ಎಂಎಸ್‌ಪಿ ಸಮಿತಿಯನ್ನು ರಚಿಸುವ ಮತ್ತು ರೈತರ ಆದಾಯವನ್ನು ದ್ವಿಗುಣಗೊಳಿಸುವ ಸುಳ್ಳು ಭರವಸೆಯನ್ನೂ ನೀಡಿದ್ದರು. ಮೋದಿಜಿಯೇ ಇದನ್ನೆಲ್ಲಾ ಮಾಡಲು ಸಾಧ್ಯವಾದಾಗ, ಹುತಾತ್ಮ ರೈತರನ್ನು ಅವಮಾನಿಸುವುದನ್ನು ಬಿಟ್ಟು ಅವರ ಬೆಂಬಲಿಗರಿಂದ ದೇಶ ಇನ್ನೇನು ನಿರೀಕ್ಷಿಸುತ್ತದೆ” ಎಂದು ಖರ್ಗೆ ಹೇಳಿದರು.

“ಈ ನಾಚಿಕೆಗೇಡಿನ ಮತ್ತು ಅತ್ಯಂತ ಖಂಡನೀಯ ರೈತ ವಿರೋಧಿ ಸಿದ್ಧಾಂತವು ಮೋದಿ ಸರ್ಕಾರದ ಡಿಎನ್‌ಎ” ಎಂದು ಅವರು ಹೇಳಿದರು.

ಇದನ್ನೂ ಓದಿ; ರೈತರ ಪ್ರತಿಭಟನೆ ಕುರಿತು ಕಂಗನಾ ವಿವಾದಾತ್ಮಕ ಹೇಳಿಕೆ : ಅಂತರ ಕಾಯ್ದುಕೊಂಡ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...