Homeಮುಖಪುಟದೆಹಲಿ ಅಬಕಾರಿ ನೀತಿ ಪ್ರಕರಣ : ಬಿಆರ್‌ಎಸ್‌ ನಾಯಕಿ ಕವಿತಾಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು

ದೆಹಲಿ ಅಬಕಾರಿ ನೀತಿ ಪ್ರಕರಣ : ಬಿಆರ್‌ಎಸ್‌ ನಾಯಕಿ ಕವಿತಾಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು

- Advertisement -
- Advertisement -

ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಮತ್ತು ಭ್ರಷ್ಟಾಚಾರ ಪ್ರಕರಣದಲ್ಲಿ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪಕ್ಷದ ನಾಯಕಿ ಕೆ. ಕವಿತಾ ಅವರಿಗೆ ಸುಪ್ರೀಂ ಕೋರ್ಟ್ ಇಂದು (ಆ.27) ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ ವಿಶ್ವನಾಥನ್ ಅವರನ್ನೊಳಗೊಂಡ ಪೀಠವು ವಿಚಾರಣೆಯ ಸಂದರ್ಭದಲ್ಲಿ, ಪ್ರಾಸಿಕ್ಯೂಷನ್ ಏಜೆನ್ಸಿಯ (ಸಿಬಿಐ/ಇಡಿ) ನ್ಯಾಯಸಮ್ಮತತೆಯನ್ನು ಪ್ರಶ್ನಿಸಿದೆ. ಆಯ್ದ ಆರೋಪಿಗಳ ಪ್ರಕರಣಗಳಲ್ಲಿ ಮಾತ್ರ ಸಕಾರಾತ್ಮಕವಾಗಿ ಸ್ಪಂದಿಸುವ ಅವುಗಳ ಪಕ್ಷಪಾತ ನಡೆಯನ್ನು ಟೀಕಿಸಿದೆ.

ದೆಹಲಿ ಹೈಕೋರ್ಟ್ ಜಾಮೀನು ನಿರಾಕರಿಸಿರುವುದನ್ನು ಪ್ರಶ್ನಿಸಿ ಕವಿತಾ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಈ ಸಂಬಂಧ ಪ್ರತಿಕ್ರಿಯಿಸುವಂತೆ ಸಿಬಿಐ ಮತ್ತು ಇಡಿಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿತ್ತು.

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಎಎಪಿ ನಾಯಕಿ ಮನೀಶ್ ಸಿಸೋಡಿಯಾ ಅವರಿಗೆ ಜಾಮೀನು ನೀಡಲಾಗಿದೆ ಎಂಬ ಅಂಶವನ್ನು ಕವಿತಾ ಪರ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ಜಾಮೀನು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

ಕವಿತಾ ಅವರು ತಮ್ಮ ಮೊಬೈಲ್ ನಾಶಪಡಿಸಿದ್ದಾರೆ. ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಆದ್ದರಿಂದ ಅವರಿಗೆ ಜಾಮೀನು ನೀಡಬಾರದು ಎಂದು ತನಿಖಾ ಸಂಸ್ಥೆಗಳ ಪರ ನ್ಯಾಯಾಲಯಕ್ಕೆ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌.ವಿ ರಾಜು ಪ್ರತಿಪಾದಿಸಿದ್ದಾರೆ.

ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಎರಡೂ ಪ್ರಕರಣಗಳಲ್ಲಿ ತಲಾ 10 ಲಕ್ಷ ರೂ.ಗಳ ಬಾಂಡ್‌ಗಳನ್ನು ಒದಗಿಸುವ ಮೂಲಕ ಕವಿತಾ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲು ಅನುಮತಿ ನೀಡಿದೆ. ನ್ಯಾಯಾಲಯವು ಪಾಸ್‌ಪೋರ್ಟ್ ಅನ್ನು ವಶಕ್ಕೆ ನೀಡುವಂತೆ ಕವಿತಾ ಅವರಿಗೆ ನಿರ್ದೇಶಿಸಿದ್ದು, ಆಕೆ ಶ್ಯೂರಿಟಿಗಳ ಮೇಲೆ ಪ್ರಭಾವ ಬೀರಲು ಅಥವಾ ಬೆದರಿಸಲು ಪ್ರಯತ್ನಿಸಬಾರದು ಎಂದಿದೆ.

ಕವಿತಾ ಅವರನ್ನು ಮಾರ್ಚ್ 15 ರಂದು ಸಂಜೆ ಇಡಿ ಬಂಧಿಸಿತ್ತು. ಅಂದಿನಿಂದ ಅವರು ನ್ಯಾಯಾಂಗ ಬಂಧನದಲ್ಲಿದ್ದರು. ಅಲ್ಲಿಂದಲೇ ಅವರನ್ನು ಸಿಬಿಐ ಬಂಧಿಸಿತ್ತು.

ಇದನ್ನೂ ಓದಿ : ಹೈದರಾಬಾದ್ | ರಾಜಕೀಯ ಕಿತ್ತಾಟಕ್ಕೆ ಕಾರಣವಾದ ‘HYDRA’ ಒತ್ತುವರಿ ತೆರವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...