Homeಕರ್ನಾಟಕಮೋದಿ ಮಾಮನ ಸುಳ್ಳು ಫಲಕದ ವಿದ್ಯುದಾ‍ಘಾತ..!

ಮೋದಿ ಮಾಮನ ಸುಳ್ಳು ಫಲಕದ ವಿದ್ಯುದಾ‍ಘಾತ..!

- Advertisement -
- Advertisement -
  • ಶುದ್ಧೋದನ

ಹಸಿ ಹಸಿ ಸುಳ್ಳುಗಳನ್ನು ಅದ್ಭುತವಾಗಿ ಮಾರ್ಕೆಟಿಂಗ್ ಮಾಡಿ, ಪಾಲಿಟಿಕಲ್ ಬಿಸಿನೆಸ್‌ನ್ನು ಲಾಭದಾಯಕವಾಗಿ ನಡೆಸುವ ಕಲೆ ಕರಗತ ಮಾಡಿಕೊಂಡಿರುವ ಮೋದಿ ಮಾಮನ ಕೇಸರಿ ಸರ್ಕಾರದ ಪ್ರಚಾರದ ತೆವಲಿಗೆ ದೇಶದ ಬೊಕ್ಕಸವೇ ಬರಿದಾಗುತ್ತಿದೆ. ವಿರೋಧಾಭಾಸ, ದ್ವಂದ್ವ ವ್ಯಕ್ತಿತ್ವ. ಮೋದಿ ಹೇಳೋದೇ ಒಂದು; ಮಾಡೋದು ಮತ್ತೊಂದು. ಕೋಟ್ಯಂತರ ಉದ್ಯೋಗ ಸೃಷ್ಟಿ ಮಾಡ್ತೇನೆಂದು ಹೇಳಿದ್ದ ಈ ಅಭಿನವ ರಾಷ್ಟ್ರಪಿತ, ನಿರುದ್ಯೋಗಿಗಳಿಗೆ ಬಜ್ಜಿ ಮಾರಾಟ ಮಾಡಿ ಎಂದು ಮುಲಾಜಿಲ್ಲದೆ ಛೇಡಿಸುತ್ತಾರೆ. “ಆಧಾರ” ಟೀಕಿಸಿದ್ದ ಮೋದಿಗೀಗ ಅದೇ ಆಧಾರ.! ಪ್ರಚಾರ ಘಲಕ, ಜಾಹೀರಾತುಗಳಲ್ಲಷ್ಟೇ ಬದುಕಿರುವ ಮೋದಿ ಸರ್ಕಾರ, ದಿಕ್ಕು ದಿವಾಳಿಯಾಗುತ್ತಿರುವ ದೇಶದ ಪ್ರತಿ ಹಳ್ಳಿ, ಪ್ರತಿ ಮನೆಗೆ ವಿದ್ಯುತ್‍ ಒದಗಿಸಿ ಬೆಳಗುತ್ತೇನೆಂದು ಹೇಳುವುದೇ ವಿಪರ್ಯಾಸ..!

ವಿದ್ಯುತ್ ಕಾಣದ ಹಳ್ಳಿ ಇಲ್ಲವೇ, ಕತ್ತಲೆಯ ಮನೆಗೆ ಕೇಂದ್ರ ಸರ್ಕಾರದ ಅನುದಾನದಿಂದ ಕರೆಂಟ್‍ ಸೌಲಭ್ಯ ನೀಡಲು ಒದಗಿಸುವ ಯೋಜನೆಗೆ ಪ್ರಧಾನಮಂತ್ರಿ ಸಹಜ ಬಿಜಲಿ ಹರ್ ಘರ್ ಯೋಜನಾ (ಸೌಭಾಗ್ಯ ಯೋಜನೆ) ಎಂದು ನಾಮಕರಣ ಮಾಡಲಾಗಿದೆ. ರಾಜ್ಯದಾದ್ಯಂತ ಈ ಕಾಮಗಾರಿ ನಡೆಯುತ್ತಿದೆ. ಆದರೆ ನಿರೀಕ್ಷಿಸಿದಂತೆ ಕೆಲಸ ಹಾಗೂ ಉದ್ದೇಶ ಈಡೇರುತ್ತಿಲ್ಲ. ಮೋದಿಯನ್ನು ಸುದ್ದಿಯಲ್ಲಿಡುವ ಹಿಡನ್ ಅಜೆಂಡಾದ ಈ ಸೌಭಾಗ್ಯ ಹಿಕಮತ್ತೀಗ ಜಗಜ್ಜಾಹೀರಾಗಿ ಹೋಗಿದೆ. ಸಾರಾಸಗಾಟಾಗಿ ಹಳ್ಳಿ-ಹಳ್ಳಿಗಳ ಅಗಸೆ ಬಾಗಿಲಿನಲ್ಲಿ ಮೋದಿ ಚಿತ್ರವಿರುವ “ಸೌಭಾಗ್ಯ ಫಲಕ” ನಿಲ್ಲಿಸಲಾಗುತ್ತಿದೆ. ಫಲಕದ ಸಂದೇಶವೆಂದರೆ, ಕತ್ತಲಿಲ್ಲದ್ದ ಈ ಹಳ್ಳಿಯ ಪ್ರತಿ ಮನೆಯೂ ಮೋದಿ ದಯೆಯಿಂದ ವಿದ್ಯುತ್ ಬೆಳಕು ಕಂಡಿದೆ ಎಂಬುದು.

ಇವುಗಳಲ್ಲಿ ಬಹುತೇಕ ಮೋಸ-ವಂಚನೆಯ ಘಾತುಕ ಫಲಕಗಳು. ವಿದ್ಯುತ್‍ ಕಂಡು ಹಲವು ವರ್ಷ ಅಥವಾ ಎರಡ್ಮೂರು ದಶಕವಾಗಿರುವ ಗ್ರಾಮಗಳಲ್ಲಿ ಸೌಭಾಗ್ಯ ಫಲಕ ಹಾಕಲಾಗಿದೆ.! ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ, ಹೊನ್ನಾವರದಂಥ ತಾಲೂಕುಗಳ ದುರ್ಗಮ ಹಳ್ಳಿಗಳಲ್ಲಿನ್ನೂ ಕರೆಂಟ್‍ ಸುಳಿವೇ ಇಲ್ಲ. ಇಂಥ ಹಳ್ಳಿಗಳನ್ನು ಬೇಕಂತಲೇ ಕಡೆಗಣಿಸಿ, ಬೆಳಕಿರುವಲ್ಲಿ ಬೋಗಸ್ ಬೋರ್ಡ್‌ ಹಾಕಿ, ಮೋದಿಯನ್ನು ಬೆಳಕಿನ ಭಾಗ್ಯವಿದಾತ ಎಂದು ಬಿಂಬಿಸಲು ಕೋಟ್ಯಾಂತರ ರೂಪಾಯಿಯನ್ನು ಶಕ್ತಿ ಮಂತ್ರಾಲಯ ಪೋಲು ಮಾಡುತ್ತಿದೆ. ಇದೊಂದು ಸಾವಿರಾರು ಕೋಟಿ ರೂ.ಗಳ ಕರ್ಮಕಾಂಡ. ಮೋದಿಯ ಪ್ರಚಾರದ ದೌರ್ಬಲ್ಯ ಅರ್ಥ ಮಾಡಿಕೊಂಡಿರುವ ವಿದ್ಯುತ್ ಇಲಾಖೆಯ ಪ್ರಬೃತಿಗಳು, ಗುತ್ತಿಗೆದಾರರು ಹಗಲು ದರೋಡೆಗೆ ಇಳಿದಿದ್ದಾರೆ.

ತಮಾಷೆ ನೋಡಿ; ಹಳ್ಳಿಗಳಲ್ಲಿ ತಿಂಗಳಲ್ಲಿ ಹೆಚ್ಚಿನ ದಿನ ಕರೆಂಟೇ ಇರುವುದಿಲ್ಲ. ಮಳೆಗಾಲದಲ್ಲಿ ಸಣ್ಣ ಗಾಳಿ-ಮಳೆ ಬಂದರೂ ಸಾಕು, ಸೀಮೆ ಎಣ್ಣೆಯ ಬುಡ್ಡಿ ದೀಪದಂತೆ ಕರೆಂಟ್ ಹೋಯ್ದಾಡುತ್ತಾ ಕಡೆಗೆ ಹೋದ ವಿದ್ಯುತ್‍ ವಾರವಾದರೂ ಬರುವುದೇ ಇಲ್ಲ.! ಆಗಲೋ, ಈಗಲೋ ಹರಿದು ಬೀಳುವಂಥ ಜೀರ್ಣಗೊಂಡ ತಂತಿಗಳು, ಮುರಿದು ಬೀಳಲು ಸಿದ್ಧವಾಗಿರುವ ಕಂಬಗಳು, ಕಳಪೆ ಟ್ರಾನ್ಸ್‌ಫಾರ್ಮರ್‌ ಮತ್ತಿತರ ಉಪಕರಣಗಳಿಂದ ವಿದ್ಯುತ್‍ ಸಂಪರ್ಕ ಇರುವಲ್ಲೇ ಸಮಾಧಾನಕರ ವಿದ್ಯುತ್ ಪೂರೈಕೆ ಇಲ್ಲ. ಇಂಥದ್ದರಲ್ಲಿ ಮೋದಿಜಿ ಮನೆ-ಮನೆಗೆ ವಿದ್ಯುತ್‍ ಕೊಟ್ಟಿದ್ದೇನೆಂದು ಸ್ಥಾವರವಾಗುವ ತರಾತುರಿಯಲ್ಲಿರುವುದು ಹಾಸ್ಯಾಸ್ಪದವೇ ಸರಿ.

ಬೆಳಗ್ಗೆ ಒಂದು ದೇಶ; ರಾತ್ರಿ ಒಂದು ದೇಶ ಸುತ್ತುವ ಮೋದಿಜಿ ಭಾರತದ ಎಲ್ಲ ಹಳ್ಳಿಗಳು, ವಿದ್ಯುತ್‍ ದೀಪದಿಂದ ಝಗಮಗಿಸುತ್ತಿವೆ ಎಂದು ಒಣ ಪೋಸು ಕೊಡುವ ಉದ್ದೇಶದಿಂದ “ಆಟ” ಆಡುತ್ತಿದ್ದಾರೆಂದು ಜನತೆ ಮಾತನಾಡಿಕೊಳ್ಳುತ್ತಿದ್ದಾರೆ. ದೇಶ ಕತ್ತಲು ಮುಕ್ತವಾಗಿದೆ ಎಂದು ವಿಶ್ವಸಂಸ್ಥೆಗೆ ತೋರಿಸಿಕೊಳ್ಳುವ ಐಡಿಯಾ ಮೋದಿಯದು. ಸುಳ್ಳು ಫಲಕ ಹಾಕಲಾಗಿರುವ ಹಳ್ಳಿಗಳ ಚಿತ್ರ, ಉಪಗ್ರಹದ ಮೂಲಕ ತೆಗೆದು ವಿಶ್ವ ಸಮುದಾಯದ ಮುಂದೆ ಮಿಂಚುವ “ಸೌಭಾಗ್ಯ”ಕ್ಕಾಗಿ ಮೋದಿ ಪಠಾಲಮ್ ಕಾತರಿಸುತ್ತಿದೆಯಷ್ಟೇ.

ಇದೆಂಥ ಬೋಗಸ್ ಯೋಜನೆ ಮತ್ತು ಕೋಟಿ-ಕೋಟಿ ಲೂಟಿ ಪ್ರಾಜೆಕ್ಟ್ ಎಂಬುದಕ್ಕೆ ಸಣ್ಣದೊಂದು ಸ್ಯಾಂಪಲ್ ಇಲ್ಲಿದೆ. ಉತ್ತರ ಕನ್ನಡದ ಶಿರಸಿ ಉಪ ವಿಭಾಗದ 638 ಗ್ರಾಮಗಳಲ್ಲಿ ಬಹುತೇಕ ಹಳ್ಳಿಗಳು ಹಲವು ವರ್ಷದ ಹಿಂದೆಯೇ ವಿದ್ಯುತ್‍ ಸಂಪರ್ಕ ಹೊಂದಿವೆ. ಸೌಭಾಗ್ಯ ಯೋಜನೆಯಲ್ಲಿ ಕೇವಲ 8-10 ಮನೆಗಳಿಗಷ್ಟೇ ಕರೆಂಟ್‌ ಸಿಕ್ಕಿದೆ. ಆದರೆ ಎಲ್ಲ 638 ಹಳ್ಳಿಗಳಲ್ಲೂ “ಪ್ರಧಾನಿ ಸೌಭಾಗ್ಯ ಹಳ್ಳಿ” ಫೇಕ್ ಫಲಕವನ್ನು ವಿದ್ಯುತ್ ಇಲಾಖೆ ಹಾಕುತ್ತಿದೆ. ಈಗಾಗಲೇ ಸುಮಾರು ಐದುನೂರು ಹಳ್ಳಿಗಳಲ್ಲಿ ಸುಳ್ಳು ಬೋರ್ಡ್ ರಾರಾಜಿಸುತ್ತಿವೆ. ಒಂದು ಬೋರ್ಡಿಗೆ ಸರ್ಕಾರದ ಲೆಕ್ಕದಲ್ಲಿ 17,693 ರೂ. ವೆಚ್ಚ ತಗುಲಿದೆ. ಅಂದರೆ ಶಿರಸಿ ಉಪ ವಿಭಾದಲ್ಲೇ ನೂರಾರು ಕೋಟಿ ರೂ. ಟೆಂಡರ್ ಸ್ಕ್ಯಾಂಡಲ್ ಆಗುತ್ತಿದೆಯಾದರೆ, ಕರ್ನಾಟಕದಲ್ಲಿ ಎಷ್ಟು ಕೋಟಿ ಆಗಿರಬಹುದು..? ಇಡೀ ಭಾರತದಲ್ಲಾಗುತ್ತಿರುವ ಲೂಟಿಯ ಮೊತ್ತ ಎಷ್ಟು ಆಗಬಹುದು ಎಂಬುದನ್ನು ನೀವೇ ಊಹಿಸಿ..! ಈಗ ಮೋದಿಯ ಗಿಮಿಕ್‍ಗೆ ಏನೆನ್ನುತ್ತೀರಿ..!?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...