Homeಮುಖಪುಟಹೈದರಾಬಾದ್ | ರಾಜಕೀಯ ಕಿತ್ತಾಟಕ್ಕೆ ಕಾರಣವಾದ 'HYDRA' ಒತ್ತುವರಿ ತೆರವು

ಹೈದರಾಬಾದ್ | ರಾಜಕೀಯ ಕಿತ್ತಾಟಕ್ಕೆ ಕಾರಣವಾದ ‘HYDRA’ ಒತ್ತುವರಿ ತೆರವು

"ನನಗೆ ಗುಂಡಿಕ್ಕಿ, ಆದರೆ, ಕಾಲೇಜು ಕೆಡವಬೇಡಿ" -ಅಕ್ಬರುದ್ದೀನ್ ಓವೈಸಿ

- Advertisement -
- Advertisement -

ಮಹಾನಗರ ಹೈದರಾಬಾದ್‌ನಲ್ಲಿ ಕೆರೆಗಳು ಸೇರಿದಂತೆ ಜಲಮೂಲಗಳನ್ನು ಆಕ್ರಮಿಸಿಕೊಂಡು ಕಟ್ಟಿರುವ ಕಟ್ಟಡಗಳು ಮತ್ತು ಇತರ ನಿರ್ಮಾಣಗಳ ತೆರವು ಕಾರ್ಯಾಚರಣೆ ಆಡಳಿತರೂಢ ಕಾಂಗ್ರೆಸ್, ಪ್ರತಿಪಕ್ಷ ಬಿಆರ್‌ಎಸ್ ಮತ್ತು ಅದರ ಮಿತ್ರಪಕ್ಷ ಎಐಎಂಐಎಂ ಹಾಗೂ ಬಿಜೆಪಿ ನಡುವೆ ದೊಡ್ಡ ರಾಜಕೀಯ ಕಿತ್ತಾಟಕ್ಕೆ ಕಾರಣವಾಗಿದೆ.

ಪ್ರಸಿದ್ದ ಹುಸೈನ್ ಸಾಗರ್ ಕೆರೆ ಸೇರಿದಂತೆ ವಿವಿಧ ಜಲಮೂಲಗಳ ಸುತ್ತಮುತ್ತ ಕಟ್ಟಿರುವ ಕಟ್ಟಡಗಳ ತೆರವು ಕಾರ್ಯಾಚರಣೆಯ ಉಸ್ತುವಾರಿಯನ್ನು ತೆಲಂಗಾಣ ಸರ್ಕಾರ Hyderabad Disaster Response and Assets Monitoring and Protection Agency(HYDRA)ಗೆ ನೀಡಿದೆ. ಹಾಗಾಗಿ, ಈ ಕಾರ್ಯಾಚರಣೆಯನ್ನು ‘ಹೈಡ್ರಾ’ (HYDRA) ಕಾರ್ಯಾಚರಣೆ ಎಂದು ಕರೆಯಲಾಗುತ್ತಿದೆ.

ತೆಲಂಗಾಣ ಸರ್ಕಾರ ಇತ್ತೀಚೆಗೆ ರಚಿಸಿರುವ ‘ಹೈಡ್ರಾ’ ಐತಿಹಾಸಿಕ ಬಮ್-ರುಕ್ನ್-ಉದ್-ದೌಲಾ ಕೆರೆಯ ಸುತ್ತಮುತ್ತಲಿದ್ದ ನಟ ನಾಗಾರ್ಜುನ ಅವರ ಎನ್-ಕನ್ವೆನ್ಷನ್ ಸೆಂಟರ್, ಎಐಎಂಐಎಂ ಶಾಸಕ ಮೊಹಮ್ಮದ್ ಮುಬೀನ್ ಮತ್ತು ಎಂಎಲ್‌ಸಿ ಮಿರ್ಜಾ ರಹಮತ್ ಬೇಗ್ ಅವರ ಒಡೆತನದ ಕಟ್ಟಡಗಳು, ಇತರ ಜಲಮೂಲಗಳ ಮೇಲಿದ್ದ ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ನಾಯಕ ಪಲ್ಲಂ ರಾಜು ಅವರ ಸಹೋದರ ಪಲ್ಲಂ ಆನಂದ್, ಕಾವೇರಿ ಸೀಡ್ಸ್ ಮಾಲೀಕ ಮತ್ತು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಾಜಿ ಸದಸ್ಯ ಜಿವಿ ಭಾಸ್ಕರ್ ರಾವ್ ಹಾಗೂ ಮಂಥನಿ ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧಿಸಿದ ಬಿಜೆಪಿ ಮುಖಂಡ ಸುನೀಲ್ ರೆಡ್ಡಿ ಅವರ ಕಟ್ಟಡಗಳನ್ನು ನೆಲಸಮಗೊಳಿಸಿ, ಇದುವರೆಗೆ 43 ಎಕರೆ ಭೂಮಿಯನ್ನು ಮರಳಿ ಪಡೆದಿದೆ.

ಐಪಿಎಸ್ ಅಧಿಕಾರಿ ಎ.ವಿ.ರಂಗನಾಥ್ ನೇತೃತ್ವದ ಹೈಡ್ರಾ ಕಳೆದೆರಡು ವಾರಗಳಿಂದ ನಗರದ ಮತ್ತು ಸುತ್ತಮುತ್ತಲಿನ ಜಲಮೂಲಗಳ ಅತಿಕ್ರಮಣ ಭೂಮಿಯನ್ನು ಮರಳಿ ಪಡೆಯಲು ಅಕ್ರಮ ಕಟ್ಟಡಗಳನ್ನು ನೆಲಸಮ ಮಾಡುತ್ತಿದೆ.

ರಾಜಕೀಯ ಪಕ್ಷಗಳ ಭೇದವಿಲ್ಲದೆ ಕೆರೆ, ಕೊಳ ಮತ್ತಿತರ ಜಲಮೂಲಗಳ ಒತ್ತುವರಿ ತೆರವು ಮಾಡಲಾಗುವುದು ಎಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಹೇಳಿದ್ದಾರೆ. ಇತ್ತೀಚೆಗೆ, ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಸೆಂಟರ್ (NRSC) ಹೈದರಾಬಾದ್‌ನಲ್ಲಿ 1979 ಮತ್ತು 2024 ರ ನಡುವೆ ಜಲಮೂಲಗಳ ವ್ಯಾಪ್ತಿಯು 61 ಪ್ರತಿಶತದಷ್ಟು ಕಡಿಮೆಯಾಗಿದೆ ಎಂದು ಬಹಿರಂಗಪಡಿಸಿತ್ತು.

ಅಸಾದುದ್ದೀನ್ ಓವೈಸಿ ವಿರೋಧ

ಹೈದರಾಬಾದ್ ಸಂಸದ ಹಾಗೂ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರು ನಗರದಾದ್ಯಂತ ನಡೆಸುತ್ತಿರುವ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಟೀಕಿಸಿದ್ದಾರೆ.

ಅತಿಕ್ರಮಣ ಭೂಮಿಯಲ್ಲಿ ನಿರ್ಮಿಸಲಾಗಿರುವ ಸರ್ಕಾರಿ ಕಟ್ಟಡಗಳನ್ನೂ ಕಾಂಗ್ರೆಸ್ ಸರ್ಕಾರ ನೆಲಸಮಗೊಳಿಸುತ್ತಾ? ಎಂದು ಅವರು ಪ್ರಶ್ನಿಸಿದ್ದಾರೆ. ಹೈದರಾಬಾದ್ ಮಹಾನಗರ ಪಾಲಿಕೆ (ಜಿಹೆಚ್‌ಎಂಸಿ) ಕಟ್ಟಡವನ್ನೂ ಕೂಡ ಕೆರೆಯ ಮೇಲೆ ನಿರ್ಮಿಸಲಾಗಿದೆ. ಅದನ್ನೂ ಸರ್ಕಾರ ಕೆಡವಲಿದೆಯಾ? ಎಂದು ಓವೈಸಿ ಕೇಳಿದ್ದಾರೆ.

ಬಿಆರ್‌ಎಸ್ ಶಾಸಕ ಮಾಧವರಂ ಕೃಷ್ಣ ರಾವ್ ಅವರು ಒತ್ತುವರಿ ತೆರವು ಕಾರ್ಯಾಚರಣೆಯನ್ನು ಸ್ವಾಗತಿಸಿದ್ದಾರೆ. ಆದರೆ, ಈಗ ಅತಿಕ್ರಮಿತ ಆಸ್ತಿ ಎಂದು ಪರಿಗಣಿಸಲಾಗಿರುವ ಭೂಮಿಯನ್ನು ಖರೀದಿಸಿದ ಅಥವಾ ಮನೆಗಳನ್ನು ನಿರ್ಮಿಸಿದ ವ್ಯಕ್ತಿಗಳ ಬಗ್ಗೆ ಅವರು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. “ಎಫ್‌ಟಿಎಲ್ ಅಥವಾ ಬಫರ್ ವಲಯದಲ್ಲಿರುವ ಹೆಚ್ಚಿನ ಆಸ್ತಿಗಳನ್ನು ಸಾಮಾನ್ಯ ಜನರು ಖರೀದಿಸಿದ್ದಾರೆ. ಈ ಜನರಿಗೆ ಬಿಲ್ಡರ್‌ಗಳಿಂದ ಪರಿಹಾರವನ್ನು ಹೈಡ್ರಾ ಕೊಡಿಸುತ್ತಾ? ಎಂದು ರಾವ್ ಪ್ರಶ್ನಿಸಿದ್ದಾರೆ.

ಅಕ್ರಮ ಎಂದು ಗೊತ್ತಿದ್ದರೂ ಜಲಮೂಲಗಳ ಮೇಲೆ ಕಟ್ಟಡಗಳನ್ನು ಕಟ್ಟಲು ಅನುಮತಿ ನೀಡಿರುವ ವಿವಿಧ ಇಲಾಖೆಗಳ ಅಧಿಕಾರಿಗಳ ವಿರುದ್ದ ಸರ್ಕಾರ ಕ್ರಮ ಕೈಗೊಳ್ಳಲಿದೆಯಾ? ಆರಂಭಿಕವಾಗಿ ಈ ಅತಿಕ್ರಮಣಗಳಿಗೆ ಮಂಜೂರಾತಿ ನೀಡಿದ ನೀರಾವರಿ, ಕಂದಾಯ, ಪುರಸಭೆ ಅಥವಾ ಹೆಚ್‌ಎಂಡಿಎ ಇಲಾಖೆಗಳ ಅಧಿಕಾರಿಗಳ ವಿರುದ್ಧ ಸರ್ಕಾರ ಯಾವ ಕ್ರಮ ಕೈಗೊಳ್ಳಲಿದೆ? ಎಂದು ರಾವ್ ಕೇಳಿದ್ದಾರೆ.

ಫಾತಿಮಾ ಓವೈಸಿ ಕಾಲೇಜು ತೆರವು?

ಹೈಡ್ರಾ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ಹೆಚ್ಚು ಗಮನ ಸೆಳೆದಿರುವುದು ಸಲ್ಕಾಂ ಚೆರುವು ಅಥವಾ ಸಲ್ಕಂ ಕೆರೆ ಮೇಲೆ ಇರುವ ಫಾತಿಮಾ ಓವೈಸಿ ಕಾಲೇಜು ಆಗಿದೆ. ಫಾತಿಮಾ ಎಂಬುವುದು ಎಐಎಂಐಎಂನ ಪ್ರಭಾವಿ  ಶಾಸಕ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಸಹೋದರ ಅಕ್ಬರುದ್ದೀನ್ ಓವೈಸಿ ಅವರ ಮಗಳ ಹೆಸರಾಗಿದೆ. ಮಗಳ ಹೆಸರಿನಲ್ಲಿ ಅಕ್ಬರುದ್ದೀನ್ ಓವೈಸಿ ಕಾಲೇಜು ಕಟ್ಟಿದ್ದಾರೆ. ಈ ಕಾಲೇಜನ್ನು ತೆರವುಗೊಳಿಸುವ ಧೈರ್ಯ ಹೈಡ್ರಾ ಅಥವಾ ಸರ್ಕಾರ ಇದೆಯಾ? ಎಂದು ತೆಲಂಗಾಣ ಬಿಜೆಪಿ ಪ್ರಶ್ನಿಸಿದೆ.

ಗುಂಡಿಕ್ಕಿ, ಕಾಲೇಜು ತೆರವುಗೊಳಿಸಬೇಡಿ -ಓವೈಸಿ

ಹೈಡ್ರಾ ತನ್ನ ಕಾಲೇಜು ತೆರವುಗೊಳಿಸುವ ಸಾಧ್ಯತೆ ಬಗ್ಗೆ ಪ್ರತಿಕ್ರಿಯಿಸಿರುವ ಅಕ್ಬರುದ್ದೀನ್ ಓವೈಸಿ, “ಬೇಕಾದರೆ ನನಗೆ ಗುಂಡಿಕ್ಕಿ, ಆದರೆ, ನನ್ನ ಕಾಲೇಜು ನೆಲಸಮಗೊಳಿಸಬೇಡಿ” ಎಂದಿದ್ದಾರೆ. ನಟ ನಾಗಾರ್ಜುನ ಅವರ ಕನ್ವೆನ್ಷನ್ ಸೆಂಟರ್ ಧ್ವಂಸಗೊಳಿಸಿರುವ ಸರ್ಕಾರ, ಓವೈಸಿಯ ಕಾಲೇಜು ತೆರವುಗೊಳಿಸಲಿದೆಯಾ? ಎಂಬ ಕುತೂಹಲ ಮೂಡಿದೆ.

ಹೊಸ ಸಚಿವಾಲಯ ಕೆರೆಯ ಮೇಲಿದೆ – ಬಂಡಿ ಸಂಜಯ್ 

ಈ ಹಿಂದಿನ ಕೆಸಿಆರ್ ಸರ್ಕಾರ ಭವ್ಯವಾಗಿ ನಿರ್ಮಿಸಿರುವ ತೆಲಂಗಾಣದ ಹೊಸ ಸೆಕ್ರೆಟ್ರಿಯೇಟ್ ಅಥವಾ ಸಚಿವಾಲಯದ ಕಟ್ಟಡ ಹುಸೈನ್ ಸಾಗರ್ ಕೆರೆಯ ಮೇಲಿದೆ ಎಂದು ಈ ಹಿಂದೆ ತೆಲಂಗಾಣ ಬಿಜೆಪಿಯ ಮಾಜಿ ಅಧಕ್ಷ ಬಂಡಿ ಸಂಜಯ್ ಆರೋಪಿಸಿದ್ದರು. ಮೇ 1, 2023ರಂದು ಸಚಿವಾಲಯದ ಉದ್ಘಾಟನೆಯಂದು ಅವರು ಹುಸೈನ್ ಸಾಗರ್ ಕೆರೆಯನ್ನು ಆಕ್ರಮಿಸಿಕೊಂಡ ಬಗ್ಗೆ ಮ್ಯಾಪ್ ಹಂಚಿಕೊಂಡಿದ್ದರು.

ಅಸಲಿಗೆ ಸಚಿವಾಲಯದ ಮುಂದಿರುವ ಲುಂಬಿನ ಪಾರ್ಕ್ ಕೆರೆಯನ್ನು ಆಕ್ರಮಿಸಿಕೊಂಡು ನಿರ್ಮಿಸಿದಂತೆ ತೋರುತ್ತಿದೆ. ಈ ಬಗ್ಗೆ ಅಧಿಕೃತ ಮಾಹಿತಿಯಿಲ್ಲ.

ಇನ್ನೂ ಇದೇ ಬಂಡಿ ಸಂಜಯ್ ಹೊಸ ಸಚಿವಾಲಯದ ಕಟ್ಟಡವನ್ನು ನೆಲಸಮಗೊಳಿಸುವುದಾಗಿಯೂ ಹೇಳಿಕೆ ಕೊಟ್ಟಿದ್ದರು. ಹೊಸ ಕಟ್ಟಡ ಗುಂಬಝ್‌ಗಳನ್ನು ಹೊಂದಿದ್ದು ನಿಝಾಮರ ಶೈಲಿಯಲ್ಲಿದೆ. ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಆ ಗುಂಬಝ್‌ಗಳನ್ನು ಉರುಳಿಸುತ್ತೇವೆ ಎಂದು ಕೋಮು ದ್ವೇಷದ ಹೇಳಿಕೆಯನ್ನು ಸಂಜಯ್ ನೀಡಿದ್ದರು.

ಸಾರ್ವಜನಿಕರಿಂದ ಮಿಶ್ರ ಪ್ರತಿಕ್ರಿಯೆ

ಹೈದರಾಬಾದ್ ನಗರ ಮತ್ತು ಸುತ್ತಮುತ್ತಲಿನ 18 ಜಾಗಗಳಲ್ಲಿ ಹೈಡ್ರಾ ತೆರವು ಕಾರ್ಯಾಚರಣೆ ಕೈಗೊಂಡಿದೆ. ಇದರಿಂದ ಮನೆ ಸೇರಿದಂತೆ ಕಟ್ಟಡಗಳನ್ನು ಕಳೆದುಕೊಂಡವರು ಸರ್ಕಾರ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದರೆ, ಇತರ ಸಾರ್ವಜನಿಕರು ಸರ್ಕಾರ ಒಳ್ಳೆಯ ಕೆಲಸ ಮಾಡಿದೆ ಎನ್ನುತ್ತಿದ್ದಾರೆ.

ತೆಲಂಗಾಣದಲ್ಲಿ ಕಾಂಗ್ರೆಸ್‌, ಬಿಜೆಪಿ, ಬಿಆರ್‌ಎಸ್ ಮತ್ತು ಎಐಎಂಐಎಂ ಪ್ರಮುಖ ರಾಜಕೀಯ ಪಕ್ಷಗಳಾಗಿವೆ. ಈ ಪೈಕಿ ಕಾಂಗ್ರೆಸ್ ಪ್ರಸ್ತುತ ಆಧಿಕಾರದಲ್ಲಿದೆ. ಬಿಆರ್‌ಎಸ್‌ ಪ್ರತಿಪಕ್ಷ ಸ್ಥಾನದಲ್ಲಿ ಕುಳಿತಿದೆ. ಎಐಎಂಐಎಂ ಹಿಂದಿನಿಂದಲೂ ಬಿಆರ್‌ಎಸ್‌ ಮಿತ್ರ ಪಕ್ಷವಾಗಿರುವುದರಿಂದ ಅದರ ಜೊತೆ ಪ್ರತಿಪಕ್ಷ ಸ್ಥಾನದಲ್ಲಿದೆ. ಬಿಜೆಪಿ ನಾಲ್ಕನೇ ಸ್ಥಾನದಲ್ಲಿದೆ. ಪ್ರಸ್ತುತ ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ಒತ್ತುವರಿ ತೆರವು ಕಾರ್ಯಾಚರಣೆ ಜಲಮೂಲಗಳ ರಕ್ಷಣೆಗಿಂತ ರಾಜಕೀಯ ಶೀತಲಸಮರವಾಗಿ ಮಾರ್ಪಟ್ಟಿದೆ.

ಇದನ್ನೂ ಓದಿ : ರೈತರ ಪ್ರತಿಭಟನೆ ಕುರಿತು ಕಂಗನಾ ವಿವಾದಾತ್ಮಕ ಹೇಳಿಕೆ : ಅಂತರ ಕಾಯ್ದುಕೊಂಡ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...