Homeಫ್ಯಾಕ್ಟ್‌ಚೆಕ್FACT CHECK : ಬಿಜೆಪಿ ಪ್ರತಿಭಟನೆಯಲ್ಲಿ ಯುವತಿಯ ಡ್ಯಾನ್ಸ್... ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

FACT CHECK : ಬಿಜೆಪಿ ಪ್ರತಿಭಟನೆಯಲ್ಲಿ ಯುವತಿಯ ಡ್ಯಾನ್ಸ್… ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

- Advertisement -
- Advertisement -

ಯುವತಿಯೊಬ್ಬರು ವೇದಿಕೆ ಮೇಲೆ ನೃತ್ಯ ಮಾಡಿದ ವಿಡಿಯೋವೊಂದು ಕಳೆದರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ಪಶ್ಚಿಮ ಬಂಗಾಳ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಆ ಪ್ರತಿಭಟನೆಯಲ್ಲಿ ಮಹಿಳೆಯರನ್ನು ತಂದು ಕುಣಿಸಲಾಗಿದೆ ಎಂದು ಅನೇಕರು ಆರೋಪಿಸಿದ್ದರು.

ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷದ ರಾಜ್ಯಸಭಾ ಸದಸ್ಯ ಸಾಕೇತ್ ಗೋಖಲೆ (@SaketGokhale)ಅವರು ಆಗಸ್ಟ್ 26ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡು “ಇದು ಆರ್‌ಜಿ ಕರ್‌ ಘಟನೆ ಖಂಡಿಸಿ ಬಂಗಾಳದಲ್ಲಿ ಬಿಜೆಪಿ ಆಯೋಜಿಸಿದ ಪ್ರತಿಭಟನೆ ಎನ್ನಲಾಗುತ್ತಿದೆ. ಇದು “ಮಹಿಳೆಯರನ್ನು ಗೌರವಿಸುವ” ಬಿಜೆಪಿಯ ಕಲ್ಪನೆಯೇ? ಬಿಜೆಪಿಯ ಸ್ತ್ರೀದ್ವೇಷವಾದಿಗಳು ರಾಜಕೀಯ ಅಜೆಂಡಾಗಳಿಗಾಗಿ ಪ್ರತಿಭಟನೆಯನ್ನು ಹೈಜಾಕ್ ಮಾಡಿದರು. ಅವರಿಗೆ ಸಂತ್ರಸ್ತೆ ಅಥವಾ ಯಾವುದೇ ಮಹಿಳೆಯ ಬಗ್ಗೆ ಕಾಳಜಿಯಿಲ್ಲ” ಎಂದು ಬರೆದುಕೊಂಡಿದ್ದರು.

ಮತ್ತೊಬ್ಬರು ಭವಿಕಾ ಕಪೂರ್ (@BhavikaKapoor5) ಎಂಬ ಎಕ್ಸ್‌ ಬಳಕೆದಾರರು ಆಗಸ್ಟ್ 26ರಂದು ವಿಡಿಯೋ ಹಂಚಿಕೊಂಡು “ಬಿಜೆಪಿ ತನ್ನದೇ ಆದ ವಿಶಿಷ್ಟ ಶೈಲಿಯಲ್ಲಿ ಪ್ರತಿಭಟಿಸಬಹುದು. ಆರ್‌ಜಿ ಕರ್ ಪ್ರಕರಣದ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಹಿನ್ನೆಲೆ ಬ್ಯಾನರ್‌ಗಳು “ನಮಗೆ ನ್ಯಾಯ ಬೇಕು” ಪ್ರತಿಭಟನೆಯ ಹಿಂದುತ್ವವಾದಿ ಶೈಲಿ” ಎಂದು ಬರೆದುಕೊಂಡಿದ್ದರು.

ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾತೆ (@SupriyaShrinate)ಅವರು ಆಗಸ್ಟ್ 26ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡು ” ಇದು ನಿಜವಾಗಿಯೂ ಆರ್‌ಜಿ ಕರ್‌ ಪ್ರಕರಣದಲ್ಲಿ ನ್ಯಾಯಕ್ಕೆ ಆಗ್ರಹಿಸಿ ಬಿಜೆಪಿ ನಡೆಸಿದ ಪ್ರತಿಭಟನೆಯಾ?” ಎಂದು ಬರೆದುಕೊಂಡಿದ್ದರು. ನಂತರ ಅವರು ಪೋಸ್ಟ್ ಡಿಲಿಟ್ ಮಾಡಿದ್ದಾರೆ.

ಟಿಎಂಸಿ ನಾಯಕರು ಸೇರಿದಂತೆ ಇನ್ನೂ ಅನೇಕ ಜನರು ಸಾಮಾಜಿಕ ಜಾಲತಾಣಗಳಾದ ಎಕ್ಸ್‌, ಫೇಸ್‌ಬುಕ್‌ಗಳಲ್ಲಿ ವಿಡಿಯೋ ಹಂಚಿಕೊಂಡು ಬಿಜೆಪಿ ವಿರುದ್ದ ಕಿಡಿಕಾರಿದ್ದರು.

ಆಗಸ್ಟ್ 26ರಂದು ಈ ಕುರಿತು ಸುದ್ದಿ ವರದಿ ಪ್ರಕಟಿಸಿದ್ದ ಇಂಡಿಯಾ ಟುಡೇ ಸುದ್ದಿ ವೆಬ್‌ಸೈಟ್‌ ” ಯುವತಿಯೊಬ್ಬಳು ಡ್ಯಾನ್ಸ್‌ ಮಾಡುತ್ತಿರುವ ವಿಡಿಯೋ ಬಿಜೆಪಿಯ ಪ್ರತಿಭಟನೆಯದ್ದು ಎಂದು ಟಿಎಂಸಿ ನಾಯಕರು ಆರೋಪಿಸಿದ್ದಾರೆ. ಬಿಜೆಪಿ ಅದನ್ನು ಅಲ್ಲಗಳೆದಿದೆ” ಎಂದಿತ್ತು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಅದು ಬಿಜೆಪಿಯ ಪ್ರತಿಭಟನೆಯ ವಿಡಿಯೋ ಅಲ್ಲ ಎಂದು ಗೊತ್ತಾಗಿದೆ.

ವಿಡಿಯೋ ಕುರಿತು ನಾವು ಮಾಹಿತಿ ಹುಡುಕಿದಾಗ ಖ್ಯಾತ ಫ್ಯಾಕ್ಟ್‌ಚೆಕ್ ವೆಬ್‌ಸೈಟ್‌ ಆಲ್ಟ್ ನ್ಯೂಸ್ ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ. ವರದಿಯಲ್ಲಿ “ಪಿಜುಶ್ ಭೌಮಿಕ್’ ಎಂಬ ವ್ಯಕ್ತಿ ಫೇಸ್‌ಬುಕ್‌ನಲ್ಲಿ ವೈರಲ್ ವಿಡಿಯೋ ಹಂಚಿಕೊಂಡು, ಆ ವಿಡಿಯೋವನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದಿದ್ದರು. ಅವರು ತಮ್ಮ ಪೋಸ್ಟ್‌ನಲ್ಲಿ ‘ದೇವಸ್ತುತಿ ದೇವನಾಥ್’ ಎಂಬ ನೃತ್ಯ ಶಿಕ್ಷಕಿಯ ಮತ್ತೊಂದು ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ” ಎಂದು ಹೇಳಿದೆ.

ಮುಂದುವರೆದು “ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ ವ್ಯಕ್ತಿ ಪಿಜುಶ್ ಭೌಮಿಕ್ ಅವರಿಗೆ ನಾವು ಕರೆ ಮಾಡಿದ್ದೇವೆ. ಅವರು ಆ ವಿಡಿಯೋ ಬಿಜೆಪಿ ಪ್ರತಿಭಟನೆಯದ್ದು ಎಂಬುವುದನ್ನು ಅಲ್ಲಗಳೆದಿದ್ದು, ಅದು ಗ್ರಾಮ ಹಬ್ಬದ ವಿಡಿಯೋ ಎಂಬುವುದಾಗಿ ಹೇಳಿದ್ದಾರೆ ಎಂದು” ಆಲ್ಟ್‌ ನ್ಯೂಸ್ ತಿಳಿಸಿದೆ.

“ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ನವದ್ವೀಪ್ ಪೊಲೀಸ್ ಠಾಣೆ ವ್ಯಾಪ್ತಿಯ ಚಾರ್ ಬ್ರಹ್ಮನಗರದಲ್ಲಿ ಪ್ರತಿ ವರ್ಷ ‘ಮಾ ಮಾನಸ ಪೂಜೆ’ಯ ಸಮಯದಲ್ಲಿ ಸೇವಕ ಸಮಿತಿ ಎಂಬ ಸ್ಥಳೀಯ ಕ್ಲಬ್ ಗ್ರಾಮ ಹಬ್ಬವೊಂದನ್ನು ಆಯೋಜಿಸುತ್ತದೆ. ಚಾರ್ ಬ್ರಹ್ಮನಗರ ಪ್ರದೇಶವು ನವದ್ವೀಪ್ ಬ್ಲಾಕ್‌ನ ಸಿಎಮ್‌ಸಿಬಿ ಗ್ರಾಮ ಪಂಚಾಯಿತಿಗೆ ಒಳಪಟ್ಟಿದೆ. ಈ ಪಂಚಾಯತಿಯು ಪ್ರಸ್ತುತ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ವಶದಲ್ಲಿದೆ”.

“‘ಮಾ ಮಾನಸ’ ಹಾವುಗಳ ಹಿಂದೂ ಜಾನಪದ ದೇವತೆ. ಆಕೆಯನ್ನು ಶ್ರಾವಣ ಮಾಸದಲ್ಲಿ ಮುಖ್ಯವಾಗಿ ಬಂಗಾಳ, ಒಡಿಶಾ ಮತ್ತು ಆಂಧ್ರಪ್ರದೇಶದಲ್ಲಿ ಮಹಿಳೆಯರು ಪೂಜಿಸುತ್ತಾರೆ. ಆಗಸ್ಟ್ ತಿಂಗಳಲ್ಲಿ ಮಾನಸ ಪೂಜೆಯ ಸಮಯದಲ್ಲಿ ಬಂಗಾಳದ ಹಲವಾರು ಭಾಗಗಳಲ್ಲಿ ಗ್ರಾಮೀಣ ಹಬ್ಬಗಳನ್ನು ಆಯೋಜಿಸಲಾಗುತ್ತದೆ” ಎಂದು ಆಲ್ಟ್‌ ನ್ಯೂಸ್ ಹೇಳಿದೆ.

“ನಾವು ದೂರವಾಣಿ ಮೂಲಕ ಮಾತನಾಡಿದ ಪಿಜುಶ್ ಭೌಮಿಕ್ ಅವರು ಚಾರ್ ಬ್ರಹ್ಮನಗರದ ಹಬ್ಬ ಆಯೋಜಕರಲ್ಲಿ ಒಬ್ಬರು. ಅವರು ನೀಡಿರುವ ಮಾಹಿತಿಯಂತೆ ಈ ವರ್ಷದ ಆಗಸ್ಟ್ 17ರಂದು ಮಾ ಮಾನಸ ಪೂಜೆ ಇತ್ತು. ಈ ಪ್ರಯುಕ್ತ ಆಗಸ್ಟ್ 17ರಿಂದ 22ರವರೆಗೆ ಹಬ್ಬ ಆಯೋಜಿಸಿದ್ದೆವು. ಕಾರ್ಯಕ್ರಮದ ವೇದಿಕೆಯಲ್ಲಿ ಆರ್‌ಜಿ ಕರ್ ಆಸ್ಪತ್ರೆಯ ಘಟನೆ ಖಂಡಿಸಿ ಪೋಸ್ಟರ್‌ಗಳನ್ನು ಹಾಕಿದ್ದೆವು. ಅದೇ ವೇದಿಕೆಯಲ್ಲಿ ಆಗಸ್ಟ್ 19ರಂದು ಯುವತಿಯೊಬ್ಬರು ನೃತ್ಯ ಮಾಡಿದ್ದರು. ಅದರ ವಿಡಿಯೋ ವೈರಲ್ ಆಗಿದೆ” ಆಲ್ಟ್ ನ್ಯೂಸ್ ವಿವರಿಸಿದೆ.

ಒಟ್ಟಿನಲ್ಲಿ ಗ್ರಾಮ ಹಬ್ಬದ ವಿಡಿಯೋವನ್ನು ಬಿಜೆಪಿಯ ಪ್ರತಿಭಟನೆಯ ವಿಡಿಯೋ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ. ಆರ್‌ಜಿ ಕರ್‌ ಆಸ್ಪತ್ರೆಯ ಅತ್ಯಾಚಾರ, ಕೊಲೆ ಘಟನೆ ಖಂಡಿಸಿದ ಪೋಸ್ಟರ್‌ಗಳು ವೇದಿಕೆ ಮೇಲೆ ಇರುವುದರಿಂದ ಹಲವರು ತಪ್ಪು ತಿಳಿದುಕೊಂಡಿರಬಹುದು.

PC : altnews.in

ಆದರೆ, ವೈರಲ್ ವಿಡಿಯೋದಲ್ಲಿರುವ ವೇದಿಕೆಯಲ್ಲಿ “ಜೈ ಮಾ ಮಾನಸ. ಗಂಗಾನದಿಯ ದಡದಲ್ಲಿ ಮಾ ಮಾನಸ ಮತ್ತು ಬೆಹುಲಾ-ಲಖಿಂದರ್ ಮೇಳ. ದಿನಾಂಕ : 31 ಶ್ರಾವಣದಿಂದ ಐದು ದಿನಗಳು. ಸ್ಥಳ: ಚಾರ್ ಬ್ರಹ್ಮನಗರ ಸೇವಕ ಸಮಿತಿ ಮೈದಾನ ಮತ್ತು ಗಂಗಾ ನದಿ ದಂಡೆ. ಸೇವಕ ಸಮಿತಿಯಿಂದ ಆಯೋಜಿಸಲಾಗಿದೆ” ಎಂದು ಬ್ಯಾನರ್‌ ಹಾಕಿರುವುದು ನೋಡಬಹುದು. ಆ ಬ್ಯಾನರ್‌ನಲ್ಲಿ ಹಿಂದೂ ದೇವಿಯ ಫೋಟೋ ಕೂಡ ಇದೆ.

ಇದನ್ನೂ ಓದಿ : FACT CHECK : KPSC ಪರೀಕ್ಷೆ ಕುರಿತು ಸುಳ್ಳು ಸುದ್ದಿ ಹಂಚಿಕೊಂಡ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...