Homeಫ್ಯಾಕ್ಟ್‌ಚೆಕ್FACT CHECK : ಹಸುವಿನ ಬಾಲ ಕತ್ತರಿಸಿ ದೇವಸ್ಥಾನದ ಮುಂದೆ ಎಸೆದ ಮುಸ್ಲಿಂ ಯುವಕರಿಗೆ ಪೊಲೀಸರು...

FACT CHECK : ಹಸುವಿನ ಬಾಲ ಕತ್ತರಿಸಿ ದೇವಸ್ಥಾನದ ಮುಂದೆ ಎಸೆದ ಮುಸ್ಲಿಂ ಯುವಕರಿಗೆ ಪೊಲೀಸರು ಥಳಿಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ರಾಜಸ್ಥಾನದಲ್ಲಿ ಹಸುವಿನ ಬಾಲ ಕತ್ತರಿಸಿ ದೇವಸ್ಥಾನದ ಮುಂಭಾಗ ಎಸೆದ ಮುಸ್ಲಿಂ ಯುವಕರಿಗೆ ಪೊಲೀಸರು ಥಳಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದೆ.

“ರಾಜಸ್ಥಾನದ ಭಿಲ್ವಾರದಲ್ಲಿ 25 ಆಗಸ್ಟ್ 24ರಂದು ಹಸುವಿನ ಬಾಲ ಕತ್ತರಿಸಿ ದೇವಸ್ಥಾನ ಬಾಗಿಲಿಗೆ ಎಸೆದ ಮುಸ್ಲಿಂ ಸಮುದಾಯದ 8 ದಾರಿ ತಪ್ಪಿದ ಯುವಕರಿಗೆ ರಾಜಸ್ಥಾನ ಪೊಲೀಸರು ಆತಿಥ್ಯವನ್ನು ನೀಡಿದರು” ಎಂದು ಆಗಸ್ಟ್ 31ರಂದು ಮಲ್ಲಿಕಾರ್ಜುನ (@Mallika52160729) ಎಂಬ ಎಕ್ಸ್‌ ಬಳಕೆದಾರ ವಿಡಿಯೋ ಹಂಚಿಕೊಂಡಿದ್ದರು. 

ಅದೇ ವಿಡಿಯೋವನ್ನು ಜ್ಞಾನ್ ಪ್ರಕಾಶ್ ಓಜಾ (@gyanprakashojಎಂಬ ಎಕ್ಸ್‌ ಬಳಕೆದಾರ ಆಗಸ್ಟ್ 31, 2024ರಂದು ಹಂಚಿಕೊಂಡು “ರಾಜಸ್ಥಾನದ ಭಿಲ್ವಾರಾದಲ್ಲಿ ಆಗಸ್ಟ್ 25, 2024 ರಂದು ಪೊಲೀಸರು ಹಸುವಿನ ಬಾಲವನ್ನು ಕತ್ತರಿಸಿ ದೇವಾಲಯದ ಬಾಗಿಲಿಗೆ ಎಸೆದ ‘ಶಾಂತಿದೂತ’ ಸಮುದಾಯದ 8 ಜಿಹಾದಿ ಯುವಕರಿಗೆ ವಿಶೇಷ ಆತಿಥ್ಯ ನೀಡಿದರು. ಈ ಟ್ರೀಟ್‌ಮೆಂಟ್ ಸರಿಯಾಗಿದೆ ಅಲ್ಲವೇ?” ಎಂದು ಬರೆದುಕೊಂಡಿದ್ದರು.

ವಿಡಿಯೋದಲ್ಲಿ ಪೊಲೀಸ್ ಸಮವಸ್ತ್ರ ತೊಟ್ಟವರು ಕೆಲ ವ್ಯಕ್ತಿಗಳನ್ನು ಕೊಠಡಿಯೊಳಗೆ ಕೂಡಿ ಹಾಕಿ ಲಾಠಿಯಿಂದ ಹೊಡೆಯುತ್ತಿರುವ ದೃಶ್ಯವಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ಇದು ಉತ್ತರ ಪ್ರದೇಶದ ಹಳೆಯ ವಿಡಿಯೋ ಎಂದು ಗೊತ್ತಾಗಿದೆ.

ವಿಡಿಯೋ ಸ್ಕ್ರೀನ್ ಶಾಟ್‌ ಅನ್ನು ನಾವು ಗೂಗಲ್ ರಿವರ್ಸ್‌ ಇಮೇಜ್‌ನಲ್ಲಿ ಹಾಕಿ ಸರ್ಚ್ ಮಾಡಿದ್ದೇವೆ. ಈ ವೇಳೆ ಜುಲೈ 5, 2022ರಂದು ಎನ್‌ಡಿಟಿವಿಯಲ್ಲಿ ಈ ವಿಡಿಯೋ ಅಪ್ಲೋಡ್ ಆಗಿರುವುದು ಕಂಡು ಬಂದಿದೆ.

“ಕಳೆದ ತಿಂಗಳು ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ನಡೆದ ಪ್ರತಿಭಟನೆಯ ನಂತರ ವೈರಲ್ ವಿಡಿಯೋದಲ್ಲಿ ಪೊಲೀಸರ ಕಸ್ಟಡಿಯಲ್ಲಿದ್ದ ಎಂಟು ಮಂದಿಯನ್ನು ಆರೋಪ ಮುಕ್ತಗೊಳಿಸಲಾಗಿದೆ. ಅವರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಪೊಲೀಸರು ಹೇಳಿದ ನಂತರ ಸ್ಥಳೀಯ ನ್ಯಾಯಾಲಯ ಅವರನ್ನು ಬಿಡುಗಡೆ ಮಾಡಿದೆ. ಅವರು ನಿನ್ನೆ ಜೈಲಿನಿಂದ ಹೊರ ಬಂದಿದ್ದಾರೆ. ಇದರರ್ಥ ಈಗ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರು ಪ್ರವಾದಿ ಮುಹಮ್ಮದರ ವಿರುದ್ಧ ನೀಡಿದ ಹೇಳಿಕೆಗಳ ವಿರುದ್ಧ ಹಿಂಸಾತ್ಮಕ ಪ್ರತಿಭಟನೆ ನಡೆಸಿದ 85 ಜನರ ವಿರುದ್ಧ ಆರಂಭದಲ್ಲಿ ದಾಖಲಿಸಲಾದ ಎಫ್‌ಐಆರ್‌ನಲ್ಲಿ ಇವರ ಹೆಸರುಗಳಿಲ್ಲ ಎಂದಾಗಿದೆ. ಎನ್‌ಡಿಟಿವಿಯ ವರದಿಯ ನಂತರ ಪೊಲೀಸ್ ದೌರ್ಜನ್ಯದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ” ಎಂದು ವಿಡಿಯೋ ಕುರಿತು ಎನ್‌ಡಿಟಿವಿ ವಿವರಿಸಿದೆ.

“ಜೂನ್ 21, 2022ರಂದು ಇಂಡಿಯಾ ಟುಡೇ ಪ್ರಕಟಿಸಿದ ವರದಿಯಲ್ಲೂ ವೈರಲ್ ವಿಡಿಯೋ ಅಪ್ಲೋಡ್ ಆಗಿರುವುದು ಕಂಡು ಬಂದಿದೆ. ವರದಿಯಲ್ಲಿ “ಉತ್ತರ ಪ್ರದೇಶದಲ್ಲಿ ನೂಪುರ್ ಶರ್ಮಾ ಅವರ ಪ್ರವಾದಿಯ ಕುರಿತ ಹೇಳಿಕೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಗಳ ಮೇಲಿನ ಪೊಲೀಸ್ ದೌರ್ಜನ್ಯ ಮತ್ತು ಅಮಾನವೀಯ ವರ್ತನೆಯ ಆರೋಪಗಳ ಕುರಿತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಹೆಚ್‌ಆರ್‌ಸಿ) ಎಸ್‌ಎಸ್‌ಪಿ ಸಹರಾನ್‌ಪುರದಿಂದ ಪ್ರತಿಕ್ರಿಯೆ ಕೇಳಿದೆ” ಎಂದು ಹೇಳಲಾಗಿದೆ.

“ವಕೀಲ ಮಹ್‌ರೂಫ್ ಅನ್ಸಾರಿ ಅವರು ನೀಡಿದ ದೂರಿನ ಪ್ರಕಾರ, ಜೂನ್ 10 ರಂದು, ಸಹರಾನ್‌ಪುರದ ಠಾಣಾ ಕೊತ್ವಾಲಿ ನಗರದ ಪೊಲೀಸ್ ಅಧಿಕಾರಿಗಳ ತಂಡವು ಕೆಲವು ಪ್ರತಿಭಟನಾಕಾರರನ್ನು ಬಂಧಿಸಿತ್ತು. ನಂತರ ಅವರನ್ನು ಪೊಲೀಸ್ ಕಸ್ಟಡಿಯಲ್ಲಿ ನಿರ್ದಯವಾಗಿ ಥಳಿಸಲಾಗಿದೆ” ಎಂದು ವರದಿ ವಿವರಿಸಿದೆ.

ಹಸುವಿನ ಬಾಲ ಕತ್ತರಿಸಿದ ಆರೋಪಿಯ ಬಂಧನ

ಹಸುವಿನ ಬಾಲ ಕತ್ತರಿಸಿ ದೇವಸ್ಥಾನ ಬಾಗಿಲಿಗೆ ಎಸೆದ ಘಟನೆ ಆಗಸ್ಟ್ 25, 2024ರಂದು ರಾಜಸ್ಥಾನದ ಬಿಲ್ವಾರದಲ್ಲಿ ನಡೆದಿರುವುದು ನಿಜ. ಎಬಿಪಿ ಲೈವ್ ವರದಿಯ ಪ್ರಕಾರ, ಹಸುವಿನ ಬಾಲ ಕತ್ತರಿಸಿ ಬಿಲ್ವಾರದ ಗಾಂಧಿ ಸಾಗರದ ಬಳಿ ಇರುವ ವೀರ್ ಹನುಮಾನ್ ದೇವಸ್ಥಾನ ಮುಂಭಾಗ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊತ್ವಾಲಿ ಪೊಲೀಸರು ಹುಸೇನ್ ಕಾಲೋನಿ ಶಾಸ್ತ್ರಿನಗರ ನಿವಾಸಿ ನಿಸಾರ್ ಮೊಹಮ್ಮದ್ ಅವರ ಮಗ ಬಬ್ಲು ಶಾ (40 ವರ್ಷ) ಎಂಬಾತನನ್ನು ಬಂಧಿಸಿದ್ದಾರೆ. ಇನ್ನೂ ನಾಲ್ವರು ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ.

ಆದರೆ, ಪೊಲೀಸರು ಥಳಿಸಿರು ವಿಡಿಯೋ ಹಸುವಿನ ಬಾಲ ಕತ್ತರಿಸಿದ ಘಟನೆಗೆ ಸಂಬಂಧಿಸಿದ್ದಲ್ಲ. ಅದು ನೂಪೂರ್ ಶರ್ಮಾ ಹೇಳಿಕೆ ವಿರುದ್ದ ಪ್ರತಿಭಟಿಸಿದ್ದ ಯುವಕರನ್ನು ಪೊಲೀಸರು ಕೂಡಿ ಹಾಕಿ ಅಮಾನುಷವಾಗಿ ಥಳಿಸಿದ ಘಟನೆಯದ್ದಾಗಿದೆ.

ಇದನ್ನೂ ಓದಿ : FACT CHECK : ಕಂದಹಾರ್ ವಿಮಾನ ಅಪಹರಣದ ವೆಬ್‌ ಸೀರಿಸ್‌ನಲ್ಲಿ ಹಿಂದೂಗಳಿಗೆ ಅವಮಾನ? ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...