Homeಮುಖಪುಟಹೆಚ್ಚುತ್ತಿರುವ ಮಹಿಳೆಯರ ಮೇಲಿನ ಅಪರಾಧ; ಮೋದಿ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ

ಹೆಚ್ಚುತ್ತಿರುವ ಮಹಿಳೆಯರ ಮೇಲಿನ ಅಪರಾಧ; ಮೋದಿ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ

- Advertisement -
- Advertisement -

ಮಹಿಳೆಯರ ಸುರಕ್ಷತೆ ಕುರಿತು ಕೇಂದ್ರದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ವಾಗ್ದಾಳಿ ನಡೆಸಿದ್ದು, “ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯಲ್ಲಿ ಮಾಡಿದ ಭಾಷಣಗಳಲ್ಲಿ ಈ ವಿಷಯದ ಬಗ್ಗೆ ಸಾಕಷ್ಟು ಬಾರಿ ಮಾತನಾಡಿದ್ದಾರೆ. ಆದರೆ, ಅವರ ಸರ್ಕಾರವು ಮಹಿಳೆಯರ ಮೇಲಿನ ಅಪರಾಧಗಳನ್ನು ತಡೆಯುವ ಯಾವುದೇ ಕೆಲಸ ಮಾಡಿಲ್ಲ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಮಹಿಳೆಯರ ಮೇಲಿನ ಅಪರಾಧಗಳು ಗಂಭೀರ ಸಮಸ್ಯೆಯಾಗಿದ್ದು, ಈ ಅಪರಾಧಗಳನ್ನು ತಡೆಯುವುದು ದೇಶಕ್ಕೆ ದೊಡ್ಡ ಸವಾಲಾಗಿದೆ” ಎಂದು ಖರ್ಗೆ ಪ್ರತಿಪಾದಿಸಿದರು.

“ನಾವೆಲ್ಲರೂ ಒಗ್ಗೂಡಬೇಕು ಮತ್ತು ಸಮಾಜದ ಪ್ರತಿಯೊಂದು ವರ್ಗವನ್ನು ತೆಗೆದುಕೊಂಡು ಹೋಗುವ ಮೂಲಕ ಇದಕ್ಕೆ ಪರಿಹಾರಗಳನ್ನು ಕಂಡುಕೊಳ್ಳಬೇಕು” ಎಂದು ಕಾಂಗ್ರೆಸ್ ಮುಖ್ಯಸ್ಥರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ- ಹತ್ಯೆ ಮತ್ತು ದೇಶದ ಇತರ ಭಾಗಗಳಲ್ಲಿ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಗಳ ಕುರಿತು ರಾಷ್ಟ್ರವ್ಯಾಪಿ ಆಕ್ರೋಶದ ಹಿನ್ನೆಲೆಯಲ್ಲಿ ಅವರ ಹೇಳಿಕೆಗಳು ಬಂದಿವೆ.

“ದೇಶದಲ್ಲಿ ಪ್ರತಿ ಗಂಟೆಗೆ 43 ಮಹಿಳೆಯರ ವಿರುದ್ಧ ಅಪರಾಧಗಳು ದಾಖಲಾಗುತ್ತಿವೆ. ನಮ್ಮ ದೇಶದ ಅತ್ಯಂತ ದುರ್ಬಲ ದಲಿತ-ಬುಡಕಟ್ಟು ವರ್ಗದ ಮಹಿಳೆಯರು ಮತ್ತು ಮಕ್ಕಳ ವಿರುದ್ಧ ಪ್ರತಿದಿನ 22 ಅಪರಾಧಗಳು ದಾಖಲಾಗುತ್ತವೆ. ಭಯ, ಬೆದರಿಕೆ, ಸಾಮಾಜಿಕ ಕಾರಣಗಳಿಂದಾಗಿ ಅಸಂಖ್ಯಾತ ಅಪರಾಧಗಳನ್ನು ಸಹ ನೋಂದಾಯಿಸುತ್ತಿಲ್ಲ” ಎಂದು ಕಾಂಗ್ರೆಸ್ ಮುಖ್ಯಸ್ಥರು ಹೇಳಿದರು.

“ನಾವು ದೌರ್ಜನ್ಯಗಳನ್ನು ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಳ್ಳಲು ಸಮರ್ಥರಾಗಿದ್ದೇವೆಯೇ? ನಮ್ಮ ಕ್ರಿಮಿನಲ್ ನ್ಯಾಯ ವ್ಯವಸ್ಥೆಯು ಸುಧಾರಿಸಿದೆಯೇ? ಸಮಾಜದ ಶೋಷಿತ ಮತ್ತು ವಂಚಿತ ವರ್ಗಗಳು ಈಗ ಸುರಕ್ಷಿತ ವಾತಾವರಣದಲ್ಲಿ ಬದುಕಲು ಸಮರ್ಥವಾಗಿವೆಯೇ” ಎಂದು ಅವರು ಪ್ರಶ್ನಿಸಿದ್ದಾರೆ.

“ಪ್ರತಿ ಗೋಡೆಯ ಮೇಲೆ ಬೇಟಿ ಬಚಾವೋ ಪೇಂಟಿಂಗ್ ಸಾಮಾಜಿಕ ಬದಲಾವಣೆಯನ್ನು ತರುತ್ತದೆಯೇ ಅಥವಾ ಸರ್ಕಾರಗಳ ಕಾನೂನು ಮತ್ತು ಸುವ್ಯವಸ್ಥೆಯನ್ನು ಸಮರ್ಥಗೊಳಿಸುತ್ತದೆ. ಸರ್ಕಾರ ಮತ್ತು ಆಡಳಿತವು ಅಪರಾಧವನ್ನು ಮರೆಮಾಡಲು ಪ್ರಯತ್ನಿಸಲಿಲ್ಲವೇ? ಸತ್ಯ ಹೊರಬರದಂತೆ ಪೊಲೀಸರು ಬಲಿಪಶುಗಳನ್ನು ಬಲವಂತವಾಗಿ ಅಂತ್ಯಸಂಸ್ಕಾರ ಮಾಡುವುದನ್ನು ನಿಲ್ಲಿಸಿದ್ದಾರೆಯೇ” ಎಂದು ಕಾಂಗ್ರೆಸ್ ಮುಖ್ಯಸ್ಥರು ಪ್ರಶ್ನಿಸಿದ್ದಾರೆ.

“2012 ರಲ್ಲಿ ದೆಹಲಿಯಲ್ಲಿ ನಿರ್ಭಯಾ ಪ್ರಕರಣದ ನಂತರ, ನ್ಯಾಯಮೂರ್ತಿ ವರ್ಮಾ ಸಮಿತಿಯ ಶಿಫಾರಸುಗಳನ್ನು ಇಂದಿಗೂ ಜಾರಿಗೆ ತರಲು ನಮಗೆ ಸಾಧ್ಯವಾಗುತ್ತಿದೆಯೇ” ಎಂದು ಖರ್ಗೆ ಪ್ರಶ್ನಿಸಿದರು.

ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) 2013 ರಲ್ಲಿ ಜಾರಿಗೊಳಿಸಲಾದ ಕಾಯಿದೆಯ ನಿಬಂಧನೆಗಳನ್ನು ಸರಿಯಾಗಿ ಅನುಸರಿಸಲಾಗುತ್ತಿದೆಯೇ ಎಂದು ಖರ್ಗೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ; ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್‌ಗೆ ಮಧ್ಯಂತರ ಪರಿಹಾರ ನೀಡಲು ನಿರಾಕರಿಸಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...