Homeಕರ್ನಾಟಕಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲುವ ಭೀತಿ: ಮೀಟಿಂಗ್‌ ಮೇಲೆ ಮೀಟಿಂಗ್‌

ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲುವ ಭೀತಿ: ಮೀಟಿಂಗ್‌ ಮೇಲೆ ಮೀಟಿಂಗ್‌

- Advertisement -
- Advertisement -

ರಾಜ್ಯದಲ್ಲಿ ಡಿಸೆಂಬರ್‌ ೫ರಂದು ರಾಜ್ಯದಲ್ಲಿ ೧೫ ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈಗ ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆಗಳು ಆರಂಭವಾಗಿವೆ. ಉಪಚುನಾವಣೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್‌ಗೆ ಪ್ರತಿಷ್ಠೆಯ ಚುನಾವಣೆಯಾಗಿ ಮಾರ್ಪಟ್ಟಿದೆ. ಈ ಮಧ್ಯೆ ಉಪ ಚುನಾವಣೆಯಲ್ಲಿ ಬಿಜೆಪಿ ಪಾಳಯಕ್ಕೆ ಸೋಲುವ ಆತಂಕ ಶುರುವಾಗಿದೆ. ಅದಕ್ಕಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್ ನೇತೃತ್ವದಲ್ಲಿ ದಕ್ಷಿಣ ಕರ್ನಾಟಕದ ೮ ವಿಧಾನಸಭೆ ಕ್ಷೇತ್ರಗಳ ಕುರಿತು ಸಭೆ ನಡೆಯುತ್ತಿದೆ.

ಬೈ ಎಲೆಕ್ಷನ್‌ ಅನರ್ಹ ಶಾಸಕರಿಗೆ ಸವಾಲಾಗಿ ಪರಿಣಮಿಸಿದೆ. ಅನರ್ಹ ಶಾಸಕರಿಗೆ ಮೂಲ ಬಿಜೆಪಿಗರು ಕಗ್ಗಂಟಾಗಿದ್ದಾರೆ. ಈ ಹಿನ್ನೆಲೆ ಇಂದು ಕ್ಷೇತ್ರದ ಪ್ರಮುಖರು, ಟಿಕೆಟ್ ಆಕಾಂಕ್ಷಿಗಳ ಜತೆ ಸಂಜೆ ಐದು ಗಂಟೆಯವರೆಗೂ ಬಿಜೆಪಿ ರಾಜ್ಯಾಧ್ಯಕ ನಳೀನ್ ಕುಮಾರ್‌ ಕಟೀಲ್ ಸಭೆ ನಡೆಸುತ್ತಿದ್ದಾರೆ. ಆರ್‌.ಅಶೋಕ್, ಡಾ.ಅಶ್ವತ್ಥ್‌ ನಾರಾಯಣ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದಾರೆ. ಸಭೆಯ ಬಳಿಕ ಸಂಜೆ ಆರು ಗಂಟೆಗೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಕೂಡ ನಡೆಯಲಿದೆ.

ಉಪಚುನಾವಣೆಯ ಸಿದ್ಧತೆ ಕುರಿತು ಕೋರ್ ಕಮಿಟಿಯಲ್ಲಿ ಚರ್ಚಿಸಲಾಗುತ್ತದೆ. ಅನರ್ಹ ಶಾಸಕರ ಭವಿಷ್ಯ ಕೋರ್ಟ್‌‌ನಲ್ಲಿ ಏನಾಗುತ್ತದೆ ಎಂಬುದರ ಮೇಲೆ ಬಿಜೆಪಿ ನಾಯಕರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಈಗಾಗಲೇ ಟಿಕೆಟ್‌ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು, ಬಂಡಾಯವೆದ್ದಿರುವ ಮೂಲ ಬಿಜೆಪಿಗರನ್ನು ಸಮಾಧಾನ ಮಾಡುವ ಬಗ್ಗೆ ಕೋರ್ ಕಮಿಟಿಯಲ್ಲಿ ಚರ್ಚಿಸಿ ನಿರ್ಧರಿಸಲಾಗುತ್ತದೆ. ನಳೀನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಉಪ ಚುನಾವಣೆ ಸವಾಲು ಎದುರಿಸಲಿದ್ದಾರೆ.

ಉಪಚುನಾವಣೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಭೆಯಿಂದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ದೂರವುಳಿದಿದ್ದಾರೆ. ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ದಕ್ಷಿಣ ಕರ್ನಾಟಕದ 8 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಬೆಂಗಳೂರಿನಲ್ಲೇ ಇದ್ದರೂ ಸಹಿತ ಸಿಎಂ ಯಡಿಯೂರಪ್ಪ, ಸಭೆಗೆ ಹಾಜರಾಗದಿರುವುದು ಹಲವು ಭಿನ್ನಾಭಿಪ್ರಾಯ, ಮುಸುಕಿನ ಗುದ್ದಾಟ, ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದನ್ನು ತೋರಿಸುತ್ತಿದೆ. ಸಿಎಂ ಬದಲಿಗೆ ಡಿಸಿಎಂ ಡಾ.ಸಿ.ಎನ್.ಅಶ್ವತ್ಥ್‌ ನಾರಾಯಣ ಸಭೆಯಲ್ಲಿ ಭಾಗಿ‌ಯಾಗಿದ್ದಾರೆ.

ಇತ್ತ ಸಿಎಂ ಬಿಎ‌ಸ್‌ವೈ ಬಿಜೆಪಿ ಕಚೇರಿಗೆ ಬರುತ್ತಾರೆಂದು ಸ್ವಾಗತಿಸಲು ಬಾಗಿಲ ಬಳಿಯೇ ಕಾದು ನಿಂತಿದ್ದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬೇಸರದಿಂದ ಒಳ ನಡೆದರು. ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಕೂಡ ಅಭ್ಯರ್ಥಿಗಳ ಆಯ್ಕೆ ಸಭೆಯಿಂದ ಹೊರ ಉಳಿದಿದ್ದು, ಕೋರ್‌ ಕಮಿಟಿ ಸಭೆಯಲ್ಲಿ ಮಾತ್ರ ಭಾಗವಹಿಸಲಿದ್ದಾರೆ. ಸಿಟ್ಟಿನಿಂದಲೇ ಬಿಜೆಪಿ ಕಚೇರಿಗೆ ಆಗಮಿಸಿದ ಯಡಿಯೂರಪ್ಪ, ಯಾಕೆ ಇಷ್ಟು ಅರ್ಜೆಂಟ್ ಎಂದು ಪ್ರಧಾನ ಕಾರ್ಯದರ್ಶಿ ರವಿಕುಮಾರ್‌ಗೆ ಕೇಳಿದರು. ಎರಡು ಬಹುಮುಖ್ಯ ಸಭೆಗಳಿವೆ ಸರ್‌ ಎಂದು ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಉತ್ತರಿಸಿದ್ದಾರೆ.

ಇನ್ನು ಸಾವರ್ಕರ್‌ಗೆ ಭಾರತ ರತ್ನ ಪ್ರಶಸ್ತಿ ವಿಚಾರಕ್ಕೆ ಬಿಜೆಪಿ ನಾಯಕರಲ್ಲೇ ಭಿನ್ನಾಭಿಪ್ರಾಯ ಭುಗಿಲೆದ್ದಿದೆ. ಸಾವರ್ಕರ್‌ಗೆ ಭಾರತ ರತ್ನ ನೀಡುತ್ತಿರುವ ಹೈಕಮಾಂಡ್‌ ನಿರ್ಧಾರಕ್ಕೆ ಲಿಂಗಾಯತ ನಾಯಕರು ಗರಂ ಆಗಿದ್ದಾರೆ. ಇಡೀ ರಾಜ್ಯ ಲಿಂಗೈಕ್ಯ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಿ ಎಂದು ಕೇಳಿಕೊಳ್ಳುತ್ತಿದೆ. ಆದರೆ ಇವರು ನೋಡಿದ್ರೆ, ಸಾವರ್ಕರ್‌ಗೆ ಭಾರತ ರತ್ನ ಕೊಡಬೇಕು ಅಂತಿದ್ದಾರೆ. ಈಗ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ನಾಯಕರು, ನಮ್ಮ ಬಾಯಿ ಮುಚ್ಚಿಸುತ್ತಿದ್ದಾರೆ. ಸಾವರ್ಕರ್‌ಗೆ ಭಾರತ ರತ್ನ ಕೊಡಿ ಎಂದು ನಾವು ಹೇಗೆ ಕೇಳಬೇಕು ಎಂದು ಪ್ರಶ್ನಿಸಿದ್ದಾರೆ.

ಅಲ್ಲದೇ ನಳಿನ್‌ ಕುಮಾರ್‌ ಕಟೀಲ್‌, ಅನರ್ಹ ಕ್ಷೇತ್ರಗಳಿಗೆ ಇಬ್ಬರು ಅಭ್ಯರ್ಥಿಗಳ ಹೆಸರು ಕಳುಹಿಸಲು, ಕೇಂದ್ರ ಚುನಾವಣಾ ಸಮಿತಿಗೆ, ಅನರ್ಹ ಶಾಸಕರ ಹೆಸರಿನೊಂದಿಗೆ ಮತ್ತೊಂದು ಹೆಸರು ಸೇರಿಸಲು ಕಟೀಲ್ ಮುಂದಾಗಿದ್ದಾರೆ ಎಂಬ ಮಾಹಿತಿ ಗೊತ್ತಾಗುತ್ತಿದ್ದಂತೆಯೇ ಸಿಎಂ ಬಿಎಸ್‌ವೈ ದಿಢೀರನೇ ಬಿಜೆಪಿ ಕಚೇರಿಗೆ ಆಗಮಿಸಿದರು. ನಂತರ ಒಂದು ಕ್ಷೇತ್ರಕ್ಕೆ ಒಂದೇ ಹೆಸರಿರಲಿ, ಅದೂ ಅನರ್ಹ ಶಾಸಕರ ಹೆಸರನ್ನು ಮಾತ್ರ ನಗದಿ ಮಾಡುವಂತೆ ತಾಕೀತು ಮಾಡಿದರು.

ಜನರ ನಿಲುವು ಬೇರೆ ಇರುವಾಗ ನಾವೇನು ಉತ್ತರ ಕೊಡಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿಎಂ ಬಿಎಸ್‌ವೈ ಕೂಡ ಸಾವರ್ಕರ್ ವಿಚಾರದಲ್ಲಿ ಹೆಚ್ಚು ಮಾತನಾಡಿಲ್ಲ. ಜತೆಗೆ ಲಿಂಗಾಯತ ಸಚಿವರಿಗೂ ಹೈಕಮಾಂಡ್ ಮೇಲೆ ಬೇಸರ ಉಂಟಾಗಿದೆ ಎಂದು ಮೂಲಗಳು ತಿಳಿಸಿವೆ. ಬೈ ಎಲೆಕ್ಷನ್‌ಗೆ ನವೆಂಬರ್‌ ೧೧ರಿಂದ ನಾಮಪತ್ರ ಸಲ್ಲಿಕೆ ಕೆಲಸ ಆರಂಭವಾಗಲಿದ್ದು, ೧೮ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಡಿಸೆಂಬರ್‌ ೫ಕ್ಕೆ ಮತದಾನ ನಡೆದು, ಡಿಸೆಂಬರ್‌ ೧೧ರಂದು ಫಲಿತಾಂಶ ಪ್ರಕಟವಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...