Homeಮುಖಪುಟಹಿಂದುತ್ವವಾದಿಗಳಿಂದ ಪ್ರತಿಭಟನೆ : ಖರೀದಿಸಿದ ಬೆನ್ನಲ್ಲೇ ಮನೆ ಮಾರಾಟಕ್ಕಿಟ್ಟ ಮುಸ್ಲಿಂ ಕುಟುಂಬ ; ವರದಿ

ಹಿಂದುತ್ವವಾದಿಗಳಿಂದ ಪ್ರತಿಭಟನೆ : ಖರೀದಿಸಿದ ಬೆನ್ನಲ್ಲೇ ಮನೆ ಮಾರಾಟಕ್ಕಿಟ್ಟ ಮುಸ್ಲಿಂ ಕುಟುಂಬ ; ವರದಿ

- Advertisement -
- Advertisement -

ಉತ್ತರ ಪ್ರದೇಶದ ಬರೇಲಿಯ ಹಿಂದೂ ಪ್ರಾಬಲ್ಯ ಪ್ರದೇಶದಲ್ಲಿ ಮುಸ್ಲಿಂ ಕುಟುಂಬವೊಂದು ಮನೆ ಖರೀದಿಸಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಹಾಗಾಗಿ, ಖರೀದಿಸಿದ ಕೆಲವೇ ದಿನಗಳಲ್ಲಿ ಮುಸ್ಲಿಂ ಕುಟುಂಬ ಮನೆ ಮಾರಲು ನಿರ್ಧರಿಸಿದೆ ಎಂದು ದಿ ವೈರ್ ವರದಿ ಮಾಡಿದೆ.

ಮುಸ್ಲಿಂ ಕುಟುಂಬಕ್ಕೆ ಮನೆ ಮಾರಾಟ ಮಾಡಿರುವ ವಿಶಾಲ್ ಸಕ್ಸೇನಾ ಎಂಬವರು ಪೊಲೀಸರಿಗೆ ಪತ್ರವೊಂದನ್ನು ಬರೆದಿದ್ದು, “ಹಿಂದುತ್ವ ಸಂಘಟನೆಯೊಂದಿಗೆ ಸೇರಿಕೊಂಡು ಸ್ಥಳೀಯರು ಮನೆ ಮಾರಾಟದ ಬಗ್ಗೆ ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಕೋಮು ಸೌಹಾರ್ದತೆಯನ್ನು ಕೆಡಿಸುವ ಸಲುವಾಗಿ ಸಾಮೂಹಿಕ ವಲಸೆಯ ಬೆದರಿಕೆ ಹಾಕಿದ್ದಾರೆ” ಎಂದು ಹೇಳಿದ್ದಾರೆ.

ದಿ ವೈರ್ ಜೊತೆ ಮಾತನಾಡಿರುವ ಸಕ್ಸೇನಾ ಅವರು ” ಈ ಹಿಂದೆ 10-12 ಮಂದಿ ನನ್ನ ಮನೆ ಖರೀದಿಸಲು ಬಂದಿದ್ದರು. ಆದರೆ, ಮನೆ ಸೂಫಿ ಸಂತರ ದರ್ಗಾ ಮತ್ತು ಮುಸ್ಲಿಂ ಬಾಹುಳ್ಯದ ಪ್ರದೇಶಕ್ಕೆ ಹೊಂದಿಕೊಂಡಿರುವುದರಿಂದ ಅವರು ಮನೆ ಖರೀದಿಸಿಲ್ಲ” ಎಂದು ತಿಳಿಸಿದ್ದಾರೆ.

“ನನಗೆ ಮನೆ ವಾಪಸ್ ಬೇಡ, ಆದರೆ ಮುಸ್ಲಿಂ ಕುಟುಂಬಕ್ಕೆ ಮನೆ ಕೊಟ್ಟಿರುವುದನ್ನು ವಿರೋಧಿಸುವುದರ ಹಿಂದೆ ನಗರದ ಹೆಸರನ್ನು ಹಾಳು ಮಾಡುವ ಉದ್ದೇಶವಿದೆ” ಎಂದು ಸಕ್ಸೇನಾ ಆರೋಪಿಸಿದ್ದಾರೆ.

ಸಕ್ಸೇನಾ ಅವರು ಪೊಲೀಸರಿಗೆ ಬರೆದಿರುವ ಪತ್ರದಲ್ಲಿ ಅವರ ಮನೆ ಮಾರಾಟದ ಬಗೆಗಿನ ಸುಳ್ಳು ಆರೋಪಗಳನ್ನು ವಿವರಿಸಿಲ್ಲ. ಆದರೆ, ಖರೀದಿ ಒಪ್ಪಂದದಲ್ಲಿ ಸ್ಥಳೀಯ ಮಸೀದಿಯನ್ನು ಅಕ್ರಮ ಸ್ವಾಧೀನದಲ್ಲಿಟ್ಟುಕೊಂಡಿರುವ ಅಸ್ಸಾಮಿ ಮೌಲಾನಾ ಒಬ್ಬರು ಭಾಗಿಯಾಗಿದ್ದಾರೆ ಎಂದು ಕೆಲ ಸ್ಥಳೀಯ ನಿವಾಸಿಗಳು ಹೇಳಿರುವುದಾಗಿ ದಿ ವೈರ್ ತಿಳಿಸಿದೆ.

ಈ ಎಲ್ಲಾ ಗೊಂದಲಗಳ ನಡುವೆ ಸಕ್ಸೇನಾ ಅವರಿಂದ ಮನೆ ಖರೀದಿಸಿರುವ ಶಬ್ನಂ ಎಂಬ ಮುಸ್ಲಿಂ ಮಹಿಳೆಯ ಕುಟುಂಬ, ಸೂಕ್ತ ಬೆಲೆ ನೀಡಲು ಸಿದ್ದರಿರುವ ಯಾವುದೇ ಸನಾತನಿ ಹಿಂದೂಗಳಿಗೆ ಮನೆ ಮಾರಾಟ ಮಾಡಲು ಸಿದ್ದ ಎಂದಿದೆ. ಶಬ್ನಂ ಕುಟುಂಬ ಕೆಲ ದಿನಗಳ ಹಿಂದೆಯಷ್ಟೇ ಸಕ್ಸೇನಾ ಅವರಿಂದ ಮನೆ ಖರೀದಿಸಿತ್ತು. ಅದು ಬರೇಲಿಯಾ ಹಿಂದೂ ಪ್ರಾಬಲ್ಯ ಪ್ರದೇಶ ಪಂಜಾಬ್ ಪುರದಲ್ಲಿದೆ.

ಹಿಂದೂ ಪ್ರಾಬಲ್ಯ ಪ್ರದೇಶದಲ್ಲಿ ಮನೆ ಖರೀದಿಸುವಾಗ ಶಬ್ನಂ ಕುಟುಂಬ ತಲೆ ಮಾರುಗಳಿಂದ ಕಾಪಾಡಿಕೊಂಡು ಬಂದಿರುವ ನಗರದ ಕೋಮು ಸಾಮರಸ್ಯವನ್ನು ನಂಬಿತ್ತು. ಆದರೆ, ಅವರ ನಂಬಿಕೆ ಹುಸಿಯಾಗಿದೆ. ಮನೆ ಖರೀದಿಸಿದ ಬೆನ್ನಲ್ಲೇ ಪಂಜಾಬ್‌ ಪುರದ ಹಿಂದೂಗಳು ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಮನೆಯ ನೋಂದಣಿ ಮಾಡಬಾರದು ಎಂದಿದ್ದಾರೆ. ಮುಸ್ಲಿಂ ಕುಟುಂಬಕ್ಕೆ ಮನೆ ಕೊಟ್ಟರೆ ‘ಸಾಮೂಹಿಕ ವಲಸೆ’ ಹೋಗುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ವರದಿ ವಿವರಿಸಿದೆ.

ಕೆಲ ಹಿಂದೂ ನಿವಾಸಿಗಳು ತಮ್ಮ ಮನೆಯ ಕಾಂಪೌಡ್ ಮೇಲೆ ‘ಸಾಮೂಹಿಕ್ ಪಲಾಯನ್’ (ಸಾಮೂಹಿಕ ಪಲಾಯನ) ಎಂಬ ಪೋಸ್ಟರ್ ಅಂಟಿಸಿ ಶಬ್ನಂ ಕುಟುಂಬಕ್ಕೆ ಮನೆ ಕೊಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಮುಸ್ಲಿಮರಿಗೆ ಮನೆ ಕೊಟ್ಟರೆ ಅದು ‘ಲವ್‌ ಜಿಹಾದ್‌’ಗೆ ಅವಕಾಶ ಕೊಟ್ಟಂತಾಗುತ್ತದೆ ಎಂದು ಕೆಲವರು ಹೇಳಿದ್ದಾರೆ, ಇನ್ನೂ ಕೆಲವರು ಮುಸ್ಲಿಮರ ಆಹಾರ ಪದ್ದತಿಗೆ ಆಕ್ಷೇಪ ಎತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಶಬ್ನಂ ಕುಟುಂಬಕ್ಕೆ ಮನೆ ಕೊಟ್ಟಿರುವುದನ್ನು ವಿರೋಧಿಸುತ್ತಿರುವ ಜನರನ್ನು ದಿ ವೈರ್ ಮಾತನಾಡಿಸಿದ್ದು,” ಒಬ್ಬ ವ್ಯಕ್ತಿ ಶಬ್ನಂ ಅವರ ಸಹೋದರ ನಸೀಮ್ 2010 ರ ಬರೇಲಿ ಗಲಭೆಯ ಮಾಸ್ಟರ್ ಮೈಂಡ್ ಎಂದು ಘೋಷಿಸುವ ಮಟ್ಟಕ್ಕೆ ಹೋಗಿದ್ದಾರೆ. ಇನ್ನೊಬ್ಬರು ಅಸ್ಸಾಮಿಗಳು ಮತ್ತು ಬಾಂಗ್ಲಾದೇಶಿಯರ ಬಗ್ಗೆ ಜಾಗರೂಕರಾಗಿರುವಂತೆ ಮುಖ್ಯಮಂತ್ರಿ ಮತ್ತು ಪ್ರಧಾನಿ ಹೇಳಿದ್ದಾರೆ ಎಂದಿದ್ದಾರೆ. ಆದರೆ, ಸಿಎಂ ಮತ್ತು ಪ್ರಧಾನಿ ಆ ರೀತಿ ಹೇಳಿರುವುದು ನಮಗೆ ಕಂಡು ಬಂದಿಲ್ಲ ಎಂದು ದಿ ವೈರ್ ವಿವರಿಸಿದೆ.

ಒಟ್ಟಿನಲ್ಲಿ ಹಿಂದೂ ಪ್ರಾಬಲ್ಯದ ಪ್ರದೇಶದಲ್ಲಿ ಹಿಂದೂ ವ್ಯಕ್ತಿಯೇ ಮುಸ್ಲಿಂ ಕುಟುಂಬಕ್ಕೆ ಮನೆ ಮಾರಾಟ ಮಾಡಿರುವುದಕ್ಕೆ ಸ್ಥಳೀಯ ಹಿಂದೂಗಳಿಂದ ವಿರೋಧ ವ್ಯಕ್ತವಾಗಿದೆ. ಇದರ ಹಿಂದೆ ಹಿಂದುತ್ವ ಸಂಘಟನೆಯ ಕುಮ್ಮಕ್ಕು ಇದೆ ಎಂದು ಮನೆ ಮಾರಿರುವ ಸಕ್ಸೇನಾ ಹೇಳಿದ್ದಾರೆ. ವಿರೋಧ ವ್ಯಕ್ತವಾದ ಹಿನ್ನೆಲೆ, ನಗರದ ಸಾಮರಸ್ಯ ಕಾಪಾಡಲು ಮುಸ್ಲಿಂ ಕುಟುಂಬ ಮನೆ ಮಾರಾಟಕ್ಕೆ ಮುಂದಾಗಿದೆ ಎಂದು ದಿ ವೈರ್ ವಿವರಿಸಿದೆ.

ಇದನ್ನೂ ಓದಿ : ಅಸ್ಸಾಂ | ‘ಮುಸ್ಲಿಂ ವಿವಾಹ, ವಿಚ್ಛೇದನ ನೋಂದಣಿ ಕಡ್ಡಾಯ’ ಮಸೂದೆ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...