Homeಮುಖಪುಟರಾಜ್ಯಸಭೆಗೆ 12 ಸದಸ್ಯರು ಅವಿರೋಧ ಆಯ್ಕೆ : ಬಹುಮತ ಗಳಿಸಿದ ಎನ್‌ಡಿಎ

ರಾಜ್ಯಸಭೆಗೆ 12 ಸದಸ್ಯರು ಅವಿರೋಧ ಆಯ್ಕೆ : ಬಹುಮತ ಗಳಿಸಿದ ಎನ್‌ಡಿಎ

- Advertisement -
- Advertisement -

ರಾಜ್ಯಸಭೆಗೆ 12 ಸದಸ್ಯರು ಮಂಗಳವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎನ್‌ಡಿಎ ಮೈತ್ರಿಕೂಟ ಸ್ಪಷ್ಟ ಬಹುಮತ ಗಳಿಸಿದೆ.

ಒಟ್ಟು 12 ಸದಸ್ಯರಲ್ಲಿ 9 ಮಂದಿ ಬಿಜೆಪಿಯಿಂದ ಮತ್ತು ಅದರ ಮಿತ್ರ ಪಕ್ಷಗಳಾದ ಎನ್‌ಸಿಪಿ (ಅಜಿತ್ ಪವಾರ್ ಬಣ) ಮತ್ತು ರಾಷ್ಟ್ರೀಯ ಲೋಕ ಮಂಚ್‌ನ ತಲಾ ಒಬ್ಬರು ಆಯ್ಕೆಯಾಗಿದ್ದಾರೆ. ಇನ್ನೊಂದು ಸ್ಥಾನವನ್ನು ಕಾಂಗ್ರೆಸ್ ಪಕ್ಷ ತೆಲಂಗಾಣದಿಂದ ಗೆದ್ದುಕೊಂಡಿದೆ.

ಹೊಸದಾಗಿ 12 ಸದಸ್ಯರ ಆಯ್ಕೆಗೂ ಮುನ್ನ ರಾಜ್ಯಸಭೆಯಲ್ಲಿ ಆರು ನಾಮನಿರ್ದೇಶನಗೊಂಡ ಸದಸ್ಯರು ಮತ್ತು ಹರಿಯಾಣದ ಒಬ್ಬ ಪಕ್ಷೇತರ ಸೇರಿ ಎನ್‌ಡಿಎ ಮೈತ್ರಿಕೂಟದ ಸದಸ್ಯರ ಸಂಖ್ಯೆ 110 ಇತ್ತು. ಅದೀಗ 121ಕ್ಕೆ ಏರಿಕೆಯಾಗಿದೆ.

ಪ್ರತಿಪಕ್ಷಗಳ ಸದಸ್ಯರ ಸಂಖ್ಯೆ 84 ಇತ್ತು. ಹೊಸದಾಗಿ ಕಾಂಗ್ರೆಸ್‌ನಿಂದ ಒಬ್ಬರು ಅವಿರೋಧ ಆಯ್ಕೆಯಾಗುವ ಮೂಲಕ 85 ಆಗಿದೆ.

ರಾಜ್ಯಸಭೆಯಲ್ಲಿ ಹಾಲಿ ಸದಸ್ಯರ ಸಂಖ್ಯೆ 237 ಇದೆ. ಎಂಟು ಸ್ಥಾನಗಳು (ಜಮ್ಮು ಮತ್ತು ಕಾಶ್ಮೀರದಿಂದ 4, ನಾಮನಿರ್ದೇಶಿತ 4) ಖಾಲಿಯಿವೆ. ನಾಮ ನಿರ್ದೇಶಿತ ಸದಸ್ಯರ ನಾಲ್ಕು ಸ್ಥಾನಗಳನ್ನು ಸರ್ಕಾರ ಭರ್ತಿಗೊಳಿಸಿದರೆ ಎನ್‌ಡಿಎ ಸದಸ್ಯರ ಸಂಖ್ಯೆ 125 ಆಗಲಿದೆ.

ರಾಜ್ಯಸಭೆಯ ಒಟ್ಟು ಸದಸ್ಯರ ಸಂಖ್ಯೆ 245, ಅದು ಸಂಪೂರ್ಣ ಭರ್ತಿಯಾದರೆ 123 ಸ್ಥಾನಗಳನ್ನು ಪಡೆದವರು ಬಹುಮತ ಸಾಧಿಸಲಿದ್ದಾರೆ.

ಅಸ್ಸಾಂನಿಂದ ಮಿಷನ್ ರಂಜನ್ ದಾಸ್ ಮತ್ತು ರಾಮೇಶ್ವರ್ ತೇಲಿ, ಬಿಹಾರದಿಂದ ಮನನ್ ಕುಮಾರ್ ಮಿಶ್ರಾ, ಹರಿಯಾಣದಿಂದ ಕಿರಣ್ ಚಾಧರಿ, ಮಧ್ಯಪ್ರದೇಶದಿಂದ ಜಾರ್ಜ್ ಕುರಿಯನ್, ಮಹಾರಾಷ್ಟ್ರದಿಂದ ಧೀರ್ಯಾ ಶೀಲ್ ಪಾಟೀಲ್, ಒಡಿಶಾದಿಂದ ಮಮತಾ ಮೊಹಾಂತ, ರಾಜಸ್ಥಾನದಿಂದ ರವನೀತ್ ಸಿಂಗ್ ಬಿಟ್ಟು ಮತ್ತು ರಾಜೀವ್, ತ್ರಿಪುರಾದ ರಾಜೀವ್ ಭಟ್ಟಾಚಾರ್ಯ ಹೊಸದಾಗಿ ಆಯ್ಕೆಯಾದ ಬಿಜೆಪಿ ಸದಸ್ಯರು.

ಈ ಪೈಕಿ ಜಾರ್ಜ್ ಕುರಿಯನ್ ಮತ್ತು ರವನೀತ್ ಸಿಂಗ್ ಬಿಟ್ಟು ಈಗಾಗಲೇ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿದ್ದಾರೆ. ಕಳೆದ ಜೂನ್‌ನಲ್ಲಿ ಸಂಪುಟಕ್ಕೆ ಸೇರ್ಪಡೆಗೊಳ್ಳುವಾಗ ಇವರು ಸಂಸದರಾಗಿರಲಿಲ್ಲ.

ತೆಲಂಗಾಣದಿಂದ ಕಾಂಗ್ರೆಸ್‌ನ ಅಭಿಷೇಕ್ ಮನು ಸಿಂಘ್ವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎನ್‌ಸಿಪಿ ಅಜಿತ್ ಪವಾರ್ ಬಣದ ನಿತಿನ್ ಪಾಟೀಲ್ ಮಹಾರಾಷ್ಟ್ರದಿಂದ ಮತ್ತು ಆರ್‌ಎಲ್‌ಎಂನ ಉಪದೇಂದ್ರ ಕುಶ್ವಾಹಾ ಬಿಹಾರದಿಂದ ಮೇಲ್ಮನೆಗೆ ಆಯ್ಕೆಯಾದ್ದಾರೆ.

ಹೊಸ ಸದಸ್ಯರ ಸೇರ್ಪಡೆ ಮೂಲಕ ರಾಜ್ಯಸಭೆಯಲ್ಲಿ ಬಿಜೆಪಿ ಸದಸ್ಯರ ಸಂಖ್ಯೆ 96ಕ್ಕೆ ಏರಿಕೆಯಾಗಿದೆ. ಪ್ರತಿಪಕ್ಷ ಕಾಂಗ್ರೆಸ್‌ 27 ಸದಸ್ಯರನ್ನು ಹೊಂದಿದ್ದು. 13 ಸದಸ್ಯರ ಮೂಲಕ ಟಿಎಂಸಿ ಹೆಚ್ಚು ಸದಸ್ಯರನ್ನು ಹೊಂದಿರುವ ಮೂರನೇ ಪಕ್ಷ ಎನಿಸಿದೆ.

ಇದನ್ನೂ ಓದಿ : ಜೀವಾವಧಿ ಶಿಕ್ಷೆ ಪ್ರಶ್ನಿಸಿ ಸಂಜೀವ್ ಭಟ್ ಮೇಲ್ಮನವಿ : ಗುಜರಾತ್ ಸರ್ಕಾರಕ್ಕೆ ಸುಪ್ರೀಂ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...