Homeಮುಖಪುಟಅಂತರಾಷ್ಟ್ರೀಯ ಸಮುದ್ರ ಗಡಿ ರೇಖೆ ದಾಟಿದ ಆರೋಪ; ಮತ್ತೆ ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

ಅಂತರಾಷ್ಟ್ರೀಯ ಸಮುದ್ರ ಗಡಿ ರೇಖೆ ದಾಟಿದ ಆರೋಪ; ಮತ್ತೆ ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

- Advertisement -
- Advertisement -

ಅಂತರಾಷ್ಟ್ರೀಯ ಸಮುದ್ರ ಗಡಿ ರೇಖೆ (ಐಎಂಬಿಎಲ್) ಉಲ್ಲಂಘನೆ ಆರೋಪದ ಮೇಲೆ ಮೂರು ದಿನಗಳ ಹಿಂದಷ್ಟೇ 11 ಜನ ತಮಿಳುನಾಡು ಮೀನುಗಾರರನ್ನು ಬಂಧಿಸಿದ್ದ ಶ್ರೀಲಂಕಾ ನೌಕಾಪಡೆಯು, ಇಂದು ರಾಮೇಶ್ವರಂನಿಂದ ಬಂದಿದ್ದ ಎಂಟು ಭಾರತೀಯ ಮೀನುಗಾರರನ್ನು ಒಳಗೊಂಡಿರುವ ಮೀನುಗಾರಿಕಾ ದೋಣಿಯನ್ನು ಸೆರೆ ಹಿಡಿದಿದೆ.

ರಾಮೇಶ್ವರಂನಿಂದ ಸುಮಾರು 500 ಯಾಂತ್ರೀಕೃತ ದೋಣಿಗಳು ಸೋಮವಾರ ಸಮುದ್ರಕ್ಕೆ ಇಳಿದಿದ್ದು, ಕೆಲವು ಮೀನುಗಾರಿಕಾ ದೋಣಿಗಳು ಶ್ರೀಲಂಕಾದ ಸಮುದ್ರವನ್ನು ಪ್ರವೇಶಿಸಿವೆ ಎಂದು ಹೇಳಲಾಗಿದೆ. ಬಂಧಿತ ಮೀನುಗಾರರನ್ನು ಮತ್ತು ದೋಣಿಯನ್ನು ಮನ್ನಾರ್ ಬಂದರಿಗೆ ಕೊಂಡೊಯ್ಯಲಾಗುತ್ತಿದ್ದು, ಹೆಚ್ಚಿನ ತನಿಖೆಗಾಗಿ ಮೀನುಗಾರಿಕೆ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರಿಸಲಾಗುವುದು.

ಗಮನಾರ್ಹವೆಂದರೆ, ಈ ಇತ್ತೀಚಿನ ಆತಂಕಕಾರಿ ಬೆಳವಣಿಗೆಯಲ್ಲಿ ನೌಕಾಪಡೆಯು ಈ ವರ್ಷದಲ್ಲಿ ಒಟ್ಟು 46 ಭಾರತೀಯ ಟ್ರಾಲರ್‌ಗಳನ್ನು ಮತ್ತು 341 ಭಾರತೀಯ ಮೀನುಗಾರರನ್ನು ಐಎಂಬಿಎಲ್ ಉಲ್ಲಂಘನೆಗಾಗಿ ವಶಪಡಿಸಿಕೊಂಡಿದೆ. ಭಾರತೀಯ ಮೀನುಗಾರರನ್ನು ಬಂಧಿಸುವ ನಿರಂತರ ಕ್ರಮವನ್ನು ಮೀನುಗಾರರ ಸಂಘಗಳು ಖಂಡಿಸಿವೆ ಮತ್ತು ಅವರನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.

ಮೂರು ದಿನಗಳ ಹಿಂದೆ 11 ಜನರ ಬಂಧನ

ಮೂರು ದಿನಗಳ ಹಿಂದೆ (ಆ.24) ಅಂತರಾಷ್ಟ್ರೀಯ ಸಮುದ್ರ ಗಡಿ ರೇಖೆಯನ್ನು ದಾಟಿ ಶ್ರೀಲಂಕಾದ ನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಶ್ರೀಲಂಕಾ ನೌಕಾಪಡೆಯು ನಾಗಪಟ್ಟಣಂ ಜಿಲ್ಲೆಯ ಹನ್ನೊಂದು ಮೀನುಗಾರರನ್ನು ಶುಕ್ರವಾರ ನಸುಕಿನಲ್ಲಿ ಬಂಧಿಸಿತ್ತು. ಕಾನೂನು ಪ್ರಕ್ರಿಯೆಗಾಗಿ ಅವರನ್ನು ಶ್ರೀಲಂಕಾಕ್ಕೆ ಕರೆದೊಯ್ಯಲಾಯಿತು.

ಬಂಧಿತ ಮೀನುಗಾರರಲ್ಲಿ ಏಳು ಮಂದಿ ಅಕ್ಕರೈಪೆಟ್ಟೈ, ಮೂವರು ನಂಬಿಯಾರ್ ನಗರ ಮತ್ತು ಒಬ್ಬರು ನಾಗಪಟ್ಟಣಂ ಜಿಲ್ಲೆಯ ಕಲ್ಲಾರ್‌ನವರು. ಅವರು ಗುರುವಾರ ರಾತ್ರಿ ಯಾಂತ್ರೀಕೃತ ದೋಣಿಯಲ್ಲಿ ಸಮುದ್ರಕ್ಕೆ ತೆರಳಿದರು ಮತ್ತು ಕೋಡಿಯಾಕರೈ (ಪಾಯಿಂಟ್ ಕ್ಯಾಲಿಮೆರ್) ನಿಂದ ಆಗ್ನೇಯಕ್ಕೆ 12 ನಾಟಿಕಲ್ ಮೈಲುಗಳಷ್ಟು ಆಗ್ನೇಯಕ್ಕೆ ಮೀನುಗಾರಿಕೆ ನಡೆಸುತ್ತಿದ್ದಾಗ ಶ್ರೀಲಂಕಾ ನೌಕಾಪಡೆಯ ಉತ್ತರ ನೌಕಾದಳದ ತಂಡವು ಗಡಿ ದಾಟಲು ಅವರನ್ನು ಹಿಡಿದಿತ್ತು.

ನೌಕಾಪಡೆ ಸಿಬ್ಬಂದಿ ಮೀನುಗಾರರನ್ನು ವಶಕ್ಕೆ ಪಡೆದು, ದೋಣಿಯನ್ನು ವಶಪಡಿಸಿಕೊಂಡು ಕಂಗೆಸಂತುರೈ ಮೀನುಗಾರಿಕಾ ಬಂದರಿಗೆ ಕೊಂಡೊಯ್ಯಲಾಯಿತು. ನಂತರ, ಬಂಧಿತ ಮೀನುಗಾರರನ್ನು ಮೈಲಿಡ್ಡಿಯಲ್ಲಿರುವ ಶ್ರೀಲಂಕಾದ ಮೀನುಗಾರಿಕೆ ಮತ್ತು ಜಲ ಸಂಪನ್ಮೂಲ ಇಲಾಖೆಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು.

ಅಕ್ಕರೈಪೇಟೆಯ ಮೀನುಗಾರ ಪಂಚಾಯತ್ ಪ್ರತಿನಿಧಿಗಳು ಶನಿವಾರ ನಾಗಪಟ್ಟಣಂ ಜಿಲ್ಲಾಧಿಕಾರಿ ಪಿ.ಆಕಾಶ್ ಮತ್ತು ಮೀನುಗಾರಿಕೆ ಮತ್ತು ಮೀನುಗಾರರ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಭೇಟಿ ಮಾಡಿ ಮೀನುಗಾರರನ್ನು ಮತ್ತು ಅವರ ವಶಪಡಿಸಿಕೊಂಡ ದೋಣಿಯನ್ನು ಬಿಡುಗಡೆ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಧ್ಯಸ್ಥಿಕೆಗೆ ಒತ್ತಾಯಿಸಿದರು. ಘಟನೆಯ ಕುರಿತು ಚೆನ್ನೈನಲ್ಲಿರುವ ಮೀನುಗಾರಿಕೆ ಮತ್ತು ಮೀನುಗಾರರ ಕಲ್ಯಾಣ ಇಲಾಖೆಯ ಪ್ರಧಾನ ಕಚೇರಿಗೆ ವರದಿ ಸಲ್ಲಿಸಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಟ್ಟಾಲಿ ಮಕ್ಕಳ್ ಕಚ್ಚಿ ಅಧ್ಯಕ್ಷ ಅನ್ಬುಮಣಿ ರಾಮದಾಸ್ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ತಮಿಳುನಾಡು ರಾಜ್ಯ ಕಾರ್ಯದರ್ಶಿ ಆರ್ ಮುತರಸನ್ ಮುಂತಾದ ನಾಯಕರು ಭಾರತೀಯ ಮೀನುಗಾರರ ಬಂಧನವನ್ನು ಖಂಡಿಸಿದ್ದಾರೆ. ಈ ವಿಷಯದಲ್ಲಿ ಸರ್ಕಾರಗಳು ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ; ‘ಏನೇ ಆಗಲಿ, ಈ ಆರೋಪಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು..’; ಮಲಯಾಳಂ ನಟ ಪೃಥ್ವಿರಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...