Homeಫ್ಯಾಕ್ಟ್‌ಚೆಕ್FACT CHECK : ಗುಲ್ಬರ್ಗಾ, ಬೀದರ್​ನ ಇರಾನಿ ಗ್ಯಾಂಗ್‌ ವಿವಿದೆಡೆ ದರೋಡೆಗಿಳಿದಿದೆ ಎಂಬುವುದು ಸುಳ್ಳು

FACT CHECK : ಗುಲ್ಬರ್ಗಾ, ಬೀದರ್​ನ ಇರಾನಿ ಗ್ಯಾಂಗ್‌ ವಿವಿದೆಡೆ ದರೋಡೆಗಿಳಿದಿದೆ ಎಂಬುವುದು ಸುಳ್ಳು

- Advertisement -
- Advertisement -

ಗುಲ್ಬರ್ಗಾ ಮತ್ತು ಬೀದರ್​ನ ಇರಾನಿ ಗ್ಯಾಂಗ್‌ನ ಜನರು ಕಂಬಳಿ ಮಾರುವವರಂತೆ ನಟಿಸಿ ಜನರ ಮನೆಗಳಿಗೆ ತೆರಳಿ ಲೂಟಿ ಮಾಡುತ್ತಾರೆ ಎಂದು ದೆಹಲಿ ಪೊಲೀಸರು ಎಚ್ಚರಿಸಿದ್ದಾಗಿ ಕೆಲ ಪುರುಷರ ಪೋಟೋಗಳೊಂದಿಗೆ ಪೋಸ್ಟ್ ಒಂದನ್ನು ಹಂಚಿಕೊಳ್ಳಲಾಗುತ್ತಿದೆ.

ಆಗಸ್ಟ್ 23,2024 ರಂದು ಲೈವ್ ನ್ಯೂಸ್ ಹಿಮಾಚಲ ಟಿವಿ ಎಂಬ ಫೇಸ್​ಬುಕ್ ಖಾತೆಯಲ್ಲಿ ಈ ವೈರಲ್ ಫೋಟೋವನ್ನು ಹಂಚಿಕೊಂಡು ಶೀರ್ಷಿಕೆಯಲ್ಲಿ ಹೀಗೆ ಬರೆದಿದ್ದಾರೆ, “ಇವರು ಬೀದರ್ ಮತ್ತು ಗುಲ್ಬರ್ಗಾದ ಇರಾನಿ ಗ್ಯಾಂಗ್, ಬೆಡ್‌ಶೀಟ್ ಮಾರಾಟ ಮಾಡುವಂತೆ ನಟಿಸುತ್ತಿದ್ದಾರೆ. ದಯವಿಟ್ಟು ಗಮನಿಸಿ, ಅವರೆಲ್ಲರೂ ದರೋಡೆಕೋರರು. ಇವರು ಹಗಲಿನಲ್ಲಿ ಕಂಬಳಿ ಮಾರಾಟಗಾರರಂತೆ ನಟಿಸುವ ಮೂಲಕ ಜನರ ಬಳಿ ಬರುತ್ತಾರೆ, ಮನೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಾರೆ. ನಂತರ ಮನೆಯನ್ನು ದರೋಡೆ ಮಾಡುತ್ತಾರೆ, ಹೀಗಾಗಿ ಪ್ರತಿಯೊಬ್ಬರೂ ಇದನ್ನು ಆದಷ್ಟು ಶೇರ್ ಮಾಡಿಕೊಳ್ಳಿ. ದೆಹಲಿ ಪೊಲೀಸ್” ಎಂದು ಬರೆಯಲಾಗಿದೆ.

ಇನ್ನೂ ಹಲವರು ಬೀದರ್ ಮತ್ತು ಗುಲ್ಬರ್ಗಾದ ಇರಾನ್ ಗ್ಯಾಂಗ್ ಮನೆಗಳನ್ನು ದರೋಡೆ ಮಾಡುವ ಕಂಬಳಿ ಮಾರಾಟಗಾರರಂತೆ ನಟಿಸುತ್ತಿದ್ದಾರೆ ಎಂಬ ಪ್ರತಿಪಾದನೆಯೊಂದಿಗೆ ಪೋಸ್ಟ್ ಅನ್ನು ಹಂಚಿಕೊಳ್ಳುತ್ತಿದ್ದಾರೆ. ಹಾಗಿದ್ದರೆ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಸರ್ಚ್ ಮಾಡಿದಾಗ, 29 ಜುಲೈ 2019 ರಂದು ಉದಯವಾಣಿ ವೆಬ್‌ಸೈಟ್‌ನಲ್ಲಿ ಪ್ರಕಟವಾದ ವರದಿಯೊಂದು ಲಭ್ಯವಾಗಿದೆ. ವರದಿಯಲ್ಲಿ “ಕಂಬಳಿ ಮಾರಾಟದ ನೆಪದಲ್ಲಿ ಬಂದಿರುವ ಇರಾನಿ ಗ್ಯಾಂಗ್‌ನ ಬಗ್ಗೆ ಬಜ್ಪೆ ಪೊಲೀಸರು ಎಚ್ಚರಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಈ ಗ್ಯಾಂಗ್ ಈಗಾಗಲೇ ಸಕ್ರಿಯವಾಗಿದೆ. ಹಗಲು ಹೊತ್ತಿನಲ್ಲಿ ಕಂಬಳಿ ಮಾರುವವರಾಗಿ ಸಾರ್ವಜನಿಕರನ್ನು ಸಂಪರ್ಕಿಸಿ, ಮನೆ ಸಮೀಕ್ಷೆ ನಡೆಸಿ ನಂತರ ಮನೆ ಲೂಟಿ ಮಾಡುವುದು ಗ್ಯಾಂಗ್ ಸದಸ್ಯರ ವಿಧಾನವಾಗಿದೆ” ಎಂದು ಮಂಗಳೂರಿನ ಬಜ್ಪೆ ಪೊಲೀಸರು ಹೇಳಿರುವುದಾಗಿ ತಿಳಿಸಲಾಗಿದೆ.

ಜುಲೈ 29,2019 ರಂದು ಕರಾವಳಿಯ ಡೈಜಿ ವರ್ಲ್ಡ್ ವೆಬ್‌ಸೈಟ್‌ನಲ್ಲಿ ಪ್ರಕಟವಾದ ವರದಿಯಲ್ಲಿ, ಈ ಜನರು ಇರಾನಿ ಗ್ಯಾಂಗ್‌ನ ಸದಸ್ಯರು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಹೊದಿಕೆ ಮಾರುವ ನೆಪದಲ್ಲಿ ಹಗಲೊತ್ತಿಲ್ಲಿ ಮನೆಗಳಿಗೆ ನುಗ್ಗಿ ಇಡೀ ಮನೆಯನ್ನು ಶೋಧಿಸುತ್ತಾರೆ. ಸಂಜೆಯಾಗುತ್ತಿದ್ದಂತೆ ಇತರೆ ಸದಸ್ಯರು ಬಂದು ಮನೆ ದೋಚುತ್ತಾರೆ” ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಹೇಳಲಾಗಿದೆ.

ನಾವು ವೈರಲ್ ಪೋಸ್ಟ್‌ ಬಗ್ಗೆ ಇನ್ನಷ್ಟು ಮಾಹಿತಿ ಹುಡುಕಿದಾಗ ಆ ಪೋಸ್ಟ್ 2019 ರಿಂದ ಅನೇಕ ರಾಜ್ಯಗಳ ಹೆಸರಿನಲ್ಲಿ ವೈರಲ್ ಆಗಿರುವುದು ಕಂಡು ಬಂದಿದೆ. 2019 ರಲ್ಲಿ, ಈ ಪೋಸ್ಟ್ ತೆಲಂಗಾಣ ಹೆಸರಿನಲ್ಲಿ ವೈರಲ್ ಆಗಿತ್ತು. ಆ ಸಮಯದಲ್ಲಿ, ಎಕ್ಸ್‌ ಖಾತೆಯ ಬಳಕೆದಾರರೊಬ್ಬರು ಹೈದರಾಬಾದ್ ಪೊಲೀಸರನ್ನು ಟ್ಯಾಗ್ ಮಾಡಿ ಅದರ ಸತ್ಯಾಸತ್ಯತೆಯ ಬಗ್ಗೆ ಕೇಳಿದ್ದರು. ಆಗ ಪೊಲೀಸರು ಇದು ಪೋಸ್ಟ್ ನಕಲಿ ಎಂದು ಉತ್ತರಿಸಿದ್ದರು.

ಒಟ್ಟಿನಲ್ಲಿ, ಮಂಗಳೂರಿನ ಬಜ್ಪೆ ಪೊಲೀಸರು ಮನೆಗಳನ್ನು ದರೋಡೆ ಮಾಡಲು ಕಂಬಳಿ ಮಾರಾಟಗಾರರಂತೆ ಬರುತ್ತಿರುವ ಇರಾನಿನ ಗ್ಯಾಂಗ್ ಬಗ್ಗೆ 2019ರ ಜುಲೈನಲ್ಲಿ ಎಚ್ಚರಿಕೆ ನೀಡಿದ್ದ ಪೋಸ್ಟ್‌ ಅನ್ನು ಇತ್ತೀಚಿನದ್ದು ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : FACT CHECK : ವೈರಲ್ ವಿಡಿಯೋ ಕೋಲ್ಕತ್ತಾ ಅತ್ಯಾಚಾರ ಸಂತ್ರಸ್ತೆಯದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...