Homeಮುಖಪುಟಉಕ್ರೇನ್ ಯುದ್ಧ ಟೀಕಿಸಿದ ರಷ್ಯಾದ ಪತ್ರಕರ್ತನಿಗೆ 8 ವರ್ಷ ಜೈಲು ಶಿಕ್ಷೆ!

ಉಕ್ರೇನ್ ಯುದ್ಧ ಟೀಕಿಸಿದ ರಷ್ಯಾದ ಪತ್ರಕರ್ತನಿಗೆ 8 ವರ್ಷ ಜೈಲು ಶಿಕ್ಷೆ!

- Advertisement -
- Advertisement -

ಉಕ್ರೇನ್‌ನಲ್ಲಿ ನಾಗರಿಕರ ಮೇಲೆ ರಷ್ಯಾ ನಡೆಸುತ್ತಿರುವ ದಾಳಿಯ ಕುರಿತು ತನ್ನ ಪತ್ರಿಕೆಯಲ್ಲಿ ವರದಿ ಮಾಡಿದ ರಷ್ಯಾದ ವಾರ್ತಾಪತ್ರಿಕೆಯ ಪ್ರಕಾಶಕರೊಬ್ಬರನ್ನು ಶುಕ್ರವಾರ ಸೈಬೀರಿಯಾದ ನ್ಯಾಯಾಲಯ ತಪ್ಪಿತಸ್ಥನೆಂದು ಘೋಷಿಸಿ ಎಂಟು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ವರದಿಗಳು ಹೇಳಿವೆ.

ಗೊರ್ನೊ-ಅಲ್ಟೈಸ್ಕ್ ನಗರದ ನ್ಯಾಯಾಲಯವು ಅಲ್ಟಾಯ್‌ನ ಸೈಬೀರಿಯನ್ ಪ್ರದೇಶದ ಪ್ರಮುಖ ಪತ್ರಕರ್ತ ಮತ್ತು ಸ್ಥಳೀಯ ಪತ್ರಿಕೆಯಾದ ಲಿಸ್ಟಾಕ್ ಅಥವಾ ರಷ್ಯನ್ ಭಾಷೆಯ “ಕರಪತ್ರ” ದ ಪ್ರಕಾಶಕ ಸೆರ್ಗೆಯ್ ಮಿಖೈಲೋವ್ ಅವರನ್ನು ರಷ್ಯಾ ಸೈನ್ಯದ ಬಗ್ಗೆ “ಸುಳ್ಳು ಮಾಹಿತಿ ಹರಡಿದ” ಅಪರಾಧಿ ಎಂದು ತೀರ್ಪು ನೀಡಿದೆ ಎಂದು ನೆಟ್ ಫ್ರೀಡಮ್ಸ್ ಹಕ್ಕುಗಳ ಗುಂಪು ಹೇಳಿರುವುದಾಗಿ ವರದಿಗಳು ತಿಳಿಸಿವೆ.

ಫೆಬ್ರವರಿ 2022 ರಲ್ಲಿ ರಷ್ಯಾ ಉಕ್ರೇನ್ ಅನ್ನು ಆಕ್ರಮಿಸಿದ ಕೆಲ ದಿನಗಳ ನಂತರ ಅಳವಡಿಸಿಕೊಂಡ ಹೊಸ ಕಾನೂನಿನ ಪ್ರಕಾರ, ರಷ್ಯಾದಲ್ಲಿ ಯುದ್ಧವನ್ನು ಟೀಕಿಸುವುದು ಕ್ರಿಮಿನಲ್ ಅಪರಾಧವಾಗಿದೆ. ಅನೇಕ ಪತ್ರಕರ್ತರು ಸೇರಿದಂತೆ ನೂರಾರು ರಷ್ಯನ್ನರನ್ನು ಈ ಕಾನೂನಡಿ ವಿಚಾರಣೆಗೆ ಒಳಪಡಿಸಲಾಗಿದೆ.

ರಾಜಕೀಯ ಬಂಧನಗಳನ್ನು ಪತ್ತೆಹಚ್ಚುವ ರಷ್ಯಾದ ಪ್ರಮುಖ ಹಕ್ಕುಗಳ ಗುಂಪುಗಳಲ್ಲಿ ಒಂದಾಗಿರುವ OVD-Info ಪ್ರಕಾರ, ಫೆಬ್ರವರಿ 2022ರಲ್ಲಿ ಅಳವಡಿಸಿಕೊಂಡ ಕಾನೂನಡಿ, ಯುದ್ಧ ವಿರೋಧಿಸಿದ ಕಾರಣಕ್ಕೆ 1000ಕ್ಕೂ ಹೆಚ್ಚು ಜನರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ.

ನೆಟ್ ಫ್ರೀಡಮ್ಸ್ ಪ್ರಕಾರ, ಉಕ್ರೇನ್‌ನಲ್ಲಿ ನಾಗರಿಕರ ಮೇಲೆ ರಷ್ಯಾ ನಡೆಸುತ್ತಿರುವ ದಾಳಿಯ ಕುರಿತು ತನ್ನ ಸಾಮಾಜಿಕ ಮಾಧ್ಯಮ ಖಾತೆ ಮತ್ತು ವೆಬ್‌ಸೈಟ್‌ನಲ್ಲಿ ಸರಣಿ ವರದಿ ಪ್ರಕಟಿಸಿದ ಬಳಿಕ ಲಿಸ್ಟಾಕ್‌ ಪತ್ರಿಕೆ ಪ್ರಕಾಶಕ ಮಿಖೈಲೋವ್ ಅವರನ್ನು ಈ ವರ್ಷದ ಏಪ್ರಿಲ್‌ನಲ್ಲಿ ಬಂಧಿಸಲಾಗಿತ್ತು.

ಕಳೆದ ಬುಧವಾರ ನ್ಯಾಯಾಲಯಕ್ಕೆ ತನ್ನ ಕೊನೆಯ ಹೇಳಿಕೆ ನೀಡಿರುವ ಪತ್ರಕರ್ತ ಮಿಖೈಲೋವ್ “ನನ್ನ ದೇಶದ ಜನರಿಗೆ ಪ್ರಸ್ತುತ ನಡೆಯುತ್ತಿರುವ ಯುದ್ಧದ ಕುರಿತು ಸತ್ಯ ತಿಳಿಸಲು ಮತ್ತು ರಷ್ಯಾದ ರಕ್ಷಣೆ ಎಂಬ ಪ್ರೊಪಗಂಡ ಆಧಾರಿತ ಸುಳ್ಳುಗಳಿಂದ ಅವರನ್ನು ರಕ್ಷಿಸಲು ನಾನು ಸುದ್ದಿ ಪ್ರಕಟಿಸಿದೆ” ಎಂದು ಹೇಳಿದ್ದಾಗಿ ರಷ್ಯಾದ ಸ್ವತಂತ್ರ ಸುದ್ದಿವಾಹಿನಿ ಮೆಡುಜಾ ತಿಳಿಸಿದೆ.

“ಸತ್ಯ ಕಹಿಯಾಗಿದ್ದರೂ ಇಷ್ಟು ವರ್ಷಗಳಲ್ಲಿ ನಾನು ಅದನ್ನೇ ಬರೆಯುತ್ತಿದ್ದೇನೆ ಎಂದು ಮಿಖೈಲೋವ್ ನ್ಯಾಯಾಲಯಕ್ಕೆ ಹೇಳಿದ್ದಾರೆ” ಎಂದು ಮೆಡುಜಾ ವರದಿ ಮಾಡಿದೆ.

ಇದನ್ನೂ ಓದಿ : ಶಂಭು ಗಡಿಯಲ್ಲಿ ರೈತರ ಪ್ರತಿಭಟನೆ; ಕುಸ್ತಿಪಟು ವಿನೇಶಾ ಫೋಗಟ್‌ಗೆ ಹಾರ ಹಾಕಿ ಸ್ವಾಗತಿಸಿದ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...