Homeಕರ್ನಾಟಕಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ, ಹಿಂದುತ್ವ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಎಫ್‌ಐಆರ್...

ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ, ಹಿಂದುತ್ವ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಎಫ್‌ಐಆರ್ ದಾಖಲು

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಹಾಗೂ ಹಿಂದುತ್ವ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ ಎಂದು ವರದಿಗಳು ಹೇಳಿವೆ.

ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ 47 ವರ್ಷದ ಮಹಿಳೆಯೊಬ್ಬರು ದೂರು ದಾಖಲಿಸಿದ್ದು, ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಅರುಣ್ ಕುಮಾರ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದಾಗಿ ಆರೋಪಿಸಿದ್ದಾರೆ ಎಂದು ತಿಳಿದು ಬಂದಿದೆ.

ಮಹಿಳೆಯ ದೂರು ಆಧರಿಸಿ ಪೊಲೀಸರು ಅರುಣ್ ಕುಮಾರ್ ವಿರುದ್ದ ಹಳೆಯ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 417, 354ಎ ಮತ್ತು 506ರ ಅಡಿ ಎಫ್‌ಐಆರ್ ದಾಖಲಿಸಿದ್ದಾರೆ. ಹೊಸ ಕ್ರಿಮಿನಲ್ ಕಾನೂನು ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಜಾರಿಯಾಗುವ ಮುನ್ನ ಪ್ರಕರಣ ನಡೆದಿರುವುದರಿಂದ ಐಪಿಸಿ ಅಡಿಯೇ ಪ್ರಕರಣ ದಾಖಲಿಸಿರುವುದಾಗಿ ವರದಿಯಾಗಿದೆ.

ಅರುಣ್ ಕುಮಾರ್ ಪುತ್ತಿಲ ಮಹಿಳೆಯೊಬ್ಬರ ಜೊತೆ ಮಾತನಾಡಿದ್ದು ಎನ್ನಲಾಗಿದ್ದ ಆಡಿಯೋವೊಂದು ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ‌ಅದರ ಬೆನ್ನಲ್ಲೇ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ.

ಮಹಿಳೆ ನೀಡಿರುವ ದೂರಿನಲ್ಲಿ ಏನಿದೆ?

ಅರುಣ್ ಕುಮಾರ್ ಪುತ್ತಿಲ ಅವರ ಪ್ರಖ್ಯಾತಿ ಮತ್ತು ಹಿಂದುತ್ವದ ಪ್ರತಿಪಾದನೆಯಿಂದ ಮಹಿಳೆ ಅವರ ಅಭಿಮಾನಿಯಾಗಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಫಾಲೋ ಮಾಡುತ್ತಿದ್ದರು. ಜೊತೆಗೆ ಪುತ್ತಿಲಗೆ ನೈತಿಕ ಬೆಂಬಲವನ್ನೂ ನೀಡುತ್ತಿದ್ದರು. ಬಳಿಕ ಪರಿಚಯವಾದ ಮೇಲೆ ಪುತ್ತಿಲ ಅವರು 2023ರ ಜೂನ್‌ನಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್‌ಗೆ ಕರೆಸಿಕೊಂಡು ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಈದಿನ.ಕಾಂ ವರದಿ ಮಾಡಿದೆ.

ನ್ಯಾಯಾಲಯದಿಂದ ತಡೆಯಾಜ್ಞೆ ತಂದ ಪುತ್ತಿಲ : 

ಅರುಣ್ ಕುಮಾರ್ ಪುತ್ತಿಲ ಮತ್ತು ಮಹಿಳೆಯೊಬ್ಬರ ನಡುವೆ ನಡೆದಿದೆ ಎನ್ನಲಾಗಿದ್ದ ಮಾತುಕತೆಯ ಆಡಿಯೋವೊಂದು ಇತ್ತೀಚೆಗೆ ವೈರಲ್ ಆಗಿತ್ತು. ಆ ಬಳಿಕ ಪುತ್ತಿಲ ಪರಿವಾರದಿಂದ ತನಗೆ ಬೆದರಿಕೆ ಇದೆ ಎಂದು ಮಹಿಳೆ ಪೊಲೀಸ್ ಠಾಣೆಗೆ ತೆರಳಿದ್ದ ಬಗ್ಗೆ ವರದಿಯಾಗಿತ್ತು. ಈ ಬೆಳವಣಿಗೆಯ ನಡುವೆ, ತನ್ನ ವಿರುದ್ದ ಮಾನಹಾನಿಕರ ಸುದ್ದಿ ಪ್ರಕಟಿಸಿದಂತೆ ಅರುಣ್ ಕುಮಾರ್ ಬೆಂಗಳೂರಿನ 7ನೇ ಹೆಚ್ಚುವರಿ ಸಿಟಿ ಸಿವಿಲ್ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ. ಇದರ ಬೆನ್ನಲ್ಲೇ ಪುತ್ತಿಲ ವಿರುದ್ದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿರುವ ಬಗ್ಗೆ ವರದಿಯಾಗಿದೆ.

ಅರುಣ್ ಕುಮಾರ್ ಪುತ್ತಿಲ ಯಾರು?

ಅರುಣ್ ಕುಮಾರ್ ಪುತ್ತಿಲ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಹಿಂದುತ್ವ ಮುಖಂಡ. ತನ್ನದೇ ‘ಪುತ್ತಿಲ ಪರಿವಾರ’ ಎಂಬ ತಂಡ ಕಟ್ಟಿಕೊಂಡು ಹಿಂದುತ್ವದ ಕಾರ್ಯಗಳಲ್ಲಿ ತೊಡಿಗಿಸಿಕೊಂಡಿದ್ದಾರೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಪುತ್ತೂರಿನ ಬಿಜೆಪಿ ಟಿಕೆಟ್‌ನ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ, ಬಿಜೆಪಿ ಅವರಿಗೆ ಟಿಕೆಟ್ ನೀಡದೆ ಮಹಿಳೆಯೊಬ್ಬರನ್ನು ಕಣಕ್ಕಿಳಿಸಿತ್ತು. ಇದರಿಂದ ಅಸಮಾಧಾನಗೊಂಡ ಪುತ್ತಿಲ, ಪಕ್ಷೇತರರಾಗಿ ಸ್ಪರ್ಧಿಸಿದ್ದರು. ಆದರೆ, ಅವರು ಗೆಲುವು ಸಾಧಿಸಿರಲಿಲ್ಲ. ಚುನಾವಣೆಯಲ್ಲಿ ಸೋತರೂ, ಹೆಚ್ಚು ಮತಗಳನ್ನು ಪಡೆದು ಬಿಜೆಪಿ ಅಭ್ಯರ್ಥಿಯ ಸೋಲಿಗೆ ಕಾರಣರಾಗುವ ಮೂಲಕ ಬಿಜೆಪಿ ನಾಯಕರಿಗೆ ಪುತ್ತಿಲ ತನ್ನ ಶಕ್ತಿ ತೋರ್ಪಡಿಸಿದ್ದರು. ಬಿಜೆಪಿ ಮತ್ತು ಪುತ್ತಿಲ ಪರಿವಾರದ ಜಟಾಪಟಿಯ ಲಾಭ ಪಡೆದ ಕಾಂಗ್ರೆಸ್ ಅಭ್ಯರ್ಥಿ ಜಯಗಳಿಸಿದ್ದರು.

ನಂತರ 2024ರ ಲೋಕಸಭೆ ಚುನಾವಣೆಗೆ ದಕ್ಷಿಣ ಕನ್ನಡ ಕ್ಷೇತ್ರದಿಂದ ಅರುಣ್ ಕುಮಾರ್ ಪುತ್ತಿಲ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ನೀಡದಿದ್ದರೆ ವಿಧಾನಸಭೆ ಚುನಾವಣೆಯಂತೆ ಬಂಡಾಯವಾಗಿ ಕಣಕ್ಕಿಳಿಯಲು ಸಿದ್ದತೆ ನಡೆಸಿದ್ದರು. ಈ ವೇಳೆ ಬಿಜೆಪಿ ದಕ್ಷಿಣ ಕನ್ನಡದ ಅಭ್ಯರ್ಥಿಯನ್ನು ಬದಲಿಸಿತ್ತು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಬದಲಾಗಿ ಕ್ಯಾಪ್ಟನ್‌ ಬ್ರಿಜೇಶ್ ಚೌಟ ಅವರಿಗೆ ಟಿಕೆಟ್ ನೀಡಿತ್ತು. ನಳಿನ್ ಕುಮಾರ್‌ಗೆ ಟಿಕೆಟ್ ತಪ್ಪಿದ ಬಳಿಕ ಹಠಾತ್ ಬೆಳವಣಿಗೆಯಲ್ಲಿ ಅರುಣ್ ಕುಮಾರ್ ಬಿಜೆಪಿ ಸೇರಿ ಹೊಸ ಅಭ್ಯರ್ಥಿ ಬ್ರಿಜೇಶ್ ಚೌಟ ಅವರನ್ನು ಬೆಂಬಲಿಸಿದ್ದರು. ಅರುಣ್ ಕುಮಾರ್ ಬಿಜೆಪಿ ಸೇರಿದರೂ, ಅವರ ಪುತ್ತಿಲ ಪರಿವಾರ ಮತ್ತು ಬಿಜೆಪಿ ನಡುವಿನ ಶೀತಲ ಸಮರ ಮುಂದುವರೆದಿದೆ. ಈ ನಡುವೆ ಅವರ ಮೇಲೆ ಲೈಂಗಿಕ ದೌರ್ಜನ್ಯದ ಗಂಭೀರ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ : ‘ಮಲಯಾಳಂ ಚಿತ್ರರಂಗದಲ್ಲಿ ಪವರ್ ಗ್ರೂಪ್ ಇಲ್ಲ..’; ಜಸ್ಟೀಸ್ ಹೇಮಾ ಸಮಿತಿ ವರದಿ ಕುರಿತು ಮೌನ ಮುರಿದ ನಟ ಮಮ್ಮುಟ್ಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...