Homeಮುಖಪುಟ"ಅವರು ನನ್ನನ್ನು ಚಲಿಸುತ್ತಿದ್ದ ರೈಲಿನಿಂದ ತಳ್ಳಲು ಮುಂದಾಗಿದ್ದರು": ಗೋಮಾಂಸ ಶಂಕೆಯಿಂದ ಹಲ್ಲೆಗೊಳಗಾದ ಮುಸ್ಲಿಂ ವೃದ್ದ

“ಅವರು ನನ್ನನ್ನು ಚಲಿಸುತ್ತಿದ್ದ ರೈಲಿನಿಂದ ತಳ್ಳಲು ಮುಂದಾಗಿದ್ದರು”: ಗೋಮಾಂಸ ಶಂಕೆಯಿಂದ ಹಲ್ಲೆಗೊಳಗಾದ ಮುಸ್ಲಿಂ ವೃದ್ದ

- Advertisement -
- Advertisement -

ಅವರ ಹೆಸರು ಅಶ್ರಫ್ ಅಲೀ ಸೈಯ್ಯದ್ ಹುಸೈನ್, ವಯಸ್ಸು 72 ವರ್ಷ. ಮಹಾರಾಷ್ಟ್ರದ ಜಲಗಾಂವ್‌ನಿಂದ ಕಲ್ಯಾಣ್‌ಗೆ ರೈಲಿನ ಮೂಲಕ ಆಗಾಗ ಪ್ರಯಾಣಿಸುತ್ತಿದ್ದರು. ಕಲ್ಯಾಣ್‌ ಜಂಕ್ಷನ್ ರೈಲು ನಿಲ್ದಾಣದಲ್ಲಿ ಇಳಿದು, ಅಲ್ಲಿಂದ ಆಟೋ ರಿಕ್ಷಾ ಹಿಡಿದು ನಾಲಕ್ಕು ಕಿ.ಮೀ ಪ್ರಯಾಣಿಸಿ ನಗರದ ಹೊರಗಿನ ಕೊಂಗಾವ್ ಎಂಬ ಹಳ್ಳಿಗೆ ತಲುಪುತ್ತಿದ್ದರು. ಅಲ್ಲಿ ಅವರ ಮಗಳ ಮನೆಯಿತ್ತು.

ಪ್ರತೀ ಬಾರಿ ರೈಲಿನ ಮೂಲಕ ಮಗಳ ಮನೆಗೆ ತೆರಳುತ್ತಿದ್ದ ಅಶ್ರಫ್ ಅಲೀ ಅವರಿಗೆ ಆಗಸ್ಟ್ 30ರಂದು ಆಘಾತ ಕಾದಿತ್ತು. ರೈಲಿನಲ್ಲಿ ಅವರ ಮುಂದಿನ ಆಸನದಲ್ಲಿ ಕುಳಿತಿದ್ದ ಸುಮಾರು 20-25 ವರ್ಷ ಆಸುಪಾಸಿನ ಯುವಕರ ಗುಂಪೊಂದು ಗೋಮಾಂಸ ಸಾಗಾಟದ ಆರೋಪ ಹೊರಿಸಿ ವಯಸ್ಸಿನ ಹಿರಿತನ ನೋಡದೆ ಅಶ್ರಫ್ ಅಲೀ ಅವರಿಗೆ ಥಳಿಸಿದ್ದರು. ಅದಕ್ಕಿಂತಲೂ ಹೆಚ್ಚಾಗಿ ಇತರ ಪ್ರಯಾಣಿಕರ ಮುಂದೆ ಅವಮಾನಿಸಿ ಮಾನಸಿಕ ಹಿಂಸೆ ನೀಡಿದ್ದರು. ಹಲ್ಲೆ ಮಾಡಿದವರೆಲ್ಲರೂ ಪೊಲೀಸ್ ಹುದ್ದೆಯ ಪರೀಕ್ಷೆ ಬರೆಯಲು ಮುಂಬೈಗೆ ತೆರಳುತ್ತಿದ್ದವರು ಎಂಬುವುದು ಆತಂಕದ ವಿಷಯ.

ಅಶ್ರಫ್ ಅಲೀ ಅವರಿಗೆ ಹಲ್ಲೆ ಮಾಡಿದವರು ಪೊಲೀಸರಾಗಿ ಸಂವಿಧಾನದಡಿ ಕಾನೂನು ಕಾಪಾಡಲು ಹೊರಟವರಾಗಿದ್ದರು. ಆದರೆ, ಅವರೇ ಗೋಮಾಂಸದ ಆರೋಪ ಹೊರಿಸಿ ಅಶ್ರಫ್ ಅಲೀ ಅವರ ಮುಖ, ಎದೆ, ಹೊಟ್ಟೆ ಎಂದು ನೋಡದೆ ಥಳಿಸಿದ್ದರು. ಅಶ್ರಫ್ ಅಲೀ ಅವರ ಮೊಬೈಲ್ ಫೋನ್ ಕಸಿದುಕೊಂಡಿದ್ದರು. ತಮ್ಮ ದುಷ್ಕೃತ್ಯವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿದ್ದರು.

ಈ ಘಟನೆ ಸಂಬಂಧ ಥಾಣೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರಂಭದಲ್ಲಿ ಆಕಾಶ್ ಅಹ್ವಾದ್, ನೀಲೇಶ್ ಅಹಿರೆ ಮತ್ತು ಜಯೇಶ್ ಮೋಹಿತೆ ಎಂಬ ಮೂವರನ್ನು ಬಂಧಿಸಿದ್ದರು. ಆದರೆ, ಹಲ್ಲೆ ನಡೆಸಿರುವ ವಿಡಿಯೋ ಸಾಕ್ಷಿಯ ಹೊರತಾಗಿಯೂ ಆರೋಪಿಗಳ ವಿರುದ್ದ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಜಾಮೀನು ಪಡೆಯಬಹುದಾದ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದರು. ಹಾಗಾಗಿ, ಆರೋಪಿಗಳು ಬಂಧನಕ್ಕೊಳಗಾದ ಮರುದಿನವೇ ಬಿಡುಗಡೆಯಾಗಿದ್ದಾರೆ.

ತನ್ನ ಮೇಲಿನ ಹಲ್ಲೆ ಘಟನೆಯನ್ನು ದಿ ವೈರ್  ಸುದ್ದಿ ಸಂಸ್ಥೆಗೆ ವಿವರಿಸಿರುವ ಅಶ್ರಫ್ ಅಲೀ “ನನ್ನ ಮೇಲಿನ ದಾಳಿ ಅಪ್ರಚೋದಿತವಾಗಿದೆ. ಜಲಗಾಂವ್‌ನ ಚಾಲಿಸ್‌ಗಾಂವ್ ನಿಲ್ದಾಣದಲ್ಲಿ ನಾನು ರೈಲು ಹತ್ತಿದ್ದೆ. ರೈಲಿನಲ್ಲಿ ಜನಸಂದಣಿ ಇತ್ತು. ಹಾಗಾಗಿ ರೈಲು ನಾಸಿಕ್ ರೈಲು ನಿಲ್ದಾಣಕ್ಕೆ ಹತ್ತಿರವಾಗುವವರೆಗೂ ನಿಂತುಕೊಂಡೇ ಇದ್ದೆ. ನಂತರ ಮೇಲಿನ ಬರ್ತ್‌ನಲ್ಲಿ ಕುಳಿತಿದ್ದ ಒಬ್ಬಳು ಹುಡುಗಿ ತನ್ನ ಸೀಟಿನಿಂದ ಇಳಿದಳು. ನಾನು ಆ ಸ್ಥಳಕ್ಕೆ ಹೋದೆ. ಆಗ ನನ್ನ ಪಕ್ಕದಲ್ಲಿ ನಿಂತಿದ್ದ ಸುಮಾರು 24-25 ವರ್ಷ ವಯಸ್ಸಿನ ಯುವಕ, ತನಗೆ ಜಾಗ ಕೊಡಿ ಎಂದು ಕೇಳಿದ. ಇನ್ನೊಬ್ಬ ವ್ಯಕ್ತಿ ಕೂರಲು ಜಾಗ ಇಲ್ಲದ ಕಾರಣ ನಾನು ಮಡಿಲಲ್ಲಿ ಕೂರುತ್ತೀರಾ? ಎಂದು ಆ ಯುವಕನಿಗೆ ಕೇಳಿದೆ. ಅದು ಆ ಯುವಕ ಮತ್ತು ಆತನ ಜೊತೆ ನಿಂತಿದ್ದವರಿಗೆ ಕೋಪ ತರಿಸಿತು” ಎಂದಿದ್ದಾರೆ.

ಮುಂದುವರಿದು “ನಾನು ಇಳಿಯಬೇಕಿದ್ದ ನಿಲ್ದಾಣ ಕಲ್ಯಾಣ್‌ಗೆ ರೈಲು ಬರುವವರೆಗೂ ಕುಳಿತಿದ್ದೆ. ನನ್ನ ಜೊತೆ ಚೀಲವೊಂದಿತ್ತು. ಅದರಲ್ಲಿ ಎರಡು ಪ್ಲಾಸ್ಟಿಕ್‌ ಡಬ್ಬಗಳಲ್ಲಿ ಎಮ್ಮೆ ಮಾಂಸ ಇತ್ತು. ಮಹಾರಾಷ್ಟ್ರದಲ್ಲಿ ಎಮ್ಮೆ ಮಾಂಸ ಸೇವನೆ ಕಾನೂನು ಬದ್ಧವಾಗಿದೆ. ಯುವಕರ ಗುಂಪು ಏಕಾಏಕಿ ನನ್ನ ಬ್ಯಾಗ್ ತೆರೆದು ಅವರಿಗೆ ತೋರಿಸಲು ಒತ್ತಾಯಿಸಿದರು. ನನ್ನನ್ನು ದಬಾಯಿಸಲು ಪ್ರಾರಂಭಿಸಿದರು. ಬ್ಯಾಗ್‌ನಲ್ಲಿ ಏನಿದೆ? ಎಂದು ಕೇಳಿದರು. ನನಗೆ ಗೊಂದಲವುಂಟಾಯಿತು. ಗೂಳಿ ಮಾಂಸ ಎಂದೆ. ತಕ್ಷಣ ಯುವಕರು ನನಗೆ ಥಳಿಸಲು ಪ್ರಾರಂಭಿಸಿದರು” ಎಂದು ಹುಸೈನ್‌ ಎಫ್‌ಐಆರ್‌ನಲ್ಲಿ ವಿವರಿಸಿದ್ದಾರೆ ಎಂದು ದಿ ವೈರ್ ಹೇಳಿದೆ.

“ಅವನನ್ನು ರೈಲಿನಿಂದ ಹೊರಕ್ಕೆ ತಳ್ಳಿ”

“ರೈಲು ಕಲ್ಯಾಣ್ ನಿಲ್ದಾಣಕ್ಕೆ ಸಮೀಪಿಸುತ್ತಿದ್ದಂತೆ ನಾನು ಇಳಿಯಲು ಮುಂದಾದೆ. ಆದರೆ, ಆ ಯುವಕರು ನನ್ನನ್ನು ಬಿಡಲಿಲ್ಲ. ಅವರಲ್ಲಿ ಕೆಲವರು ” ಅವನನ್ನು ರೈಲಿನಿಂದ ಹೊರಕ್ಕೆ ತಳ್ಳಿ” ಎಂದರು. ರೈಲಿನಲ್ಲಿದ್ದ ಕೆಲವರು ನನಗೆ ಹೊಡೆಯದಂತೆ ಕೇಳಿಕೊಂಡರೂ, ಯುವಕರು ತಲೆಕೆಡಿಸಿಕೊಳ್ಳದೆ ಹಲ್ಲೆ ಮಾಡುವುದನ್ನು ಮುಂದುವರೆಸಿದರು” ಎಂದು ಅಶ್ರಫ್ ಅಲೀ ನೆನಪಿಸಿಕೊಂಡಿದ್ದಾರೆ.

“ಆರೋಪಿಗಳು ಪೊಲೀಸರಿಗೆ ದೂರು ನೀಡಿದರೆ ನನ್ನನ್ನು ಕೊಲ್ಲುವುದಾಗಿ ಮತ್ತು ನನ್ನ ಕುಟುಂಬದ ಮಹಿಳೆಯರನ್ನು ಅತ್ಯಾಚಾರವೆಸಗುವುದಾಗಿ ಬೆದರಿಕೆ ಹಾಕಿದ್ದಾರೆ. ಅವರು ದೇಶದ ಹಲವೆಡೆ ಗುಂಪು ಹತ್ಯೆಗಳನ್ನು ನಡೆಸುತ್ತಿರುವ ಸ್ವಯಂ ಘೋಷಿತ ಗೋರಕ್ಷರು ಮತ್ತು ಬಜರಂಗದಳದ ಜೊತೆಗಿನ ತಮ್ಮ ಸಂಪರ್ಕದ ಬಗ್ಗೆ ಹೇಳಿ ಹೆಮ್ಮೆಪಟ್ಟುಕೊಳ್ಳುತ್ತಿದ್ದರು” ಎಂದು ಅಶ್ರಫ್ ಅಲೀ ಹೇಳಿದ್ದಾರೆ.

“ಕಲ್ಯಾಣ್ ನಿಲ್ದಾಣದಲ್ಲಿ ರೈಲಿನಿಂದ ಇಳಿಯಬೇಕಾಗಿದ್ದ ನಾನು ಕೊನೆಗೆ ಥಾಣೆ ನಿಲ್ದಾಣದಲ್ಲಿ ಇಳಿದೆ. ಬಳಿಕ ಪೊಲೀಸ್ ಠಾಣೆಗೆ ಹೋದೆ. ನನಗೆ ಥಳಿಸಿದ್ದಾರೆ ಎಂದು ಪೊಲೀಸರಿಗೆ ಹೇಳಿದೆ. ನನ್ನ ಮುಖ ಊದಿಕೊಂಡಿತ್ತು. ದೇಹದ ತುಂಬಾ ನೋವಿತ್ತು. ಕಣ್ಣಿನ ಕುಳಿ ಕಪ್ಪು ಬಣ್ಣಕ್ಕೆ ತಿರುಗಿತ್ತು. ಆದರೆ, ಪೊಲೀಸರು ನನ್ನ ಪರಿಸ್ಥಿತಿಯನ್ನು ನಿರ್ಲಕ್ಷಿಸಿದರು. ಕೋಮು ಆಯಾಮದಲ್ಲಿ ನನ್ನ ಮೇಲೆ ನಡೆದ ದಾಳಿಯನ್ನು ಸಾಮಾನ್ಯ ಹಲ್ಲೆ ಘಟನೆಯೆಂದು ಪರಿಗಣಿಸಿದರು. ಸಾಮಾನ್ಯ ಕಾಗದಲ್ಲಿ ಏನೋ ಬರೆದು ಸಹಿ ಮಾಡುವಂತೆ ಹೇಳಿದರು. ನಾನು ಸಹಿ ಮಾಡಿ ಹೊರಟೆ” ಎಂದು ಅಶ್ರಫ್ ಅಲೀ ತಿಳಿಸಿದ್ದಾರೆ.

“ಥಾಣೆಯಿಂದ ನಾನು ವಾಪಸ್ ಕಲ್ಯಾಣ್‌ಗೆ ಬಂದು ಮಗಳ ಊರಾದ ಕೊಂಗಾವ್‌ಗೆ ಹೋದೆ. ಯುವಕರು ನನ್ನ ಮೇಲೆ ಹಲ್ಲೆ ಮಾಡಿರುವುದು ನನ್ನ ಜೊತೆಗಿದ್ದ ಮಾಂಸದ ಕಾರಣಕ್ಕೆ ಎಂದು ನನಗೆ ಗೊತ್ತಾಯಿತು. ಅದಕ್ಕೆ ಆ ಮಾಂಸವನ್ನು ಮಗಳ ಮನೆಯ ದಾರಿ ಮಧ್ಯೆ ಹರಿಯುವ ನೀರಿಗೆ ಎಸೆದೆ. ನನ್ನ ಮೇಲೆ ನಡೆದ ಹಲ್ಲೆಯನ್ನು ಯಾರಿಗೂ ಗೊತ್ತಾಗದಂತೆ ಮುಚ್ಚಿಟ್ಟಿದ್ದೆ. ಆದರೆ, ಅಷ್ಟರಲ್ಲಿ ವಿಡಿಯೋ ಎಲ್ಲೆಡೆ ಹರಿದಾಡಿತ್ತು” ಎಂದಿದ್ದಾರೆ.

“ಪೊಲೀಸರು ಸರಳ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದಾರೆ”

ಅಶ್ರಫ್ ಅಲೀ ಅವರ ಮೇಲೆ ಕೋಮುದಾಳಿ ನಡೆದಿದೆ. ಅವರು ಮುಸ್ಲಿಂ ಧರ್ಮದವರು ಮತ್ತು ಗೋಮಾಂಸ ಸಾಗಿಸುತ್ತಿದ್ದರು ಎಂದು ಥಳಿಸಲಾಗಿದೆ. ಆದರೆ, ಥಾಣೆ ರೈಲ್ವೆ ಪೊಲೀಸರು ಸಾಮಾನ್ಯ ಹಲ್ಲೆ ಪ್ರಕರಣ ದಾಖಲಿಸಿದ್ದಾರೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಎಸ್‌ಡಿಪಿಐ ಆಕ್ರೋಶ ವ್ಯಕ್ತಪಡಿಸಿದೆ ಎಂದು ದಿ ವೈರ್ ವರದಿ ಮಾಡಿದೆ.

ಕೃಪೆ: thewire.in

ಇದನ್ನೂ ಓದಿ : ಮುಸ್ಲಿಂ ವಿರೋಧಿ ದ್ವೇಷ ಭಾಷಣದ ಆರೋಪ; ಮಹಾರಾಷ್ಟ್ರ ಬಿಜೆಪಿ ಶಾಸಕ ನಿತೇಶ್ ರಾಣೆ ವಿರುದ್ಧ ಎಫ್‌ಐಆರ್‌ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...