Homeಮುಖಪುಟವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ : ಸೋನಮ್ ವಾಂಗ್‌ಚುಕ್ ನೇತೃತ್ವದಲ್ಲಿ ಲೇಹ್‌ನಿಂದ ದೆಹಲಿಗೆ ಪಾದಯಾತ್ರೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ : ಸೋನಮ್ ವಾಂಗ್‌ಚುಕ್ ನೇತೃತ್ವದಲ್ಲಿ ಲೇಹ್‌ನಿಂದ ದೆಹಲಿಗೆ ಪಾದಯಾತ್ರೆ

- Advertisement -
- Advertisement -

ಪರಿಸರವಾದಿ, ಹೋರಾಟಗಾರ ಸೋನಮ್ ವಾಂಗ್‌ಚುಕ್ ನೇತೃತ್ವದಲ್ಲಿ ನೂರಕ್ಕೂ ಅಧಿಕ ಸ್ವಯಂ ಸೇವಕರು ಭಾನುವಾರ ಲಡಾಖ್‌ನ ಲೇಹ್‌ನಿಂದ ರಾಷ್ಟ್ರ ರಾಜಧಾನಿ ದೆಹಲಿಗೆ ಪಾದಯಾತ್ರೆ ಆರಂಭಿಸಿದ್ದಾರೆ.

ಲೇಹ್‌ ಅಪೆಕ್ಸ್ ಬಾಡಿ (ಎಲ್‌ಎಬಿ) ಮತ್ತು ಕಾರ್ಗಿಲ್ ಡೆಮಾಕ್ರಟಿಕ್ ಅಲಯನ್ಸ್ (ಕೆಡಿಎ) ಜಂಟಿಯಾಗಿ ‘ದಿಲ್ಲಿ ಚಲೋ’ ಪಾದಯಾತ್ರೆ ಹಮ್ಮಿಕೊಂಡಿದೆ.

ಲಡಾಖ್‌ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಈ ಹಿಂದೆ ಸೋನಮ್ ವಾಂಗ್‌ಚುಕ್ ಉಪವಾಸ ಸತ್ಯಾಗ್ರಹ ಸೇರಿದಂತೆ ವಿವಿಧ ರೀತಿಯಲ್ಲಿ ಹೋರಾಟ ನಡೆಸಿದ್ದರು. ಅದರ ಮುಂದುವರಿದ ಭಾಗವಾಗಿ ಪಾದಯಾತ್ರೆ ನಡೆಸುತ್ತಿದ್ದಾರೆ.

ಸೀಮಿತ ಸ್ವಯಂ ಸೇವಕರು ನಡೆಸುತ್ತಿರುವ ಪಾದಯಾತ್ರೆಗೆ ಅಲ್ಲಲ್ಲಿ ಜನರು ಬೆಂಬಲ ವ್ಯಕ್ತಪಡಿಸಿ ಜೊತೆಯಾಗುತ್ತಿದ್ದಾರೆ ಎಂದು ವರದಿಗಳು ಹೇಳಿವೆ.

ಸೋನಮ್ ವಾಂಗ್‌ಚುಕ್ ನೇತೃತ್ವದಲ್ಲಿ ಎಲ್‌ಎಬಿ ಮತ್ತು ಕೆಡಿಎ ಸಂಘಟನೆಗಳು ಕಳೆದ 4 ವರ್ಷಗಳಿಂದ ಕೇಂದ್ರ ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಇಟ್ಟಿದೆ. ಈ ಪೈಕಿ ಲಡಾಖ್‌ಗೆ ರಾಜ್ಯದ ಸ್ಥಾನಮಾನ ನೀಡುವುದು, ಸಂವಿಧಾನದ 6ರನೇ ಶೆಡ್ಯೂಲ್‌ ಅಡಿ ರಕ್ಷಣೆ ಒದಗಿಸುವುದು, ಆರಂಭಿಕ ನೇಮಕಾತಿ ಪ್ರಕ್ರಿಯೆ ಜೊತೆಗೆ ಲಡಾಖ್‌ಗೆ ಪ್ರತ್ಯೇಕ ಸಾರ್ವಜನಿಕ ಸೇವಾ ಆಯೋಗ ಮತ್ತು ಲೇಹ್ ಮತ್ತು ಕಾರ್ಗಿಲ್ ಜಿಲ್ಲೆಗಳಿಗೆ ಪ್ರತ್ಯೇಕ ಲೋಕಸಭಾ ಕ್ಷೇತ್ರ ನೀಡುವುದು ಪ್ರಮುಖವಾಗಿದೆ.

ಈ ವರ್ಷದ ಮಾರ್ಚ್‌ 6ರಂದು ಮೇಲೆ ಉಲ್ಲೇಖಿಸಿದ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸೋನಮ್ ವಾಂಗ್‌ಚುಕ್ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು. ಅದಕ್ಕೆ ಲಡಾಖ್ ಜನತೆಯಿಂದ ಭಾರೀ ಬೆಂಬಲ ವ್ಯಕ್ತವಾಗಿತ್ತು. 21 ದಿನಗಳ ಬಳಿಕ ಅವರು ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ್ದರು. ಇದೀಗ ಹೋರಾಟವನ್ನು ಮುಂದುರೆಸಿರುವ ಅವರು ದೆಹಲಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ತೆಗೆದು ಲಡಾಖ್‌ ಅನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿದ ಬಳಿಕ, ಅಲ್ಲಿ ಹೊರಗಿನವರಿಗೆ ಗಣಿಗಾರಿಕೆ ಸೇರಿದಂತೆ ವಿವಿಧ ಉದ್ಯಮಗಳಿಗೆ ಅನುಮತಿ ನೀಡಲಾಗುತ್ತಿದೆ. ಇದರಿಂದ ಸಂಭವಿಸಬಹುದಾದ ಪರಿಸರ ಹಾನಿಯ ಕುರಿತು ಕೂಡ ಸೋನಮ್ ವಾಂಗ್‌ಚುಕ್ ಕಳವಳ ವ್ಯಕ್ತಪಡಿಸಿದ್ದಾರೆ.

ಸಂವಿಧಾನದ 244ನೇ ವಿಧಿಯಡಿ ಬರುವ 6ನೇ ಪರಿಚ್ಛೇದವು, ಲಡಾಖ್‌ನ ಬುಡಕಟ್ಟು ಜನರಿಗೆ ಸಾಂವಿಧಾನಿಕ ಸುರಕ್ಷತೆಗಳನ್ನು ಒದಗಿಸುತ್ತದೆ. ಭೂಮಿ, ಸಾರ್ವಜನಿಕ ಆರೋಗ್ಯ ಮತ್ತು ಕೃಷಿ ಸಂಬಂಧ ಕಾನೂನುಗಳನ್ನು ರೂಪಿಸಲು ಸ್ವಾಯತ್ತ ಅಭಿವೃದ್ಧಿ ಮಂಡಳಿಗಳನ್ನು ಸ್ಥಾಪಿಸಲು ಅವಕಾಶ ನೀಡುತ್ತದೆ. ಹಾಗಾಗಿ, ಅದರ ಜಾರಿಯೂ ವಾಂಗ್‌ಚುಕ್ ಅವರ ಪ್ರಮುಖ ಬೇಡಿಕೆಗಳಲ್ಲಿ ಒಂದಾಗಿದೆ.

“ಕೇಂದ್ರ ಸರ್ಕಾರ ಲಡಾಖ್‌ನ ಜನರಿಗೆ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ನಿರಾಕರಿಸಿದೆ. ಅದನ್ನು ನವದೆಹಲಿಯಿಂದ ನಿಯಂತ್ರಿಸಲ್ಪಡುವ ಅಧಿಕಾರಶಾಹಿಗಳ ಅಧೀನದಲ್ಲಿ ಇರಿಸಿದೆ. ಹಾಗಾಗಿ, ಲಡಾಖ್‌ನ ವಿಷಯದಲ್ಲಿ ಭಾರತವನ್ನು ಪ್ರಜಾಪ್ರಭುತ್ವದ ‘ಮಲತಾಯಿ’ ಎಂದು ಕರೆಯಬಹುದು” ಎಂದು ವಾಂಗ್‌ಚುಕ್ ಈ ಹಿಂದೆ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ : ಜಾತಿ ಗಣತಿ ಸೂಕ್ಷ್ಮ ವಿಚಾರ, ರಾಜಕೀಯ ಸಾಧನವಾಗಿ ಬಳಕೆಯಾಗಬಾರದು: ಆರ್‌ಎಸ್‌ಎಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...