Homeಮುಖಪುಟಗೋಮಾಂಸ ಸೇವನೆ ಶಂಕೆ : ಸ್ವಯಂ ಘೋಷಿತ ಗೋರಕ್ಷಕರಿಂದ ಕಾರ್ಮಿಕನ ಥಳಿಸಿ ಹತ್ಯೆ

ಗೋಮಾಂಸ ಸೇವನೆ ಶಂಕೆ : ಸ್ವಯಂ ಘೋಷಿತ ಗೋರಕ್ಷಕರಿಂದ ಕಾರ್ಮಿಕನ ಥಳಿಸಿ ಹತ್ಯೆ

- Advertisement -
- Advertisement -

ಆಗಸ್ಟ್ 27 (ಮಂಗಳವಾರ) ಹರ್ಯಾಣದ ಚಾರ್ಖಿ ದಾದ್ರಿಯಲ್ಲಿ ಪಶ್ಚಿಮ ಬಂಗಾಳದ 26 ವರ್ಷದ ವಲಸೆ ಕಾರ್ಮಿಕನನ್ನು ಸ್ವಯಂ ಘೋಷಿತ ಗೋರಕ್ಷಕರ ಗುಂಪೊಂದು ಬರ್ಬರವಾಗಿ ಥಳಿಸಿ ಹತ್ಯೆ ಮಾಡಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದ್ದು, ಇಬ್ಬರು ಅಪ್ರಾಪ್ತರನ್ನು ವಶಕ್ಕೆ ಪಡೆಯಲಾಗಿದೆ. ಅಭಿಷೇಕ್, ರವೀಂದರ್, ಮೋಹಿತ್, ಕಮಲಜೀತ್ ಮತ್ತು ಸಾಹಿಲ್ ಬಂಧಿತ ಗೋರಕ್ಷಕರ ತಂಡದ ಸದಸ್ಯರು ಎಂದು ಪೊಲೀಸರು ತಿಳಿಸಿದ್ದಾರೆ.

ಸಾಬಿರ್ ಕೊಲೆಯಾದ ಅಸ್ಸಾಂನ ವಲಸಿಗ. ಈತನ ಗೆಳೆಯ ಅಸಿರುದ್ದೀನ್ ಮೇಲೂ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಗಾಯಗೊಂಡಿರುವ ಆತ ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇಬ್ಬರೂ ಗೋಮಾಂಸ ಸೇವಿಸಿರುವ ಶಂಕೆಯ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಗುಜರಿ ವಸ್ತುಗಳನ್ನು ಬಸ್‌ ನಿಲ್ದಾಣಕ್ಕೆ ತಲುಪಿಸುವ ನೆಪದಲ್ಲಿ ಸಾಬಿರ್ ಮತ್ತು ಅಸಿರುದ್ದೀನ್ ಅನ್ನು ಕರೆದೊಯ್ದ ದುಷ್ಕರ್ಮಿಗಳು, ಅವರ ಹಲ್ಲೆ ನಡೆಸಿದ್ದಾರೆ. ಸುತ್ತಮುತ್ತಲಿದ್ದ ಜನರು ಮಧ್ಯ ಪ್ರವೇಶಿಸಿದಾಗ ಇಬ್ಬರನ್ನೂ ಬೈಕ್ ಹತ್ತಿಸಿ ಬೇರೆ ಬೇರೆ ಸ್ಥಳಗಳಿಗೆ ಕರೆದುಕೊಂಡು ಹೋಗಿದ್ದಾರೆ.

ಬಳಿಕ ಭಂಡ್ವಾ ಗ್ರಾಮದ ಕಾಲುವೆಯ ಬಳಿ ಸಾಬಿರ್‌ನ ಶವ ಪತ್ತೆಯಾಗಿದೆ. ಅಸಿರುದ್ದೀನ್ ಗಾಯಗೊಂಡ ಸ್ಥಿತಿಯಲ್ಲಿ ಮತ್ತೊಂದು ಪ್ರದೇಶದಲ್ಲಿ ಪತ್ತೆಯಾಗಿದ್ದಾನೆ. ನಂತರ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ಕುರಿತು ಮಾಹಿತಿ ನೀಡಿರುವ ಚಾರ್ಖಿ ದಾದ್ರಿಯ ಪೊಲೀಸ್ ಅಧೀಕ್ಷಕಿ ಪೂಜಾ ವಶಿಷ್ಠ ಅವರು “ಆರೋಪಿಗಳು ಗೋರಕ್ಷಕ ಗ್ಯಾಂಗ್‌ಗೆ ಸೇರಿದವರು. ಇಬ್ಬರು ಯುವಕರು ಗೋಮಾಂಸ ಸೇವಿಸಿದ್ದಾರೆಂದು ಶಂಕಿಸಿ ಥಳಿಸಿದ್ದಾರೆ. ಗ್ಯಾಂಗ್ ಇಬ್ಬರ ಮೇಲೆ ಹಲ್ಲೆ ನಡೆಸುತ್ತಿದ್ದಾಗ ಮಧ್ಯಪ್ರವೇಶಿಸಿದ ಜನರು ತಡೆದಿದ್ದಾರೆ. ಅಲ್ಲದೆ, ವಿಡಿಯೋ ರೆಕಾರ್ಡ್ ಮಾಡಿದ್ದಾರೆ. ಆದರೆ, ಅವರು ಪೊಲೀಸರಿಗೆ ಮಾಹಿತಿ ನೀಡಿಲ್ಲ” ಎಂದು ತಿಳಿಸಿರುವುದಾಗಿ ದಿ ಹಿಂದೂ ತಿಳಿಸಿದೆ.

ಸಂತ್ರಸ್ತರ ಸಂಬಂಧಿ ಸುಜಾವುದ್ದೀನ್, ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಮತ್ತು ಮೃತ ಸಾಬಿರ್‌ಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.

“ಗುಜರಿ ಮಾರಾಟ ಮಾಡುವ ನೆಪದಲ್ಲಿ ಕೆಲವರು ಬಂದು ನನ್ನ ಪತಿಯನ್ನು ಕರೆದುಕೊಂಡು ಹೋದರು ಎಂದು ನನ್ನ ಸಹೋದರಿಯಿಂದ ಕರೆ ಬಂದಿತ್ತು. ನಾನು ತಕ್ಷಣ ಪೊಲೀಸ್ ಠಾಣೆಗೆ ತೆರಳಿ ಮಾಹಿತಿ ನೀಡಿದೆ. ಅವರು ಹುಡುಕಾಡಿದಾಗ ಸಾಬಿರ್‌ ಕಾಲುವೆ ಬಳಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪ್ರಕರಣ ದೂರುದಾರ ಸುಜಾವುದ್ದೀನ್ ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

ಇದನ್ನೂ ಓದಿ : ಮಹಾರಾಷ್ಟ್ರ: ದನದ ಮಾಂಸ ಸಾಗಿಸುತ್ತಿದ್ದ ಶಂಕೆ; ವೃದ್ಧನೊಬ್ಬನ ಮೇಲೆ ಸಹ ಪ್ರಯಾಣಿಕರಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...