Homeಕರ್ನಾಟಕಕೇರಳದ ಹೇಮಾ ಸಮಿತಿಯಂತೆ ಕರ್ನಾಟಕದಲ್ಲೂ ಸಮಿತಿ ರಚಿಸಿ : ಸಿಎಂಗೆ FIRE ಆಗ್ರಹ

ಕೇರಳದ ಹೇಮಾ ಸಮಿತಿಯಂತೆ ಕರ್ನಾಟಕದಲ್ಲೂ ಸಮಿತಿ ರಚಿಸಿ : ಸಿಎಂಗೆ FIRE ಆಗ್ರಹ

- Advertisement -
- Advertisement -

ಲೈಂಗಿಕ ಹಿಂಸೆ ಸೇರಿದಂತೆ ಕನ್ನಡ ಚಲನಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸುವಂತೆ ‘ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಈಕ್ವಾಲಿಟಿ’ (FIRE) ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ FIRE “ಮಲಯಾಳಂ ಚಿತ್ರರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಕಿರುಕುಳ ಸೇರಿದಂತೆ ಇತರೆ ಸಮಸ್ಯೆಗಳನ್ನು ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿ ಬಹಿರಂಗಪಡಿಸಿದೆ. ಅದೇ ರೀತಿ ಕನ್ನಡ ಚಿತ್ರರಂಗದಲ್ಲೂ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಒಂದು ಸಮಿತಿ ರಚಿಸಬೇಕು” ಎಂದು ಒತ್ತಾಯಿಸಿದೆ.

ಲೈಗಿಂಕ ಕಿರುಕುಳ ಸೇರಿದಂತೆ ಕನ್ನಡ ಚಲನಚಿತ್ರೋದ್ಯಮದಲ್ಲಿ(ಕೆಎಫ್‌ಐ) ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ತಿಳಿಯಲು ಸಮಿತಿ ರಚಿಸಬೇಕು. ಅದರ ವರದಿ ಆಧರಿಸಿ ತನಿಖೆ ನಡೆಸಿ, ಕ್ರಮ ಕೈಗೊಳ್ಳಬೇಕು. ಚಿತ್ರೋದ್ಯಮದಲ್ಲಿ ಎಲ್ಲಾ ಮಹಿಳೆಯರಿಗೆ ಸುರಕ್ಷಿತವಾದ ಮತ್ತು ನ್ಯಾಯಯುತವಾದ ವಾತಾವರಣ ಸೃಷ್ಟಿಸಲು ನಿಯಮಗಳನ್ನು ರೂಪಿಸಬೇಕು ಎಂದು FIRE ಪತ್ರದಲ್ಲಿ ಮನವಿ ಮಾಡಿದೆ.

ಸರ್ಕಾರ ಸಮಿತಿ ರಚಿಸಿದರೆ, ಅದು ಮೂರು ತಿಂಗಳ ಒಳಗಾಗಿ ವರದಿ ನೀಡಬೇಕು. ಆ ವರದಿಯನ್ನು ಶೀಘ್ರವಾಗಿ ಸಾರ್ವಜನಿಕಗೊಳಿಸಬೇಕು. ವರದಿ ತಯಾರಿಸಲು ಮತ್ತು ಮುಂದಿನ ತನಿಖೆಗೆ ಬೇಕಾದ ಸಹಾಯ ಮಾಡಲು FIRE ಸಿದ್ದವಿದೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಸಿಎಂಗೆ ಬರೆದಿರುವ ಪತ್ರಕ್ಕೆ ನಿರ್ದೇಶಕಿ ಹಾಗೂ FIRE ಅಧ್ಯಕ್ಷೆ ಕವಿತಾ ಲಂಕೇಶ್, ನಟಿಯರಾದ ಶ್ರುತಿ ಹರಿಹರನ್, ರಮ್ಯಾ, ಐಂದ್ರಿತಾ ರೈ, ಅಕ್ಷತಾ ಪಾಂಡವಪುರ, ಅಮೃತ ಅಯ್ಯಂಗಾರ್, ಚೈತ್ರಾ ಆಚಾರ್, ಮಾನ್ವಿತಾ ಕಾಮತ್, ಮೇಘನಾ ಗಾಂವ್ಕರ್, ಪೂಜಾ ಗಾಂಧಿ, ಕುಶಿ ರವಿ, ನಟರಾದ ಸುದೀಪ್, ವಿನಯ್ ರಾಜ್‌ಕುಮಾರ್, ಕಿಶೋರ್, ಹೋರಾಟಗಾರ್ತಿ ನಜ್ಮಾ ನಜೀರ್, ಪತ್ರಕರ್ತ ಬಿಎಂ ಬಶೀರ್, ಸಾಹಿತಿ ರಹಮತ್ ತರೀಕೆರೆ ಸೇರಿದಂತೆ 153 ನಟ, ನಟಿಯರು, ಕಲಾವಿದರು, ಸಾಹಿತಿಗಳು, ಹೋರಾಟಗಾರರು, ಸಂಘಟನಾ ಪ್ರಮುಖರು ಸಹಿ ಹಾಕಿದ್ದಾರೆ.

ಕೇರಳದಲ್ಲಿ 2017ರಲ್ಲಿ ಪ್ರಮುಖ ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಬಳಿಕ, ಮಲಯಾಳಂ ಸಿನಿಮಾ ರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವರದಿ ನೀಡಲು ಸರ್ಕಾರ ನ್ಯಾಯಮೂರ್ತಿ ಹೇಮಾ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಈ ಸಮಿತಿ ಸರ್ಕಾರಕ್ಕೆ ಸಲ್ಲಿಸಿರುವ ವರದಿಯು ಮಲಯಾಳಂ ಸಿನಿಮಾ ರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ದೌರ್ಜನ್ಯಗಳ ಕುರಿತು ಆಘಾತಕಾರಿ ವಿಷಯಗಳನ್ನು ಬಹಿರಂಗಪಡಿಸಿದೆ.

ವರದಿ ಬಹಿರಂಗೊಂಡ ಬಳಿಕ ಅನೇಕರು ನಟಿಯರು ತಮ್ಮ ಮೇಲೆ ನಡೆದ ದೌರ್ಜನ್ಯಗಳ ಕುರಿತು ಹೇಳಿಕೊಂಡಿದ್ದಾರೆ. ಕೆಲವರು ದೂರು ದಾಖಲಿಸಿದ್ದಾರೆ. ದೂರು ಆಧರಿಸಿ ಮಲಯಾಳಂ ಸಿನಿಮಾ ರಂಗದ ಹಲವು ಪ್ರಮುಖ ನಟ, ನಿರ್ದೇಶಕರ ವಿರುದ್ದ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ : ರೇಣುಕಸ್ವಾಮಿ ಕೊಲೆ ಪ್ರಕರಣ | ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...