Homeಮುಖಪುಟಜೀವಾವಧಿ ಶಿಕ್ಷೆ ಪ್ರಶ್ನಿಸಿ ಸಂಜೀವ್ ಭಟ್ ಮೇಲ್ಮನವಿ : ಗುಜರಾತ್ ಸರ್ಕಾರಕ್ಕೆ ಸುಪ್ರೀಂ ನೋಟಿಸ್

ಜೀವಾವಧಿ ಶಿಕ್ಷೆ ಪ್ರಶ್ನಿಸಿ ಸಂಜೀವ್ ಭಟ್ ಮೇಲ್ಮನವಿ : ಗುಜರಾತ್ ಸರ್ಕಾರಕ್ಕೆ ಸುಪ್ರೀಂ ನೋಟಿಸ್

- Advertisement -
- Advertisement -

ಜೀವಾವಧಿ ಜೈಲು ಶಿಕ್ಷೆ ಪ್ರಶ್ನಿಸಿ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಸಲ್ಲಿಸಿರುವ ಮೇಲ್ಮನವಿ ಸಂಬಂಧ ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.

1990ರ ಕಸ್ಟಡಿ ಚಿತ್ರಹಿಂಸೆ ಮತ್ತು ಸಾವಿನ ಪ್ರಕರಣದಲ್ಲಿ ಸಂಜೀವ್ ಭಟ್ ಅವರಿಗೆ ಜಾಮ್‌ನಗರ ನ್ಯಾಯಾಲಯ ಜೀವಾವಧಿ ಜೈಲು ಶಿಕ್ಷೆ ವಿಧಿಸಿದೆ. ಇದನ್ನು ಪ್ರಶ್ನಿಸಿ ಭಟ್ ಗುಜರಾತ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಅವರ ಅರ್ಜಿಯನ್ನು ವಜಾಗೊಳಿಸಿದೆ. ಹಾಗಾಗಿ, ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಪ್ರಸನ್ನ ಭಾಲಚಂದ್ರ ವರಾಳೆ ಅವರ ಪೀಠವು ನೋಟಿಸ್ ನೀಡುವಾಗ, ಪ್ರಸ್ತುತ ಅರ್ಜಿಯನ್ನು ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿರುವ ಇತರ ಅರ್ಜಿಗಳನ್ನು ಟ್ಯಾಗ್ ಮಾಡಿದೆ.

ಭಟ್ ಪರ ವಾದ ಮಂಡಿಸಿದ ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ದೇವದತ್ ಕಾಮತ್, ಈ ಅರ್ಜಿಯ ವಿಚಾರಣೆಯ ಅಗತ್ಯವಿದೆ ಎಂದು ಒತ್ತಿ ಹೇಳಿದ್ದಾರೆ ಮತ್ತು ಈ ಅರ್ಜಿಯನ್ನು ನ್ಯಾಯಾಲದ ಮುಂದೆ ಬಾಕಿ ಉಳಿದಿರುವ ಇತರ ಅರ್ಜಿಗಳೊಂದಿಗೆ ಟ್ಯಾಗ್ ಮಾಡಬಹುದು ಎಂಬ ನ್ಯಾಯಾಲಯದ ಪ್ರತಿಪಾದನೆಯನ್ನು ಒಪ್ಪಿಕೊಂಡಿದ್ದಾರೆ. ಈ ಹಿನ್ನೆಲೆ, ವಕೀಲರ ಮನವಿ ಪುರಸ್ಕರಿಸಿದ ನ್ಯಾಯಾಲಯ ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ಆದೇಶಿಸಿ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಭಟ್ ಪರ ಇನ್ನಿಬ್ಬರು ವಕೀಲರಾದ ರಾಜೇಶ್ ಜಿ.ಇನಾಮದಾರ್ ಮತ್ತು ಶಾಶ್ವತ್ ಆನಂದ್ ಕೂಡ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಈ ಪ್ರಕರಣವು ನವೆಂಬರ್ 1990ರಲ್ಲಿ ಸಂಭವಿಸಿದ ಪ್ರಭುದಾಸ್ ಮಾಧವ್‌ಜಿ ವೈಷ್ಣಾನಿಯವರ ಕಸ್ಟಡಿ ಸಾವಿಗೆ ಸಂಬಂಧಿಸಿದೆ. ಪೊಲೀಸ್ ಕಸ್ಟಡಿಯ ಚಿತ್ರಹಿಂಸೆಯಿಂದ ವೈಷ್ಣಾನಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿತ್ತು. ವೈಷ್ಣಾನಿ ಸಾವಿನ ಸಮಯದಲ್ಲಿ ಸಂಜೀವ್ ಭಟ್ ಅವರು ಜಾಮ್‌ನಗರದ ಸಹಾಯಕ ಪೊಲೀಸ್ ಅಧೀಕ್ಷಕರಾಗಿದ್ದರು. ಭಾರತ್ ಬಂದ್‌ ವೇಳೆ ಗಲಭೆ ನಡೆಸಿದ ಆರೋಪದ ಮೇಲೆ ವೈಷ್ಣಾನಿ ಸೇರಿದಂತೆ ಸುಮಾರು 133 ಜನರನ್ನು ಇತರ ಅಧಿಕಾರಿಗಳೊಂದಿಗೆ ಸಂಜೀವ್ ಭಟ್ ಕಸ್ಟಡಿಗೆ ತೆಗೆದುಕೊಂಡಿದ್ದರು. ಹಾಗಾಗಿ, ವೈಷ್ಣಾನಿ ಕಸ್ಟಡಿ ಸಾವಿನ ಆರೋಪ ಭಟ್ ಮತ್ತು ಇತರರ ಮೇಲೆ ಬಂದಿದೆ.

ಒಂಬತ್ತು ದಿನಗಳ ಕಾಲ ಪೊಲೀಸ್ ಬಂಧನದಲ್ಲಿದ್ದ ವೈಷ್ಣಾನಿ, ಜಾಮೀನಿನ ಮೇಲೆ ಬಿಡುಗಡೆಯಾದ ಹತ್ತು ದಿನಗಳ ನಂತರ ನಿಧನರಾಗಿದ್ದರು. ವೈದ್ಯಕೀಯ ದಾಖಲೆಗಳ ಪ್ರಕಾರ, ಅವರ ಸಾವಿಗೆ ಮೂತ್ರಪಿಂಡದ ವೈಫಲ್ಯ ಕಾರಣ ಎಂದು ಹೇಳಲಾಗಿತ್ತು.

ವೈಷ್ಣಾನಿ ಸಾವಿನ ನಂತರ, ಕಸ್ಟಡಿ ಚಿತ್ರಹಿಂಸೆ ಆರೋಪದ ಮೇಲೆ ಭಟ್ ಮತ್ತು ಇತರ ಕೆಲವು ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. 1995ರಲ್ಲಿ ಪ್ರಕರಣದ ವಿಚಾರಣೆ ಆರಂಭಗೊಂಡಾಗ ಗುಜರಾತ್ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. 2011 ರವರೆಗೆ ವಿಚಾರಣೆಗೆ ತಡೆ ನೀಡಲಾಗಿತ್ತು. ನಂತರ ತಡೆ ತೆರವುಗೊಂಡು ವಿಚಾರಣೆ ಮುಂದುವರೆದಿತ್ತು.

ಜೂನ್ 2019ರಲ್ಲಿ, ಜಾಮ್‌ನಗರ ಜಿಲ್ಲೆಯ ಸೆಷನ್ಸ್ ನ್ಯಾಯಾಲಯವು ಪ್ರಕರಣದಲ್ಲಿ ಸಂಜೀವ್ ಭಟ್ ಮತ್ತು ಪೊಲೀಸ್ ಪೇದೆ ಪ್ರವೀಣ್‌ಸಿನ್ಹ ಝಲಾ ಅವರಿಗೆ ಐಪಿಸಿ ಸೆಕ್ಷನ್ 302 (ಕೊಲೆ), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವ ಶಿಕ್ಷೆ) ಮತ್ತು 506 (11) (ಕ್ರಿಮಿನಲ್ ಬೆದರಿಕೆಯ ಅಪರಾಧಕ್ಕೆ ಶಿಕ್ಷೆ) ಅಡಿಯಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದೆ.

ಸಂಜೀವ್ ಭಟ್ ಜೊತೆ ಪೊಲೀಸ್ ಪೇದೆಗಳಾದ ಪ್ರವಿನ್‌ಸಿನ್ಹ ಜಡೇಜಾ, ಅನೋಪ್‌ಸಿನ್ಹ ಜೇತ್ವಾ, ಕೇಸುಭ ಡೊಲುಭಾ ಜಡೇಜಾ ಮತ್ತು ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ಗಳಾದ ಶೈಲೇಶ್ ಪಾಂಡ್ಯ, ದೀಪಕ್‌ಕುಮಾರ್ ಭಗವಾನದಾಸ್ ಷಾ ಕೂಡ ಕಸ್ಟಡಿ ಚಿತ್ರಹಿಂಸೆ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿದೆ. ಅವರಿಗೆ ಐಪಿಸಿಯ ಸೆಕ್ಷನ್ 323 ಮತ್ತು 506 ಅಡಿಯಲ್ಲಿ ಶಿಕ್ಷೆ ವಿಧಿಸಲಾಗಿದೆ.

ತಮ್ಮ ಶಿಕ್ಷೆಯನ್ನು ಪ್ರಶ್ನಿಸಿ, ಝಲಾ, ಭಟ್, ಶಾ ಮತ್ತು ಪಾಂಡ್ಯ ಅವರು 2019 ರಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅವರ ಕ್ರಿಮಿನಲ್ ಮೇಲ್ಮನವಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ಅಶುತೋಷ್ ಶಾಸ್ತ್ರಿ ಮತ್ತು ನ್ಯಾಯಮೂರ್ತಿ ಸಂದೀಪ್ ಎನ್.ಭಟ್ ಅವರ ಪೀಠವು, ಜಾಮ್‌ನಗರ ನ್ಯಾಯಾಲಯ ನೀಡಿದ ತೀರ್ಪು ಸರಿಯಾಗಿದೆ. ಆದ್ದರಿಂದ ಶಿಕ್ಷೆಯ ಆದೇಶದಲ್ಲಿ ಮಧ್ಯಪ್ರವೇಶಿಸಲು ಯಾವುದೇ ಕಾರಣವಿಲ್ಲ ಎಂದು ಹೇಳಿತ್ತು.

ಇದನ್ನೂ ಓದಿ : ‘ಅಮ್ಮ’ ಅಧ್ಯಕ್ಷ ಸ್ಥಾನಕ್ಕೆ ಮೋಹನ್ ಲಾಲ್ ರಾಜೀನಾಮೆ : ಸಂಪೂರ್ಣ ಸಮಿತಿ ವಿಸರ್ಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...