Homeಮುಖಪುಟರಾಜ್ಯಸಭೆಗೆ 12 ಸದಸ್ಯರು ಅವಿರೋಧ ಆಯ್ಕೆ : ಬಹುಮತ ಗಳಿಸಿದ ಎನ್‌ಡಿಎ

ರಾಜ್ಯಸಭೆಗೆ 12 ಸದಸ್ಯರು ಅವಿರೋಧ ಆಯ್ಕೆ : ಬಹುಮತ ಗಳಿಸಿದ ಎನ್‌ಡಿಎ

- Advertisement -
- Advertisement -

ರಾಜ್ಯಸಭೆಗೆ 12 ಸದಸ್ಯರು ಮಂಗಳವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎನ್‌ಡಿಎ ಮೈತ್ರಿಕೂಟ ಸ್ಪಷ್ಟ ಬಹುಮತ ಗಳಿಸಿದೆ.

ಒಟ್ಟು 12 ಸದಸ್ಯರಲ್ಲಿ 9 ಮಂದಿ ಬಿಜೆಪಿಯಿಂದ ಮತ್ತು ಅದರ ಮಿತ್ರ ಪಕ್ಷಗಳಾದ ಎನ್‌ಸಿಪಿ (ಅಜಿತ್ ಪವಾರ್ ಬಣ) ಮತ್ತು ರಾಷ್ಟ್ರೀಯ ಲೋಕ ಮಂಚ್‌ನ ತಲಾ ಒಬ್ಬರು ಆಯ್ಕೆಯಾಗಿದ್ದಾರೆ. ಇನ್ನೊಂದು ಸ್ಥಾನವನ್ನು ಕಾಂಗ್ರೆಸ್ ಪಕ್ಷ ತೆಲಂಗಾಣದಿಂದ ಗೆದ್ದುಕೊಂಡಿದೆ.

ಹೊಸದಾಗಿ 12 ಸದಸ್ಯರ ಆಯ್ಕೆಗೂ ಮುನ್ನ ರಾಜ್ಯಸಭೆಯಲ್ಲಿ ಆರು ನಾಮನಿರ್ದೇಶನಗೊಂಡ ಸದಸ್ಯರು ಮತ್ತು ಹರಿಯಾಣದ ಒಬ್ಬ ಪಕ್ಷೇತರ ಸೇರಿ ಎನ್‌ಡಿಎ ಮೈತ್ರಿಕೂಟದ ಸದಸ್ಯರ ಸಂಖ್ಯೆ 110 ಇತ್ತು. ಅದೀಗ 121ಕ್ಕೆ ಏರಿಕೆಯಾಗಿದೆ.

ಪ್ರತಿಪಕ್ಷಗಳ ಸದಸ್ಯರ ಸಂಖ್ಯೆ 84 ಇತ್ತು. ಹೊಸದಾಗಿ ಕಾಂಗ್ರೆಸ್‌ನಿಂದ ಒಬ್ಬರು ಅವಿರೋಧ ಆಯ್ಕೆಯಾಗುವ ಮೂಲಕ 85 ಆಗಿದೆ.

ರಾಜ್ಯಸಭೆಯಲ್ಲಿ ಹಾಲಿ ಸದಸ್ಯರ ಸಂಖ್ಯೆ 237 ಇದೆ. ಎಂಟು ಸ್ಥಾನಗಳು (ಜಮ್ಮು ಮತ್ತು ಕಾಶ್ಮೀರದಿಂದ 4, ನಾಮನಿರ್ದೇಶಿತ 4) ಖಾಲಿಯಿವೆ. ನಾಮ ನಿರ್ದೇಶಿತ ಸದಸ್ಯರ ನಾಲ್ಕು ಸ್ಥಾನಗಳನ್ನು ಸರ್ಕಾರ ಭರ್ತಿಗೊಳಿಸಿದರೆ ಎನ್‌ಡಿಎ ಸದಸ್ಯರ ಸಂಖ್ಯೆ 125 ಆಗಲಿದೆ.

ರಾಜ್ಯಸಭೆಯ ಒಟ್ಟು ಸದಸ್ಯರ ಸಂಖ್ಯೆ 245, ಅದು ಸಂಪೂರ್ಣ ಭರ್ತಿಯಾದರೆ 123 ಸ್ಥಾನಗಳನ್ನು ಪಡೆದವರು ಬಹುಮತ ಸಾಧಿಸಲಿದ್ದಾರೆ.

ಅಸ್ಸಾಂನಿಂದ ಮಿಷನ್ ರಂಜನ್ ದಾಸ್ ಮತ್ತು ರಾಮೇಶ್ವರ್ ತೇಲಿ, ಬಿಹಾರದಿಂದ ಮನನ್ ಕುಮಾರ್ ಮಿಶ್ರಾ, ಹರಿಯಾಣದಿಂದ ಕಿರಣ್ ಚಾಧರಿ, ಮಧ್ಯಪ್ರದೇಶದಿಂದ ಜಾರ್ಜ್ ಕುರಿಯನ್, ಮಹಾರಾಷ್ಟ್ರದಿಂದ ಧೀರ್ಯಾ ಶೀಲ್ ಪಾಟೀಲ್, ಒಡಿಶಾದಿಂದ ಮಮತಾ ಮೊಹಾಂತ, ರಾಜಸ್ಥಾನದಿಂದ ರವನೀತ್ ಸಿಂಗ್ ಬಿಟ್ಟು ಮತ್ತು ರಾಜೀವ್, ತ್ರಿಪುರಾದ ರಾಜೀವ್ ಭಟ್ಟಾಚಾರ್ಯ ಹೊಸದಾಗಿ ಆಯ್ಕೆಯಾದ ಬಿಜೆಪಿ ಸದಸ್ಯರು.

ಈ ಪೈಕಿ ಜಾರ್ಜ್ ಕುರಿಯನ್ ಮತ್ತು ರವನೀತ್ ಸಿಂಗ್ ಬಿಟ್ಟು ಈಗಾಗಲೇ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿದ್ದಾರೆ. ಕಳೆದ ಜೂನ್‌ನಲ್ಲಿ ಸಂಪುಟಕ್ಕೆ ಸೇರ್ಪಡೆಗೊಳ್ಳುವಾಗ ಇವರು ಸಂಸದರಾಗಿರಲಿಲ್ಲ.

ತೆಲಂಗಾಣದಿಂದ ಕಾಂಗ್ರೆಸ್‌ನ ಅಭಿಷೇಕ್ ಮನು ಸಿಂಘ್ವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎನ್‌ಸಿಪಿ ಅಜಿತ್ ಪವಾರ್ ಬಣದ ನಿತಿನ್ ಪಾಟೀಲ್ ಮಹಾರಾಷ್ಟ್ರದಿಂದ ಮತ್ತು ಆರ್‌ಎಲ್‌ಎಂನ ಉಪದೇಂದ್ರ ಕುಶ್ವಾಹಾ ಬಿಹಾರದಿಂದ ಮೇಲ್ಮನೆಗೆ ಆಯ್ಕೆಯಾದ್ದಾರೆ.

ಹೊಸ ಸದಸ್ಯರ ಸೇರ್ಪಡೆ ಮೂಲಕ ರಾಜ್ಯಸಭೆಯಲ್ಲಿ ಬಿಜೆಪಿ ಸದಸ್ಯರ ಸಂಖ್ಯೆ 96ಕ್ಕೆ ಏರಿಕೆಯಾಗಿದೆ. ಪ್ರತಿಪಕ್ಷ ಕಾಂಗ್ರೆಸ್‌ 27 ಸದಸ್ಯರನ್ನು ಹೊಂದಿದ್ದು. 13 ಸದಸ್ಯರ ಮೂಲಕ ಟಿಎಂಸಿ ಹೆಚ್ಚು ಸದಸ್ಯರನ್ನು ಹೊಂದಿರುವ ಮೂರನೇ ಪಕ್ಷ ಎನಿಸಿದೆ.

ಇದನ್ನೂ ಓದಿ : ಜೀವಾವಧಿ ಶಿಕ್ಷೆ ಪ್ರಶ್ನಿಸಿ ಸಂಜೀವ್ ಭಟ್ ಮೇಲ್ಮನವಿ : ಗುಜರಾತ್ ಸರ್ಕಾರಕ್ಕೆ ಸುಪ್ರೀಂ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...