Homeಮುಖಪುಟಗೋಮಾಂಸ ಸೇವನೆ ಶಂಕೆ : ಸ್ವಯಂ ಘೋಷಿತ ಗೋರಕ್ಷಕರಿಂದ ಕಾರ್ಮಿಕನ ಥಳಿಸಿ ಹತ್ಯೆ

ಗೋಮಾಂಸ ಸೇವನೆ ಶಂಕೆ : ಸ್ವಯಂ ಘೋಷಿತ ಗೋರಕ್ಷಕರಿಂದ ಕಾರ್ಮಿಕನ ಥಳಿಸಿ ಹತ್ಯೆ

- Advertisement -
- Advertisement -

ಆಗಸ್ಟ್ 27 (ಮಂಗಳವಾರ) ಹರ್ಯಾಣದ ಚಾರ್ಖಿ ದಾದ್ರಿಯಲ್ಲಿ ಪಶ್ಚಿಮ ಬಂಗಾಳದ 26 ವರ್ಷದ ವಲಸೆ ಕಾರ್ಮಿಕನನ್ನು ಸ್ವಯಂ ಘೋಷಿತ ಗೋರಕ್ಷಕರ ಗುಂಪೊಂದು ಬರ್ಬರವಾಗಿ ಥಳಿಸಿ ಹತ್ಯೆ ಮಾಡಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದ್ದು, ಇಬ್ಬರು ಅಪ್ರಾಪ್ತರನ್ನು ವಶಕ್ಕೆ ಪಡೆಯಲಾಗಿದೆ. ಅಭಿಷೇಕ್, ರವೀಂದರ್, ಮೋಹಿತ್, ಕಮಲಜೀತ್ ಮತ್ತು ಸಾಹಿಲ್ ಬಂಧಿತ ಗೋರಕ್ಷಕರ ತಂಡದ ಸದಸ್ಯರು ಎಂದು ಪೊಲೀಸರು ತಿಳಿಸಿದ್ದಾರೆ.

ಸಾಬಿರ್ ಕೊಲೆಯಾದ ಅಸ್ಸಾಂನ ವಲಸಿಗ. ಈತನ ಗೆಳೆಯ ಅಸಿರುದ್ದೀನ್ ಮೇಲೂ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಗಾಯಗೊಂಡಿರುವ ಆತ ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇಬ್ಬರೂ ಗೋಮಾಂಸ ಸೇವಿಸಿರುವ ಶಂಕೆಯ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಗುಜರಿ ವಸ್ತುಗಳನ್ನು ಬಸ್‌ ನಿಲ್ದಾಣಕ್ಕೆ ತಲುಪಿಸುವ ನೆಪದಲ್ಲಿ ಸಾಬಿರ್ ಮತ್ತು ಅಸಿರುದ್ದೀನ್ ಅನ್ನು ಕರೆದೊಯ್ದ ದುಷ್ಕರ್ಮಿಗಳು, ಅವರ ಹಲ್ಲೆ ನಡೆಸಿದ್ದಾರೆ. ಸುತ್ತಮುತ್ತಲಿದ್ದ ಜನರು ಮಧ್ಯ ಪ್ರವೇಶಿಸಿದಾಗ ಇಬ್ಬರನ್ನೂ ಬೈಕ್ ಹತ್ತಿಸಿ ಬೇರೆ ಬೇರೆ ಸ್ಥಳಗಳಿಗೆ ಕರೆದುಕೊಂಡು ಹೋಗಿದ್ದಾರೆ.

ಬಳಿಕ ಭಂಡ್ವಾ ಗ್ರಾಮದ ಕಾಲುವೆಯ ಬಳಿ ಸಾಬಿರ್‌ನ ಶವ ಪತ್ತೆಯಾಗಿದೆ. ಅಸಿರುದ್ದೀನ್ ಗಾಯಗೊಂಡ ಸ್ಥಿತಿಯಲ್ಲಿ ಮತ್ತೊಂದು ಪ್ರದೇಶದಲ್ಲಿ ಪತ್ತೆಯಾಗಿದ್ದಾನೆ. ನಂತರ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ಕುರಿತು ಮಾಹಿತಿ ನೀಡಿರುವ ಚಾರ್ಖಿ ದಾದ್ರಿಯ ಪೊಲೀಸ್ ಅಧೀಕ್ಷಕಿ ಪೂಜಾ ವಶಿಷ್ಠ ಅವರು “ಆರೋಪಿಗಳು ಗೋರಕ್ಷಕ ಗ್ಯಾಂಗ್‌ಗೆ ಸೇರಿದವರು. ಇಬ್ಬರು ಯುವಕರು ಗೋಮಾಂಸ ಸೇವಿಸಿದ್ದಾರೆಂದು ಶಂಕಿಸಿ ಥಳಿಸಿದ್ದಾರೆ. ಗ್ಯಾಂಗ್ ಇಬ್ಬರ ಮೇಲೆ ಹಲ್ಲೆ ನಡೆಸುತ್ತಿದ್ದಾಗ ಮಧ್ಯಪ್ರವೇಶಿಸಿದ ಜನರು ತಡೆದಿದ್ದಾರೆ. ಅಲ್ಲದೆ, ವಿಡಿಯೋ ರೆಕಾರ್ಡ್ ಮಾಡಿದ್ದಾರೆ. ಆದರೆ, ಅವರು ಪೊಲೀಸರಿಗೆ ಮಾಹಿತಿ ನೀಡಿಲ್ಲ” ಎಂದು ತಿಳಿಸಿರುವುದಾಗಿ ದಿ ಹಿಂದೂ ತಿಳಿಸಿದೆ.

ಸಂತ್ರಸ್ತರ ಸಂಬಂಧಿ ಸುಜಾವುದ್ದೀನ್, ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಮತ್ತು ಮೃತ ಸಾಬಿರ್‌ಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.

“ಗುಜರಿ ಮಾರಾಟ ಮಾಡುವ ನೆಪದಲ್ಲಿ ಕೆಲವರು ಬಂದು ನನ್ನ ಪತಿಯನ್ನು ಕರೆದುಕೊಂಡು ಹೋದರು ಎಂದು ನನ್ನ ಸಹೋದರಿಯಿಂದ ಕರೆ ಬಂದಿತ್ತು. ನಾನು ತಕ್ಷಣ ಪೊಲೀಸ್ ಠಾಣೆಗೆ ತೆರಳಿ ಮಾಹಿತಿ ನೀಡಿದೆ. ಅವರು ಹುಡುಕಾಡಿದಾಗ ಸಾಬಿರ್‌ ಕಾಲುವೆ ಬಳಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪ್ರಕರಣ ದೂರುದಾರ ಸುಜಾವುದ್ದೀನ್ ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

ಇದನ್ನೂ ಓದಿ : ಮಹಾರಾಷ್ಟ್ರ: ದನದ ಮಾಂಸ ಸಾಗಿಸುತ್ತಿದ್ದ ಶಂಕೆ; ವೃದ್ಧನೊಬ್ಬನ ಮೇಲೆ ಸಹ ಪ್ರಯಾಣಿಕರಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...