Homeಮುಖಪುಟಹೈದರಾಬಾದ್ | ರಾಜಕೀಯ ಕಿತ್ತಾಟಕ್ಕೆ ಕಾರಣವಾದ 'HYDRA' ಒತ್ತುವರಿ ತೆರವು

ಹೈದರಾಬಾದ್ | ರಾಜಕೀಯ ಕಿತ್ತಾಟಕ್ಕೆ ಕಾರಣವಾದ ‘HYDRA’ ಒತ್ತುವರಿ ತೆರವು

"ನನಗೆ ಗುಂಡಿಕ್ಕಿ, ಆದರೆ, ಕಾಲೇಜು ಕೆಡವಬೇಡಿ" -ಅಕ್ಬರುದ್ದೀನ್ ಓವೈಸಿ

- Advertisement -
- Advertisement -

ಮಹಾನಗರ ಹೈದರಾಬಾದ್‌ನಲ್ಲಿ ಕೆರೆಗಳು ಸೇರಿದಂತೆ ಜಲಮೂಲಗಳನ್ನು ಆಕ್ರಮಿಸಿಕೊಂಡು ಕಟ್ಟಿರುವ ಕಟ್ಟಡಗಳು ಮತ್ತು ಇತರ ನಿರ್ಮಾಣಗಳ ತೆರವು ಕಾರ್ಯಾಚರಣೆ ಆಡಳಿತರೂಢ ಕಾಂಗ್ರೆಸ್, ಪ್ರತಿಪಕ್ಷ ಬಿಆರ್‌ಎಸ್ ಮತ್ತು ಅದರ ಮಿತ್ರಪಕ್ಷ ಎಐಎಂಐಎಂ ಹಾಗೂ ಬಿಜೆಪಿ ನಡುವೆ ದೊಡ್ಡ ರಾಜಕೀಯ ಕಿತ್ತಾಟಕ್ಕೆ ಕಾರಣವಾಗಿದೆ.

ಪ್ರಸಿದ್ದ ಹುಸೈನ್ ಸಾಗರ್ ಕೆರೆ ಸೇರಿದಂತೆ ವಿವಿಧ ಜಲಮೂಲಗಳ ಸುತ್ತಮುತ್ತ ಕಟ್ಟಿರುವ ಕಟ್ಟಡಗಳ ತೆರವು ಕಾರ್ಯಾಚರಣೆಯ ಉಸ್ತುವಾರಿಯನ್ನು ತೆಲಂಗಾಣ ಸರ್ಕಾರ Hyderabad Disaster Response and Assets Monitoring and Protection Agency(HYDRA)ಗೆ ನೀಡಿದೆ. ಹಾಗಾಗಿ, ಈ ಕಾರ್ಯಾಚರಣೆಯನ್ನು ‘ಹೈಡ್ರಾ’ (HYDRA) ಕಾರ್ಯಾಚರಣೆ ಎಂದು ಕರೆಯಲಾಗುತ್ತಿದೆ.

ತೆಲಂಗಾಣ ಸರ್ಕಾರ ಇತ್ತೀಚೆಗೆ ರಚಿಸಿರುವ ‘ಹೈಡ್ರಾ’ ಐತಿಹಾಸಿಕ ಬಮ್-ರುಕ್ನ್-ಉದ್-ದೌಲಾ ಕೆರೆಯ ಸುತ್ತಮುತ್ತಲಿದ್ದ ನಟ ನಾಗಾರ್ಜುನ ಅವರ ಎನ್-ಕನ್ವೆನ್ಷನ್ ಸೆಂಟರ್, ಎಐಎಂಐಎಂ ಶಾಸಕ ಮೊಹಮ್ಮದ್ ಮುಬೀನ್ ಮತ್ತು ಎಂಎಲ್‌ಸಿ ಮಿರ್ಜಾ ರಹಮತ್ ಬೇಗ್ ಅವರ ಒಡೆತನದ ಕಟ್ಟಡಗಳು, ಇತರ ಜಲಮೂಲಗಳ ಮೇಲಿದ್ದ ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ನಾಯಕ ಪಲ್ಲಂ ರಾಜು ಅವರ ಸಹೋದರ ಪಲ್ಲಂ ಆನಂದ್, ಕಾವೇರಿ ಸೀಡ್ಸ್ ಮಾಲೀಕ ಮತ್ತು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಾಜಿ ಸದಸ್ಯ ಜಿವಿ ಭಾಸ್ಕರ್ ರಾವ್ ಹಾಗೂ ಮಂಥನಿ ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧಿಸಿದ ಬಿಜೆಪಿ ಮುಖಂಡ ಸುನೀಲ್ ರೆಡ್ಡಿ ಅವರ ಕಟ್ಟಡಗಳನ್ನು ನೆಲಸಮಗೊಳಿಸಿ, ಇದುವರೆಗೆ 43 ಎಕರೆ ಭೂಮಿಯನ್ನು ಮರಳಿ ಪಡೆದಿದೆ.

ಐಪಿಎಸ್ ಅಧಿಕಾರಿ ಎ.ವಿ.ರಂಗನಾಥ್ ನೇತೃತ್ವದ ಹೈಡ್ರಾ ಕಳೆದೆರಡು ವಾರಗಳಿಂದ ನಗರದ ಮತ್ತು ಸುತ್ತಮುತ್ತಲಿನ ಜಲಮೂಲಗಳ ಅತಿಕ್ರಮಣ ಭೂಮಿಯನ್ನು ಮರಳಿ ಪಡೆಯಲು ಅಕ್ರಮ ಕಟ್ಟಡಗಳನ್ನು ನೆಲಸಮ ಮಾಡುತ್ತಿದೆ.

ರಾಜಕೀಯ ಪಕ್ಷಗಳ ಭೇದವಿಲ್ಲದೆ ಕೆರೆ, ಕೊಳ ಮತ್ತಿತರ ಜಲಮೂಲಗಳ ಒತ್ತುವರಿ ತೆರವು ಮಾಡಲಾಗುವುದು ಎಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಹೇಳಿದ್ದಾರೆ. ಇತ್ತೀಚೆಗೆ, ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಸೆಂಟರ್ (NRSC) ಹೈದರಾಬಾದ್‌ನಲ್ಲಿ 1979 ಮತ್ತು 2024 ರ ನಡುವೆ ಜಲಮೂಲಗಳ ವ್ಯಾಪ್ತಿಯು 61 ಪ್ರತಿಶತದಷ್ಟು ಕಡಿಮೆಯಾಗಿದೆ ಎಂದು ಬಹಿರಂಗಪಡಿಸಿತ್ತು.

ಅಸಾದುದ್ದೀನ್ ಓವೈಸಿ ವಿರೋಧ

ಹೈದರಾಬಾದ್ ಸಂಸದ ಹಾಗೂ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರು ನಗರದಾದ್ಯಂತ ನಡೆಸುತ್ತಿರುವ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಟೀಕಿಸಿದ್ದಾರೆ.

ಅತಿಕ್ರಮಣ ಭೂಮಿಯಲ್ಲಿ ನಿರ್ಮಿಸಲಾಗಿರುವ ಸರ್ಕಾರಿ ಕಟ್ಟಡಗಳನ್ನೂ ಕಾಂಗ್ರೆಸ್ ಸರ್ಕಾರ ನೆಲಸಮಗೊಳಿಸುತ್ತಾ? ಎಂದು ಅವರು ಪ್ರಶ್ನಿಸಿದ್ದಾರೆ. ಹೈದರಾಬಾದ್ ಮಹಾನಗರ ಪಾಲಿಕೆ (ಜಿಹೆಚ್‌ಎಂಸಿ) ಕಟ್ಟಡವನ್ನೂ ಕೂಡ ಕೆರೆಯ ಮೇಲೆ ನಿರ್ಮಿಸಲಾಗಿದೆ. ಅದನ್ನೂ ಸರ್ಕಾರ ಕೆಡವಲಿದೆಯಾ? ಎಂದು ಓವೈಸಿ ಕೇಳಿದ್ದಾರೆ.

ಬಿಆರ್‌ಎಸ್ ಶಾಸಕ ಮಾಧವರಂ ಕೃಷ್ಣ ರಾವ್ ಅವರು ಒತ್ತುವರಿ ತೆರವು ಕಾರ್ಯಾಚರಣೆಯನ್ನು ಸ್ವಾಗತಿಸಿದ್ದಾರೆ. ಆದರೆ, ಈಗ ಅತಿಕ್ರಮಿತ ಆಸ್ತಿ ಎಂದು ಪರಿಗಣಿಸಲಾಗಿರುವ ಭೂಮಿಯನ್ನು ಖರೀದಿಸಿದ ಅಥವಾ ಮನೆಗಳನ್ನು ನಿರ್ಮಿಸಿದ ವ್ಯಕ್ತಿಗಳ ಬಗ್ಗೆ ಅವರು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. “ಎಫ್‌ಟಿಎಲ್ ಅಥವಾ ಬಫರ್ ವಲಯದಲ್ಲಿರುವ ಹೆಚ್ಚಿನ ಆಸ್ತಿಗಳನ್ನು ಸಾಮಾನ್ಯ ಜನರು ಖರೀದಿಸಿದ್ದಾರೆ. ಈ ಜನರಿಗೆ ಬಿಲ್ಡರ್‌ಗಳಿಂದ ಪರಿಹಾರವನ್ನು ಹೈಡ್ರಾ ಕೊಡಿಸುತ್ತಾ? ಎಂದು ರಾವ್ ಪ್ರಶ್ನಿಸಿದ್ದಾರೆ.

ಅಕ್ರಮ ಎಂದು ಗೊತ್ತಿದ್ದರೂ ಜಲಮೂಲಗಳ ಮೇಲೆ ಕಟ್ಟಡಗಳನ್ನು ಕಟ್ಟಲು ಅನುಮತಿ ನೀಡಿರುವ ವಿವಿಧ ಇಲಾಖೆಗಳ ಅಧಿಕಾರಿಗಳ ವಿರುದ್ದ ಸರ್ಕಾರ ಕ್ರಮ ಕೈಗೊಳ್ಳಲಿದೆಯಾ? ಆರಂಭಿಕವಾಗಿ ಈ ಅತಿಕ್ರಮಣಗಳಿಗೆ ಮಂಜೂರಾತಿ ನೀಡಿದ ನೀರಾವರಿ, ಕಂದಾಯ, ಪುರಸಭೆ ಅಥವಾ ಹೆಚ್‌ಎಂಡಿಎ ಇಲಾಖೆಗಳ ಅಧಿಕಾರಿಗಳ ವಿರುದ್ಧ ಸರ್ಕಾರ ಯಾವ ಕ್ರಮ ಕೈಗೊಳ್ಳಲಿದೆ? ಎಂದು ರಾವ್ ಕೇಳಿದ್ದಾರೆ.

ಫಾತಿಮಾ ಓವೈಸಿ ಕಾಲೇಜು ತೆರವು?

ಹೈಡ್ರಾ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ಹೆಚ್ಚು ಗಮನ ಸೆಳೆದಿರುವುದು ಸಲ್ಕಾಂ ಚೆರುವು ಅಥವಾ ಸಲ್ಕಂ ಕೆರೆ ಮೇಲೆ ಇರುವ ಫಾತಿಮಾ ಓವೈಸಿ ಕಾಲೇಜು ಆಗಿದೆ. ಫಾತಿಮಾ ಎಂಬುವುದು ಎಐಎಂಐಎಂನ ಪ್ರಭಾವಿ  ಶಾಸಕ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಸಹೋದರ ಅಕ್ಬರುದ್ದೀನ್ ಓವೈಸಿ ಅವರ ಮಗಳ ಹೆಸರಾಗಿದೆ. ಮಗಳ ಹೆಸರಿನಲ್ಲಿ ಅಕ್ಬರುದ್ದೀನ್ ಓವೈಸಿ ಕಾಲೇಜು ಕಟ್ಟಿದ್ದಾರೆ. ಈ ಕಾಲೇಜನ್ನು ತೆರವುಗೊಳಿಸುವ ಧೈರ್ಯ ಹೈಡ್ರಾ ಅಥವಾ ಸರ್ಕಾರ ಇದೆಯಾ? ಎಂದು ತೆಲಂಗಾಣ ಬಿಜೆಪಿ ಪ್ರಶ್ನಿಸಿದೆ.

ಗುಂಡಿಕ್ಕಿ, ಕಾಲೇಜು ತೆರವುಗೊಳಿಸಬೇಡಿ -ಓವೈಸಿ

ಹೈಡ್ರಾ ತನ್ನ ಕಾಲೇಜು ತೆರವುಗೊಳಿಸುವ ಸಾಧ್ಯತೆ ಬಗ್ಗೆ ಪ್ರತಿಕ್ರಿಯಿಸಿರುವ ಅಕ್ಬರುದ್ದೀನ್ ಓವೈಸಿ, “ಬೇಕಾದರೆ ನನಗೆ ಗುಂಡಿಕ್ಕಿ, ಆದರೆ, ನನ್ನ ಕಾಲೇಜು ನೆಲಸಮಗೊಳಿಸಬೇಡಿ” ಎಂದಿದ್ದಾರೆ. ನಟ ನಾಗಾರ್ಜುನ ಅವರ ಕನ್ವೆನ್ಷನ್ ಸೆಂಟರ್ ಧ್ವಂಸಗೊಳಿಸಿರುವ ಸರ್ಕಾರ, ಓವೈಸಿಯ ಕಾಲೇಜು ತೆರವುಗೊಳಿಸಲಿದೆಯಾ? ಎಂಬ ಕುತೂಹಲ ಮೂಡಿದೆ.

ಹೊಸ ಸಚಿವಾಲಯ ಕೆರೆಯ ಮೇಲಿದೆ – ಬಂಡಿ ಸಂಜಯ್ 

ಈ ಹಿಂದಿನ ಕೆಸಿಆರ್ ಸರ್ಕಾರ ಭವ್ಯವಾಗಿ ನಿರ್ಮಿಸಿರುವ ತೆಲಂಗಾಣದ ಹೊಸ ಸೆಕ್ರೆಟ್ರಿಯೇಟ್ ಅಥವಾ ಸಚಿವಾಲಯದ ಕಟ್ಟಡ ಹುಸೈನ್ ಸಾಗರ್ ಕೆರೆಯ ಮೇಲಿದೆ ಎಂದು ಈ ಹಿಂದೆ ತೆಲಂಗಾಣ ಬಿಜೆಪಿಯ ಮಾಜಿ ಅಧಕ್ಷ ಬಂಡಿ ಸಂಜಯ್ ಆರೋಪಿಸಿದ್ದರು. ಮೇ 1, 2023ರಂದು ಸಚಿವಾಲಯದ ಉದ್ಘಾಟನೆಯಂದು ಅವರು ಹುಸೈನ್ ಸಾಗರ್ ಕೆರೆಯನ್ನು ಆಕ್ರಮಿಸಿಕೊಂಡ ಬಗ್ಗೆ ಮ್ಯಾಪ್ ಹಂಚಿಕೊಂಡಿದ್ದರು.

ಅಸಲಿಗೆ ಸಚಿವಾಲಯದ ಮುಂದಿರುವ ಲುಂಬಿನ ಪಾರ್ಕ್ ಕೆರೆಯನ್ನು ಆಕ್ರಮಿಸಿಕೊಂಡು ನಿರ್ಮಿಸಿದಂತೆ ತೋರುತ್ತಿದೆ. ಈ ಬಗ್ಗೆ ಅಧಿಕೃತ ಮಾಹಿತಿಯಿಲ್ಲ.

ಇನ್ನೂ ಇದೇ ಬಂಡಿ ಸಂಜಯ್ ಹೊಸ ಸಚಿವಾಲಯದ ಕಟ್ಟಡವನ್ನು ನೆಲಸಮಗೊಳಿಸುವುದಾಗಿಯೂ ಹೇಳಿಕೆ ಕೊಟ್ಟಿದ್ದರು. ಹೊಸ ಕಟ್ಟಡ ಗುಂಬಝ್‌ಗಳನ್ನು ಹೊಂದಿದ್ದು ನಿಝಾಮರ ಶೈಲಿಯಲ್ಲಿದೆ. ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಆ ಗುಂಬಝ್‌ಗಳನ್ನು ಉರುಳಿಸುತ್ತೇವೆ ಎಂದು ಕೋಮು ದ್ವೇಷದ ಹೇಳಿಕೆಯನ್ನು ಸಂಜಯ್ ನೀಡಿದ್ದರು.

ಸಾರ್ವಜನಿಕರಿಂದ ಮಿಶ್ರ ಪ್ರತಿಕ್ರಿಯೆ

ಹೈದರಾಬಾದ್ ನಗರ ಮತ್ತು ಸುತ್ತಮುತ್ತಲಿನ 18 ಜಾಗಗಳಲ್ಲಿ ಹೈಡ್ರಾ ತೆರವು ಕಾರ್ಯಾಚರಣೆ ಕೈಗೊಂಡಿದೆ. ಇದರಿಂದ ಮನೆ ಸೇರಿದಂತೆ ಕಟ್ಟಡಗಳನ್ನು ಕಳೆದುಕೊಂಡವರು ಸರ್ಕಾರ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದರೆ, ಇತರ ಸಾರ್ವಜನಿಕರು ಸರ್ಕಾರ ಒಳ್ಳೆಯ ಕೆಲಸ ಮಾಡಿದೆ ಎನ್ನುತ್ತಿದ್ದಾರೆ.

ತೆಲಂಗಾಣದಲ್ಲಿ ಕಾಂಗ್ರೆಸ್‌, ಬಿಜೆಪಿ, ಬಿಆರ್‌ಎಸ್ ಮತ್ತು ಎಐಎಂಐಎಂ ಪ್ರಮುಖ ರಾಜಕೀಯ ಪಕ್ಷಗಳಾಗಿವೆ. ಈ ಪೈಕಿ ಕಾಂಗ್ರೆಸ್ ಪ್ರಸ್ತುತ ಆಧಿಕಾರದಲ್ಲಿದೆ. ಬಿಆರ್‌ಎಸ್‌ ಪ್ರತಿಪಕ್ಷ ಸ್ಥಾನದಲ್ಲಿ ಕುಳಿತಿದೆ. ಎಐಎಂಐಎಂ ಹಿಂದಿನಿಂದಲೂ ಬಿಆರ್‌ಎಸ್‌ ಮಿತ್ರ ಪಕ್ಷವಾಗಿರುವುದರಿಂದ ಅದರ ಜೊತೆ ಪ್ರತಿಪಕ್ಷ ಸ್ಥಾನದಲ್ಲಿದೆ. ಬಿಜೆಪಿ ನಾಲ್ಕನೇ ಸ್ಥಾನದಲ್ಲಿದೆ. ಪ್ರಸ್ತುತ ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ಒತ್ತುವರಿ ತೆರವು ಕಾರ್ಯಾಚರಣೆ ಜಲಮೂಲಗಳ ರಕ್ಷಣೆಗಿಂತ ರಾಜಕೀಯ ಶೀತಲಸಮರವಾಗಿ ಮಾರ್ಪಟ್ಟಿದೆ.

ಇದನ್ನೂ ಓದಿ : ರೈತರ ಪ್ರತಿಭಟನೆ ಕುರಿತು ಕಂಗನಾ ವಿವಾದಾತ್ಮಕ ಹೇಳಿಕೆ : ಅಂತರ ಕಾಯ್ದುಕೊಂಡ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...