Homeಕರ್ನಾಟಕ’ದಿ ಬೆಸ್ಟ್ ಆ್ಯಕ್ಟರ್’ ಕಿರುಚಿತ್ರಕ್ಕೆ ಸುವರ್ಣಕಾಲ: ಅಮೆರಿಕ ಫಿಲ್ಮ್‌ ಫೆಸ್ಟಿವಲ್‌ಗೆ ನಾಮನಿರ್ದೇಶನ

’ದಿ ಬೆಸ್ಟ್ ಆ್ಯಕ್ಟರ್’ ಕಿರುಚಿತ್ರಕ್ಕೆ ಸುವರ್ಣಕಾಲ: ಅಮೆರಿಕ ಫಿಲ್ಮ್‌ ಫೆಸ್ಟಿವಲ್‌ಗೆ ನಾಮನಿರ್ದೇಶನ

- Advertisement -
- Advertisement -

ಕನ್ನಡ ಚಿತ್ರರಂಗದಲ್ಲಿ ಈಗ ಪ್ರಯೋಗಾತ್ಮಕ ಚಿತ್ರಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಕಿರುಚಿತ್ರಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ಭಿನ್ನ ಕಥಾಹಂದರ, ನಿರೂಪಣಾ ಶೈಲಿಯ ಮೂಲಕ ಕನ್ನಡದ ಕಿರುಚಿತ್ರ ‘ದಿ ಬೆಸ್ಟ್ ಆ್ಯಕ್ಟರ್’ ಅನೇಕ ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡಿದೆ. ಚಿತ್ರದ ಕೀರ್ತಿ ದಿನೇ ದಿನೆ ಹೆಚ್ಚುತ್ತಿದ್ದು, ಈಗ ಮತ್ತೊಂದು ಸಂತಸದ ಸುದ್ದಿ ನೀಡಿದೆ.

’ದಿ ಬೆಸ್ಟ್ ಆ್ಯಕ್ಟರ್’ ಕಿರುಚಿತ್ರ ಅಮೆರಿಕನ್ ಗೋಲ್ಡನ್ ಪಿಕ್ಚರ್ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಚಿತ್ರೋತ್ಸವಕ್ಕೆ ನಾಮ ನಿರ್ದೇಶನಗೊಂಡಿದೆ. ನಾಗರಾಜ್ ಸೋಮಯಾಜಿ ನಿರ್ದೇಶನ ಮತ್ತು ಚಿತ್ರಕಥೆ ಹೊಂದಿರುವ ’ದಿ ಬೆಸ್ಟ್ ಆ್ಯಕ್ಟರ್’ ಕಿರುಚಿತ್ರ ದಿನೇಶ್ ವೈದ್ಯ ಅಂಪರು ಮತ್ತು ಸರ್ವಸ್ವ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿದೆ. ಈಗ ಚಿತ್ರವು ಅಮೆರಿಕನ್ ಗೋಲ್ಡನ್ ಪಿಕ್ಚರ್ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲು ನಾಮ ನಿರ್ದೇಶನಗೊಂಡಿದೆ.

ಈ ಬಗ್ಗೆ ಚಿತ್ರೋತ್ಸವ ಸಂಸ್ಥೆಯು ಸರ್ವಸ್ವ ನಿರ್ಮಾಣ ಸಂಸ್ಥೆಗೆ ಪತ್ರ ಬರೆದು ಅಕ್ಟೋಬರ್‌ 2019ರ ಚಿತ್ರೋತ್ಸವಕ್ಕೆ ಆಯ್ಕೆಯಾಗಿರುವ ಬಗ್ಗೆ ಮಾಹಿತಿ ನೀಡಿದೆ. ಇದು ಚಿತ್ರಕ್ಕೆ ಮತ್ತೊಂದು ಸುವರ್ಣಗರಿ ಮೂಡಿಸಿದೆ.

ಕಳೆದ ಜುಲೈನಲ್ಲಿ ’ದಿ ಬೆಸ್ಟ್ ಆ್ಯಕ್ಟರ್’ ಕಿರುಚಿತ್ರ ಬೆಂಗಳೂರಿನ ಬನಶಂಕರಿಯ ಸುಚಿತ್ರ ಚಿತ್ರಮಂದಿರದಲ್ಲಿ ಪ್ರದರ್ಶನಗೊಂಡಿತ್ತು. ಚಿತ್ರದಲ್ಲಿ ‘ಕಟಕ’ ಪೋಷಕ ಪಾತ್ರದಲ್ಲಿ ಗಮನ ಸೆಳೆದಿದ್ದ ಮಾಧವ ಕಾರ್ಕಡ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಾರೆ. ಮಾಧವ್‌ ಅವರ ಸ್ವಾಭಾವಿಕ ಎನಿಸುವ ನಟನೆ ಆಪ್ತವಾಗಿದ್ದು, ಚಿತ್ರದ ಯಶಸ್ಸಿಗೆ ಪೂರಕವಾಗಿದೆ ಅನ್ನೋದು ನಿರ್ದೇಶಕರ ಮಾತು. ಶ್ರೀಧರ್ ಬನವಾಸಿಯವರು ಕಥೆ ಬರೆದಿದ್ದು, ಭಾಸ್ಕರ್ ಬಂಜೆರಾ ಅವರ ಸಂಭಾಷಣೆಯಿದೆ. ಅರ್ಜುನ್ ರಾಮು ಅವರ ಹಿನ್ನೆಲೆ ಸಂಗೀತ ಮತ್ತು ಬಿ.ಎಸ್ ಸಂಕೇತ್ ಅವರ ಸಂಕಲನ ಚಿತ್ರಕ್ಕಿದೆ.

ಉತ್ತಮ ಕಥಾಹಂದರದ ಮೂಲಕ ಗಮನ ಸೆಳೆದಿರುವ ’ದಿ ಬೆಸ್ಟ್ ಆ್ಯಕ್ಟರ್’ ಕೆಲವು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ದೆಹಲಿಯಲ್ಲಿ ನಡೆದ 10 ನೇ ದಾದಾಪಾಲ್ಕೆ ಫಿಲ್ಮ್ ಫೆಸ್ಟಿವಲ್‌ನಲ್ಲಿ ಎಸ್.ಕೆ ರಾವ್ ಅವರು ಚಿತ್ರದ ಛಾಯಾಗ್ರಹಣಕ್ಕಾಗಿ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಗೆ ಭಾಜನರಾದರು. ಕೋಲ್ಕತ್ತಾದಲ್ಲಿ ನಡೆದ ಎನ್. ಇಜೆಡ್ ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್‌ನಲ್ಲಿ ಚಿತ್ರಕ್ಕೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯು ಲಭಿಸಿದೆ. ರೋಮ್ ಇಂಡಿಪೆಂಡೆಂಟ್ ಪ್ರಿಸ್ಮಾ ಅವಾರ್ಡ್, ಆರ್ಫ್ ಬರ್ಲಿನ್ ಇಂಟರ್ ನ್ಯಾಷನಲ್ ಅವಾರ್ಡ್ ಕೂಡ ಲಭಿಸಿದೆ.

’ದಿ ಬೆಸ್ಟ್ ಆ್ಯಕ್ಟರ್’ ಕಿರುಚಿತ್ರ ಅನೇಕ ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡಿದೆ. ಬೆಳಗಾವಿಯ ಮೂವಿಂಗ್ ಪಿಕ್ಚರ್ಸ್ ಫೆಸ್ಟಿವಲ್, ಕೋಲ್ಕತ್ತದಲ್ಲಿ ನಡೆದ ಎನ್‌.ಇಜೆಡ್ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್, ಜೋಧಪುರದ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಮತ್ತು ಲಂಡನ್ನಿನ ಇಂಟರ್ ನ್ಯಾಷನಲ್ ಫಿಲ್ಮ್ ಮೇಕರ್ ಫೆಸ್ಟಿವಲ್‌ಗಳಲ್ಲಿ ಪ್ರದರ್ಶನಗೊಂಡು ಸೈ ಎನಿಸಿಕೊಂಡಿದೆ.

ಈಗ ಈ ಸಾಲಿಗೆ ಅಮೆರಿಕನ್ ಗೋಲ್ಡನ್ ಪಿಕ್ಚರ್ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಸಹ ಸೇರಿಕೊಂಡಿದೆ.
ನಾಗರಾಜ್ ಸೋಮಯಾಜಿಯವರ ’ದಿ ಬೆಸ್ಟ್ ಆ್ಯಕ್ಟರ’ ಚಿತ್ರತಂಡವೇ ಪುಕ್ಸಟ್ಟೆ ಲೈಫು ಎಂಬ ವಿಭಿನ್ನ ಶೀರ್ಷಿಕೆಯ ಕಥೆಯನ್ನು ಹೊತ್ತು ತರುತ್ತಿದೆ. ಚಿತ್ರೀಕರಣವು ಈಗ ಮುಕ್ತಾಯವಾಗಿದ್ದು, ಎಲ್ಲ ಅಂದುಕೊಂಡಂತೆ ಆದರೆ ಮುಂದಿನ ವರ್ಷದ ಪ್ರಾರಂಭದಲ್ಲಿ ಸಂಕ್ರಾಂತಿಯ ವೇಳೆಗೆ ಪ್ರೇಕ್ಷಕರ ಮುಂದೆ ತರಲು ಚಿತ್ರತಂಡ ನಿರ್ಧರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...