Homeಫ್ಯಾಕ್ಟ್‌ಚೆಕ್FACT CHECK : ಇಸ್ರೇಲ್ ಅನ್ನು ಅಂತಾರಾಷ್ಟ್ರೀಯ ನ್ಯಾಯಾಲಯ 'ಅಕ್ರಮ ರಾಷ್ಟ್ರ'ವೆಂದು ಘೋಷಿಸಿರುವುದು ನಿಜಾನಾ?

FACT CHECK : ಇಸ್ರೇಲ್ ಅನ್ನು ಅಂತಾರಾಷ್ಟ್ರೀಯ ನ್ಯಾಯಾಲಯ ‘ಅಕ್ರಮ ರಾಷ್ಟ್ರ’ವೆಂದು ಘೋಷಿಸಿರುವುದು ನಿಜಾನಾ?

- Advertisement -
- Advertisement -

“ಇಸ್ರೇಲ್ ಅನ್ನು ಅಂತಾರಾಷ್ಟ್ರೀಯ ನ್ಯಾಯಾಲಯ ಅಕ್ರಮ ರಾಷ್ಟ್ರವೆಂದು ಘೋಷಿಸಿದೆ. ಅದನ್ನು ವಿಶ್ವದಾದ್ಯಂತ ಸಾರ್ವಭೌಮ ರಾಷ್ಟ್ರವೆಂದು ಗುರುತಿಸಬಾರದು ಎಂದು ನಿರ್ಧರಿಸಲಾಯಿತು. ಕೊನೆಗೂ ನ್ಯಾಯವೇ ಮೇಲುಗೈ ಸಾಧಿಸಿತು. ಅಲ್‌ ಹಮ್ದುಲಿಲ್ಲಾಹ್ ದಯವಿಟ್ಟು ಈ ವಿಡಿಯೋವನ್ನು ಆದಷ್ಟು ಶೇರ್ ಮಾಡಿ. ಧನ್ಯವಾದಗಳು” ಎಂಬ ಸಂದೇಶವೊಂದು ವಾಟ್ಸಾಪ್ ಗ್ರೂಪ್‌ಗಳಲ್ಲಿ ಹರಿದಾಡುತ್ತಿದೆ.

ಸಂದೇಶದ ಜೊತೆಗೆ ಟಿಆರ್‌ಟಿ ವರ್ಲ್ಡ್ ಸುದ್ದಿ ಸಂಸ್ಥೆಯ ವಿಡಿಯೋ ಒಂದಿದ್ದು, ಅದರಲ್ಲಿ ಪ್ಯಾಲೆಸ್ತೀನ್ ವಿದೇಶಾಂಗ ಸಚಿವ ರಿಯಾದ್ ಅಲ್ ಮಾಲಿಕಿ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣದ ಕುರಿತು ಮಾತನಾಡಿರುವುದು ಇದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ಪರಿಶೀಲಿಸಲು ನಾವು ಅದರ ಮೂಲ ವಿಡಿಯೋವನ್ನು ಹುಡುಕಿದ್ದೇವೆ. ಈ ವೇಳೆ ಜುಲೈ 19,2024ರಂದು ಟಿಆರ್‌ಟಿ ವರ್ಲ್ಡ್‌ ಸುದ್ದಿ ಸಂಸ್ಥೆಯ ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್ಲೋಡ್ ಆಗಿರುವ ವಿಡಿಯೋ ದೊರೆತಿದೆ. ವಿಡಿಯೋದ ಶೀರ್ಷಿಕೆಯಲ್ಲೇ “Palestinian Foreign Minister Riyad al Maliki briefs media after ICJ ruling on Israel’s occupation (ಇಸ್ರೇಲ್ ಆಕ್ರಮಣದ ಬಗ್ಗೆ ಐಸಿಜೆ ತೀರ್ಪಿನ ನಂತರ ಪ್ಯಾಲೇಸ್ತೀನ್ ವಿದೇಶಾಂಗ ಸಚಿವ ರಿಯಾದ್ ಅಲ್ ಮಾಲಿಕಿ ಮಾಧ್ಯಮಗಳಿಗೆ ಮಾಹಿತಿ ನೀಡಿದರು) ಎಂದಿದೆ.

ವಿಡಿಯೋದಲ್ಲಿ ರಿಯಾದ್ ಅಲ್ ಮಾಲಿಕಿಯವರು “ಅಂತಾರಾಷ್ಟ್ರೀಯ ನ್ಯಾಯಾಲಯ ಪ್ಯಾಲೆಸ್ತೀನ್‌ನಲ್ಲಿ(ಗಾಝಾದಲ್ಲಿ) ಇಸ್ರೇಲ್ ನಡೆಸುತ್ತಿರುವ ಆಕ್ರಮಣವನ್ನು ಕಾನೂನುಬಾಹಿರ, ಅಂತಾರಾಷ್ಟ್ರೀಯ ಕಾನೂನುಗಳು ಹಾಗೂ ಮಾನವ ಹಕ್ಕುಗಳ ವಿರುದ್ದ ಎಂದಿದೆ. ಅಲ್ಲದೆ, ತಕ್ಷಣ ದಾಳಿ ನಿಲ್ಲಿಸುವಂತೆ ಸೂಚಿಸಿದೆ. ಆಕ್ರಮಿತ ಪ್ಯಾಲೆಸ್ತೀನ್ ಭೂ ಪ್ರದೇಶಗಳಲ್ಲಿ (ಪಶ್ಚಿಮ ದಂಡೆ, ಜೆರುಸಲೇಂ) ನಡೆಸುತ್ತಿರುವ ಕಾರ್ಯಚರಣೆಯನ್ನೂ ಅಕ್ರಮ ಎಂದಿದೆ. ಇದು ಪ್ಯಾಲೆಸ್ತೀನ್‌ಗೆ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಸಿಕ್ಕ ಅಭೂತಪೂರ್ವ ಜಯ” ಎಂದು ಹೇಳಿರುವುದು ಇದೆ.

ಪ್ಯಾಲೆಸ್ತೀನ್‌ ಭೂ ಪ್ರದೇಶಗಳಲ್ಲಿ ಇಸ್ರೇಲ್ ನಡೆಸುತ್ತಿರುವ ದಾಳಿಯ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯ ನೀಡಿರುವ ತೀರ್ಪು ಮತ್ತು ಅದಕ್ಕೆ ಪ್ಯಾಲೆಸ್ತೀನ್ ವಿದೇಶಾಂಗ ಸಚಿವ ರಿಯಾದ್ ಅಲ್ ಮಾಲಿಕಿ ಪ್ರತಿಕ್ರಿಯಿಸಿರುವ ಕುರಿತು ಜುಲೈ 20, 2024ರಂದು palestinechronicle.com ವರದಿ ಪ್ರಕಟಿಸಿತ್ತು.

ಒಟ್ಟಿನಲ್ಲಿ, ಗಾಝಾ ಸೇರಿದಂತೆ ಪ್ಯಾಲೆಸ್ತೀನ್‌ ಭೂ ಪ್ರದೇಶಗಳಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣದ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯ ಜುಲೈ ತಿಂಗಳಲ್ಲಿ ತೀರ್ಪು ನೀಡಿತ್ತು. ಆ ಬಗ್ಗೆ ಪ್ಯಾಲೆಸ್ತೀನ್ ವಿದೇಶಾಂಗ ಸಚಿವ ರಿಯಾದ್ ಅಲ್ ಮಾಲಿಕಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು. ಅದರ ವಿಡಿಯೋವನ್ನು ಹಂಚಿಕೊಂಡು “ಅಂತಾರಾಷ್ಟ್ರೀಯ ನ್ಯಾಯಾಲಯ ಇಸ್ರೇಲ್ ಅನ್ನು ‘ಅಕ್ರಮ ರಾಷ್ಟ್ರ’ವೆಂದು ಘೋಷಿಸಿದೆ” ಎಂಬುವುದಾಗಿ ಸಂದೇಶ ಹಂಚಿಕೊಳ್ಳಲಾಗುತ್ತಿದೆ. ಅಸಲಿಗೆ ಇಸ್ರೇಲ್ ನಡೆಸುತ್ತಿರುವ ಆಕ್ರಮಣವನ್ನು ಅಂತಾರಾಷ್ಟ್ರೀಯ ನ್ಯಾಯಾಲಯ ಅಕ್ರಮ, ಕಾನೂನುಬಾಹಿರ ಎಂದಿದೆಯೇ ಹೊರತು, ಸಂಪೂರ್ಣ ಇಸ್ರೇಲ್ ಅನ್ನೇ ಅಕ್ರಮ ರಾಷ್ಟ್ರ ಎಂದಿಲ್ಲ.

ಇದನ್ನೂ ಓದಿ : FACT CHECK : ಹಸುವಿನ ಬಾಲ ಕತ್ತರಿಸಿ ದೇವಸ್ಥಾನದ ಮುಂದೆ ಎಸೆದ ಮುಸ್ಲಿಂ ಯುವಕರಿಗೆ ಪೊಲೀಸರು ಥಳಿಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...