Homeಮುಖಪುಟಉಕ್ರೇನ್ ಯುದ್ಧ ಟೀಕಿಸಿದ ರಷ್ಯಾದ ಪತ್ರಕರ್ತನಿಗೆ 8 ವರ್ಷ ಜೈಲು ಶಿಕ್ಷೆ!

ಉಕ್ರೇನ್ ಯುದ್ಧ ಟೀಕಿಸಿದ ರಷ್ಯಾದ ಪತ್ರಕರ್ತನಿಗೆ 8 ವರ್ಷ ಜೈಲು ಶಿಕ್ಷೆ!

- Advertisement -
- Advertisement -

ಉಕ್ರೇನ್‌ನಲ್ಲಿ ನಾಗರಿಕರ ಮೇಲೆ ರಷ್ಯಾ ನಡೆಸುತ್ತಿರುವ ದಾಳಿಯ ಕುರಿತು ತನ್ನ ಪತ್ರಿಕೆಯಲ್ಲಿ ವರದಿ ಮಾಡಿದ ರಷ್ಯಾದ ವಾರ್ತಾಪತ್ರಿಕೆಯ ಪ್ರಕಾಶಕರೊಬ್ಬರನ್ನು ಶುಕ್ರವಾರ ಸೈಬೀರಿಯಾದ ನ್ಯಾಯಾಲಯ ತಪ್ಪಿತಸ್ಥನೆಂದು ಘೋಷಿಸಿ ಎಂಟು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ವರದಿಗಳು ಹೇಳಿವೆ.

ಗೊರ್ನೊ-ಅಲ್ಟೈಸ್ಕ್ ನಗರದ ನ್ಯಾಯಾಲಯವು ಅಲ್ಟಾಯ್‌ನ ಸೈಬೀರಿಯನ್ ಪ್ರದೇಶದ ಪ್ರಮುಖ ಪತ್ರಕರ್ತ ಮತ್ತು ಸ್ಥಳೀಯ ಪತ್ರಿಕೆಯಾದ ಲಿಸ್ಟಾಕ್ ಅಥವಾ ರಷ್ಯನ್ ಭಾಷೆಯ “ಕರಪತ್ರ” ದ ಪ್ರಕಾಶಕ ಸೆರ್ಗೆಯ್ ಮಿಖೈಲೋವ್ ಅವರನ್ನು ರಷ್ಯಾ ಸೈನ್ಯದ ಬಗ್ಗೆ “ಸುಳ್ಳು ಮಾಹಿತಿ ಹರಡಿದ” ಅಪರಾಧಿ ಎಂದು ತೀರ್ಪು ನೀಡಿದೆ ಎಂದು ನೆಟ್ ಫ್ರೀಡಮ್ಸ್ ಹಕ್ಕುಗಳ ಗುಂಪು ಹೇಳಿರುವುದಾಗಿ ವರದಿಗಳು ತಿಳಿಸಿವೆ.

ಫೆಬ್ರವರಿ 2022 ರಲ್ಲಿ ರಷ್ಯಾ ಉಕ್ರೇನ್ ಅನ್ನು ಆಕ್ರಮಿಸಿದ ಕೆಲ ದಿನಗಳ ನಂತರ ಅಳವಡಿಸಿಕೊಂಡ ಹೊಸ ಕಾನೂನಿನ ಪ್ರಕಾರ, ರಷ್ಯಾದಲ್ಲಿ ಯುದ್ಧವನ್ನು ಟೀಕಿಸುವುದು ಕ್ರಿಮಿನಲ್ ಅಪರಾಧವಾಗಿದೆ. ಅನೇಕ ಪತ್ರಕರ್ತರು ಸೇರಿದಂತೆ ನೂರಾರು ರಷ್ಯನ್ನರನ್ನು ಈ ಕಾನೂನಡಿ ವಿಚಾರಣೆಗೆ ಒಳಪಡಿಸಲಾಗಿದೆ.

ರಾಜಕೀಯ ಬಂಧನಗಳನ್ನು ಪತ್ತೆಹಚ್ಚುವ ರಷ್ಯಾದ ಪ್ರಮುಖ ಹಕ್ಕುಗಳ ಗುಂಪುಗಳಲ್ಲಿ ಒಂದಾಗಿರುವ OVD-Info ಪ್ರಕಾರ, ಫೆಬ್ರವರಿ 2022ರಲ್ಲಿ ಅಳವಡಿಸಿಕೊಂಡ ಕಾನೂನಡಿ, ಯುದ್ಧ ವಿರೋಧಿಸಿದ ಕಾರಣಕ್ಕೆ 1000ಕ್ಕೂ ಹೆಚ್ಚು ಜನರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ.

ನೆಟ್ ಫ್ರೀಡಮ್ಸ್ ಪ್ರಕಾರ, ಉಕ್ರೇನ್‌ನಲ್ಲಿ ನಾಗರಿಕರ ಮೇಲೆ ರಷ್ಯಾ ನಡೆಸುತ್ತಿರುವ ದಾಳಿಯ ಕುರಿತು ತನ್ನ ಸಾಮಾಜಿಕ ಮಾಧ್ಯಮ ಖಾತೆ ಮತ್ತು ವೆಬ್‌ಸೈಟ್‌ನಲ್ಲಿ ಸರಣಿ ವರದಿ ಪ್ರಕಟಿಸಿದ ಬಳಿಕ ಲಿಸ್ಟಾಕ್‌ ಪತ್ರಿಕೆ ಪ್ರಕಾಶಕ ಮಿಖೈಲೋವ್ ಅವರನ್ನು ಈ ವರ್ಷದ ಏಪ್ರಿಲ್‌ನಲ್ಲಿ ಬಂಧಿಸಲಾಗಿತ್ತು.

ಕಳೆದ ಬುಧವಾರ ನ್ಯಾಯಾಲಯಕ್ಕೆ ತನ್ನ ಕೊನೆಯ ಹೇಳಿಕೆ ನೀಡಿರುವ ಪತ್ರಕರ್ತ ಮಿಖೈಲೋವ್ “ನನ್ನ ದೇಶದ ಜನರಿಗೆ ಪ್ರಸ್ತುತ ನಡೆಯುತ್ತಿರುವ ಯುದ್ಧದ ಕುರಿತು ಸತ್ಯ ತಿಳಿಸಲು ಮತ್ತು ರಷ್ಯಾದ ರಕ್ಷಣೆ ಎಂಬ ಪ್ರೊಪಗಂಡ ಆಧಾರಿತ ಸುಳ್ಳುಗಳಿಂದ ಅವರನ್ನು ರಕ್ಷಿಸಲು ನಾನು ಸುದ್ದಿ ಪ್ರಕಟಿಸಿದೆ” ಎಂದು ಹೇಳಿದ್ದಾಗಿ ರಷ್ಯಾದ ಸ್ವತಂತ್ರ ಸುದ್ದಿವಾಹಿನಿ ಮೆಡುಜಾ ತಿಳಿಸಿದೆ.

“ಸತ್ಯ ಕಹಿಯಾಗಿದ್ದರೂ ಇಷ್ಟು ವರ್ಷಗಳಲ್ಲಿ ನಾನು ಅದನ್ನೇ ಬರೆಯುತ್ತಿದ್ದೇನೆ ಎಂದು ಮಿಖೈಲೋವ್ ನ್ಯಾಯಾಲಯಕ್ಕೆ ಹೇಳಿದ್ದಾರೆ” ಎಂದು ಮೆಡುಜಾ ವರದಿ ಮಾಡಿದೆ.

ಇದನ್ನೂ ಓದಿ : ಶಂಭು ಗಡಿಯಲ್ಲಿ ರೈತರ ಪ್ರತಿಭಟನೆ; ಕುಸ್ತಿಪಟು ವಿನೇಶಾ ಫೋಗಟ್‌ಗೆ ಹಾರ ಹಾಕಿ ಸ್ವಾಗತಿಸಿದ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...